Homeಮುಖಪುಟಲಡಾಖ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ: '3 ಈಡಿಯಟ್ಸ್' ಚಿತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿಯಿಂದ ಪ್ರಧಾನಿಗೆ ಮನವಿ

ಲಡಾಖ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ: ‘3 ಈಡಿಯಟ್ಸ್’ ಚಿತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿಯಿಂದ ಪ್ರಧಾನಿಗೆ ಮನವಿ

- Advertisement -
- Advertisement -

ಸೋನಮ್ ವಾಂಗ್ಚುಕ್, ಲಡಾಖ್‌ನ ಸಮಾಜ ಸುಧಾರಕರು, ಅವರ ಜೀವನ ಕಥೆಯು ಬಾಲಿವುಡ್ ಚಲನಚಿತ್ರ ‘3 ಈಡಿಯಟ್ಸ್’ಗೆ ಸ್ಫೂರ್ತಿ ನೀಡಿತು. ಕೇಂದ್ರಾಡಳಿತ ಪ್ರದೇಶದಲ್ಲಿನ ಸುಮಾರು 2/3 ರಷ್ಟು ಹಿಮನದಿಗಳು ಅಳಿವಿನಂಚಿನಲ್ಲಿವೆ ಎಂದು ಅಧ್ಯಯನಗಳು ಸೂಚಿಸಿವೆ. ಹಾಗಾಗಿ ಲಡಾಖ್‌ನ ಸುರಕ್ಷತೆ ಮತ್ತು ರಕ್ಷಣೆಯ ಬಗ್ಗೆ ಗಮನಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋನಮ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಭಾನುವಾರ ಎಎನ್‌ಐ ಜೊತೆ ಮಾತನಾಡಿದ ಸೋನಮ್ ವಾಂಗ್‌ಚುಕ್, “ಇದೇ ರೀತಿಯ ಅಜಾಗರೂಕತೆ ಮುಂದುವರಿದರೆ ಮತ್ತು ಲಡಾಖ್‌ಗೆ ಕೈಗಾರಿಕೆಗಳಿಂದ ರಕ್ಷಣೆ ನೀಡದಿದ್ದರೆ, ಇಲ್ಲಿನ ಹಿಮನದಿಗಳು ಅಳಿದುಹೋಗುತ್ತವೆ. ಹೀಗಾಗಿ ಭಾರತ ಮತ್ತು ಅದರ ನೆರೆಹೊರೆಯ ದೇಶಗಳಿಗೆ ನೀರಿನ ಕೊರತೆ ಉಂಟಾಗಿ ಅಗಾಧವಾದ ಸಮಸ್ಯೆಗಳನ್ನು ಸೃಷ್ಟಿಸುತ್ತದೆ” ಎಂದು ಹೇಳಿದರು.

“ಕಾಶ್ಮೀರ ವಿಶ್ವವಿದ್ಯಾನಿಲಯ ಮತ್ತು ಇತರ ಸಂಶೋಧನಾ ಸಂಸ್ಥೆಗಳ ಅಧ್ಯಯನಗಳ ಪ್ರಕಾರ ಲೇಹ್-ಲಡಾಖ್‌ನಲ್ಲಿರುವ ಹಿಮನದಿಗಳ ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ ಅದರ 2/3 ಭಾಗ ಅಳಿದುಹೋಗುತ್ತವೆ ಎಂದು ಹೇಳಿವೆ. ಕಾಶ್ಮೀರ ವಿಶ್ವವಿದ್ಯಾನಿಲಯದ ಅಧ್ಯಯನವು ಹೆದ್ದಾರಿಗಳು ಮತ್ತು ಮಾನವ ಚಟುವಟಿಕೆಗಳಿಂದ ಆವೃತವಾಗಿರುವ ಹಿಮನದಿಗಳು ತುಲನಾತ್ಮಕವಾಗಿ ವೇಗವಾಗಿ ಕರಗುತ್ತಿವೆ ಎಂದು ಕಂಡುಹಿಡಿದಿದೆ” ಎಂದು ವಾಂಗ್ಚುಕ್ ಹೇಳಿದರು.

ಈ ಹವಾಮಾನ ಬದಲಾವಣೆಗೆ ಅಮೆರಿಕ ಮತ್ತು ಯುರೋಪ್‌ನ ಜಾಗತಿಕ ತಾಪಮಾನ ಮಾತ್ರ ಕಾರಣವಲ್ಲ, ಆದರೆ ಸ್ಥಳೀಯ ಕಾರ್ಖಾನೆಗಳ ಹೊರಸೂಸುವಿಕೆಯೂ ಕೂಡ ಇದಕ್ಕೆ ಸಮಾನವಾಗಿ ಕಾರಣವಾಗಿದೆ. ಲಡಾಖ್‌ನಂತಹ ಪ್ರದೇಶಗಳಲ್ಲಿ ಕನಿಷ್ಠ ಮಾನವ ಚಟುವಟಿಕೆಗಳು ಇರಬೇಕು ಇದರಿಂದ ಹಿಮನದಿಗಳು ಉಳಿಯಬಹುದು” ಎಂದರು.

“ಈ ಪ್ರದೇಶದಲ್ಲಿ ಸುಸ್ಥಿರ ಅಭಿವೃದ್ಧಿಯನ್ನು ಅಳವಡಿಸಿಕೊಳ್ಳುವ ಅಗತ್ಯತೆ ಇದೆ ಎಂದು ಒತ್ತಿಹೇಳುತ್ತಾ, ಲಡಾಖ್ ಮತ್ತು ಇತರ ಹಿಮಾಲಯ ಪ್ರದೇಶಗಳನ್ನು “ಕೈಗಾರಿಕಾ ಶೋಷಣೆ” ಯಿಂದ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು. ಇದು ಜನರ ಜೀವನ ಮತ್ತು ಉದ್ಯೋಗವನ್ನು ರಕ್ಷಿಸಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

“ಈ ಕೈಗಾರಿಕಾ ಶೋಷಣೆಯಿಂದ ಲಡಾಖ್ ಮತ್ತು ಇತರ ಹಿಮಾಲಯ ಪ್ರದೇಶಗಳಿಗೆ ರಕ್ಷಣೆ ನೀಡುವಂತೆ ಪ್ರಧಾನಿ ಮೋದಿಯವರಿಗೆ ನನ್ನ ಮನವಿಯಾಗಿದೆ ಏಕೆಂದರೆ ಇದು ಜನರ ಜೀವನ ಮತ್ತು ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ರಕ್ಷಿಸುತ್ತದೆ. ಆದರೆ, ಸರ್ಕಾರದ ಜೊತೆಗೆ ಜನರು ಸಹಕರಿಸಬೇಕು. ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ವಹಿಸಿ ಮತ್ತು ಅದನ್ನು ತಗ್ಗಿಸುವ ಕ್ರಮಗಳನ್ನು ಸರ್ಕಾರ ನೋಡಿಕೊಳ್ಳಬೇಕು” ಎಂದು ಹೇಳಿದರು.

ವಾಂಗ್‌ಚುಕ್ ಅವರು 13 ನಿಮಿಷಗಳ ಸುದೀರ್ಘ ವೀಡಿಯೊವನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಅವರು ಲಡಾಖ್‌ನ “ಪರಿಸರ ಸೂಕ್ಷ್ಮ” ಪ್ರದೇಶವನ್ನು ರಕ್ಷಿಸಲು ತುರ್ತಾಗಿ ಸಹಾಯ ಮಾಡಲು ದೇಶದ ಮತ್ತು ಪ್ರಪಂಚದ ಜನರಿಗೆ ಮನವಿ ಮಾಡಿದ್ದಾರೆ. ಪರಿಸರ ವ್ಯವಸ್ಥೆಯ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಮತ್ತು ರಕ್ಷಿಸಲು ಅವರು ಪ್ರಧಾನಿ ಮೋದಿಯವರಿಗೆ ಭಾರತೀಯ ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಹೈಲೈಟ್ ಮಾಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿದ್ದು, “ಲಡಾಖ್‌ನಲ್ಲಿ ಎಲ್ಲವೂ ಚೆನ್ನಾಗಿಲ್ಲ! ನನ್ನ ಇತ್ತೀಚಿನ ವೀಡಿಯೊದಲ್ಲಿ ನಾನು @narendramodi ಜೀ ಅವರಿಗೆ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡುತ್ತಿದ್ದೇನೆ. ಹಾಳಾಗುತ್ತಿರುವ ಲಡಾಕ್ ಪ್ರದೇಶಕ್ಕೆ ರಕ್ಷಣೆ ನೀಡಿ. ಸರ್ಕಾರ ಮತ್ತು ಪ್ರಪಂಚದ ಗಮನ ಸೆಳೆಯಲು ನಾನು 26 ಜನವರಿಯಿಂದ 5 ದಿನ ಖರ್ಡೊಂಗ್ಲಾ ಪಾಸ್‌ನಲ್ಲಿ 18000 ಅಡಿ -40 ಡಿಗ್ರಿ ಸೆಲ್ಸಿಯಸ್‌ ಹವಾಮಾನದಲ್ಲಿ ಉಪವಾಸ ಕುಳಿತುಕೊಳ್ಳಲು ನಿರ್ಧರಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ವಾಂಗ್‌ಚುಕ್ ಎಎನ್‌ಐ ಜೊತೆ ಮಾತನಾಡುತ್ತಾ, “ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ ಮತ್ತು ಜನರಿಗೆ ನಾನು ಸಂದೇಶವನ್ನು ತಲುಪಿಸಬೇಕೆಂದು ಬಯಸುತ್ತಿದ್ದೇನೆ ಅದಕ್ಕಾಗಿ, ಖರ್ಡೊಂಗ್ಲಾ ಪಾಸ್‌ನಲ್ಲಿ ಐದು ದಿನಗಳ ಕಾಲ ಉಪವಾಸ ಕುಳಿತುಕೊಳ್ಳುತ್ತೇನೆ” ಎಂದು ಹೇಳಿದರು.

“ನಾವು ಭೂಮಿಗೆ ಇಂತಹ ಅಪಾಯಗಳನ್ನು ಮಾಡುವುದನ್ನು ಮುಂದುವರಿಸಿದರೆ ಈ ಹಿಮನದಿಗಳು ಇನ್ನು ಮುಂದೆ ಬದುಕುವುದಿಲ್ಲ. ಈ ನನ್ನ ಸಂದೇಶವನ್ನು ನೀಡಲು ನಾನು ಮೈನಸ್ 40 ಡಿಗ್ರಿ ತಾಪಮಾನದಲ್ಲಿ ಖಾರ್ಡೊಂಗ್ಲಾ ಪಾಸ್‌ನಲ್ಲಿ 5 ದಿನಗಳ ದೀರ್ಘ ಉಪವಾಸವನ್ನು ನಡೆಸುತ್ತೇನೆ” ಎಂದು ಅವರು ANI ಗೆ ತಿಳಿಸಿದ್ದಾರೆ.

ವಾಂಗ್‌ಚುಕ್ ಅವರು ತಮ್ಮ ಮತ್ತೊಂದು ಟ್ವೀಟ್‌ನಲ್ಲಿ “ನನ್ನ ಈ ಉಪವಾಸದ ಸಾಂಕೇತಿಕ ಸತ್ಯಾಗ್ರಹ 18,000 ಅಡಿಯಲ್ಲಿರುವ ಖಾರ್ಡೊಂಗ್ಲಾ ನಲ್ಲಿ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ನಲ್ಲಿ ಜನವರಿ 26 ರಿಂದ ಪ್ರಾರಂಭವಾಗಲಿದೆ. ನನ್ನ ಛಾವಣಿಯ ಮೇಲೆ ಲಡಾಕ್ ಅನ್ನು ರಕ್ಷಿಸಿ ಎಂದು 20 ಅನುಭವಗಳು ಇರಲಿವೆ” ಎಂದು ತಿಳಿಸಿದ್ದಾರೆ.

ವಾಂಗ್ಚುಕ್ ಅವರು 1966 ರಲ್ಲಿ ಜನಿಸಿದ್ದು, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್, ಲಡಾಖ್ (HIAL) ನ ನಿರ್ದೇಶಕರರಾಗಿದ್ದಾರೆ. 2018 ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನರಾಗಿದ್ದರು.

2009ರಲ್ಲಿ ಬಮದಂತಹ ‘3 ಈಡಿಯಟ್ಸ್’ ಅಮೀರ್ ಖಾನ್ ಅವರ ಚಲನಚಿತ್ರದಲ್ಲಿ ಫುನ್ಸುಖ್ ವಾಂಗ್ಡು ಎಂಬ ಕಾಲ್ಪನಿಕ ಪಾತ್ರಕ್ಕೆ ವಾಂಗ್ಚುಕ್ ಅವರ ವ್ಯಕ್ತಿತ್ವವೇ ಸ್ಪೂರ್ತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...