Homeಮುಖಪುಟ‘ಆದಿಮ ಆವಾಸಸ್ಥಾನ': ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

‘ಆದಿಮ ಆವಾಸಸ್ಥಾನ’: ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸಲು ಸರ್ಕಾರಕ್ಕೆ ಸೂಚಿಸುವಂತೆ ಆಗ್ರಹಿಸಿದ ಪತ್ರ

- Advertisement -
- Advertisement -

ಗ್ರೇಟ್ ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡುವಂತೆ 87 ಮಾಜಿ ಅಧಿಕಾರಿಗಳ ಗುಂಪು ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ. ಈ ಯೋಜನೆಯು ಸ್ಥಳೀಯ ಸಮುದಾಯಗಳ ಭವಿಷ್ಯದ ಮೇಲೆ ಮತ್ತು ದ್ವೀಪದ ಪರಿಸರ ವ್ಯವಸ್ಥೆಯ ಬಗ್ಗೆ ಗಂಭೀರ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಅಡಿಯಲ್ಲಿ ಬರುವ ನೀತಿ ಆಯೋಗದ ನಿರ್ದೇಶನದ ಪ್ರಕಾರ, 35,000 ಕೋಟಿ ರೂಪಾಯಿಗಳ ಗ್ರೇಟ್ ನಿಕೋಬಾರ್ ಯೋಜನೆಯು 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯಲ್ಲಿ 130 ಚದರ ಕಿಮೀ ಪ್ರಾಥಮಿಕ ಅರಣ್ಯ ಸೇರಿದಂತೆ ಟ್ರಾನ್ಸ್-ಶಿಪ್‌ಮೆಂಟ್ ಬಂದರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರ, ಟೌನ್‌ಶಿಪ್ ಮತ್ತು  ಪ್ರವಾಸೋದ್ಯಮ ಮೂಲಸೌಕರ್ಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ. ನವೆಂಬರ್ 4 ರಂದು ಅಂತಿಮ ಪರಿಸರ ಅನುಮತಿಯನ್ನು ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಸರ್ಕಾರವು ದೇಶದ ಅತ್ಯಂತ ಪ್ರಾಚೀನ ಆವಾಸಸ್ಥಾನಗಳಲ್ಲಿ ಒಂದನ್ನು ನಾಶಮಾಡಲು ಸಿದ್ಧವಾಗಿದೆ. ಇದು ವಿವಿಧ ಅಪರೂಪದ ಮತ್ತು ಸ್ಥಳೀಯ ಪ್ರಭೇದಗಳಿಗೆ ನೆಲೆಯಾಗಿದೆ. ಜೊತೆಗೆ ಅತ್ಯಂತ ದುರ್ಬಲ ಬುಡಕಟ್ಟು ಸಮುದಾಯವಾದ ಗ್ರೇಟ್ ನಿಕೋಬಾರ್‌ನ ಶಾಂಪೆನ್ಸ್‌ನ ನೆಲೆಯಾಗಿದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. .

ಶಾಂಪೆನ್ ಬುಡಕಟ್ಟು ಸಮುದಾಯವನ್ನು ಸರ್ಕಾರವು “ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪು” ಎಂದು ಪಟ್ಟಿಮಾಡಿದೆ. ಈ ಸಮುದಾಯವು ಕೃಷಿ-ಪೂರ್ವ ಮಟ್ಟದ ತಂತ್ರಜ್ಞಾನ, ಕಡಿಮೆ ಮಟ್ಟದ ಸಾಕ್ಷರತೆ ಮತ್ತು ಕ್ಷೀಣಿಸುತ್ತಿರುವ ಅಥವಾ ನಿಶ್ಚಲವಾಗಿರುವ ಜನಸಂಖ್ಯೆಯಿಂದ ಕೂಡಿದೆ. ಶಾಂಪೆನ್ಸ್‌ ಸಮುದಾಯದ ಪ್ರದೇಶಕ್ಕೆ ಹೊರಗಿನವರು ಪದೇ ಪದೇ ಆಕ್ರಮಣ ಮಾಡಿದ್ದಾರೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು  ಹೇಳಿದ್ದಾರೆ.

“ಪರಿಶಿಷ್ಟ ಬುಡಕಟ್ಟುಗಳ ರಾಷ್ಟ್ರೀಯ ಆಯೋಗಕ್ಕೆ ಈ ವಿಷಯದ ಬಗ್ಗೆ ತಿಳಿದಿದೆ. ಜೊತೆಗೆ ಅಂತಹ ಹೇರಿಕೆಗಳನ್ನು ತಡೆಯಲು ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯ ಬಗ್ಗೆ ಗಮನ ಹರಿಸುವ ಬದಲು, ಸರ್ಕಾರವು ಈಗ ಆ ಸಮುದಾಯದ ಮೇಲೆ ದೊಡ್ಡ ಹೇರಿಕೆಯನ್ನು ಮಾಡಲು ಸಿದ್ಧವಾಗಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರೇಟ್ ನಿಕೋಬಾರ್‌ನ ಸುಮಾರು 853 ಚದರ ಕಿ.ಮೀ ಪ್ರದೇಶವನ್ನು ಅಂಡಮಾನ್ ಮತ್ತು ನಿಕೋಬಾರ್ ಪ್ರೊಟೆಕ್ಷನ್ ಆಫ್ ಅಬೊರಿಜಿನಲ್ ಟ್ರೈಬ್ಸ್ ರೆಗ್ಯುಲೇಶನ್-1956 ರ ಅಡಿಯಲ್ಲಿ, ‘ಬುಡಕಟ್ಟು ಮೀಸಲು’ ಎಂದು ಗೊತ್ತುಪಡಿಸಲಾಗಿದೆ. ಈ ಭೂಮಿ ಸಮುದಾಯದ ವಿಶೇಷ ಬಳಕೆಗೆ ಮೀಸಲಾಗಿದೆ ಮತ್ತು ಈ ಪ್ರದೇಶಕ್ಕೆ ಆಡಳಿತದ ಸ್ಪಷ್ಟ ಅನುಮತಿಯಿಲ್ಲದೆ ಪ್ರವೇಶಿಸಲು ಸಾಧ್ಯವಿಲ್ಲ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಹರ್ಯಾಣದಲ್ಲಿ ಪರಿಹಾರ ಅರಣ್ಯೀಕರಣ ಸೇರಿದಂತೆ ಕೆಲವು ಷರತ್ತುಗಳೊಂದಿಗೆ ನೀಡಿದ ಪರಿಸರ ಮತ್ತು ಕರಾವಳಿ ನಿಯಂತ್ರಣ ವಲಯದ ಅನುಮತಿಯ ಬಗ್ಗೆ ಕೂಡಾ ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದ ಅರಣ್ಯ ಸಂರಕ್ಷಣಾ ಕಾನೂನಿನ ಅಡಿಯಲ್ಲಿ, ಅಭಿವೃದ್ಧಿ ಅಥವಾ ಕೈಗಾರಿಕಾ ಯೋಜನೆಗಳಿಗಾಗಿ ಅರಣ್ಯಗಳನ್ನು ತೆರವುಗೊಳಿಸುವಾಗ, ಪರಿಸರ ನಷ್ಟವನ್ನು ಸರಿದೂಗಿಸಲು ಅರಣ್ಯೇತರ ಭೂಮಿಯ ಸಮಾನ ಪ್ರದೇಶದಲ್ಲಿ ಮರಗಳನ್ನು ನೆಡಬೇಕಾಗಿದೆ.

“ಗ್ರೇಟ್ ನಿಕೋಬಾರ್‌ನ ಪ್ರಾಚೀನ ಕಾಡುಗಳನ್ನು ಹರಿಯಾಣದಲ್ಲಿ ನೆಡುವ ಕಾಡುಗಳೊಂದಿಗೆ ಬದಲಾಯಿಸುವ ಕಲ್ಪನೆಯು ದೊಡ್ಡ ದುರಂತವಾಗಿದ್ದು, ಹಾಸ್ಯಾಸ್ಪದವಾಗಿದೆ. ಗ್ರೇಟ್‌ ನಿಕೋಬಾರ್‌ನ ಸುಮಾರು 13,075 ಎಕರೆ ಶ್ರೀಮಂತ, ನಿತ್ಯಹರಿದ್ವರ್ಣ, ಮಳೆಕಾಡುಗಳು ಅಸಾಧಾರಣ ಸಸ್ಯ ಮತ್ತು ಪ್ರಾಣಿ ಪ್ರಭೇದಗಳಿಂದ ತುಂಬಿವೆ. ಅದನ್ನು ಹರಿಯಾಣದ ಒಣ ಪ್ರದೇಶವಾದ ಅರಾವಳಿ ಬೆಟ್ಟಗಳಲ್ಲಿ ಹೊಸದಾಗಿ ನೆಟ್ಟು ಮರಗಳಿಗೆ ಪರಿಹಾರವನ್ನು ನೀಡಲಾಗುತ್ತದೆ” ಎಂದು ಪತ್ರದಲ್ಲಿ ಆಶ್ಚರ್ಯವ್ಯಕ್ತಪಡಿಸಲಾಗಿದೆ.

ಪತ್ರದಲ್ಲಿ, ಮಾಜಿ ಚುನಾವಣಾ ಆಯುಕ್ತ ಎಸ್‌.ವೈ. ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಭಾರತೀಯ ಆಡಳಿತ ಸೇವೆಗಳ ಮಾಜಿ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ಅರುಣಾ ರಾಯ್ ಸೇರಿದಂತೆ ಅನೇಕ ನಿವೃತ್ತ ನಾಗರಿಕ ಅಧಿಕಾರಿಗಳು ಸಹಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...