Homeಕರ್ನಾಟಕ2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು: CITU ಅಖಿಲ ಭಾರತ ಸಮ್ಮೇಳನ ನಿರ್ಣಯ

2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು: CITU ಅಖಿಲ ಭಾರತ ಸಮ್ಮೇಳನ ನಿರ್ಣಯ

- Advertisement -
- Advertisement -

2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು ಹಾಗೂ 2024ರ ಚುನಾವಣೆಯಲ್ಲಿ ಕಾರ್ಮಿಕ ವಿರೋಧಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ನಿರ್ಣಯಿಸಿದೆ. ಕಾರ್ಮಿಕರು, ರೈತರು ಹಾಗೂ ಕೂಲಿಕಾರರ ಬದುಕನ್ನು ಕಸಿಯುತ್ತಿರುವ ಸರ್ಕಾರಗಳನ್ನು ಮತ್ತು ಅವುಗಳ ನೀತಿಗಳನ್ನು ಕಿತ್ತೊಗೆಯಲು ಇಡೀ ದೇಶದ ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಜಾತಿ, ಧರ್ಮ, ವರ್ಣ, ವರ್ಗ ಭೇದಗಳನ್ನು ಮರೆತು ಐಕ್ಯ ಹೋರಾಟ ನಡೆಸಬೇಕು ಎಂದು ಸಿಐಟಿಯು ಕರೆ ನೀಡಿದೆ.

ಕಳೆದ ಐದು ದಿನಗಳಿಂದ ಬೆಂಗಳೂರಿನಲ್ಲಿ ದೇಶದ ಪ್ರಮುಖ ಕಾರ್ಮಿಕ ಸಂಘಟನೆಯಾದ ‘ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌’ (ಸಿಐಟಿಯು) 17ನೇ ಅಖಿಲ ಭಾರತ ಸಮ್ಮೇಳನ ನಡೆದಿದ್ದು, ಭಾನುವಾರ ನಗರದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಬೃಹತ್‌ ಬಹಿರಂಗ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ವೇಳೆ ದುಡಿಯುವ ಜನರ ಸಮಸ್ಯೆಗಳ ಕುರಿತು ಚರ್ಚಿಸಿ ಕೈಗೊಂಡಿರುವ ಹಲವು ನಿರ್ಣಯಗಳನ್ನು ಘೋಷಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಐಟಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಅವರು, “ಆರ್‌ಎಸ್‌ಎಸ್‌ ಅಣತಿಯಂತೆ ಒಕ್ಕೂಟ ಸರ್ಕಾರ ನಡೆಯುತ್ತಿದ್ದು, ಧರ್ಮದ ರಾಜಕಾರಣ ಮಾಡಿ ಜನರನ್ನು ಬೀದಿಗೆ ತಳ್ಳುತ್ತಿದೆ. ಅದಾನಿ, ಅಂಬಾನಿಯಂತಹ ದೇಶದ ಶ್ರೀಮಂತರ ಸಂಪತ್ತನ್ನು ಹೆಚ್ಚುಮಾಡಲು ರೈತರು, ಕಾರ್ಮಿಕರು, ಬಡವರ ಬದುಕನ್ನು ಜರ್ಜರಿತಗೊಳಿಸಿದೆ. ಇಂತಹ ಸರ್ಕಾರಕ್ಕೆ ಮಾತಿನ ಮೂಲಕ ಹೇಳಿದರೆ ತಿಳಿಯಲ್ಲ. ಹಾಗಾಗಿ ದೇಶದ ಜನರು, ರೈತರು ಕಾರ್ಮಿಕರು ಐಕ್ಯತೆ ಸಾಧಿಸಿ ಹೋರಾಟದ ಮೂಲಕವೇ ಅವರನ್ನು ಕಿತ್ತೊಗೆಯಬೇಕು” ಎಂದು ಕರೆ ನೀಡಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯ ಉದ್ಘಾಟನೆ
CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯ ಉದ್ಘಾಟನೆ

 

“ನಾಲ್ಕು ಕಾರ್ಮಿಕ ತಿದ್ದುಪಡಿ ಮಸೂದೆಗಳನ್ನು ಜಾರಿ ತಂದು ಕಾರ್ಮಿಕರು ಸಂಘ ಕಟ್ಟುವ ಹಕ್ಕನ್ನು ಕಸಿಯಲು ಮುಂದಾಗಿದೆ. ಕಾರ್ಮಿಕರ ಹಕ್ಕುಗಳನ್ನು ಕಸಿದು ಮತ್ತೆ ಗುಲಾಮಿ ಸಂಸ್ಕೃತಿಯನ್ನು ಜಾರಿಗೆ ತಂದು ಕೆಲಸದ ಅವಧಿಯನ್ನು ಎಂಟರಿಂದ 12 ಗಂಟೆಗೆ ಏರಿಸಲು ಒಕ್ಕೂಟ ಸರ್ಕಾರ ಮುಂದಾಗಿದ್ದು, ಅದನ್ನು ಕಾರ್ಮಿಕ ವರ್ಗ ಹಾಗೂ ಸಿಐಟಿಯು ಪ್ರಬಲ ಹೋರಾಟದಿಂದ ಹಿಮ್ಮೆಟ್ಟಿಸಿವೆ. ಮುಂದೆಯೂ ಜನವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಗಳನ್ನು ಹೋರಾಟದ ಮೂಲಕ ಬಗ್ಗು ಬಡಿಯಬೇಕು” ಎಂದು ಅವರು ಹೇಳಿದರು.

40% ಸರ್ಕಾರ ಕಿತ್ತೊಗೆಯೋಣ; ಮೀನಾಕ್ಷಿ ಸುಂದರಂ

ಸಭೆಯಲ್ಲಿ ಮಾತನಾಡಿದ ಸಿಐಟಿಯು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ,“ಧರ್ಮವನ್ನು ತೋರಿಸಿ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿರುವ 40% ಸರ್ಕಾರವನ್ನು ಸಂಪೂರ್ಣವಾಗಿ ಕಿತ್ತು ಬಿಸಾಕಬೇಕು. ಆ ನಿಟ್ಟಿನಲ್ಲಿ 2023ರ ಇಡೀ ವರ್ಷ ಹೋರಾಟದ ವರ್ಷವಾಗಬೇಕು. ದೆಹಲಿ ರೈತ ಹೋರಾಟ ಮೋದಿ ಸರ್ಕಾರಕ್ಕೆ ಯಾವ ಭಾಷೆಯಲ್ಲಿ ಪಾಠ ಕಲಿಸಿತೋ ಅದೇ ಹೋರಾಟದ ಭಾಷೆಯನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಇಡೀ ದೇಶದ ಜನ ಅನುಸರಿಸಬೇಕು” ಎಂದು ಕರೆ ಹೇಳಿದರು.

CITU ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿದರು

“ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವನ್ನು ಜನ ಸಾಮಾನ್ಯರು ಆಯ್ಕೆ ಮಾಡಿರುವುದಲ್ಲ. ಬದಲಾಗಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರವಾಗಿ ಆಯ್ಕೆಯಾಗಿದ್ದವರನ್ನು ಖರೀದಿಸಿ ರೂಪುಗೊಂಡಿರುವುದು. ಹಾಗಂತ ಬಿಜೆಪಿ ತೊಲಗಿಸಿ ಕಾಂಗ್ರೆಸ್, ಜೆಡಿಎಸ್ ಅಥವಾ ಇನ್ಯಾವುದೊ ಪಕ್ಷ ಅಧಿಕಾರಕ್ಕೆ ಬಂದರೆ ನಮ್ಮ ಪರಿಸ್ಥಿತಿ ಬದಲಾಗುತ್ತದೆ ಎಂದು ನಂಬಲಾಗಿದೆ. ಆದರೆ, ಸರ್ಕಾರಗಳು ಅಥವಾ ಅದರ ಪ್ರತಿನಿಧಿಗಳು ಮಾತ್ರವಲ್ಲ ಅವುಗಳ ನೀತಿಗಳು ಬದಲಾಗಬೇಕಿದೆ” ಎಂದು ಅವರು ಪ್ರತಿಪಾದಿಸಿದರು.

“ಹಿಂದೆ ಐಟಿಐ ಓದಿದರೆ ಸಾಕಿತ್ತು, ಕಾರ್ಖಾನೆಯಲ್ಲಿ ಅಪ್ರೆಂಟಿಸ್ ಆಗಿ ಕೆಲಸ ಮಾಡಿ ನಂತರ ಖಾಯಂ ಉದ್ಯೋಗ ಪಡೆಯುವ ಅವಕಾಶ ಇತ್ತು. ಅದರೆ ಇಂದಿನ ಯುವಜನತೆ ಏನೇ ಶಿಕ್ಷಣ ಪಡೆದರೂ ಯಾವುದೇ ಮಾನ್ಯತೆ ಇಲ್ಲ. ಆದರೆ, ಒಂದು ಕಾರ್ಪೊರೇಟ್ ಕಂಪನಿ ನೀಡುವ ಸರ್ಟಿಫಿಕೇಟ್‌ಗೆ ಮಾನ್ಯತೆ ಪಡೆಯುತ್ತಿದೆ. ಕಾರ್ಮಿಕ ಕಾನೂನುಗಳ ಮೂಲಕ ಪರ್ಮನೆಂಟ್ ಕಾರ್ಮಿಕರನ್ನು ಮನೆಗೆ ಕಳಿಸುತ್ತ ಟ್ರೈನಿಗಳನ್ನು ಕೆಲಸಕ್ಕೆ ತೆಗೆದುಕೊಂಡು ಶೋಷಿಸಲಾಗುತ್ತಿದೆ. ಕೈಗಾರಿಕೆ ಸ್ಥಾಪಿಸಲು ಭೂಮಿ ಕೊಟ್ಟ ರೈತರ ಮಕ್ಕಳಿಗೆ ಉದ್ಯೋಗ ನೀಡದೆ ವಂಚಿಸಲಾಗುತ್ತಿದೆ” ಎಂದು ಮೀನಾಕ್ಷಿ ಸುಂದರಂ ಅಕ್ರೋಶ ವ್ಯಕ್ತಪಡಿಸಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯಲ್ಲಿ ಭಾಗವಹಿಸುತ್ತಿರುವ ಕಾರ್ಮಿಕರು

“ಸದಾ ಮಾಧ್ಯಮಗಳ ಮುಂದೆ ಸೈನಿಕರ ಬಗ್ಗೆ ಮಾತನಾಡುವ ಈ ಸರ್ಕಾರ, ದೇಶದ ರಕ್ಷಣೆ ಮಾಡುವವರನ್ನೂ ಕಡೆಗಣಿಸಲು ಮುಂದಾಗಿದೆ. ಅಲ್ಲಿಯೂ ಅಗ್ನಿವೀರ್ ಎಂಬ ಹೆಸರಿನಲ್ಲಿ ದೇಶದ ರಕ್ಷಣಾ ವಲಯವನ್ನು ಕಡೆಗಣಿಸಿದೆ. ಅದನ್ನೂ ಕೂಡ ಖಾಸಗಿಯವರಿಗೆ ವಹಿಸಲಾಗುತ್ತಿದೆ. ಗಡಿಯಲ್ಲಿ ಜೀವ ಕೊಡುವವರಿಗೂ ಉದ್ಯೋಗ ಭದ್ರತೆಯನ್ನು ಕಸಿಯುವ ಹುನ್ನಾರ ಮಾಡಿದೆ. ದೇಶದಲ್ಲಿ ಮಾತ್ರವಲ್ಲ ರಾಜ್ಯದಲ್ಲಿಯೂ ಸಾರ್ವಜನಿಕ ಉದ್ದಿಮೆಗಳು, ಸಾರ್ವಜನಿಕ ಆಸ್ತಿ, ಕಾರ್ಖಾನೆಗಳು ಸೇರಿದಂತೆ ಎಲ್ಲವನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಬಿಇಎಂಎಲ್, ಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆಯನ್ನು ಮಾರಾಟ ಮಾಡಲು ಮುಂದಾಗುತ್ತಿದ್ದಾರೆ” ಎಂದು ಅವರು ಹೇಳಿದರು.

ಕೇರಳದ ಎಡಪಂಥೀಯ ಸರ್ಕಾರ ಕಾರ್ಮಿಕರ ಪರವಾಗಿದೆ: ಡಾ.ಕೆ. ಹೇಮಲತ

ಸಮ್ಮೇಳನದಲ್ಲಿ ಮಾತನಾಡಿದ ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಡಾ.ಕೆ. ಹೇಮಲತ, “ಉತ್ತರ ಪ್ರದೇಶ, ಗುಜರಾತ್‌ ಸೇರಿದಂತೆ ಡಬಲ್ ಇಂಜಿನ್ ಸರ್ಕಾರ ಇರುವ ರಾಜ್ಯಗಳ ಕಾರ್ಮಿಕ ನಾಯಕರು ಸಮ್ಮೇಳನದಲ್ಲಿ ನಡೆದ ಚರ್ಚೆಗಳಲ್ಲಿ ಭಾಗವಹಿಸಿದ್ದರು. ಆಗ ಅಲ್ಲಿನ ಬಿಜೆಪಿ ಸರ್ಕಾರದ ನೀತಿಗಳು ಎಷ್ಟು ತೊಂದರೆ ಮಾಡುತ್ತಿವೆ ಎಂದು ಅವರು ವಿವರಿಸಿದ್ದಾರೆ. ಅದೇ ರೀತಿ ಕೇರಳದ ಕಾರ್ಮಿಕ ನಾಯಕರು ಕೂಡಾ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಅವರು ಕೇರಳದ ಎಡಪಂಥೀಯ ಸರ್ಕಾರ ಕಾರ್ಮಿಕರ ಪರವಾಗಿ ನಿಂತಿದೆ ಎಂದು ವಿವರಿಸಿದ್ದರು” ಎಂದು ಅವರು ಹೇಳಿದರು.

CITU 17ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಸಮಾರಂಭದ ಬಹಿರಂಗ ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

“ಕೇರಳದ ಎಡಪಂಥೀಯ ಸರ್ಕಾರ ಖಾಸಗೀಕರನದ ವಿರುದ್ಧ ನಿಂತಿದೆ. ಕೊರೊನಾ ಸಂದರ್ಭದಲ್ಲಿ ಕಾರ್ಮಿಕರು, ರೈತರು ಹಾಗೂ ಬಡವರ ಹಾಗೂ ಆ ರಾಜ್ಯದ ಜನರಿಗಾಗಿ ಕೇರಳ ಸರ್ಕಾರ ಕೆಲಸ ಮಾಡಿದೆ. ಹಾಗಾಗಿ ದೇಶದ ಬೇರೆ ರಾಜ್ಯಗಳಲ್ಲಿ ಕೂಡಾ ಅದೇ ರೀತಿಯ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ. ಅದಕ್ಕಾಗಿ ನಾವು ನಿರ್ಣಯ ಕೈಗೊಂಡಿದ್ದೇವೆ” ಎಂದು ಹೇಮಲತ ಅವರು ಹೇಳಿದರು.

ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ಹಾಗೂ ಕಾರ್ಮಿಕರು, ಕೊಳಗೇರಿ ನಿವಾಸಿಗಳ ಬದುಕು, ಮನೆಗೆಲಸದವರ ಸಂಕಷ್ಟಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ನಿರ್ಮಾಣಗೊಂಡ ಕಿರುಚಿತ್ರಗಳನ್ನು ಸಿಐಟಿಯು ಸಮ್ಮೇಳನದಲ್ಲಿ ಪ್ರದರ್ಶನ ನಡೆಸಿ ಬಹುಮಾನ ವಿತರಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಕೇರಳ, ತಮಿಳುನಾಡು ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ಕಾರ್ಮಿಕ ಪ್ರತಿನಿಧಿಗಳು ಸೇರಿದಂತೆ, ಕರ್ನಾಟಕದ ಎಲ್ಲಾ ಜಿಲ್ಲೆಗಳ ಕಾರ್ಮಿಕರು ಸೇರಿದ್ದರು. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದವು ತುಂಬಿ ತುಳುಕಿತ್ತು. ಸಮಾರಂಭದಲ್ಲಿ ಶ್ರಮಿಕ ವರ್ಗದ ಹೋರಾಟ, ಇತಿಹಾಸ ನೆಪಿಸುವ, ಡೊಳ್ಳು ಕುಣಿತ, ತಮಟೆ ವಾದ್ಯಗಳಂತಹ ಗ್ರಾಮೀಣ ಕಲೆಯನ್ನು ಪ್ರೋತ್ಸಾಹಿಸುವ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ಜರುಗಿತು.

ಇದನ್ನೂ ಓದಿ: ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...