Homeಎಕಾನಮಿ12,000 ಉದ್ಯೋಗಗಳನ್ನು ಕಡಿತಗೊಳಿಸಿದ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್

12,000 ಉದ್ಯೋಗಗಳನ್ನು ಕಡಿತಗೊಳಿಸಿದ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್

2022 ರಲ್ಲಿ ಟೆಕ್ ವಲಯದಲ್ಲಿ ಹೆಚ್ಚಿನ ಉದ್ಯೋಗ ಕಡಿತವಾಗಿದೆ. ಈ ವರ್ಷದಲ್ಲಿ 97,171 ಉದ್ಯೋಗಿಗಳು ಕೆಲಸ ಕಳೆದು ಕೊಂಡಿದ್ದಾರೆ.

- Advertisement -
- Advertisement -

ಜಾಗತಿಕ ಆರ್ಥಿಕ ಕುಸಿತ ಮತ್ತು ಹಣದುಬ್ಬರದ ಕಾರಣ ನೀಡಿ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್ 12,000 ಉದ್ಯೋಗಗಳನ್ನು ಕಡಿತಗೊಳಿಸಿದೆ. ಅದರ ಜಗತ್ತಿನ ಒಟ್ಟಾರೆ ಉದ್ಯೋಗ ಪ್ರಮಾಣದಲ್ಲಿ ಶೇ.6 ರಷ್ಟು ಜನರನ್ನು ಕೆಲಸದಿಂದ ತೆಗೆಯುವುದಾಗಿ ಗೂಗಲ್ ಸಿಇಓ ಸುಂದರ್ ಪಿಚ್ಚೈ ತಿಳಿಸಿದ್ದಾರೆ.

ಇತ್ತೀಚೆಗೆ ಮೆಟಾ, ಟ್ವಿಟರ್ ಮತ್ತು ಅಮೆಜಾನ್ ಕಂಪನಿಗಳು ಉದ್ಯೋಗ ಕಡಿತ ಪ್ರಕಟಿಸಿದ್ದವು. ಅದೇ ಹಾದಿಯಲ್ಲಿ ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್ ಕೂಡ ಕಾಲಿಟ್ಟಿದೆ.

ನಮ್ಮ ಗಮನ, ವೆಚ್ಚದ ಸೂಕ್ತ ಬಳಕೆ ಆಧಾರಿತವಾಗಿ ಚುರುಕುಗೊಳಿಸಲು ಮತ್ತು ನಮ್ಮ ಪ್ರತಿಭೆ ಮತ್ತು ಬಂಡವಾಳವನ್ನು ನಮ್ಮ ಅತ್ಯುನ್ನತ ಆದ್ಯತೆಗಳಿಗೆ ನಿರ್ದೇಶಿಸಲು ಇದು ಸೂಕ್ತ ಸಮಯವಾಗಿದೆ ಎಂದು ಪಿಚೈ ಸಿಬ್ಬಂದಿಗಳಿಗೆ ಕಳಿಸಿದ ಇಮೇಲ್‌ನಲ್ಲಿ ಬರೆದಿದ್ದಾರೆ.

ಇತ್ತೀಚಿನ ಸ್ಪರ್ಧೆಗಳಲ್ಲಿ ಭಾರೀ ಸಂಚಲನ ಉಂಟು ಮಾಡಿರುವ ಪ್ರಮುಖ ಹೂಡಿಕೆ ಕ್ಷೇತ್ರವಾದ ಕೃತಕ ಬುದ್ಧಿಮತ್ತೆಯಲ್ಲಿ ಕಂಪನಿಗೆ ಬಹುದೊಡ್ಡ ಅವಕಾಶವಿದೆ ಎಂದು ಅವರು ಹೇಳಿದ್ದಾರೆ.

ಆನ್‌ಲೈನ್ ಮಾರುಕಟ್ಟೆಯ ದೈತ್ಯ ಸಂಸ್ಥೆ ಅಮೆಜಾನ್ ಕೂಡ ಅನಿಶ್ಚಿತ ಆರ್ಥಿಕತೆಯ ಕಾರಣ ನೀಡಿ ಜನವರಿ 18 ರಂದು ಮತ್ತೆ 18,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದಿದೆ. 2022ರ ನವೆಂಬರ್ ತಿಂಗಳಿನಲ್ಲಿ 10,000 ಉದ್ಯೋಗಿಗಳನ್ನು ಅಮೆಜಾನ್ ಕಂಪನಿಯು ಮನೆಗೆ ಕಳಿಸಿತ್ತು.

ಅಮೆಜಾನ್‌ ಕಂಪನಿಗೆ ಆರ್ಥಿಕ ಹಿಂಜರಿತದ ಹೊಡೆತ ಬಿದ್ದಿದ್ದು, ಅದು ಈಗಲೂ ಮುಂದುವರೆಯುತ್ತಿದೆ. ಮುಂದಿನ ಅನಿಶ್ಚಿತ ಆರ್ಥಿಕತೆಯ ದೃ‍ಷ್ಟಿಯಿಂದ ಈ ಕ್ರಮಗಳು ಅನಿವಾರ್ಯವಾಗಿದೆ ಎಂದು ಅಮೆಜಾನ್ ಹೇಳಿಕೊಂಡಿದೆ.

ಮಾನವ ಸಂಪನ್ಮೂಲ ಸಲಹಾ ಸಂಸ್ಥೆ ಚಾಲೆಂಜರ್, ಗ್ರೇ & ಕ್ರಿಸ್‌ಮಸ್ ಇಂಕ್ ಪ್ರಕಾರ, 2022 ರಲ್ಲಿ ಟೆಕ್ ವಲಯದಲ್ಲಿ ಹೆಚ್ಚಿನ ಉದ್ಯೋಗ ಕಡಿತವಾಗಿದೆ. ಈ ವರ್ಷದಲ್ಲಿ 97,171 ಉದ್ಯೋಗಿಗಳು ಕೆಲಸ ಕಳೆದು ಕೊಂಡಿದ್ದು ಹಿಂದಿನ ವರ್ಷಕ್ಕೆ ಹೋಲಿಸಿದರೆ 649% ಹೆಚ್ಚಾಗಿದೆ ಎನ್ನಲಾಗಿದೆ.

ಇದನ್ನೂ ಓದಿ; ಅನಿಶ್ಚಿತ ಆರ್ಥಿಕತೆ: 18,000 ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆಜಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...