Homeರಾಜಕೀಯಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

ಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

- Advertisement -
- Advertisement -

ಕೇರಳದ ಲೋಕತಾಂತ್ರಿಕ ಜನತಾ ದಳ (ಎಲ್‌ಜೆಡಿ) ತನ್ನ ಮಾತೃ ಪಕ್ಷವಾದ ಜನತಾ ದಳ-ಜಾತ್ಯತೀತ (ಜೆಡಿಎಸ್‌‌) ನೊಂದಿಗೆ ವಿಲೀನಗೊಳ್ಳಲು ಸಿದ್ಧವಾಗಿದೆ. ಈ ಬಗ್ಗೆ ಗುರುವಾರದಂದು ಜೆಡಿಎಸ್‌ ಕೇರಳ ರಾಜ್ಯ ಸಮಿತಿಯು ಅನುಮೋದಿಸಿದೆ ಎಂದು ವರದಿಯಾಗಿದೆ. ವಿಲೀನಗೊಂಡ ನಂತರ ಪಕ್ಷವು ಎಚ್‌.ಡಿ. ದೇವೇಗೌಡ ಅವರ ನೇತೃತ್ವದ ಜೆಡಿಎಸ್ ರಾಷ್ಟ್ರೀಯ ಸಮಿತಿಯ ಭಾಗವಾಗಿ ಕಾರ್ಯನಿರ್ವಹಿಸಲಿದೆ.

ಕೇರಳದಲ್ಲಿ ಎಲ್‌ಜೆಡಿ ಮತ್ತು ಜೆಡಿಎಸ್‌‌ ಪಕ್ಷಗಳು ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಮೈತ್ರಿ ಕೂಟದ ಸಣ್ಣ ಮಿತ್ರಪಕ್ಷಗಳಾಗಿವೆ. ಎರಡು ರಾಜಕೀಯ ಪಕ್ಷಗಳ ವಿಲೀನವು ರಾಜ್ಯದ ರಾಜಕೀಯ ಲೆಕ್ಕಾಚಾರಗಳ ಮೇಲೆ ಯಾವುದೇ ಮಹತ್ವದ ಪರಿಣಾಮ ಬೀರುವ ಸಾಧ್ಯತೆಯಿಲ್ಲ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳದ 2021 ರ ಚುನಾವಣೆಯ ವೇಳೆ ಜೆಡಿಎಸ್‌ನಿಂದ ಇಬ್ಬರು ಶಾಸಕರು ಆಯ್ಕೆಯಾಗಿದ್ದರು. ಕೊಟ್ಟಾಯಂನ ತಿರುವಲ್ಲಾವನ್ನು ಪ್ರತಿನಿಧಿಸುವ ಮ್ಯಾಥ್ಯೂ ಟಿ. ಥಾಮಸ್ ಮತ್ತು ಪಾಲಕ್ಕಾಡ್‌ನ ಚಿತ್ತೂರು ಪ್ರತಿನಿಧಿಸುವ ಕೆ ಕೃಷ್ಣನ್‌ಕುಟ್ಟಿ ಜೆಡಿಎಸ್‌ನ ಶಾಸಕರಾಗಿದ್ದು, ಕಣ್ಣೂರಿನ ಕೂತುಪರಂಬದಿಂದ ಗೆದ್ದಿರುವ ಕೆ.ಪಿ. ಮೋಹನನ್ ಎಲ್‌ಜೆಡಿಯ ಏಕೈಕ ಶಾಸಕರಾಗಿದ್ದಾರೆ. ಎರಡು ಪಕ್ಷಗಳ ವಿಲೀನದೊಂದಿಗೆ ಜೆಡಿಎಸ್‌ ಶಾಸಕರ ಸಂಖ್ಯೆಯು ಕೇರಳದಲ್ಲಿ ಮೂರಕ್ಕೆ ಏರಲಿದೆ.

140 ಸದಸ್ಯರಿರುವ ಕೇರಳ ಅಸೆಂಬ್ಲಿಯಲ್ಲಿ ಎಲ್‌ಡಿಎಫ್‌ ಮೈತ್ರಿಕೂಟದಲ್ಲಿ ಒಟ್ಟು 99 ಸದಸ್ಯರಿದ್ದು, ಒಕ್ಕೂಟದ ನೇತೃತ್ವ ವಹಿಸಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) 62 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಎಲ್‌ಜೆಡಿ ಮುಖ್ಯಸ್ಥ ಎಂ.ಪಿ. ವೀರೇಂದ್ರ ಕುಮಾರ್ ಜೀವಂತವಾಗಿದ್ದಾಗ 2019 ರಲ್ಲಿ ಎಲ್‌ಜೆಡಿ ಮತ್ತು ಜೆಡಿಎಸ್‌ ನಡುವಿನ ವಿಲೀನದ ಕುರಿತು ಚರ್ಚೆಗಳು ಅನಧಿಕೃತವಾಗಿ ಪ್ರಾರಂಭವಾಗಿದ್ದವು. ಎರಡೂ ಪಕ್ಷಗಳು ನಾಯಕತ್ವದ ಹುದ್ದೆಗಳನ್ನು ಹಂಚಿಕೊಳ್ಳಲಿವೆ ಎಂದು ವರದಿಯಾಗಿದೆ. ಮಾಜಿ ಸಚಿವ ಮತ್ತು ಹಾಲಿ ಶಾಸಕ ಮ್ಯಾಥ್ಯೂ ಟಿ. ಥಾಮಸ್ ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಸಾಧ್ಯತೆಯಿದ್ದು, ವೀರೇಂದ್ರ ಕುಮಾರ್ ಅವರ ಪುತ್ರ ಎಂ.ವಿ. ಶ್ರೇಯಮ್ಸ್ ಕುಮಾರ್ ರಾಷ್ಟ್ರೀಯ ಕಾರ್ಯದರ್ಶಿಯಾಗುವ ನಿರೀಕ್ಷೆಯಿದೆ.

ವಯನಾಡಿನ ಕಲ್ಪೆಟ್ಟಾದಿಂದ ಎರಡು ಬಾರಿ ಶಾಸಕರಾಗಿದ್ದ, ರಾಜ್ಯಸಭೆಯ ಮಾಜಿ ಸಂಸದರಾದ ಶ್ರೇಯಮ್ಸ್ ಕುಮಾರ್ ಅವರು ತಮ್ಮ ತಂದೆಯ ಹಾದಿಯನ್ನು ಅನುಸರಿಸಿ ಮಾತೃಭೂಮಿ ಮಾಧ್ಯಮ ಸಮೂಹದ ವ್ಯವಸ್ಥಾಪಕ ನಿರ್ದೇಶಕರಾಗಿ ಚುಕ್ಕಾಣಿ ಹಿಡಿದಿದ್ದಾರೆ. ಶ್ರೇಯಮ್ಸ್ 2021 ರಲ್ಲಿ ಕಲ್ಪೆಟ್ಟಾದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಚುನಾವಣೆಯಲ್ಲಿ ಎಲ್‌ಜೆಡಿ ಸ್ಪರ್ಧಿಸಿದ್ದ ಮೂರು ಸ್ಥಾನಗಳಲ್ಲಿ ಒಂದನ್ನು ಮಾತ್ರ ಗೆದ್ದಿತ್ತು.

ಇದನ್ನೂ ಓದಿ: ಪ್ರಧಾನಿ ಹುದ್ದೆಯನ್ನು ತಹಸೀಲ್ದಾರ್‌ ಮಟ್ಟಕ್ಕೆ ಇಳಿಸಿದ ಬೊಮ್ಮಾಯಿ: ಭಾಸ್ಕರ್‌ ರಾವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...