Homeರಾಜಕೀಯಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

ಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

- Advertisement -
- Advertisement -

ಕೇರಳದ ಲೋಕತಾಂತ್ರಿಕ ಜನತಾ ದಳ (ಎಲ್‌ಜೆಡಿ) ತನ್ನ ಮಾತೃ ಪಕ್ಷವಾದ ಜನತಾ ದಳ-ಜಾತ್ಯತೀತ (ಜೆಡಿಎಸ್‌‌) ನೊಂದಿಗೆ ವಿಲೀನಗೊಳ್ಳಲು ಸಿದ್ಧವಾಗಿದೆ. ಈ ಬಗ್ಗೆ ಗುರುವಾರದಂದು ಜೆಡಿಎಸ್‌ ಕೇರಳ ರಾಜ್ಯ ಸಮಿತಿಯು ಅನುಮೋದಿಸಿದೆ ಎಂದು ವರದಿಯಾಗಿದೆ. ವಿಲೀನಗೊಂಡ ನಂತರ ಪಕ್ಷವು ಎಚ್‌.ಡಿ. ದೇವೇಗೌಡ ಅವರ ನೇತೃತ್ವದ ಜೆಡಿಎಸ್ ರಾಷ್ಟ್ರೀಯ ಸಮಿತಿಯ ಭಾಗವಾಗಿ ಕಾರ್ಯನಿರ್ವಹಿಸಲಿದೆ.

ಕೇರಳದಲ್ಲಿ ಎಲ್‌ಜೆಡಿ ಮತ್ತು ಜೆಡಿಎಸ್‌‌ ಪಕ್ಷಗಳು ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಮೈತ್ರಿ ಕೂಟದ ಸಣ್ಣ ಮಿತ್ರಪಕ್ಷಗಳಾಗಿವೆ. ಎರಡು ರಾಜಕೀಯ ಪಕ್ಷಗಳ ವಿಲೀನವು ರಾಜ್ಯದ ರಾಜಕೀಯ ಲೆಕ್ಕಾಚಾರಗಳ ಮೇಲೆ ಯಾವುದೇ ಮಹತ್ವದ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳದ 2021 ರ ಚುನಾವಣೆಯ ವೇಳೆ ಜೆಡಿಎಸ್‌ನಿಂದ ಇಬ್ಬರು ಶಾಸಕರು ಆಯ್ಕೆಯಾಗಿದ್ದರು. ಕೊಟ್ಟಾಯಂನ ತಿರುವಲ್ಲಾವನ್ನು ಪ್ರತಿನಿಧಿಸುವ ಮ್ಯಾಥ್ಯೂ ಟಿ. ಥಾಮಸ್ ಮತ್ತು ಪಾಲಕ್ಕಾಡ್‌ನ ಚಿತ್ತೂರು ಪ್ರತಿನಿಧಿಸುವ ಕೆ ಕೃಷ್ಣನ್‌ಕುಟ್ಟಿ ಜೆಡಿಎಸ್‌ನ ಶಾಸಕರಾಗಿದ್ದು, ಕಣ್ಣೂರಿನ ಕೂತುಪರಂಬದಿಂದ ಗೆದ್ದಿರುವ ಕೆ.ಪಿ. ಮೋಹನನ್ ಎಲ್‌ಜೆಡಿಯ ಏಕೈಕ ಶಾಸಕರಾಗಿದ್ದಾರೆ. ಎರಡು ಪಕ್ಷಗಳ ವಿಲೀನದೊಂದಿಗೆ ಜೆಡಿಎಸ್‌ ಶಾಸಕರ ಸಂಖ್ಯೆಯು ಕೇರಳದಲ್ಲಿ ಮೂರಕ್ಕೆ ಏರಲಿದೆ.

140 ಸದಸ್ಯರಿರುವ ಕೇರಳ ಅಸೆಂಬ್ಲಿಯಲ್ಲಿ ಎಲ್‌ಡಿಎಫ್‌ ಮೈತ್ರಿಕೂಟದಲ್ಲಿ ಒಟ್ಟು 99 ಸದಸ್ಯರಿದ್ದು, ಒಕ್ಕೂಟದ ನೇತೃತ್ವ ವಹಿಸಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) 62 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಎಲ್‌ಜೆಡಿ ಮುಖ್ಯಸ್ಥ ಎಂ.ಪಿ. ವೀರೇಂದ್ರ ಕುಮಾರ್ ಜೀವಂತವಾಗಿದ್ದಾಗ 2019 ರಲ್ಲಿ ಎಲ್‌ಜೆಡಿ ಮತ್ತು ಜೆಡಿಎಸ್‌ ನಡುವಿನ ವಿಲೀನದ ಕುರಿತು ಚರ್ಚೆಗಳು ಅನಧಿಕೃತವಾಗಿ ಪ್ರಾರಂಭವಾಗಿದ್ದವು. ಎರಡೂ ಪಕ್ಷಗಳು ನಾಯಕತ್ವದ ಹುದ್ದೆಗಳನ್ನು ಹಂಚಿಕೊಳ್ಳಲಿವೆ ಎಂದು ವರದಿಯಾಗಿದೆ. ಮಾಜಿ ಸಚಿವ ಮತ್ತು ಹಾಲಿ ಶಾಸಕ ಮ್ಯಾಥ್ಯೂ ಟಿ. ಥಾಮಸ್ ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಸಾಧ್ಯತೆಯಿದ್ದು, ವೀರೇಂದ್ರ ಕುಮಾರ್ ಅವರ ಪುತ್ರ ಎಂ.ವಿ. ಶ್ರೇಯಮ್ಸ್ ಕುಮಾರ್ ರಾಷ್ಟ್ರೀಯ ಕಾರ್ಯದರ್ಶಿಯಾಗುವ ನಿರೀಕ್ಷೆಯಿದೆ.

ವಯನಾಡಿನ ಕಲ್ಪೆಟ್ಟಾದಿಂದ ಎರಡು ಬಾರಿ ಶಾಸಕರಾಗಿದ್ದ, ರಾಜ್ಯಸಭೆಯ ಮಾಜಿ ಸಂಸದರಾದ ಶ್ರೇಯಮ್ಸ್ ಕುಮಾರ್ ಅವರು ತಮ್ಮ ತಂದೆಯ ಹಾದಿಯನ್ನು ಅನುಸರಿಸಿ ಮಾತೃಭೂಮಿ ಮಾಧ್ಯಮ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾಗಿ ಚುಕ್ಕಾಣಿ ಹಿಡಿದಿದ್ದಾರೆ. ಶ್ರೇಯಮ್ಸ್ 2021 ರಲ್ಲಿ ಕಲ್ಪೆಟ್ಟಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಚುನಾವಣೆಯಲ್ಲಿ ಎಲ್‌ಜೆಡಿ ಸ್ಪರ್ಧಿಸಿದ್ದ ಮೂರು ಸ್ಥಾನಗಳಲ್ಲಿ ಒಂದನ್ನು ಮಾತ್ರ ಗೆದ್ದಿತ್ತು.

ಇದನ್ನೂ ಓದಿ: ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...