Homeಮುಖಪುಟಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

- Advertisement -
- Advertisement -

ಸುಮಾರು ಎರಡು ದಶಕಗಳ ಹಿಂದೆ ಗುಜರಾತ್‌ನಲ್ಲಿ ನಡೆದ ಗಲಭೆಗಳ ಕುರಿತು ಬಿಬಿಸಿಯ ಎರಡು ಭಾಗಗಳ ಸಾಕ್ಷ್ಯಚಿತ್ರ ಸಿದ್ದಗೊಳಿಸಿದೆ. ಇದು ಅಂದಿನ ನರೇಂದ್ರ ಮೋದಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕ್ರಮವನ್ನು ಟೀಕಿಸಿದೆ. ಹಾಗಾಗಿ ಇದೀಗ ಕೇಂದ್ರ ಸರ್ಕಾರ ಈ ಸಾಕ್ಷ್ಯ ಚಿತ್ರವನ್ನು ನಿರ್ಭಂಧಿಸಿದೆ. ಸರ್ಕಾರದ ಈ ಕ್ರಮವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕರೊಂದಿಗೆ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಸೇರಿಕೊಂಡಿದ್ದಾರೆ.

ಭಾನುವಾರ ನಡೆದ  ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿರುವ “ಗಾಂಧಿ ಗೋಡ್ಸೆ: ಏಕ್ ಯುದ್ಧ್” ಚಲನಚಿತ್ರವನ್ನು ನಿಷೇಧಿಸುವಂತೆ ಕೋರಿದರು. ಇದೇ ವೇಳೆ, “ಕಳೆದ ವಾರ ಯೂಟ್ಯೂಬ್ ಮತ್ತು ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ “ಇಂಡಿಯಾ: ದಿ ಮೋದಿ ಕ್ವೆಶ್ಶನ್”  ಎನ್ನುವ ಬಿಬಿಸಿಯವರು ತಯಾರಿಸಿದ ಸಾಕ್ಷ್ಯಚಿತ್ರ ಬಗ್ಗೆ ಚರ್ಚೆಯಾಗತ್ತಿದೆ. ಸಾಕ್ಷ್ಯಚಿತ್ರದ ಮೊದಲ ಭಾಗವು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ಈ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ನಿರ್ಬಂಧಿಸುವ ಕ್ರಮಕ್ಕೆ ಪ್ರಯತ್ನಿಸಿದರು” ಎಂದರು.

ಇದನ್ನೂ ಓದಿ: ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

“ಗುಜರಾತ್ ಗಲಭೆ ನಡೆದಾಗ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿಯವರ ಕುರಿತು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಏನೇನು ಚರ್ಚೆಗಳು ನಡೆದಿವೆ ಎನ್ನುವ ಬಗ್ಗೆ ನೀವು ನೋಡುತ್ತಿದ್ದೀರಿ. ಮೋದಿ ಸರ್ಕಾರವು ವಸಾಹತುಶಾಹಿ ಕಾಲಕ್ಕೆ ಸಂಬಂಧಿಸಿದ ಕಾನೂನಿನ ಆಧಾರದ ಮೇಲೆ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದೆ” ಎಂದು ಲೋಕಸಭಾ ಸಂಸದರು ಕಾರ್ಯಕ್ರಮವೊಂದರಲ್ಲಿ ಹೇಳುತ್ತಿರುವುದು ಕೇಳಿಬರುತ್ತಿದೆ. ”ಗಲಭೆ ನಡೆದಾಗ ನೀವು ಮುಖ್ಯಮಂತ್ರಿಯಾಗಿರಲಿಲ್ಲವೇ..? ಬಿಲ್ಕಿಸ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ… ಕಾಂಗ್ರೆಸ್ ಸಂಸದರ ಹತ್ಯೆ” ಎಂದು ಎಹ್ಸಾನ್ ಜಾಫ್ರಿಯನ್ನು ಉಲ್ಲೇಖಿಸಿ ಓವೈಸಿ ಹೇಳಿದ್ದಾರೆ.

“ಇದೀಗ ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯ ಮೇಲೆ ಚಲನಚಿತ್ರವನ್ನು ನಿರ್ಮಿಸಲಾಗುತ್ತಿದೆ. ಭಾರತದ ಪ್ರಧಾನಿ ಆ ಚಲನಚಿತ್ರವನ್ನು ನಿಷೇಧಿಸುತ್ತಾರೆಯೇ? ಚಿತ್ರದಲ್ಲಿ ಗಾಂಧಿಯನ್ನು ಏಕೆ ಕೊಲ್ಲಲಾಯಿತು  ಎಂಬುದರ ಕುರಿತು ಮಾತನಾಡುತ್ತದೆ. ಮತ್ತೊಂದೆಡೆ ಬಿಬಿಸಿ ಪಿಎಂ ಮೋದಿ ಬಗ್ಗೆ ತೋರಿಸಿದಾಗ ಅದು ಸಮಸ್ಯೆಯಾಗಿ ಕಾಣುತ್ತದೆ. ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ ಗಾಂಧಿಗಿಂತ ನರೇಂದ್ರ ಮೋದಿ ದೊಡ್ಡವನಲ್ಲ” ಎಂದು ಓವೈಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.

“ಏಕೆ ಈ ಪಕ್ಷಪಾತ? ಬಿಜೆಪಿ ಸಂಸದರು ಗಾಂಧಿಯನ್ನು ಕೊಂದ ಗೋಡ್ಸೆಯನ್ನು ಹೊಗಳಲಿಲ್ಲವೇ? ಯಾವ ರೀತಿಯ ಭಾರತವನ್ನು ರಚಿಸಲಾಗುತ್ತಿದೆ. ಜಿ-20 ಪೋಸ್ಟರ್‌ಗಳಲ್ಲಿ  ಭಾರತವನ್ನು ಪ್ರಜಾಪ್ರಭುತ್ವ ಎಂದು ಅನುಮೋದಿಸಲಾಗುತ್ತಿದೆ ಆದರೆ ಯೂಟ್ಯೂಬ್‌ನಲ್ಲಿ ಚಿತ್ರಗಳನ್ನು ನಿಷೇಧಿಸುವ ಕ್ರಮ ಅನುಸರಿಸುತ್ತಿದೆ. ಇದೆಂತಹ ಪ್ರಜಾಪ್ರಭುತ್ವ” ಎಂದು ಅವರು ಮತ್ತಷ್ಟು ಒತ್ತಿ ಹೇಳಿದರು.

ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರವು “ಪ್ರಚಾರದ ತುಣುಕು” ಎಂದು ತಳ್ಳಿಹಾಕಿದ್ದರೂ ಸಹ, ಈ ಹಿಂದೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ನಾಯಕರು ಸಾಕ್ಷ್ಯಚಿತ್ರದ ನಡೆಯನ್ನು ಪ್ರಶ್ನಿಸಿದ್ದರು. ಕಾನೂನು ಸಚಿವ ಕಿರಣ್ ರಿಜಿಜು ಭಾನುವಾರ ಇದನ್ನು “ದುರುದ್ದೇಶಪೂರಿತ” ಎಂದು ಟ್ಯಾಗ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...