Homeಮುಖಪುಟಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

- Advertisement -
- Advertisement -

ಸುಮಾರು ಎರಡು ದಶಕಗಳ ಹಿಂದೆ ಗುಜರಾತ್‌ನಲ್ಲಿ ನಡೆದ ಗಲಭೆಗಳ ಕುರಿತು ಬಿಬಿಸಿಯ ಎರಡು ಭಾಗಗಳ ಸಾಕ್ಷ್ಯಚಿತ್ರ ಸಿದ್ದಗೊಳಿಸಿದೆ. ಇದು ಅಂದಿನ ನರೇಂದ್ರ ಮೋದಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕ್ರಮವನ್ನು ಟೀಕಿಸಿದೆ. ಹಾಗಾಗಿ ಇದೀಗ ಕೇಂದ್ರ ಸರ್ಕಾರ ಈ ಸಾಕ್ಷ್ಯ ಚಿತ್ರವನ್ನು ನಿರ್ಭಂಧಿಸಿದೆ. ಸರ್ಕಾರದ ಈ ಕ್ರಮವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕರೊಂದಿಗೆ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಸೇರಿಕೊಂಡಿದ್ದಾರೆ.

ಭಾನುವಾರ ನಡೆದ  ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿರುವ “ಗಾಂಧಿ ಗೋಡ್ಸೆ: ಏಕ್ ಯುದ್ಧ್” ಚಲನಚಿತ್ರವನ್ನು ನಿಷೇಧಿಸುವಂತೆ ಕೋರಿದರು. ಇದೇ ವೇಳೆ, “ಕಳೆದ ವಾರ ಯೂಟ್ಯೂಬ್ ಮತ್ತು ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ “ಇಂಡಿಯಾ: ದಿ ಮೋದಿ ಕ್ವೆಶ್ಶನ್”  ಎನ್ನುವ ಬಿಬಿಸಿಯವರು ತಯಾರಿಸಿದ ಸಾಕ್ಷ್ಯಚಿತ್ರ ಬಗ್ಗೆ ಚರ್ಚೆಯಾಗತ್ತಿದೆ. ಸಾಕ್ಷ್ಯಚಿತ್ರದ ಮೊದಲ ಭಾಗವು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ಈ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ನಿರ್ಬಂಧಿಸುವ ಕ್ರಮಕ್ಕೆ ಪ್ರಯತ್ನಿಸಿದರು” ಎಂದರು.

ಇದನ್ನೂ ಓದಿ: ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

“ಗುಜರಾತ್ ಗಲಭೆ ನಡೆದಾಗ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿಯವರ ಕುರಿತು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಏನೇನು ಚರ್ಚೆಗಳು ನಡೆದಿವೆ ಎನ್ನುವ ಬಗ್ಗೆ ನೀವು ನೋಡುತ್ತಿದ್ದೀರಿ. ಮೋದಿ ಸರ್ಕಾರವು ವಸಾಹತುಶಾಹಿ ಕಾಲಕ್ಕೆ ಸಂಬಂಧಿಸಿದ ಕಾನೂನಿನ ಆಧಾರದ ಮೇಲೆ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದೆ” ಎಂದು ಲೋಕಸಭಾ ಸಂಸದರು ಕಾರ್ಯಕ್ರಮವೊಂದರಲ್ಲಿ ಹೇಳುತ್ತಿರುವುದು ಕೇಳಿಬರುತ್ತಿದೆ. ”ಗಲಭೆ ನಡೆದಾಗ ನೀವು ಮುಖ್ಯಮಂತ್ರಿಯಾಗಿರಲಿಲ್ಲವೇ..? ಬಿಲ್ಕಿಸ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ… ಕಾಂಗ್ರೆಸ್ ಸಂಸದರ ಹತ್ಯೆ” ಎಂದು ಎಹ್ಸಾನ್ ಜಾಫ್ರಿಯನ್ನು ಉಲ್ಲೇಖಿಸಿ ಓವೈಸಿ ಹೇಳಿದ್ದಾರೆ.

“ಇದೀಗ ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯ ಮೇಲೆ ಚಲನಚಿತ್ರವನ್ನು ನಿರ್ಮಿಸಲಾಗುತ್ತಿದೆ. ಭಾರತದ ಪ್ರಧಾನಿ ಆ ಚಲನಚಿತ್ರವನ್ನು ನಿಷೇಧಿಸುತ್ತಾರೆಯೇ? ಚಿತ್ರದಲ್ಲಿ ಗಾಂಧಿಯನ್ನು ಏಕೆ ಕೊಲ್ಲಲಾಯಿತು  ಎಂಬುದರ ಕುರಿತು ಮಾತನಾಡುತ್ತದೆ. ಮತ್ತೊಂದೆಡೆ ಬಿಬಿಸಿ ಪಿಎಂ ಮೋದಿ ಬಗ್ಗೆ ತೋರಿಸಿದಾಗ ಅದು ಸಮಸ್ಯೆಯಾಗಿ ಕಾಣುತ್ತದೆ. ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ ಗಾಂಧಿಗಿಂತ ನರೇಂದ್ರ ಮೋದಿ ದೊಡ್ಡವನಲ್ಲ” ಎಂದು ಓವೈಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.

“ಏಕೆ ಈ ಪಕ್ಷಪಾತ? ಬಿಜೆಪಿ ಸಂಸದರು ಗಾಂಧಿಯನ್ನು ಕೊಂದ ಗೋಡ್ಸೆಯನ್ನು ಹೊಗಳಲಿಲ್ಲವೇ? ಯಾವ ರೀತಿಯ ಭಾರತವನ್ನು ರಚಿಸಲಾಗುತ್ತಿದೆ. ಜಿ-20 ಪೋಸ್ಟರ್‌ಗಳಲ್ಲಿ  ಭಾರತವನ್ನು ಪ್ರಜಾಪ್ರಭುತ್ವ ಎಂದು ಅನುಮೋದಿಸಲಾಗುತ್ತಿದೆ ಆದರೆ ಯೂಟ್ಯೂಬ್‌ನಲ್ಲಿ ಚಿತ್ರಗಳನ್ನು ನಿಷೇಧಿಸುವ ಕ್ರಮ ಅನುಸರಿಸುತ್ತಿದೆ. ಇದೆಂತಹ ಪ್ರಜಾಪ್ರಭುತ್ವ” ಎಂದು ಅವರು ಮತ್ತಷ್ಟು ಒತ್ತಿ ಹೇಳಿದರು.

ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರವು “ಪ್ರಚಾರದ ತುಣುಕು” ಎಂದು ತಳ್ಳಿಹಾಕಿದ್ದರೂ ಸಹ, ಈ ಹಿಂದೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ನಾಯಕರು ಸಾಕ್ಷ್ಯಚಿತ್ರದ ನಡೆಯನ್ನು ಪ್ರಶ್ನಿಸಿದ್ದರು. ಕಾನೂನು ಸಚಿವ ಕಿರಣ್ ರಿಜಿಜು ಭಾನುವಾರ ಇದನ್ನು “ದುರುದ್ದೇಶಪೂರಿತ” ಎಂದು ಟ್ಯಾಗ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...