Homeಮುಖಪುಟತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿ, ವಿಮಾನ ಪ್ರಯಾಣದಿಂದ ನಿಷೇಧಿಸಿ: ಕಾಂಗ್ರೆಸ್ ಆಗ್ರಹ

ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿ, ವಿಮಾನ ಪ್ರಯಾಣದಿಂದ ನಿಷೇಧಿಸಿ: ಕಾಂಗ್ರೆಸ್ ಆಗ್ರಹ

- Advertisement -
- Advertisement -

ವಿನಾಕಾರಣ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದು ಪ್ರಯಾಣಿಕರ ಜೀವಕ್ಕೆ ಬೆದರಿಕೆಯೊಡ್ಡಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿ, ವಿಮಾನ ಪ್ರಯಾಣದಿಂದ ನಿಷೇಧಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ತೇಜಸ್ವಿ ಸೂರ್ಯ ವಿಮಾನದ ತುರ್ತು ಬಾಗಿಲನ್ನು ತೆರೆದಿರುವುದನ್ನು, ಕ್ಷಮೆ ಕೇಳಿದ್ದನ್ನು ಕೇಂದ್ರ ವಿಮಾನಯಾನ ಸಚಿವರೇ ಸ್ಪಷ್ಟಪಡಿಸಿರುವಾಗ ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಎಂಬಂತೆ ಬಿಜೆಪಿ ಮುಖಂಡ ಸಿ.ಟಿ ರವಿ ಸುಳ್ಳು ಪೋಣಿಸುತ್ತಿರುವುದೇಕೆ? ಕುಚೇಷ್ಟೆ ಮಾಡಿದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿ, ವಿಮಾನ ಪ್ರಯಾಣದಿಂದ ನಿಷೇಧಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಇದ್ದ ಕಾರಣಕ್ಕೆ ಅನಾಹುತ ತಪ್ಪಿದೆ. ಅವರು ಡೋರ್ ಸ್ವಲ್ಪ ಓಪನ್ ಇದೆ ನೋಡಿ ಎಂದು ಹೇಳಿದ್ದೇ ಅಪರಾಧವಾ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸುವ ಮೂಲಕ ತೇಜಸ್ವಿ ಸೂರ್ಯರವರ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಘಟನೆ ಬಗ್ಗೆ ಮಾತನಾಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, “ಸತ್ಯಗಳನ್ನು ನೋಡುವುದು ಬಹಳ ಮುಖ್ಯ. ವಿಮಾನವು ಇನ್ನೂ ನೆಲದ ಮೇಲೆ ಇದ್ದಾಗ ಅವರು ಆಕಸ್ಮಿಕವಾಗಿ ತುರ್ತು ನಿರ್ಗಮನ ಬಾಗಿಲು ತೆರೆದಿದ್ದಾರೆ. ಇದರ ನಂತರ ಎಲ್ಲಾ ತಪಾಸಣೆಯ ನಂತರ ವಿಮಾನವನ್ನು ಟೇಕ್ ಆಫ್ ಮಾಡಲು ಅನುಮತಿಸಲಾಯಿತು. ತನ್ನ ತಪ್ಪಿಗೆ ಅವರು ಕ್ಷಮೆಯನ್ನೂ ಕೇಳಿದ್ದಾರೆ” ಎಂದು ಹೇಳಿದ್ದಾರೆ.

“ಘಟನೆ ಬಗ್ಗೆ ಸ್ವತಃ ತೇಜಸ್ವಿ ಸೂರ್ಯ ಅವರೇ ಪೈಲಟ್ ಮತ್ತು ಸಿಬ್ಬಂದಿಗೆ ತಿಳಿಸಿದ್ದಾರೆ. ಡಿಜಿಸಿಎ ತನಿಖೆ ನಡೆಸಿದಂತೆ ಸಂಪೂರ್ಣ ಪ್ರೋಟೋಕಾಲ್ ಅನುಸರಿಸಲಾಗಿದೆ. ಎಲ್ಲಾ ತಪಾಸಣೆಯ ನಂತರವೇ ವಿಮಾನ ಹಾರಾಡಿತ್ತು. ಘಟನೆಯಿಂದ ಉಂಟಾದ ವಿಳಂಬಕ್ಕೆ ಸೂರ್ಯ ಅವರೇ ಕ್ಷಮೆಯಾಚಿಸಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನಗಳನ್ನು ತೆರೆದ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಯು ಪೊಲೀಸ್ ದೂರು ದಾಖಲಿಸಿರುವ ಘಟನೆ ಈ ಹಿಂದೆ ಹಲವು ಬಾರಿ ನಡೆದಿತ್ತು. ಆದರೆ ತೇಜಸ್ವಿ ಸೂರ್ಯ ಪ್ರಕರಣದಲ್ಲಿ ಘಟನೆ ನಡೆದು ಒಂದು ತಿಂಗಳು ಕಳೆದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾನು ಎಸಗಿದ ಕಿಡಿಗೇಡಿತನದ ಬಗ್ಗೆ ನಂತರ ಸಂಸದ ತೇಜಸ್ವಿ ಸೂರ್ಯ ಅವರು ಲಿಖಿತ ಕ್ಷಮಾಪಣೆ ಪತ್ರವನ್ನು ಬರೆದಿದ್ದಾರೆ ಎಂದು ವರದಿಯಾಗಿದೆ. ಆದರೂ ವಿಮಾನಯಾನ ಸಂಸ್ಥೆಯ ಅವರ ವಿರುದ್ಧ ಯಾವುದೇ ಹೆಚ್ಚಿನ ತನಿಖೆಯನ್ನು ನಡೆಸದೆ, ಅದೇ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಸಂಸದನ ಕುಚೇಷ್ಠೆಯ ಸುದ್ದಿ ವೈರಲ್ ಆಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿ; ಬಿಜೆಪಿ ಸೇರಿ, ಇಲ್ಲವೇ ಬುಲ್ಡೋಜರ್ ದಾಳಿ ಎದುರಿಸಿ: ಕಾಂಗ್ರೆಸ್ಸಿಗರಿಗೆ ಮಧ್ಯ ಪ್ರದೇಶ ಬಿಜೆಪಿ ಸಚಿವನ ಬಹಿರಂಗ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...