Homeಮುಖಪುಟ‘ಆದಿಮ ಆವಾಸಸ್ಥಾನ': ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

‘ಆದಿಮ ಆವಾಸಸ್ಥಾನ’: ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸಲು ಸರ್ಕಾರಕ್ಕೆ ಸೂಚಿಸುವಂತೆ ಆಗ್ರಹಿಸಿದ ಪತ್ರ

- Advertisement -
- Advertisement -

ಗ್ರೇಟ್ ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡುವಂತೆ 87 ಮಾಜಿ ಅಧಿಕಾರಿಗಳ ಗುಂಪು ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ. ಈ ಯೋಜನೆಯು ಸ್ಥಳೀಯ ಸಮುದಾಯಗಳ ಭವಿಷ್ಯದ ಮೇಲೆ ಮತ್ತು ದ್ವೀಪದ ಪರಿಸರ ವ್ಯವಸ್ಥೆಯ ಬಗ್ಗೆ ಗಂಭೀರ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಅಡಿಯಲ್ಲಿ ಬರುವ ನೀತಿ ಆಯೋಗದ ನಿರ್ದೇಶನದ ಪ್ರಕಾರ, 35,000 ಕೋಟಿ ರೂಪಾಯಿಗಳ ಗ್ರೇಟ್ ನಿಕೋಬಾರ್ ಯೋಜನೆಯು 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯಲ್ಲಿ 130 ಚದರ ಕಿಮೀ ಪ್ರಾಥಮಿಕ ಅರಣ್ಯ ಸೇರಿದಂತೆ ಟ್ರಾನ್ಸ್-ಶಿಪ್‌ಮೆಂಟ್ ಬಂದರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರ, ಟೌನ್‌ಶಿಪ್ ಮತ್ತು  ಪ್ರವಾಸೋದ್ಯಮ ಮೂಲಸೌಕರ್ಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ. ನವೆಂಬರ್ 4 ರಂದು ಅಂತಿಮ ಪರಿಸರ ಅನುಮತಿಯನ್ನು ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಸರ್ಕಾರವು ದೇಶದ ಅತ್ಯಂತ ಪ್ರಾಚೀನ ಆವಾಸಸ್ಥಾನಗಳಲ್ಲಿ ಒಂದನ್ನು ನಾಶಮಾಡಲು ಸಿದ್ಧವಾಗಿದೆ. ಇದು ವಿವಿಧ ಅಪರೂಪದ ಮತ್ತು ಸ್ಥಳೀಯ ಪ್ರಭೇದಗಳಿಗೆ ನೆಲೆಯಾಗಿದೆ. ಜೊತೆಗೆ ಅತ್ಯಂತ ದುರ್ಬಲ ಬುಡಕಟ್ಟು ಸಮುದಾಯವಾದ ಗ್ರೇಟ್ ನಿಕೋಬಾರ್‌ನ ಶಾಂಪೆನ್ಸ್‌ನ ನೆಲೆಯಾಗಿದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. .

ಶಾಂಪೆನ್ ಬುಡಕಟ್ಟು ಸಮುದಾಯವನ್ನು ಸರ್ಕಾರವು “ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪು” ಎಂದು ಪಟ್ಟಿಮಾಡಿದೆ. ಈ ಸಮುದಾಯವು ಕೃಷಿ-ಪೂರ್ವ ಮಟ್ಟದ ತಂತ್ರಜ್ಞಾನ, ಕಡಿಮೆ ಮಟ್ಟದ ಸಾಕ್ಷರತೆ ಮತ್ತು ಕ್ಷೀಣಿಸುತ್ತಿರುವ ಅಥವಾ ನಿಶ್ಚಲವಾಗಿರುವ ಜನಸಂಖ್ಯೆಯಿಂದ ಕೂಡಿದೆ. ಶಾಂಪೆನ್ಸ್‌ ಸಮುದಾಯದ ಪ್ರದೇಶಕ್ಕೆ ಹೊರಗಿನವರು ಪದೇ ಪದೇ ಆಕ್ರಮಣ ಮಾಡಿದ್ದಾರೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು  ಹೇಳಿದ್ದಾರೆ.

“ಪರಿಶಿಷ್ಟ ಬುಡಕಟ್ಟುಗಳ ರಾಷ್ಟ್ರೀಯ ಆಯೋಗಕ್ಕೆ ಈ ವಿಷಯದ ಬಗ್ಗೆ ತಿಳಿದಿದೆ. ಜೊತೆಗೆ ಅಂತಹ ಹೇರಿಕೆಗಳನ್ನು ತಡೆಯಲು ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯ ಬಗ್ಗೆ ಗಮನ ಹರಿಸುವ ಬದಲು, ಸರ್ಕಾರವು ಈಗ ಆ ಸಮುದಾಯದ ಮೇಲೆ ದೊಡ್ಡ ಹೇರಿಕೆಯನ್ನು ಮಾಡಲು ಸಿದ್ಧವಾಗಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರೇಟ್ ನಿಕೋಬಾರ್‌ನ ಸುಮಾರು 853 ಚದರ ಕಿ.ಮೀ ಪ್ರದೇಶವನ್ನು ಅಂಡಮಾನ್ ಮತ್ತು ನಿಕೋಬಾರ್ ಪ್ರೊಟೆಕ್ಷನ್ ಆಫ್ ಅಬೊರಿಜಿನಲ್ ಟ್ರೈಬ್ಸ್ ರೆಗ್ಯುಲೇಶನ್-1956 ರ ಅಡಿಯಲ್ಲಿ, ‘ಬುಡಕಟ್ಟು ಮೀಸಲು’ ಎಂದು ಗೊತ್ತುಪಡಿಸಲಾಗಿದೆ. ಈ ಭೂಮಿ ಸಮುದಾಯದ ವಿಶೇಷ ಬಳಕೆಗೆ ಮೀಸಲಾಗಿದೆ ಮತ್ತು ಈ ಪ್ರದೇಶಕ್ಕೆ ಆಡಳಿತದ ಸ್ಪಷ್ಟ ಅನುಮತಿಯಿಲ್ಲದೆ ಪ್ರವೇಶಿಸಲು ಸಾಧ್ಯವಿಲ್ಲ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಹರ್ಯಾಣದಲ್ಲಿ ಪರಿಹಾರ ಅರಣ್ಯೀಕರಣ ಸೇರಿದಂತೆ ಕೆಲವು ಷರತ್ತುಗಳೊಂದಿಗೆ ನೀಡಿದ ಪರಿಸರ ಮತ್ತು ಕರಾವಳಿ ನಿಯಂತ್ರಣ ವಲಯದ ಅನುಮತಿಯ ಬಗ್ಗೆ ಕೂಡಾ ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದ ಅರಣ್ಯ ಸಂರಕ್ಷಣಾ ಕಾನೂನಿನ ಅಡಿಯಲ್ಲಿ, ಅಭಿವೃದ್ಧಿ ಅಥವಾ ಕೈಗಾರಿಕಾ ಯೋಜನೆಗಳಿಗಾಗಿ ಅರಣ್ಯಗಳನ್ನು ತೆರವುಗೊಳಿಸುವಾಗ, ಪರಿಸರ ನಷ್ಟವನ್ನು ಸರಿದೂಗಿಸಲು ಅರಣ್ಯೇತರ ಭೂಮಿಯ ಸಮಾನ ಪ್ರದೇಶದಲ್ಲಿ ಮರಗಳನ್ನು ನೆಡಬೇಕಾಗಿದೆ.

“ಗ್ರೇಟ್ ನಿಕೋಬಾರ್‌ನ ಪ್ರಾಚೀನ ಕಾಡುಗಳನ್ನು ಹರಿಯಾಣದಲ್ಲಿ ನೆಡುವ ಕಾಡುಗಳೊಂದಿಗೆ ಬದಲಾಯಿಸುವ ಕಲ್ಪನೆಯು ದೊಡ್ಡ ದುರಂತವಾಗಿದ್ದು, ಹಾಸ್ಯಾಸ್ಪದವಾಗಿದೆ. ಗ್ರೇಟ್‌ ನಿಕೋಬಾರ್‌ನ ಸುಮಾರು 13,075 ಎಕರೆ ಶ್ರೀಮಂತ, ನಿತ್ಯಹರಿದ್ವರ್ಣ, ಮಳೆಕಾಡುಗಳು ಅಸಾಧಾರಣ ಸಸ್ಯ ಮತ್ತು ಪ್ರಾಣಿ ಪ್ರಭೇದಗಳಿಂದ ತುಂಬಿವೆ. ಅದನ್ನು ಹರಿಯಾಣದ ಒಣ ಪ್ರದೇಶವಾದ ಅರಾವಳಿ ಬೆಟ್ಟಗಳಲ್ಲಿ ಹೊಸದಾಗಿ ನೆಟ್ಟು ಮರಗಳಿಗೆ ಪರಿಹಾರವನ್ನು ನೀಡಲಾಗುತ್ತದೆ” ಎಂದು ಪತ್ರದಲ್ಲಿ ಆಶ್ಚರ್ಯವ್ಯಕ್ತಪಡಿಸಲಾಗಿದೆ.

ಪತ್ರದಲ್ಲಿ, ಮಾಜಿ ಚುನಾವಣಾ ಆಯುಕ್ತ ಎಸ್‌.ವೈ. ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಭಾರತೀಯ ಆಡಳಿತ ಸೇವೆಗಳ ಮಾಜಿ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ಅರುಣಾ ರಾಯ್ ಸೇರಿದಂತೆ ಅನೇಕ ನಿವೃತ್ತ ನಾಗರಿಕ ಅಧಿಕಾರಿಗಳು ಸಹಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...