Homeಕರ್ನಾಟಕಗ್ರಂಥಾಲಯ, ಶೌಚಾಲಯ, ನೀರಿನ ವ್ಯವಸ್ಥೆಯಿಲ್ಲದ ಬೆಂಗಳೂರು ನಗರ ವಿವಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಗ್ರಂಥಾಲಯ, ಶೌಚಾಲಯ, ನೀರಿನ ವ್ಯವಸ್ಥೆಯಿಲ್ಲದ ಬೆಂಗಳೂರು ನಗರ ವಿವಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮರು-ಮೌಲ್ಯಮಾಪನ ಮಾಡಲು ಒಂದು ವಿಷಯಕ್ಕೆ 3 ಸಾವಿರ ರೂಗಳನ್ನು ಪಾವತಿ ಮಾಡಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ

- Advertisement -
- Advertisement -

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಾರಂಭವಾಗಿ ಐದು ವರ್ಷಗಳು ಕಳೆದರೂ ಸರಿಯಾದ ಶೌಚಾಲಯ, ಗ್ರಂಥಾಲಯ, ನೀರಿನ ವ್ಯವಸ್ಥೆ ಇಲ್ಲದ ಕಾಲೇಜಿನ ಅವ್ಯವಸ್ಥೆಯಿಂದ ಬೇಸತ್ತ ನೂರಾರು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಹಳೆಯ ಕಟ್ಟಡವನ್ನು ಒಂದೇ ಬಾರಿಗೆ ನವೀಕರಣ ಮಾಡುತ್ತಿದ್ದು, ಇದರಿಂದಾಗಿ ಸರಿಯಾದ ತರಗತಿಗಳು ನಡೆಯುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ ಸುಮಾರು 800 ವಿದ್ಯಾರ್ಥಿಗಳಿರುವ ಕ್ಯಾಂಪಸ್‌ನಲ್ಲಿ ಸರಿಯಾದ ಶೌಚಾಲಯಗಳು ಕೂಡಾ ಇಲ್ಲ, ವಿದ್ಯಾರ್ಥಿನಿಯರು ಶೌಚಾಲಯಕ್ಕಾಗಿ ಮೆಟ್ರೋ ಸ್ಟೇಷನ್‌ವರೆಗೂ ಹೋಗಬೇಕಾಗಿದೆ ಎಂದು ಪ್ರತಿಭಟನೆ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆ ಎಂದು ಎಂದು ಹಣ ಪಡೆದುಕೊಂಡು ಯಾವುದೆ ಕಾರ್ಯಕ್ರಮಗಳನ್ನು ಕೂಡಾ ನಡೆಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೊತೆಗೆ ಆಟದ ಸಾಮಾಗ್ರಿಗಳು, ಪ್ರಯೋಗಾಲಯದ ಫೀಸ್‌ಗಳನ್ನು ಕಟ್ಟಿಸಿಕೊಂಡಿದ್ದರೂ ಅವುಗಳನ್ನು ಕೂಡಾ ನೀಡುತ್ತಿಲ್ಲ ಎಂದು ಪ್ರತಿಭಟನಾ ವಿದ್ಯಾರ್ಥಿಗಳು ಹೇಳಿದ್ದಾರೆ.

ಗ್ರಂಥಾಲಯವಿದ ಫೀಸ್‌ ಕಟ್ಟಿಸಿಕೊಂಡರೂ ತಮ್ಮ ಅಧ್ಯಯನಕ್ಕೆ ಬೇಕಾದ ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಸೆಮಿಸ್ಟರ್‌‌ಗಳು ಮುಗಿದು ತುಂಬಾ ಸಮಯವಾದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಹೇಳಿದ್ದಾರೆ. ಇಷ್ಟೆ ಅಲ್ಲದೆ, ಪ್ರತಿ ವರ್ಷ ಐಡಿ ಕಾಡ್‌ಗಳಿಗೆ ಹಣ ಪಡೆದು ಮೊದಲನೇ ವರ್ಷದ ಐಡಿ ಕಾರ್ಡ್‌ಗಳನ್ನೇ ಉಪಯೋಗಿಸಲು ಹೇಳುತ್ತಿದ್ದಾರೆ. ಹೊಸದಾಗಿ ಐಡಿ ಕಾರ್ಡ್‌ಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್‌ ನಾಯಕ ವೇಣುಗೋಪಾಲ್ ಮೌರ್ಯ,“ವಿದ್ಯಾರ್ಥಿಗಳು ಒಂದು ವಿಷಯದ ಪತ್ರಿಕೆಯನ್ನು ಮರು-ಮೌಲ್ಯಮಾಪನಕ್ಕೆ ಅರ್ಜಿ ಹಾಕಬೇಕು ಅಂದರೆ 3 ಸಾವಿರ ರೂಗಳನ್ನು ಪಾವತಿ ಮಾಡಬೇಕಾಗುತ್ತದೆ. ಬೇರೆ ವಿಶ್ವವಿದ್ಯಾಲಯದಲ್ಲಿ ಸಾವಿರ ರೂಗಳಷ್ಟೆ ಇರುತ್ತದೆ. ಬಡ-ಮಧ್ಯಮ ವರ್ಗದ ವಿದ್ಯಾರ್ಥಿಗಳು ಅವುಗಳನ್ನು ಪಾವತಿ ಮಾಡಲು ಹೇಗೆ ಸಾಧ್ಯ? ಇವರೇನು ದಂಧೆ ನಡೆಸುತ್ತಿದ್ದಾರೆಯೆ” ಎಂದು ಪ್ರಶ್ನಿಸಿದ್ದಾರೆ.

“ಕೋಟ್ಯಾಂತರ ರೂಗಳನ್ನು ಖರ್ಚು ಮಾಡಿಸಿ ಕಾಲೇಜಿಗೆ ಸುಣ್ಣ ಬಣ್ಣ ಬಳಿಯುತ್ತಾರೆ. ಆದರೆ ವಿದ್ಯಾರ್ಥಿಗಳಿಗೆ ಕುಡಿಯಲು ನೀರು ಇಲ್ಲ. ಸರಿಯಾದ ಶೌಚಾಲಯವಿಲ್ಲ. ಇಡೀ ಕಟ್ಟಡಗಳನ್ನು ಒಂದೇ ಬಾರಿಗೆ ನವೀಕರಣ ಮಾಡುತ್ತಿರುವುದರಿಂದ ತರಗತಿ ನಡೆಸಲು ಸರಿಯಾದ ಕೋಣೆಗಳಿಲ್ಲದೆ, ದೂರದ ಹಳ್ಳಿಗಳ ಕಡೆಯಿಂದ ಬಂದ ವಿದ್ಯಾರ್ಥಿಗಳ ಸಂಜೆವೆರೆಗೆ ಕುಳಿತು ವಾಪಾಸು ಮನೆಗೆ ತೆರಳುತ್ತಿದ್ದಾರೆ. ಇದು ಸುಮಾರು ಆರು ತಿಂಗಳಿನಿಂದ ನಡೆಯುತ್ತಿದೆ” ಎಂದು ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಫೇಲ್ ಮಾಡಿದ್ದಾರೆ. ಪರೀಕ್ಷೆಯ ಮೌಲ್ಯಮಾಪನವನ್ನು ಕಳಪೆ ಮಟ್ಟದಲ್ಲಿ ಮಾಡಿದ್ದಲ್ಲದೆ, ಪೇಪರ್‌ಗಳ ಫೋಟೋ ಕಾಪಿ ಕೇಳಿದರೆ ಅವುಗಳನ್ನು ಕೂಡಾ ನೀಡುತ್ತಿಲ್ಲ. ಪತ್ರಿಕೆಗಳ ಫೋಟೋ ಕಾಪಿ ವಿದ್ಯಾರ್ಥಿಗಳ ಹಕ್ಕಾಗಿದ್ದು, ಅದನ್ನು ನೀಡಬೇಕು ಎಂದು ನ್ಯಾಯಾಲಯದ ಆದೇಶವೇ ಇದೆ. ಆದರೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಅವುಗಳನ್ನು ನೀಡದೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಒಟ್ಟಾರೆಯಾಗಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ ನೀಡುವುದು ಬಿಟ್ಟು ವಿಶ್ವವಿದ್ಯಾಲಯದ ದುಡ್ಡನ್ನು ಉಪ ಕುಲಪತಿ ಮತ್ತು ರಿಜಿಸ್ಟ್ರಾರ್‌‌ ಕಬಳಿಕೆ ಮಾಡುತ್ತಿದ್ದಾರೆ” ಎಂದು ವೇಣುಗೋಪಾಲ್ ಅವರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌‌ ಶ್ರೀಧರ್‌ ಸಿ.ಎನ್‌., ಕೆಲವೊಂದು ಸಣ್ಣ ಪುಟ್ಟ ಸಮಸ್ಯೆಗಳು ಬಿಟ್ಟರೆ ಯಾವುದೆ ಸಮಸ್ಯೆ ವಿಶ್ವವಿದ್ಯಾಲಯದಲ್ಲಿ ಇಲ್ಲ. ಪ್ರತಿಭಟನೆಗಳು ಹೊರಗಿನ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶ್ರೀಧರ್‌ ಅವರು,“ಸುಮಾರು 160 ವರ್ಷಗಳಷ್ಟು ಹಳೆಯ ಕಟ್ಟಡಗಳು ಆಗಿರುವುದರಿಂದ ವಿಶ್ವವಿದ್ಯಾಲಯದ ನವೀಕರಣ ಕೆಲಸ ನಡೆಯುತ್ತಿದೆ. ಗಣಿತ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಎಲ್ಲವೂ ಸರಿಯಾಗಿದ್ದು, ಈಗ ಕನ್ನಡ, ಇತಿಹಾಸ ಮತ್ತು ಭೌತಶಾಸ್ತ್ರ ವಿಭಾಗಗಳನ್ನು ನವೀಕರಣಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ಒಟ್ಟು ಆರು ತರಗತಿಗಳು ಮತ್ತು ಎರಡು ಶೌಚಾಲಯದಗಳಲ್ಲಿ ಕೆಲಸ ನಡೆಯುತ್ತಿದೆ. ಹೀಗಾಗಿ ಎರಡು ಮೂರು ಕ್ಲಾಸ್ ಮತ್ತು ಎರಡು ಶೌಚಾಲಯಗಳಷ್ಟೆ ಕೊರತೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಒಟ್ಟು 34 ಶೌಚಾಲಯ ಕೋಣೆಗಳಿವೆ. ಎಲ್ಲವೂ ಹೊಸದಾಗಿ ನಿರ್ಮಾಣ ಮಾಡಿರುವಂತದ್ದು” ಎಂದು ಹೇಳಿದ್ದಾರೆ.

“ಸಾಂಸ್ಕೃತಿಕ ಚಟುವಟಿಕೆಗಳು ಪರೀಕ್ಷೆಗಳು ಮುಗಿದ ನಂತರ ಪ್ರಾರಂಭವಾಗುತ್ತದೆ. ಅವರು ಹೇಳಿದ ಹಾಗೆ ಪರೀಕ್ಷೆಗಳು ಇರಬೇಕಾದ್ರೆ ಚಟುವಟಿಕೆಗಳನ್ನು ನಡೆಸಲು ಆಗುವುದಿಲ್ಲ. ಪ್ರಯೋಗಾಲಯಗಳ ಸಾಮಾಗ್ರಿಗಳು ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ ಈಗಾಗಲೆ ಬಂದಿದೆ. ಕ್ರಿಕೆಟ್‌ ಸ್ಟೇಡಿಯಂ ಇರುವ ಜಾಗದಲ್ಲಿ ಕಾಂಪ್ಲೆಕ್ಸ್‌ ನಿರ್ಮಾಣವಾಗುತ್ತಿದೆ ಹೀಗಾಗಿ ಕ್ರೀಡಾ ಸಾಮಾಗ್ರಿಗಳನ್ನು ಖರೀದಿಸಿಲ್ಲ. ಅಲ್ಲದೆ ವಿದ್ಯಾರ್ಥಿಗಳಿಗೆ ಬೇಕಾಗಿರುವ ಗ್ರಂಥಾಲಯದಲ್ಲಿ ಸುಮಾರು 40 ಸಾವಿರ ಪುಸ್ತಕಗಳಿವೆ” ಎಂದು ಅವರು ಹೇಳಿದ್ದಾರೆ.

“ಪತ್ರಿಕೆಗಳ ಮರು ಮೌಲ್ಯ ಮಾಪನದ ವಿಚಾರವಾಗಿ ಸಮಿತಿ ಮಾಡಿ 3 ಸಾವಿರದಿಂದ 1,500 ರೂ.ಗಳಿಗೆ ಇಳಿಸಿದ್ದೇವೆ. ಅದರ ಬಗ್ಗೆ ಇನ್ನಷ್ಟೆ ಅಧಿಸೂಚನೆ ಹೊರಡಿಸಬೇಕಿದೆ. ಉಳಿದಂತೆ ಪತ್ರಿಕೆಗಳ ಫೋಟೊ ಕಾಪಿ ನೀಡುವ ಬಗ್ಗೆ ನಮ್ಮ ವಿಶ್ವವಿದ್ಯಾಲಯದ ನಿಯಮಗಳಲ್ಲಿ ಅದಕ್ಕೆ ಅವಕಾಶವಿಲ್ಲ. ಜೊತೆಗೆ ಒಂದು ಪತ್ರಿಕೆ ಕೊಡಬೇಕು ಅಂದರೆ, ಒಂದು ಶೀಟ್‌ನಲ್ಲಿ 12 ಜನರ ಅಂಕಗಳು ಇರುತ್ತವೆ, ಹಾಗಾಗಿ ಅದನ್ನು ನೀಡಲು ಸಾಧ್ಯವಿಲ್ಲ” ಎಂದು ಶ್ರೀಧರ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾರವಾರ ಮೆಡಿಕಲ್ ಕಾಲೇಜು; ಆತಂಕದಲ್ಲಿ ದಲಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...