Homeಮುಖಪುಟ‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

‘ಮೋದಿ ಟೀಕಾಕಾರರಾದ ಮಲ್ಲಿಕಾ ಸಾರಾಬಾಯಿ ನೃತ್ಯ ಕಾರ್ಯಕ್ರಮ ರದ್ದುಗೊಳಿಸಿ: ಕೇಂದ್ರ ಸಚಿವರ ಸೂಚನೆ

- Advertisement -
- Advertisement -

ಕಾಕತೀಯ ಹೆರಿಟೇಜ್ ಟ್ರಸ್ಟ್‌ನ ಟ್ರಸ್ಟಿಗಳಿಗೆ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ ಅವರ ಕಚೇರಿಯಿಂದ ಜನವರಿ 16ರಂದು ಕರೆ ಬಂದಿದ್ದು, ವಾರಂಗಲ್ ಜಿಲ್ಲೆಯ ಯುನೆಸ್ಕೋ ವಿಶ್ವ ಪರಂಪರೆಯ ಸ್ಮಾರಕವಾದ ರಾಮಪ್ಪ ದೇವಸ್ಥಾನದಲ್ಲಿ ಮಲ್ಲಿಕಾ ಸಾರಾಬಾಯಿ ಅವರ ನೃತ್ಯ ಪ್ರದರ್ಶನಕ್ಕೆ ಅನುಮತಿ ಇಲ್ಲ ಎಂದು ತಿಳಿಸಲಾಗಿದೆ. ಪ್ರಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ನೃತ್ಯಗಾರ್ತಿಯಾಗಿರುವ ಸಾರಾಬಾಯಿಯವರು ಮೋದಿ ಟೀಕಾಕಾರರಾಗಿರುವ ಕಾರಣ ಈ ರೀತಿಯ ಮೌಖಿಕ ಆದೇಶ ಬಂದಿದೆ.

“ಒಂದೋ ವಾರಂಗಲ್‌ನ ರಾಮಪ್ಪ ದೇವಸ್ಥಾನದ ಕಲಾವಿದರ ಪಟ್ಟಿಯಿಂದ ಮಲ್ಲಿಕಾ ಸಾರಾಭಾಯಿ ಅವರನ್ನು ಕೈಬಿಡಿ ಅಥವಾ ಉತ್ಸವವನ್ನು ರದ್ದುಗೊಳಿಸಿ” ಎಂದು ಸೂಚನೆಯನ್ನು ಕಿಶನ್‌ ರೆಡ್ಡಿ ಕಚೇರಿ ನೀಡಿತ್ತು. ಆದರೆ ಆಯೋಜಕರು ಸಚಿವರ ‘ಮೌಖಿಕ ಆದೇಶ’ಯನ್ನು ಧಿಕ್ಕರಿಸಿದರು. ಜನವರಿ 21 ರಂದು ಕಾರ್ಯಕ್ರಮವನ್ನು ಮುಂದುವರೆಸಿದರು. ಮುಖ್ಯವಾಗಿ ಕಾರ್ಯಕ್ರಮವನ್ನು ದೇವಸ್ಥಾನದ ಒಳಗೆ ನಡೆಸುವ ಬದಲು, ಅದನ್ನು KUDA ಓಪನ್ ಗ್ರೌಂಡ್ಸ್ ಹತ್ತಿರವಿರುವ ತೆರೆದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. 68 ವರ್ಷದ ನೃತ್ಯಗಾರ್ತಿ ಸಾರಾಬಾಯಿಯವರು ಹೇಳುವಂತೆ 4,000ಕ್ಕೂ ಹೆಚ್ಚು ಜನರು ಅಂದು ಕಾರ್ಯಕ್ರಮವನ್ನು ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದಲೂ ಅವರ ಕಟು ಟೀಕಾಕಾರರಾದ ಸಾರಾಭಾಯಿ, ಇಂತಹ ಪ್ರಮುಖ ಸಮಾರಂಭದಲ್ಲಿ ಯಾವುದೇ ‘ಮೋದಿ ವಿಮರ್ಶಕ’ ಪ್ರದರ್ಶನವನ್ನು ನೀಡಬಾರದು ಎಂದು ರೆಡ್ಡಿ ಎಚ್ಚರಿಸಿದ್ದರು.

ಯುನೆಸ್ಕೋದ ಮಾನ್ಯತೆ ದೊರೆತು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಮಪ್ಪ ಉತ್ಸವವನ್ನು ಆಯೋಜಿಸಲಾಗಿದೆ. “ನನಗೆ ನೃತ್ಯ ಮಾಡಲು ಬಿಡಬಾರದು ಎಂದು ಸಚಿವರು ಆದೇಶಿಸಿದರು. ಬಿಜೆಪಿ ವಿರುದ್ಧದ ನನ್ನ ರಾಜಕೀಯ ನಿಲುವು ಮತ್ತು ಅದರ ಹಿಂದುತ್ವದ ರಾಜಕೀಯದ ಕಾರಣದಿಂದ ನನಗೆ ಜಾಗವನ್ನು ನಿರಾಕರಿಸಲಾಯಿತು” ಎಂದು ಸಾರಾಬಾಯಿ ದೂರಿದ್ದಾರೆ.

ಸಚಿವ ಕಿಶನ್‌ ರೆಡ್ಡಿಯವರು ಕೋಲ್ಕತ್ತಾದಲ್ಲಿ ತಮ್ಮ ಸಾರ್ವಜನಿಕ ಭಾಷಣದ ನಂತರ ಸಂಸ್ಥೆಯ ಟ್ರಸ್ಟಿಗಳನ್ನು ಕರೆದಿರುವುದಾಗಿ ವರದಿಯಾಗಿದೆ. ಅಲ್ಲಿ 68 ವರ್ಷದ ಶಾಸ್ತ್ರೀಯ ನೃತ್ಯಗಾರ್ತಿ ಸಾರಬಾಯಿ, “ದೇಶದಲ್ಲಿ ಆದರ್ಶಗಳು ಸಂಪೂರ್ಣ ನಾಶವಾಗುತ್ತಿವೆ” ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಅಧಿಕಾರದಲ್ಲಿರುವ ಪಕ್ಷವು “ಹಿಂದೂ ಧರ್ಮದ ಹೆಸರಿನಲ್ಲಿ ಹಿಂದುತ್ವವನ್ನು ಜನರ ಗಂಟಲಿಗೆ ತಳ್ಳುತ್ತಿದೆ” ಎಂದು ಅವರು ಟೀಕಿಸಿದ್ದರು.

ಸಾರಾಭಾಯಿ ಇಂತಹ ಅಡ್ಡಿ ಎದುರಿಸುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ, ಸಾರಾಭಾಯ್ ಅವರನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು. ಆದರೆ ಘಟಿಕೋತ್ಸವವನ್ನು ರದ್ದುಗೊಳಿಸಲಾಗಿತ್ತು.

“ಕಳೆದ ಎರಡು ದಶಕಗಳಲ್ಲಿ, ನಾನು ಸರ್ಕಾರದಿಂದ ಇಂತಹ ಅನೇಕ ಅಡಚಣೆಗಳನ್ನು ಎದುರಿಸಿದ್ದೇನೆ. ಆದರೆ ಇದು ಹೆಚ್ಚು ಹೆಚ್ಚು ಲಜ್ಜೆಗೆಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವಾರಂಗಲ್‌ನಲ್ಲಿ ಕಾರ್ಯಕ್ರಮವನ್ನು ಉತ್ತಮವಾಗಿ ಆಯೋಜಿಸಲಾಗಿದೆ” ಎಂದು ಪ್ರತಿಕ್ರಿಯಿಸಿರುವ ಅವರು, “ತೆಲಂಗಾಣ ಸರ್ಕಾರ ಮತ್ತು ಸ್ಥಳೀಯ ಆಡಳಿತವು 48 ಗಂಟೆಗಳ ಕಿರು ಸೂಚನೆಯೊಳಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. 4,000ಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಪ್ರದರ್ಶನವು ಶಾಂತಿಯುತವಾಗಿ ನಡೆಯುವುದನ್ನು ಅವರು ಖಚಿತಪಡಿಸಿಕೊಂಡರು” ಎಂದು ವಿವರಿಸಿದ್ದಾರೆ.

“ಇದು ಪುಸ್ತಕ ನಿಷೇಧಕ್ಕೆ ಹೋಲುತ್ತದೆ. ರಾಜ್ಯವು ಪುಸ್ತಕವನ್ನು ನಿಷೇಧಿಸಿದಾಗ, ಪ್ರತಿಯೊಬ್ಬರೂ ಪುಸ್ತಕದ ಪ್ರತಿಯನ್ನು ಪಡೆಯಲು ಧಾವಿಸುತ್ತಾರೆ. ನೀವು ನನ್ನ ಪ್ರದರ್ಶನವನ್ನು ನಿಷೇಧಿಸಿದರೆ, ನನ್ನ ಬೆಂಬಲಕ್ಕೆ ಮತ್ತು ನನ್ನ ಕಲೆಯನ್ನು ವೀಕ್ಷಿಸಲು ಹೆಚ್ಚು ಹೆಚ್ಚು ಜನರು ಬರುತ್ತಾರೆ” ಎಂದು ಸಾರಾಬಾಯಿ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...