Homeಅಂಕಣಗಳುಇತಿಹಾಸ ಇಷ್ಟು ಬೇಗ ಮರುಕಳಿಸಿತಲ್ಲಾ ಥೂತ್ತೇರಿ!!

ಇತಿಹಾಸ ಇಷ್ಟು ಬೇಗ ಮರುಕಳಿಸಿತಲ್ಲಾ ಥೂತ್ತೇರಿ!!

- Advertisement -
- Advertisement -

ಕರ್ನಾಟಕದಲ್ಲಿ ಅದರಲ್ಲೂ ನಮ್ಮ ಪ್ರಭುತ್ವದ ಕೇಂದ್ರ ಸ್ಥಾನದಲ್ಲಿ ನಡೆದಿರುವ ಹೇಸಿಗೆ ಪ್ರಹಸನದ ಉದ್ಘಾಟಕರೇ ಕುಮಾರಣ್ಣನವರಂತಲ್ಲಾ. ಅಂದು ಧರ್ಮಸಿಂಗ್ ಸರಕಾರ ಗಜಗಾಂಭೀರ್ಯದಿಂದ ಸಾಗುತ್ತಿದ್ದಾಗ, ಕುಮಾರಣ್ಣನವರು ಜಮೀರ್ ಅಹಮದ್‍ನ ಕಾರಾಸ್ಥಾನದಲ್ಲಿ ತಯಾರಿಸಿದ ರೂಪುರೇಷೆಯಂತೆ ಜೆ.ಡಿ.ಎಸ್‍ಗೆ ಅಷ್ಟೂ ಶಾಸಕರನ್ನು ರೆಸಾರ್ಟ್‍ಗೆ ಹೊತ್ತೊಯ್ದರು. ಆ ಸಂದರ್ಭದ ದುಷ್ಟ ಚತುಷ್ಟಯರಲ್ಲಿ ಪ್ರಮುಖರಾದ ಬಾಲಕೃಷ್ಣ, ಚಲುವರಾಯ, ಜಮೀರು ಹೊತ್ತೊಯ್ದವರ ಬೇಕು, ಬೇಡಗಳು, ಜಿಹ್ವಾಚಾಪಲ್ಯ ಮತ್ತು ಗರ್ಮಿ ಪದಾರ್ಥಗಳ ಸೇವನೆಯಿಂದುಂಟಾದ ದೈಹಿಕ ಬಾಧೆಗಳನ್ನು ಪೂರೈಸಿದ್ದರಂತಲ್ಲಾ. ನಂತರ ಅವರನ್ನೆಲ್ಲ ಸುಸೂತ್ರವಾಗಿ ಕರೆದುಕೊಂಡು ಬಂದು, ವಿಧಾನಸೌಧದ ಎದುರು ಸುರಿದು ಕುಮಾರಣ್ಣ ಮುಖ್ಯಮಂತ್ರಿಯಾಗಿ ಮಾನ್ಯ ಎಡೂರಪ್ಪ ಉಪಮುಖ್ಯಮಂತ್ರಿಯಾಗುವಂತಹ ಪ್ರಹಸನವನ್ನು ನಿರೂಪಿಸಿದ್ದರಲ್ಲಾ. ಆದರೆ ಇಂತಹ ಸಾಹಸವೊಂದನ್ನು ಕಣ್ಣಲ್ಲಿ ನೋಡಲಾಗದೆ ಕಡು ದುಃಖದ ಮುಖಭಾವದಲ್ಲಿ ದೇವೇಗೌಡರು ಮನೆಯಲ್ಲೇ ಕುಳಿತಿದ್ದರಂತಲ್ಲಾ, ಥೂತ್ತೇರಿ…!

*****

ಕುಮಾರಣ್ಣನವರು ಮುಖ್ಯಮಂತ್ರಿಯಾಗಲು ಕ್ಷಣಗಣನೆ ನಡೆಯುತ್ತಿರುವಾಗ ಇತ್ತ ಪದ್ಮನಾಭನಗರದಲ್ಲಿ ದೇವೇಗೌಡರು ಬದುಕುಳಿಯುವುದೇ ಕಷ್ಟವೆಂಬ ಸ್ಥಿತಿಯಲ್ಲಿ ಕುಳಿತಿರಬೇಕಾದರೆ, ಕರ್ನಾಟಕದ ರಾಜಕಾರಣದ ಇನ್‍ಚಾರ್ಜ್ ಹೊತ್ತಿದ್ದ ಆಂಟೋನಿ ಜೊತೆಗೆ ಪಿ.ಜಿ.ಆರ್. ಸಿಂಧ್ಯಾ, ಎಂ.ಪಿ.ಪ್ರಕಾಶ್, ಮಿರಾಜುದ್ದೀನ್, ಡಿ.ಮಂಜುನಾಥ್ ಕೂಡ ದುರಂತವಾರ್ತೆ ವಿಧಾನಸೌಧದ ಕಡೆಯಿಂದ ಬರುತ್ತದೋ ಅಥವಾ ಪದ್ಮನಾಭನಗರ ಕಡೆಯಿಂದ ಹೊರಡುತ್ತದೋ ಎಂಬ ಆತಂಕದಲ್ಲೇ ಆಸೀನರಾಗಿದ್ದರಂತಲ್ಲಾ. ಆ ಯಾರೊಬ್ಬರಿಗೂ ಗೌಡರ ಮಹಾನಾಟಕ ಅರಿವಿಗೇ ಬರಲಿಲ್ಲವಂತಲ್ಲಾ. ಆ ನಾಟಕ ಯಾವುದೆಂದರೆ, ಮಗನ ಸಿಂಹಾಸನಕ್ಕೆ ತೊಂದರೆ ಕೊಡಬಹುದಾದ ಸಿದ್ದರಾಮಯ್ಯನನ್ನ ತೆಗೆದು ಬಿಸಾಡಿ, ಆ ಜಾಗಕ್ಕೆ ತಿಪ್ಪೇಮೇಗಲ ಒಣ ಸಗಣಿಯಂತ ತಿಪ್ಪಣ್ಣನನ್ನ ತಂದು ಕೂರಿಸಲಾಗಿತ್ತು. ಆತ ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರ ಮೌಖಿಕ ಆದೇಶದಂತೆ, ಕುಮಾರಣ್ಣನೇ ನಮ್ಮ ನಾಯಕ ಅನ್ನುವ ಲೆಟರನ್ನು ರಾಜ್ಯಪಾಲರಿಗೆ ಕೊಡುತ್ತಾರೆ. ರಾಜ್ಯಪಾಲ ಅದನ್ನು ಊರ್ಜಿತ ಮಾಡುತ್ತಾರೆ. ದೇವೇಗೌಡರೇ ನೇಮಿಸಿದ ಕೆ.ಆರ್.ಪೇಟೆ ಕೃಷ್ಣ ಸದನದ ಸ್ಪೀಕರ್ ಆಗಿದ್ದು ಗೌಡರ ಋಣವನ್ನು ತೀರಿಸಿದ್ದರಂತಲ್ಲ ಥೂತ್ತೇರಿ…!!

*****

ಅಂತೂ ಕುಮಾರಣ್ಣನ ಸಭಾ ಪರ್ವ ಆರಂಭವಾಗಿ ಸಿಂಧ್ಯ ಎದ್ದು ನಿಂತು ನಮ್ಮ ಸಭಾ ನಾಯಕರು ಎಂ.ಪಿ.ಪ್ರಕಾಶ್ ಎಂದಾಗ ಆ ಗುಂಡಿಗೆಯನ್ನು ಹಲವರು ಮೆಚ್ಚಿದರು. ಆದರೇ ಅಂದೇ ಅಪ್ಪಮಕ್ಕಳು ಸಿಂಧ್ಯನ ಕತೆ ಮುಗಿಸಲು ಪಣತೊಟ್ಟರು. ಸಿಂಧ್ಯನ ಗಂಡು ಮಾತಿಗೆ ತಕ್ಕ ಉತ್ತರ ಕೊಡುವ ಅವಕಾಶ ಒದಗಿ ಬಂದಾಗ ಎಂ.ಪಿ.ಪ್ರಕಾಶರು, ಕುಮಾರ ಅಲ್ಲ ನಾನೇ ಸಭಾ ನಾಯಕ ಅಂದಿದ್ದರೆ ಆ ಕತೆಯೇ ಬೇರೆಯಾಗಿ ಕರ್ನಾಟಕದ ಇಂದಿನ ಪ್ರಹಸನಕ್ಕೂ ಅವಕಾಶವಿರಲಿಲ್ಲ. ಆದರೆ ಪ್ರಕಾಶ್ ಹಿಂಜರಿದರು. ಆದರೂ ಕುಮಾರಣ್ಣನ ಸರಕಾರ ಅವರಿಗೆ ಗೃಹಸಚಿವರ ಸ್ಥಾನ ನೀಡಿದ್ದಲ್ಲದೆ ಸದನದಲ್ಲಿ ಸರಕಾರದ ಎಲ್ಲಾ ಸಮಸ್ಯೆಗಳಿಗೆ ಸಮಂಜಸ ಉತ್ತರ ನೀಡುವ ಜವಾಬ್ದಾರಿ ವಹಿಸಿತ್ತು. ಆದರೇನು, ಪ್ರಕಾಶ್ ಅವರು ಅಪ್ಪಮಗನ ಗಾಣದಲ್ಲಿ ಸಿಕ್ಕು ನಜ್ಜುಗುಜ್ಜಾಗಿ ಹೋಗಿದ್ದರು. ಕಡೆಗೆ ಇವರ ಸಹವಾಸವೇ ಸಾಕು ಎಂದು ತಮ್ಮ ಜೀವಿತಾವಧಿಯಲ್ಲಿ ಟೀಕೆ ಮಾಡಿಕೊಂಡು ಬಂದ ಕಾಂಗ್ರೆಸ್‍ಗೆ ಹೋದರು, ಅಲ್ಲಿ ಸೋತರು. ಏಕೆಂದರೆ ಗೌಡರು ಅವರ ವಿರುದ್ಧವೂ ಅಭ್ಯರ್ಥಿ ಹಾಕಿದ್ದರು. ಅಂತೂ ಪ್ರಕಾಶರ ಅವನತಿಗೆ ಗೌಡರು ಕಾರಣರಾಗಿ ಹೋದರಲ್ಲಾ ಥೂತ್ತೇರಿ…!!!

*****

ಇತಿಹಾಸ ಒಂದು ದಶಕದಲ್ಲೇ ಮರುಕಳಿಸಿ ಹೋಯ್ತಲ್ಲ! ದುಷ್ಟ ಚತುಷ್ಟರ ಪೈಕಿ, ಕುಮಾರಣ್ಣನ ಬಳಿ ಯಾರೂ ಇಲ್ಲ. ಇದ್ದರೂ ಜಮೀರನನ್ನ ಪೂರಾ ನಂಬುವಂತಿಲ್ಲ. ಇತ್ತ ಎಡೂರಪ್ಪನ ಮುಖದಲ್ಲಿ ಅಂತಹ ಗೆಲುವಿಲ್ಲ. ಇಡೀ ಬಿ.ಜೆ.ಪಿ.ಯಲ್ಲೇ ಎಡೂರಪ್ಪ ಮತ್ತೆ ವಕ್ಕರಿಸುವ ಬಗ್ಗೆ, ಹೇಳಿಕೊಳ್ಳುವ ಹುಮ್ಮಸ್ಸಿಲ್ಲ. ಅದರಲ್ಲೂ ಈಶ್ವರಪ್ಪ ದಿಕ್ಕೇ ತೋಚದಂತಾಗಿದ್ದಾರೆ. ಏಕೆಂದರೆ ಎಡೂರಪ್ಪ ಮತ್ತು ಈಶ್ವರಪ್ಪನ ದಾಯಾದಿ ಕಲಹಕ್ಕೆ ಇತಿಹಾಸವೇ ಇದೆ. ಆದ್ದರಿಂದ ಎಡೂರಪ್ಪ ಮುಖ್ಯಮಂತ್ರಿಯಾದ ಕೂಡಲೇ ಅವರ ತಲೆನೋವಾಗಿ ಪರಿಣಮಿಸಲಿದ್ದಾರೆ. ಎಡೂರಪ್ಪ ಯಾವುದಕ್ಕೂ ಬಗ್ಗದಿದ್ದರೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬದಲು, ಕನಕದಾಸ ಸಮರಸೇನೆ ಹುಟ್ಟು ಹಾಕಿದರೂ ಅಚ್ಚರಿಯಿಲ್ಲವಂತಲ್ಲಾ. ಏಕೆಂದರೆ ಕನಕದಾಸರು ಬರೀ ದಾಸರಷ್ಟೇ ಅಲ್ಲ. ಅದಕ್ಕೂ ಮೊದಲು ಬಾಡದ ನಾಯಕರಾಗಿ ಕಾದಾಡಿ, ವಿಜಯನಗರದ ಅರಸರ ಜೀತಕ್ಕಿಂತ ತಂಬೂರಿಯೇ ಲೇಸೆಂದು ಹೊರಟವರು. ಇದನ್ನೆಲ್ಲಾ ಬಿ.ಜೆ.ಪಿ ವಿದ್ವಾಂಸರಿಂದ ಸಂಗ್ರಹಿಸಿಕೊಂಡು ಮತ್ತೆ ಎಡೂರಪ್ಪನ ಎದುರು ಹೋರಾಟ ಆರಂಭಿಸುವುದಿಲ್ಲ ಎಂಬುದು ಯಾವ ಗ್ಯಾರಂಟಿ… ಥೂತ್ತೇರಿ!!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...