Homeಕರ್ನಾಟಕತೂತುಬಿದ್ದ ಬೆಂಗಳೂರಿನ ಮತ್ತೊಂದು ರಸ್ತೆ; ಅವ್ಯವಸ್ಥೆಗೆ ಕೊನೆ ಎಂದು?

ತೂತುಬಿದ್ದ ಬೆಂಗಳೂರಿನ ಮತ್ತೊಂದು ರಸ್ತೆ; ಅವ್ಯವಸ್ಥೆಗೆ ಕೊನೆ ಎಂದು?

- Advertisement -
- Advertisement -

ಬೆಂಗಳೂರಿನ ಇಟ್ಟಮಡು ಮುಖ್ಯರಸ್ತೆಯ ಒಂದು ಭಾಗ ಇಂದು ಬೆಳಿಗ್ಗೆ ತೂತುಬಿದ್ದಿದೆ. ಆ ಮೂಲಕ ಸರಣಿ ರಸ್ತೆ ಅವಗಢಗಳ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ. ಸದ್ಯಕ್ಕೆ ಯಾವುದೇ ಜೀವಹಾನಿ ಸಂಭವಿಸದಂತೆ ರಸ್ತೆ ಕುಳಿ ಬಿದ್ದ ಭಾಗದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ ಎಂದು ವರದಿಯಾಗಿದೆ.

ಇಟ್ಟಮಡು ಮುಖ್ಯರಸ್ತೆಯ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಅಲ್ಲಿಯೇ ಈ ಅವಘಡ ಸಂಭವಿಸಿರುವುದಾಗಿ ಎಎನ್ಐ ವರದಿ ಮಾಡಿದೆ.

ಕಳೆದ ವಾರ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಇದೇ ರೀತಿಯ ರಸ್ತೆಯ ಕುಳಿಬಿದ್ದ ಪ್ರಕರಣ ವರದಿಯಾಗಿತ್ತು. ಮೆಟ್ರೋ ನಿಲ್ದಾಣದ 50 ಮೀಟರ್ ದೂರದಲ್ಲಿ 4-5 ಅಡಿಯಷ್ಟು ಆಳದ ಗುಂಡಿ ಕಂಡುಬಂದಿತ್ತು. ಬಿಬಿಎಂಪಿಯ ಕಾರ್ಯವೈಖರಿ ಬಗ್ಗೆ ಟೀಕೆ ವ್ಯಕ್ತವಾಗಿತ್ತು.

ಅದಕ್ಕೂ ಒಂದು ವಾರಗಳ ಹಿಂದೆ ಬ್ರಿಗೇಡ್ ರಸ್ತೆಯಲ್ಲಿ ದೊಡ್ಡ ತೂತು ಬಿದ್ದಿದ್ದು ಪರಿಣಾಮ ಬೈಕ್ ಸವಾರನೊಬ್ಬ ಅಪಘಾತಕ್ಕೀಡಾಗಿದ್ದಾನೆ. ಅಪಘಾತಕ್ಕೀಡಾದ ವ್ಯಕ್ತಿಯನ್ನು ಪುನೀತ್ ಎಂದು ಗುರುತಿಸಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇಡೀ ದೃಶ್ಯಾವಳಿ ಸಿಸಿಕ್ಯಾಮರದಲ್ಲಿ ದಾಖಲಾಗಿದೆ.

ಬೆಂಗಳೂರಿನ ವಾಣಿಜ್ಯ ಪ್ರದೇಶವಾದ ಜನನಿಬಿಡ ಬ್ರಿಗೇಡ್ ಟವರ್ಸ್ ಬಳಿಯ ಶೂಲೆ ಸರ್ಕಲ್ ರಸ್ತೆ ಮಧ್ಯೆದಲ್ಲಿ ದೊಡ್ಡ ಕುಳಿ ಬಿದ್ದಿತ್ತು. ಬಹುಭಾಗ ಕುಸಿದ ಬಿದ್ದ ಪರಿಣಾಮ ದೊಡ್ಡ ತೂತು ಉಂಟಾಗಿದೆ. ಬೈಕ್ ಸವಾರನೊಬ್ಬ ರಸ್ತೆಯಲ್ಲಿ ಚಲಿಸುತ್ತಿದ್ದಾಗ ರಸ್ತೆ ಮಧ್ಯೆದಲ್ಲಿ ಮಣ್ಣು ಕುಸಿದಿದೆ. ಪರಿಣಾಮ ಆಯತಪ್ಪಿ ಸವಾರ ನೆಲಕ್ಕುರುಳಿದ್ದನು.

ಅದಕ್ಕೂ ಎರಡು ದಿನಗಳ ಹಿಂದೆ ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಒಂದರ ಕಬ್ಬಿಣದ ರಾಡ್‌ ಕುಸಿದು ತಾಯಿ ಹಾಗೂ ಮಗು ಮೃತಪಟ್ಟಿರುವ ದುರ್ಘಟನೆ ಜರುಗಿತ್ತು.

ಒಟ್ಟಾರೆಯಾಗಿ ಪ್ರತಿದಿನವೂ ಕಳಪೆ ಕಾಮಗಾರಿಗಳ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗುತ್ತಲೇ ಇವೆ. ಹಲವಾರು ಜೀವಹಾನಿಗಳು ಸಂಭವಿಸಿವೆ. ಆದರೆ ಆ ಅವ್ಯವಸ್ಥೆಗಳನ್ನು ನಿಲ್ಲಿಸಲು ಸರ್ಕಾರವಾಗಲಿ, ಬಿಬಿಎಂಪಿಯಾಗಲಿ ಗಮನ ಹರಿಸಿದಂತೆ ಕಾಣುತ್ತಿಲ್ಲ. ಈ ನಡುವೆ ಗುತ್ತಿಗೆದಾರರು ಸರ್ಕಾರದ ಮಂತ್ರಿಗಳು, ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂದು ಹಲವಾರು ಬಾರಿ ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಸರ್ಕಾರ ಹಲವು ರಂಗದಲ್ಲಿ ಜನರಿಂದ ವಿರೋಧ ಎದುರಿಸುತ್ತಿದೆ.

ಇದನ್ನೂ ಓದಿ: ಬೆಂಗಳೂರು ರಸ್ತೆಯಲ್ಲಿ ದೊಡ್ಡ ತೂತು: ಬೈಕ್ ಸವಾರನಿಗೆ ಅಪಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...