Homeಮುಖಪುಟಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

ಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ವಾರ್ಷಿಕ ಪೊಲೀಸ್ ಸಮ್ಮೇಳನ ನಡೆಯುತ್ತಿದ್ದು, “ಹೆಚ್ಚಿನ ಸಂಖ್ಯೆಯ ನಿರಾಶ್ರಿತ ಬಂಧೀಖಾನೆಗಳನ್ನು ಸ್ಥಾಪಿಸುವುದು, ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರನ್ನು ಗುರುತಿಸಿ ಗಡೀಪಾರು ಮಾಡಲು ಬಯೋಮೆಟ್ರಿಕ್ಸ್ ಅನ್ನು ಬಳಸುವುದು” ಸೇರಿದಂತೆ ಕೆಲವು ಕ್ರಮಗಳ ಕುರಿತು ಚರ್ಚಿಸಲಾಗಿದೆ.

1951ರ ವಿಶ್ವಸಂಸ್ಥೆಯ ನಿರಾಶ್ರಿತರ ಸಮಾವೇಶ ಮತ್ತು ಅದರ 1967ರ ಶಿಷ್ಟಾಚಾರಕ್ಕೆ ಭಾರತವು ಸಹಿ ಹಾಕಿಲ್ಲ ಎಂದು, ರೋಹಿಂಗ್ಯಾ ಅಥವಾ ವಿಶ್ವಸಂಸ್ಥೆಯಿಂದ ಗುರುತಿಸಲ್ಪಟ್ಟ ನಿರಾಶ್ರಿತರ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸರ್ಕಾರದ ನೀತಿಯ ಬಗ್ಗೆ ಸ್ಪಷ್ಟತೆಯನ್ನು ಕೋರಿದ್ದಾರೆ.

ಜನವರಿ 20ರಂದು ಇಂಟೆಲಿಜೆನ್ಸ್ ಬ್ಯೂರೋ (IB) ಆಯೋಜಿಸಿದ 57ನೇ ‘ಡಿಜಿಪಿ (ಡೈರಕ್ಟರ್‌ ಜನರಲ್ಸ್‌ ಆಫ್‌ ಪೊಲೀಸ್‌) ಮತ್ತು ಐಜಿಪಿ (ಇನ್‌ಸ್ಪೆಕ್ಟರ್‌ ಜನರಲ್ ಆಫ್ ಪೊಲೀಸ್‌) ಸಮಾವೇಶ’ದ ಮೊದಲ ದಿನ ಈ ಕುರಿತು ಚರ್ಚೆಯಾಗಿದೆ. ಭಾರತದಲ್ಲಿ ಅತಿಯಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸಲು ಮತ್ತು ಗಡಿಪಾರು ಮಾಡಲು ಸಂಘಟಿತ ಕಾರ್ಯತಂತ್ರದ ಕುರಿತು ಪ್ರಸ್ತಾಪಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಸರ್ಕಾರಿ ಅಧಿಕಾರಿಯೊಬ್ಬರು  ಮಾತನಾಡಿ, “ವಲಸೆ ಡೇಟಾಬೇಸ್‌ನ ಪ್ರಕಾರ, 2019, 2020 ಮತ್ತು 2021 ವರ್ಷಗಳಲ್ಲಿ ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರ ಸಂಖ್ಯೆ ಕ್ರಮವಾಗಿ 54,576, 40,239 ಮತ್ತು 25,143ರಷ್ಟಿದೆ” ಎಂದಿದ್ದಾರೆ.

ಅಧಿಕಾರಿಗಳು ಹಲವು ಸವಾಲುಗಳನ್ನು ತಿಳಿಸಿದ್ದಾರೆ. ಪ್ರವಾಸಿ ವೀಸಾ ಮತ್ತು ವಿದ್ಯಾರ್ಥಿ ವೀಸಾವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಂತಹ ಅಪರಾಧಿಗಳನ್ನು ಪತ್ತೆಹಚ್ಚಲು ಬಯೋಮೆಟ್ರಿಕ್ಸ್ ಅನ್ನು ವ್ಯಾಪಕವಾಗಿ ಬಳಸಬಹುದು ಎಂದು ಪ್ರತಿಪಾದಿಸಲಾಗಿದೆ.

ಭಾರತದಲ್ಲಿ 180 ದಿನಗಳವರೆಗೆ ಉಳಿಯಲು ಅನುಮತಿಸುವ ಪ್ರವಾಸಿ ವೀಸಾಗಳಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಯಲ್ಲಿ ವರದಿ ಮಾಡುವ ಅಗತ್ಯವಿಲ್ಲ. ಅಂತಹ ವಿದೇಶಿಯರನ್ನು ಪತ್ತೆಹಚ್ಚಲು ಇರುವ ಏಕೈಕ ಮಾರ್ಗವೆಂದರೆ ಸಿ-ಫಾರ್ಮ್‌ಗಳು. ಹೋಟೆಲ್ ಮತ್ತು ಲಾಡ್ಜ್‌ಗಳು ವಸತಿ ಒದಗಿಸುವಾಗ ರೆಕಾರ್ಡ್ ಮಾಡಬೇಕಾಗುತ್ತದೆ. ಅನೇಕ ಬಾಡಿಗೆ ವಸತಿ ಅಥವಾ ಹೋಮ್ ಸ್ಟೇಗಳು ಅವಶ್ಯಕತೆಗಳನ್ನು ಅನುಸರಿಸದ ಕಾರಣ ಅನೇಕ ಬಾರಿ ಇವು ದುಷ್ಪರಿಣಾಮ ಬೀರುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿದೇಶಿಯರ ಉಪಸ್ಥಿತಿಯನ್ನು ವರದಿ ಮಾಡದಿರುವ ಸೇವಾ ಪೂರೈಕೆದಾರರ ಹೋಟೆಲ್‌ಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಹೊಣೆಗಾರಿಕೆಯನ್ನು ನಿಗದಿಪಡಿಸುವ ಬಗ್ಗೆಯೂ ಸಮ್ಮೇಳನವು ಚರ್ಚಿಸಿದೆ.

ಗಡಿಪಾರು ವಿಳಂಬಕ್ಕೆ ಕಾರಣವಾಗುವ ಕೆಲವು ದೇಶಗಳ ಅಸಹಕಾರದ ಸಮಸ್ಯೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚಿಸುವಂತೆಯೂ ಸೂಚಿಸಲಾಗಿದೆ. ಪಾಸ್‌ಪೋರ್ಟ್‌ಗಳು, ಆಧಾರ್ ಕಾರ್ಡ್‌ಗಳಂತಹ ಭಾರತೀಯ ಗುರುತಿನ ದಾಖಲೆಗಳ ದುರುಪಯೋಗವಾಗುತ್ತಿರುವ ಕುರಿತೂ ಚರ್ಚಿಸಲಾಗಿದೆ.

ನೇಪಾಳ ಮತ್ತು ಮ್ಯಾನ್ಮಾರ್‌ನಲ್ಲಿ ಬೇಲಿಯಿಲ್ಲದ ಗಡಿಯಿಂದಾಗಿ ಎದುರಾಗಿರುವ ಸವಾಲುಗಳ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಮುಕ್ತ ಚಲನೆಯು ಭದ್ರತಾ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೇಪಾಳ ಗಡಿಯಲ್ಲಿ ವಿವಿಧ ವಸ್ತುಗಳ ಕಳ್ಳಸಾಗಣೆಯನ್ನು ಹೊರತುಪಡಿಸಿ, ಜನರು ಅತ್ತಿಂದಿತ್ತ ತಿರುಗಾಡುವುದು ಮತ್ತು ವಿದೇಶಿ ಏಜೆನ್ಸಿಗಳ ಚಟುವಟಿಕೆಗಳು ಪ್ರಮುಖ ಸಮಸ್ಯೆಗಳಾಗಿವೆ.

ಗಡಿ ಪ್ರದೇಶಗಳಲ್ಲಿ ಭಾರತದ ಹಿತಾಸಕ್ತಿಗಳ ವಿರುದ್ಧ ಸಾರ್ವಜನಿಕ ಅಭಿಪ್ರಾಯ ಮತ್ತು ಸರ್ಕಾರದ ನೀತಿಯ ಮೇಲೆ ಪ್ರಭಾವ ಬೀರಲು ವಿದೇಶಿ ಏಜೆನ್ಸಿಗಳು ಪ್ರಯತ್ನಿಸುತ್ತಿವೆ ಎಂದು ಹೇಳಲಾಗಿದೆ. “ಇದರೊಂದಿಗೆ ವಿಶೇಷ ಗಡಿ ಆಡಳಿತದ ಲಾಭವನ್ನು ಪಡೆದುಕೊಳ್ಳುವ ಮೂರನೇ ದೇಶದ ಪ್ರಜೆಗಳ ಅಕ್ರಮ ಸಾಗಣೆಯು ಕಳವಳಕ್ಕೆ ಕಾರಣವಾಗಿದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾನ್ಮಾರ್ ಗಡಿಯುದ್ದಕ್ಕೂ, ಎರಡೂ ದೇಶಗಳಲ್ಲಿ 16 ಕಿಮೀ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಮುಕ್ತ ಚಲನೆಗೆ ಆಡಳಿತ ವ್ಯವಸ್ಥೆ ಅನುವು ಮಾಡಿಕೊಟ್ಟಿದೆ. ಎರಡು ವರ್ಷಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ನಡೆದ ದಂಗೆಯ ನಂತರ ಮಿಜೋರಾಂಗೆ ನಿರಾಶ್ರಿತರ ಒಳಹರಿವು  ಹೆಚ್ಚಾಗಿದ್ದು, ಕಳವಳಕಾರಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...