Homeಮುಖಪುಟತ್ರಿಮೂರ್ತಿ ಎಂಬ ಕನ್ನಡಿ

ತ್ರಿಮೂರ್ತಿ ಎಂಬ ಕನ್ನಡಿ

- Advertisement -
- Advertisement -

ತನ್ನ ಬದುಕಿನುದ್ದಕ್ಕೂ ಸಾಮಾಜಿಕ ಹೋರಾಟದಲ್ಲಿ ತೊಡಗಿಸಿಕೊಂಡು, ಮೈಮನಸ್ಸುಗಳ ತುಂಬಾ ಕನಸುಗಳನ್ನು ಹೊತ್ತು ತಿರುಗುತ್ತಿದ್ದ ಗೆಳೆಯ ತ್ರಿಮೂರ್ತಿ ಕಣ್ಮರೆಯಾಗಿ ತಿಂಗಳಾಗಿದೆ. ಈ ನಡುವೆ ನಾವು ಬದುಕುತ್ತಿರುವ ಸಮಾಜ ಹಲವು ಹೊರಳುಗಳಿಗೆ ಪಕ್ಕಾಗಿ ಲೆಕ್ಕವಿಟ್ಟುಕೊಳ್ಳಲಾಗದಷ್ಟು ಬದಲಾಗಿದೆ. ಅಡುಗೆಗಾಗಿ ಬಳಸುವ ಗ್ಯಾಸ್ ಬೆಲೆ ಮತ್ತೊಮ್ಮೆ ಜಾಸ್ತಿಯಾಗಿದೆ; ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರಗಳು, ದಲಿತರ ಮೇಲಿನ ದೌರ್ಜನ್ಯಗಳು ಸಮಾಜದ ಕುರುಡು, ಕಿವುಡನ್ನು ಎತ್ತಿ ತೋರಿಸುತ್ತಿವೆ. ತ್ರಿಮೂರ್ತಿ ಹೋದ ದಿನದಿಂದ ಈದಿನದವರೆಗೂ ಅವನು ಇದಕ್ಕೆಲ್ಲಾ ಹೇಗೆ ಪ್ರತಿಕ್ರಿಯಿಸುತ್ತಿದ್ದ ಎನ್ನುವ ಲೆಕ್ಕಾಚಾರ ಮನಸ್ಸಿನಲ್ಲಿ ಸುಳಿದು, ತನ್ನ ಅಷ್ಟಗಲ ನಗುವಿಗೆ ಕೆನ್ನೆ ಮೇಲೆ ಇನ್ವೈಟೆಡ್ ಕಾಮಾ ಹಾಕುತ್ತಿದ್ದ ಅವನ ಮುಖ ನೆನಪಾಗಿ ಪಿಚ್ಚೆನಿಸುತ್ತದೆ. ಮತ್ತೆ ಆ ಕ್ಷಣಗಳೆಲ್ಲಾ ಎದೆಯಲ್ಲಿ ಆತಂಕದ ಬೀಜ ನೆಟ್ಟ ಅನುಭವಗಳಾಗಿ ಮಾರ್ಪಾಡಾಗುತ್ತವೆ.

ಕರ್ನಾಟಕದ ಪ್ರಬಲ ಸಮುದಾಯವೊಂದರಲ್ಲಿ ಹುಟ್ಟಿದ ತ್ರಿಮೂರ್ತಿ ತನ್ನ ಸಾವಿನ ಕ್ಷಣದವರೆಗೂ ನೊಂದವರೊಂದಿಗೆ ಬದುಕಿದವನು. ಅಂದರೆ, ನೆಲದ ಕಾರುಣ್ಯವನ್ನು ಕರುಳೊಳಗಿಟ್ಟುಕೊಂಡು ಉಂಡ ತುತ್ತಿಗೆ ಲೆಕ್ಕ ಬರೆದಿಕ್ಕುವ ಹಾಗೂ ಈ ನೆಲದ ದನಿಗೆ ಮೈಯ್ಯಾನಿಸಿ ಬದುಕುವ ಕಸುವು ಕಟ್ಟಿಕೊಂಡವನು. ಬಿಎ ಓದುವಾಗಿಂದ ಹೋರಾಟದ ಬದುಕಿಗೆ ಬಿದ್ದು, ದಲಿತ, ರೈತ, ಮಹಿಳಾ, ಕಾರ್ಮಿಕ, ಅಲ್ಪಸಂಖ್ಯಾತ ಹೋರಾಟಗಳಲ್ಲಿ ಕಂಠಮಟ್ಟ ಕೆಲಸ ಮಾಡಿ ಹೆಸರಿಗೆ ಹಾತೊರೆಯದೆ, ಉಸಿರಿಗೆ ಅರ್ಥ ತಂದವನು. ದಲಿತ- ದಮನಿತರ ಹೋರಾಟ ಕುರಿತ ನಿಖರ ತಿಳಿವಳಿಕೆ, ಬಾಬಾಸಾಹೇಬ್ ಅಂಬೇಡ್ಕರರ ನೋಟಕ್ರಮದ ಆಲೋಚನಾ ವಿಧಾನ ತ್ರಿಮೂರ್ತಿಯನ್ನು ಕೊಂಚ ನಿಷ್ಠುರ ವ್ಯಕ್ತಿಯನ್ನಾಗಿ ರೂಪಿಸಿದ್ದವು. ತನ್ನ ಸುತ್ತಲಿನ ಎಲ್ಲಾ ವಿದ್ಯಮಾನಗಳಿಗೆ ಸಾವಧಾನವಾಗಿ ಸ್ಪಂದಿಸುತ್ತಿದ್ದುದಲ್ಲದೆ, ಕಾರ್ಯಪ್ರವೃತ್ತಿಯಿಂದ ವರ್ತಿಸುವ ಬದ್ಧತೆಯನ್ನು ರೂಢಿಸಿಕೊಂಡಿದ್ದವನು. ಹಲವರಂತೆ ಹಲವು ರೀತಿಯಲ್ಲಿ ಮಾತನಾಡಿ ಮುಗಿಸದೆ, ಮುಂದೆ ಮಾಡಬೇಕಾದ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಿ ಸಂಬಂಧಪಟ್ಟವರ ಮುಂದೆ ಮಂಡಿಸಿ ತನ್ನ ಪಾಲಿನ ಕರ್ತವ್ಯಕ್ಕಾಗಿ ಕಾಯುತ್ತಿದ್ದವನು.

ವಿದ್ಯಾರ್ಥಿ ದೆಸೆಯಲ್ಲಿ ಕರ್ನಾಟಕ ವಿಮೋಚನಾ ರಂಗದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ತ್ರಿಮೂರ್ತಿ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಓದಿದವನು. ತನ್ನ ಊರಿನ ಆಸ್ತಿ, ಜಾತಿಗಳ ಪ್ರಭಾವಗಳನ್ನು ಕಡೆಗಣಿಸಿ ನೊಂದವರ ಜೊತೆಯಲ್ಲಿ ಹೆಜ್ಜೆ ಹಾಕಿದ್ದಲ್ಲದೆ, ದನಿಯಿಲ್ಲದವರ ದನಿಯಾಗಲು ಹಾತೊರೆಯುತ್ತಿದ್ದನು. ಕರ್ನಾಟಕ ಕೋಮು ಸೌಹಾರ್ದ ವೇದಿಕೆ ರೂಪಿಸಿದ ಎಲ್ಲಾ ಹೋರಾಟಗಳ ಜೊತೆಗೇ ಸಾಗಿದ ತ್ರಿಮೂರ್ತಿ, ಅಂಬೇಡ್ಕರ್ ಓದು, ಸಂವಿಧಾನದ ತಿಳಿವಳಿಕೆ, ಕನ್ನಡ ಸಾಹಿತ್ಯ ಮೊದಲಾದ ವಿಷಯಗಳ ಕುರಿತು ಆಳವಾಗಿ ಅಧ್ಯಯನಕ್ಕೆ ತೊಡಗಿದ್ದವನು.

ಇಷ್ಟೆಲ್ಲಾ ಸಹಜ ಹೋರಾಟಗಾರನಂತೆ ಬದುಕು ಸಾಗಿಸುತ್ತಿದ್ದ ತ್ರಿಮೂರ್ತಿ ಯಾರೊಟ್ಟಿಗೂ ತನ್ನ ಮನಸ್ಸಿನ ದುಗುಡಗಳನ್ನು ಹೇಳಿಕೊಳ್ಳುತ್ತಿರಲಿಲ್ಲ. ಸದಾ ಅಂತರ್ಮುಖಿಯಾಗಿದ್ದವನು ಕಳೆದ ಹತ್ತು ವರ್ಷಗಳಲ್ಲಿ ಹಲವು ಬದಲಾವಣೆಗಳನ್ನು ಮೈಗೂಡಿಸಿಕೊಂಡಿದ್ದ. ಪ್ರೇಮ ಪದ್ಯಗಳನ್ನೂ ಬರೆಯಲು ಪ್ರಾರಂಭಿಸಿ ನಮಗೆಲ್ಲಾ ಆಶ್ಚರ್ಯ ಉಂಟುಮಾಡಿದ್ದ.

“ಜಿಂಕೆಯ ಕಣ್ಣೆಂದೆ ಅಲ್ಲವೆಂದಳು
ಹವಳದ ತುಟಿಯೆಂದೆ ಸುಳ್ಳೆಂದಳು
ಸೋತು ನಿಂತವನ ನೋಡಿ
ಮಾತಾಡು ತಲೆಯಿಂದಲ್ಲ
ಹೃದಯದಿಂದ ಎಂದಳು”

– ಈ ಪದ್ಯ ತ್ರಿಮೂರ್ತಿ ತನ್ನೊಳಗಿನ ಗಂಡುಪ್ರಜ್ಞೆಯನ್ನು ಕೊಂದುಕೊಂಡು ಮನುಷ್ಯನಾಗುವ ಪ್ರಯೋಗ. ಗಂಡು ಎನ್ನುವುದು ಒಂದು ರೋಗವೆಂದೇ ನಂಬಿದ್ದ ಅವನು ’ಪ್ರೇಮ’ ಗಂಡನ್ನು ಮನುಷ್ಯತ್ವದ ಕಡೆಗೆ ಕೊಂಡೊಯ್ಯುತ್ತದೆ ಎಂಬುದನ್ನು ಅರಿತಿದ್ದ. ಇದ್ದಕ್ಕಿದ್ದಂತೆ ಇಂಥಾ ಪದ್ಯಗಳನ್ನು ವಾಟ್ಸಪ್ ಮಾಡಿ ಅಚ್ಚರಿ ಮೂಡಿಸುತ್ತಿದ್ದ.

“ನೂರಾರು ಮನಸುಗಳು ದುಡಿತಾವೆ ನೋವಿಗೆ ಮದ್ದನ್ನು ಅರಿತಾವೆ” ಎಂದು ಬರೆದ. ದುಡಿಮೆ ಮತ್ತು ಅರಿಮೆ ಅಥವಾ ಅರಿಯುವಿಕೆಯನ್ನು ಕೂಡಿಸಿ ಪದ್ಯ ಕಟ್ಟಲು ಪ್ರಯತ್ನಿಸಿದ್ದ ತ್ರಿಮೂರ್ತಿಗೆ ನಿಸ್ಸಂದೇಹವಾಗಿ ಕನ್ನಡ ಕಾವ್ಯದ ಆಳದ ತಿಳಿವಳಿಕೆಯಿತ್ತು.

“ಹಿಡಿ ಅಕ್ಕಿ ತಿನ್ನುವಾ ಬಾಯಿದೋ
ದುಡಿದುಣ್ಣಲು ಬಯಸುತಿದೆ.
ನನ್ನದಲ್ಲದ್ದು ನನಗೆ
ಕಾಲಕಸ ತಿಳಿದಿರಲಿ”

ಮೇಲುನೋಟಕ್ಕೆ ಹೊಸ ಕವಿಯ ಆರಂಭದ ನುಡಿಗಳಂತೆ ಕಾಣುವ ಈ ಪದ್ಯಗಳು ಭಾರತದಂತಹ ಪರಿಸರದಲ್ಲಿ ಬದುಕುವ ವ್ಯಕ್ತಿಗಳ ಹೃದಯದ ಎಕ್ಸರೇಗಳಂತೆ ಭಾಸವಾಗುತ್ತವೆ. ತ್ರಿಮೂರ್ತಿ ಅಂತಹ ಎಲ್ಲಾ ಹೃದಯಗಳ ಎಕ್ಸರೇ ಆಗಿದ್ದವನು.

ಹೋಗುವ ಮೊದಲು ನಾಲ್ಕೈದು ತಿಂಗಳು ಕಾಣೆಯಾಗಿದ್ದವನು ದಲಿತ ಸಂಘರ್ಷ ಸಮಿತಿಗಳ ಐಕ್ಯತಾ ಒಕ್ಕೂಟ ಹಮ್ಮಿಕೊಂಡಿದ್ದ ’ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶ’ದ ಪ್ರಚಾರಕ್ಕಾಗಿ ನಾವು ಮಾಡಿದ್ದ ವಾಟ್ಸಾಪ್ ಗ್ರೂಪಿಗೆ ಬಂದ. ಬಂದವನೇ ನಮ್ಮೆಲ್ಲರ ಕೆಲಸಗಳನ್ನು ಒಬ್ಬನೇ ಮಾಡಿದ. ಸೋಷಿಯಲ್ ಮೀಡಿಯಾಗೆಂದು ತಂಡ ಸಿದ್ಧಪಡಿಸಿದ ಪೋಸ್ಟರ್ ಮತ್ತು ವಿಡಿಯೋಗಳನ್ನು ಹಗಲಿರುಳೆನ್ನದೆ, ಯಾವುದೇ ಬೇಸರವಿಲ್ಲದೆ ಶೇರ್ ಮಾಡಿದ. ನಾವು ಮಾಡಿದ ವಾಟ್ಸಪ್ ಗ್ರೂಪುಗಳಲ್ಲಿ ಯಾರಾದರೂ ಪ್ರಶ್ನೆಗಳನ್ನು ಎತ್ತಿದರೆ ನಮ್ಮ ಗಮನಕ್ಕೆ ತಂದು ಅದಕ್ಕೆ ತಕ್ಷಣವೇ ಉತ್ತರಿಸುವಂತೆ ಒತ್ತಡ ಹಾಕುತ್ತಿದ್ದ. ಫೇಸ್‌ಬುಕ್ಕಿನಲ್ಲಿ ಕೆಲವರು ಸಮಾವೇಶದ ವಿರುದ್ಧ ಬರೆದಾಗ ನೊಂದುಕೊಂಡು ಅವರನ್ನೆಲ್ಲಾ ಕರೆದು ಮಾತಾಡೋಣ ಎಂದ. ಸಮಾವೇಶದ ದಿನ ವಿಮಾನನಿಲ್ದಾಣದಿಂದ ರಮಾಬಾಯಿಯವರನ್ನು ಕರೆತರುವ ಹಾಗು ಕರೆದುಕೊಂಡು ಹೋಗಿ ಬಿಡುವ ಕೆಲಸವಹಿಸಿಕೊಂಡ. ಆ ಕೆಲಸಗಳ ನಡುವೆ ಬಾಬಾಸಾಹೇಬರ ಫೋಟೋ ಇದ್ದ ಅಂಗಿ ಹಾಕಿಕೊಂಡು ಬಿಸಿಲಲ್ಲಿ ಬೇಯುತ್ತಾ ಸಮಾವೇಶದ ಕಂಟೆಂಟ್ ಕೆಲಸ ನಿರ್ವಹಿಸಿದ.

ನಾವೆಲ್ಲಾ ಮಾತನಾಡುವ ಆದರ್ಶದಂತೆಯೇ ಬದುಕಲು ಪ್ರಯತ್ನಸುತ್ತಿದ್ದ ತ್ರಿಮೂರ್ತಿ ಅದೆಲ್ಲಿ ಸೋತ ಎಂದು ಯೋಚಿಸಲುತೊಡಗಿದರೆ ಉತ್ತರ ಸುಲಭವಲ್ಲ. ಅಥವಾ ಸಾವನ್ನು ಸೋಲು ಎಂದುಕೊಳ್ಳುವ ನಮಗೆ ಸಾಮಾಜಿಕ ಬದುಕನ್ನು, ವೈಯಕ್ತಿಕ ಬದುಕನ್ನು ಅರ್ಥಮಾಡಿಕೊಳ್ಳುವ ತರಬೇತಿಯ ಕೊರತೆಯಿರಬಹುದು. ನೆನ್ನೆ ಮೊನ್ನೆ ನಮ್ಮ ಜೊತೆ ಇದ್ದ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಕಣ್ಮರೆಯಾದನಲ್ಲಾ ಎಂಬ ಆಘಾತ ನಮ್ಮೊಳಗೆ ಅಸಂಬದ್ಧ ತಾತ್ವಿಕ ಜಿಜ್ಞಾಸೆಗಳನ್ನು ಹುಟ್ಟುಹಾಕಬಹುದು. ಅಥವಾ ಸಾವು ಸುಲಭ ಬದುಕು ಕಷ್ಟ ಎಂಬ ಷರಾ ಬರೆದು ’ಈ ಕೆಟ್ಟ ಜಗತ್ತಿನಲ್ಲಿ ಇದ್ದು ನೋಯುವುದಕ್ಕಿಂತ ಎದ್ದು ಹೋಗುವುದೇ ಮೇಲು’ ಎಂದುಕೊಂಡು ಬದುಕಿಸಿಕೊಳ್ಳಲಾಗದ ನಮ್ಮ ಅಸಹಾಯಕತೆಗೆ ತಾತ್ವಿಕತೆಯ ಮಾಸ್ಕ್ ಹಾಕಿಬಿಡಬಹುದು. ಆದರೆ, ಇದರೆಲ್ಲದರಾಚೆಗೆ ತ್ರಿಮೂರ್ತಿ ಇಲ್ಲ ಎಂಬ ಸತ್ಯ ಅದೆಷ್ಟು ಭಯಂಕರವಾದ ಸತ್ಯವನ್ನು ನಮ್ಮೆದೆಗೆ ಎಸೆಯುತ್ತದೆಂದರೆ, ನಮ್ಮಗಳ ಜೀವಂತಿಕೆಯ ಮೇಲೆ ಗುಮಾನಿ ಹುಟ್ಟಿಸುವಷ್ಟು.

ದಶಕದ ಹಿಂದೆ ಗೆಳೆಯ ಪ್ರಶಾಂತ ಇಂಥದ್ದೇ ನಿರ್ಧಾರ ಮಾಡಿದಾಗ, ಗೆಳೆಯ ಎನ್.ಕೆ.ಹನುಮಂತಯ್ಯ ಹೀಗೇ ಎದ್ದು ಹೋದಾಗ ಅಕ್ಷರಶಃ ಅದುರಿಹೋಗಿದ್ದ ನನ್ನ ದೇಹ ಮತ್ತು ಮನಸ್ಸು ತ್ರಿಮೂರ್ತಿಯ ಸಾವಿನಿಂದ ಜಡ್ಡುಗಟ್ಟಿದಂತೆನಿಸಿ ಭಯವಾಗುತ್ತದೆ. ಅವನ ಗೈರುಹಾಜರಿಯನ್ನು ನನ್ನ ಸುತ್ತಲಿನ ಯಾರಿಗೂ ಸಹಿಸಲಾಗುತ್ತಿಲ್ಲ. ದಲಿತ ಸಂಘಟನೆಗಳ ಒಗ್ಗಟ್ಟು, ಕೋಮುವಾದದ ವಿರುದ್ಧದ ಜನರ ಸಿಟ್ಟು ಅವನನ್ನು ಉಳಿಸಬೇಕಿತ್ತು. ಅದು ಅವನ ಕನಸಾಗಿತ್ತು. ಹೊರಗೆ ಕನ್ನಡಿಯ ಹೊತ್ತು ಓಡಾಡುತ್ತಿದ್ದ ತ್ರಿಮೂರ್ತಿ ಆ ಕನ್ನಡಿಯೊಳಗೇ ಲಯವಾಗಿಬಿಟ್ಟ. ಆ ಕನ್ನಡಿಗಳೀಗ ನಮ್ಮನ್ನು ಪ್ರತಿಬಿಂಬಿಸುತ್ತಿವೆ. ಮತ್ತೆ ಅವನೇ ಬರೆದ ಸಾಲುಗಳು ಚುಚ್ಚುತ್ತಿವೆ:

“ಆ ವಾದ ಈ ವಾದ
ಸಿದ್ಧಾಂತ ಮುಗ್ದಾಂತ ಅಂತಾವೆ
ಮಕ್ ಮಕ ನೋಡ್ಕಂಡು
ಉರ್ಕಂತಾವೆ..
ಬೆನ್ ಬೆನ್‌ಗೆ ಚೂರಿನಾ
ಇರ್ಕಂತಾವೆ…”

“ಸತ್ಯವ ಹೇಳಿ ಸಿಕ್ಕಿಬಿದ್ದಿದ್ದೇನೆ
ಮನದೊಳಗೆ..
ಮುದವಿದೆ, ಭೀತಿಯಿದೆ
ಜಗದ ಹಳದಿಗಣ್ಣುಗಳ ಬಗ್ಗೆ ಭಯವಿದೆ
ಮನಸಿನಾಟವ ಹೃದಯ ಒಪ್ಪುತ್ತಿಲ್ಲ
ನಿಜವೇನೆಂದು ತಿಳಿಯುತ್ತಿಲ್ಲ”

ಹುಲಿಕುಂಟೆ ಮೂರ್ತಿ
ಕನ್ನಡ ಪಾಧ್ಯಾಪಕರು, ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...