Homeಮುಖಪುಟಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

ಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ವಾರ್ಷಿಕ ಪೊಲೀಸ್ ಸಮ್ಮೇಳನ ನಡೆಯುತ್ತಿದ್ದು, “ಹೆಚ್ಚಿನ ಸಂಖ್ಯೆಯ ನಿರಾಶ್ರಿತ ಬಂಧೀಖಾನೆಗಳನ್ನು ಸ್ಥಾಪಿಸುವುದು, ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರನ್ನು ಗುರುತಿಸಿ ಗಡೀಪಾರು ಮಾಡಲು ಬಯೋಮೆಟ್ರಿಕ್ಸ್ ಅನ್ನು ಬಳಸುವುದು” ಸೇರಿದಂತೆ ಕೆಲವು ಕ್ರಮಗಳ ಕುರಿತು ಚರ್ಚಿಸಲಾಗಿದೆ.

1951ರ ವಿಶ್ವಸಂಸ್ಥೆಯ ನಿರಾಶ್ರಿತರ ಸಮಾವೇಶ ಮತ್ತು ಅದರ 1967ರ ಶಿಷ್ಟಾಚಾರಕ್ಕೆ ಭಾರತವು ಸಹಿ ಹಾಕಿಲ್ಲ ಎಂದು, ರೋಹಿಂಗ್ಯಾ ಅಥವಾ ವಿಶ್ವಸಂಸ್ಥೆಯಿಂದ ಗುರುತಿಸಲ್ಪಟ್ಟ ನಿರಾಶ್ರಿತರ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸರ್ಕಾರದ ನೀತಿಯ ಬಗ್ಗೆ ಸ್ಪಷ್ಟತೆಯನ್ನು ಕೋರಿದ್ದಾರೆ.

ಜನವರಿ 20ರಂದು ಇಂಟೆಲಿಜೆನ್ಸ್ ಬ್ಯೂರೋ (IB) ಆಯೋಜಿಸಿದ 57ನೇ ‘ಡಿಜಿಪಿ (ಡೈರಕ್ಟರ್‌ ಜನರಲ್ಸ್‌ ಆಫ್‌ ಪೊಲೀಸ್‌) ಮತ್ತು ಐಜಿಪಿ (ಇನ್‌ಸ್ಪೆಕ್ಟರ್‌ ಜನರಲ್ ಆಫ್ ಪೊಲೀಸ್‌) ಸಮಾವೇಶ’ದ ಮೊದಲ ದಿನ ಈ ಕುರಿತು ಚರ್ಚೆಯಾಗಿದೆ. ಭಾರತದಲ್ಲಿ ಅತಿಯಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸಲು ಮತ್ತು ಗಡಿಪಾರು ಮಾಡಲು ಸಂಘಟಿತ ಕಾರ್ಯತಂತ್ರದ ಕುರಿತು ಪ್ರಸ್ತಾಪಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಸರ್ಕಾರಿ ಅಧಿಕಾರಿಯೊಬ್ಬರು  ಮಾತನಾಡಿ, “ವಲಸೆ ಡೇಟಾಬೇಸ್‌ನ ಪ್ರಕಾರ, 2019, 2020 ಮತ್ತು 2021 ವರ್ಷಗಳಲ್ಲಿ ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರ ಸಂಖ್ಯೆ ಕ್ರಮವಾಗಿ 54,576, 40,239 ಮತ್ತು 25,143ರಷ್ಟಿದೆ” ಎಂದಿದ್ದಾರೆ.

ಅಧಿಕಾರಿಗಳು ಹಲವು ಸವಾಲುಗಳನ್ನು ತಿಳಿಸಿದ್ದಾರೆ. ಪ್ರವಾಸಿ ವೀಸಾ ಮತ್ತು ವಿದ್ಯಾರ್ಥಿ ವೀಸಾವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಂತಹ ಅಪರಾಧಿಗಳನ್ನು ಪತ್ತೆಹಚ್ಚಲು ಬಯೋಮೆಟ್ರಿಕ್ಸ್ ಅನ್ನು ವ್ಯಾಪಕವಾಗಿ ಬಳಸಬಹುದು ಎಂದು ಪ್ರತಿಪಾದಿಸಲಾಗಿದೆ.

ಭಾರತದಲ್ಲಿ 180 ದಿನಗಳವರೆಗೆ ಉಳಿಯಲು ಅನುಮತಿಸುವ ಪ್ರವಾಸಿ ವೀಸಾಗಳಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಯಲ್ಲಿ ವರದಿ ಮಾಡುವ ಅಗತ್ಯವಿಲ್ಲ. ಅಂತಹ ವಿದೇಶಿಯರನ್ನು ಪತ್ತೆಹಚ್ಚಲು ಇರುವ ಏಕೈಕ ಮಾರ್ಗವೆಂದರೆ ಸಿ-ಫಾರ್ಮ್‌ಗಳು. ಹೋಟೆಲ್ ಮತ್ತು ಲಾಡ್ಜ್‌ಗಳು ವಸತಿ ಒದಗಿಸುವಾಗ ರೆಕಾರ್ಡ್ ಮಾಡಬೇಕಾಗುತ್ತದೆ. ಅನೇಕ ಬಾಡಿಗೆ ವಸತಿ ಅಥವಾ ಹೋಮ್ ಸ್ಟೇಗಳು ಅವಶ್ಯಕತೆಗಳನ್ನು ಅನುಸರಿಸದ ಕಾರಣ ಅನೇಕ ಬಾರಿ ಇವು ದುಷ್ಪರಿಣಾಮ ಬೀರುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿದೇಶಿಯರ ಉಪಸ್ಥಿತಿಯನ್ನು ವರದಿ ಮಾಡದಿರುವ ಸೇವಾ ಪೂರೈಕೆದಾರರ ಹೋಟೆಲ್‌ಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಹೊಣೆಗಾರಿಕೆಯನ್ನು ನಿಗದಿಪಡಿಸುವ ಬಗ್ಗೆಯೂ ಸಮ್ಮೇಳನವು ಚರ್ಚಿಸಿದೆ.

ಗಡಿಪಾರು ವಿಳಂಬಕ್ಕೆ ಕಾರಣವಾಗುವ ಕೆಲವು ದೇಶಗಳ ಅಸಹಕಾರದ ಸಮಸ್ಯೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚಿಸುವಂತೆಯೂ ಸೂಚಿಸಲಾಗಿದೆ. ಪಾಸ್‌ಪೋರ್ಟ್‌ಗಳು, ಆಧಾರ್ ಕಾರ್ಡ್‌ಗಳಂತಹ ಭಾರತೀಯ ಗುರುತಿನ ದಾಖಲೆಗಳ ದುರುಪಯೋಗವಾಗುತ್ತಿರುವ ಕುರಿತೂ ಚರ್ಚಿಸಲಾಗಿದೆ.

ನೇಪಾಳ ಮತ್ತು ಮ್ಯಾನ್ಮಾರ್‌ನಲ್ಲಿ ಬೇಲಿಯಿಲ್ಲದ ಗಡಿಯಿಂದಾಗಿ ಎದುರಾಗಿರುವ ಸವಾಲುಗಳ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಮುಕ್ತ ಚಲನೆಯು ಭದ್ರತಾ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೇಪಾಳ ಗಡಿಯಲ್ಲಿ ವಿವಿಧ ವಸ್ತುಗಳ ಕಳ್ಳಸಾಗಣೆಯನ್ನು ಹೊರತುಪಡಿಸಿ, ಜನರು ಅತ್ತಿಂದಿತ್ತ ತಿರುಗಾಡುವುದು ಮತ್ತು ವಿದೇಶಿ ಏಜೆನ್ಸಿಗಳ ಚಟುವಟಿಕೆಗಳು ಪ್ರಮುಖ ಸಮಸ್ಯೆಗಳಾಗಿವೆ.

ಗಡಿ ಪ್ರದೇಶಗಳಲ್ಲಿ ಭಾರತದ ಹಿತಾಸಕ್ತಿಗಳ ವಿರುದ್ಧ ಸಾರ್ವಜನಿಕ ಅಭಿಪ್ರಾಯ ಮತ್ತು ಸರ್ಕಾರದ ನೀತಿಯ ಮೇಲೆ ಪ್ರಭಾವ ಬೀರಲು ವಿದೇಶಿ ಏಜೆನ್ಸಿಗಳು ಪ್ರಯತ್ನಿಸುತ್ತಿವೆ ಎಂದು ಹೇಳಲಾಗಿದೆ. “ಇದರೊಂದಿಗೆ ವಿಶೇಷ ಗಡಿ ಆಡಳಿತದ ಲಾಭವನ್ನು ಪಡೆದುಕೊಳ್ಳುವ ಮೂರನೇ ದೇಶದ ಪ್ರಜೆಗಳ ಅಕ್ರಮ ಸಾಗಣೆಯು ಕಳವಳಕ್ಕೆ ಕಾರಣವಾಗಿದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾನ್ಮಾರ್ ಗಡಿಯುದ್ದಕ್ಕೂ, ಎರಡೂ ದೇಶಗಳಲ್ಲಿ 16 ಕಿಮೀ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಮುಕ್ತ ಚಲನೆಗೆ ಆಡಳಿತ ವ್ಯವಸ್ಥೆ ಅನುವು ಮಾಡಿಕೊಟ್ಟಿದೆ. ಎರಡು ವರ್ಷಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ನಡೆದ ದಂಗೆಯ ನಂತರ ಮಿಜೋರಾಂಗೆ ನಿರಾಶ್ರಿತರ ಒಳಹರಿವು  ಹೆಚ್ಚಾಗಿದ್ದು, ಕಳವಳಕಾರಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...