Homeಕರ್ನಾಟಕಗ್ರಂಥಾಲಯ, ಶೌಚಾಲಯ, ನೀರಿನ ವ್ಯವಸ್ಥೆಯಿಲ್ಲದ ಬೆಂಗಳೂರು ನಗರ ವಿವಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಗ್ರಂಥಾಲಯ, ಶೌಚಾಲಯ, ನೀರಿನ ವ್ಯವಸ್ಥೆಯಿಲ್ಲದ ಬೆಂಗಳೂರು ನಗರ ವಿವಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮರು-ಮೌಲ್ಯಮಾಪನ ಮಾಡಲು ಒಂದು ವಿಷಯಕ್ಕೆ 3 ಸಾವಿರ ರೂಗಳನ್ನು ಪಾವತಿ ಮಾಡಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ

- Advertisement -
- Advertisement -

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಾರಂಭವಾಗಿ ಐದು ವರ್ಷಗಳು ಕಳೆದರೂ ಸರಿಯಾದ ಶೌಚಾಲಯ, ಗ್ರಂಥಾಲಯ, ನೀರಿನ ವ್ಯವಸ್ಥೆ ಇಲ್ಲದ ಕಾಲೇಜಿನ ಅವ್ಯವಸ್ಥೆಯಿಂದ ಬೇಸತ್ತ ನೂರಾರು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಹಳೆಯ ಕಟ್ಟಡವನ್ನು ಒಂದೇ ಬಾರಿಗೆ ನವೀಕರಣ ಮಾಡುತ್ತಿದ್ದು, ಇದರಿಂದಾಗಿ ಸರಿಯಾದ ತರಗತಿಗಳು ನಡೆಯುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ ಸುಮಾರು 800 ವಿದ್ಯಾರ್ಥಿಗಳಿರುವ ಕ್ಯಾಂಪಸ್‌ನಲ್ಲಿ ಸರಿಯಾದ ಶೌಚಾಲಯಗಳು ಕೂಡಾ ಇಲ್ಲ, ವಿದ್ಯಾರ್ಥಿನಿಯರು ಶೌಚಾಲಯಕ್ಕಾಗಿ ಮೆಟ್ರೋ ಸ್ಟೇಷನ್‌ವರೆಗೂ ಹೋಗಬೇಕಾಗಿದೆ ಎಂದು ಪ್ರತಿಭಟನೆ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆ ಎಂದು ಎಂದು ಹಣ ಪಡೆದುಕೊಂಡು ಯಾವುದೆ ಕಾರ್ಯಕ್ರಮಗಳನ್ನು ಕೂಡಾ ನಡೆಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಜೊತೆಗೆ ಆಟದ ಸಾಮಾಗ್ರಿಗಳು, ಪ್ರಯೋಗಾಲಯದ ಫೀಸ್‌ಗಳನ್ನು ಕಟ್ಟಿಸಿಕೊಂಡಿದ್ದರೂ ಅವುಗಳನ್ನು ಕೂಡಾ ನೀಡುತ್ತಿಲ್ಲ ಎಂದು ಪ್ರತಿಭಟನಾ ವಿದ್ಯಾರ್ಥಿಗಳು ಹೇಳಿದ್ದಾರೆ.

ಗ್ರಂಥಾಲಯವಿದ ಫೀಸ್‌ ಕಟ್ಟಿಸಿಕೊಂಡರೂ ತಮ್ಮ ಅಧ್ಯಯನಕ್ಕೆ ಬೇಕಾದ ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಸೆಮಿಸ್ಟರ್‌‌ಗಳು ಮುಗಿದು ತುಂಬಾ ಸಮಯವಾದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಹೇಳಿದ್ದಾರೆ. ಇಷ್ಟೆ ಅಲ್ಲದೆ, ಪ್ರತಿ ವರ್ಷ ಐಡಿ ಕಾಡ್‌ಗಳಿಗೆ ಹಣ ಪಡೆದು ಮೊದಲನೇ ವರ್ಷದ ಐಡಿ ಕಾರ್ಡ್‌ಗಳನ್ನೇ ಉಪಯೋಗಿಸಲು ಹೇಳುತ್ತಿದ್ದಾರೆ. ಹೊಸದಾಗಿ ಐಡಿ ಕಾರ್ಡ್‌ಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್‌ ನಾಯಕ ವೇಣುಗೋಪಾಲ್ ಮೌರ್ಯ,“ವಿದ್ಯಾರ್ಥಿಗಳು ಒಂದು ವಿಷಯದ ಪತ್ರಿಕೆಯನ್ನು ಮರು-ಮೌಲ್ಯಮಾಪನಕ್ಕೆ ಅರ್ಜಿ ಹಾಕಬೇಕು ಅಂದರೆ 3 ಸಾವಿರ ರೂಗಳನ್ನು ಪಾವತಿ ಮಾಡಬೇಕಾಗುತ್ತದೆ. ಬೇರೆ ವಿಶ್ವವಿದ್ಯಾಲಯದಲ್ಲಿ ಸಾವಿರ ರೂಗಳಷ್ಟೆ ಇರುತ್ತದೆ. ಬಡ-ಮಧ್ಯಮ ವರ್ಗದ ವಿದ್ಯಾರ್ಥಿಗಳು ಅವುಗಳನ್ನು ಪಾವತಿ ಮಾಡಲು ಹೇಗೆ ಸಾಧ್ಯ? ಇವರೇನು ದಂಧೆ ನಡೆಸುತ್ತಿದ್ದಾರೆಯೆ” ಎಂದು ಪ್ರಶ್ನಿಸಿದ್ದಾರೆ.

“ಕೋಟ್ಯಾಂತರ ರೂಗಳನ್ನು ಖರ್ಚು ಮಾಡಿಸಿ ಕಾಲೇಜಿಗೆ ಸುಣ್ಣ ಬಣ್ಣ ಬಳಿಯುತ್ತಾರೆ. ಆದರೆ ವಿದ್ಯಾರ್ಥಿಗಳಿಗೆ ಕುಡಿಯಲು ನೀರು ಇಲ್ಲ. ಸರಿಯಾದ ಶೌಚಾಲಯವಿಲ್ಲ. ಇಡೀ ಕಟ್ಟಡಗಳನ್ನು ಒಂದೇ ಬಾರಿಗೆ ನವೀಕರಣ ಮಾಡುತ್ತಿರುವುದರಿಂದ ತರಗತಿ ನಡೆಸಲು ಸರಿಯಾದ ಕೋಣೆಗಳಿಲ್ಲದೆ, ದೂರದ ಹಳ್ಳಿಗಳ ಕಡೆಯಿಂದ ಬಂದ ವಿದ್ಯಾರ್ಥಿಗಳ ಸಂಜೆವೆರೆಗೆ ಕುಳಿತು ವಾಪಾಸು ಮನೆಗೆ ತೆರಳುತ್ತಿದ್ದಾರೆ. ಇದು ಸುಮಾರು ಆರು ತಿಂಗಳಿನಿಂದ ನಡೆಯುತ್ತಿದೆ” ಎಂದು ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಫೇಲ್ ಮಾಡಿದ್ದಾರೆ. ಪರೀಕ್ಷೆಯ ಮೌಲ್ಯಮಾಪನವನ್ನು ಕಳಪೆ ಮಟ್ಟದಲ್ಲಿ ಮಾಡಿದ್ದಲ್ಲದೆ, ಪೇಪರ್‌ಗಳ ಫೋಟೋ ಕಾಪಿ ಕೇಳಿದರೆ ಅವುಗಳನ್ನು ಕೂಡಾ ನೀಡುತ್ತಿಲ್ಲ. ಪತ್ರಿಕೆಗಳ ಫೋಟೋ ಕಾಪಿ ವಿದ್ಯಾರ್ಥಿಗಳ ಹಕ್ಕಾಗಿದ್ದು, ಅದನ್ನು ನೀಡಬೇಕು ಎಂದು ನ್ಯಾಯಾಲಯದ ಆದೇಶವೇ ಇದೆ. ಆದರೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಅವುಗಳನ್ನು ನೀಡದೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ. ಒಟ್ಟಾರೆಯಾಗಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ ನೀಡುವುದು ಬಿಟ್ಟು ವಿಶ್ವವಿದ್ಯಾಲಯದ ದುಡ್ಡನ್ನು ಉಪ ಕುಲಪತಿ ಮತ್ತು ರಿಜಿಸ್ಟ್ರಾರ್‌‌ ಕಬಳಿಕೆ ಮಾಡುತ್ತಿದ್ದಾರೆ” ಎಂದು ವೇಣುಗೋಪಾಲ್ ಅವರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌‌ ಶ್ರೀಧರ್‌ ಸಿ.ಎನ್‌., ಕೆಲವೊಂದು ಸಣ್ಣ ಪುಟ್ಟ ಸಮಸ್ಯೆಗಳು ಬಿಟ್ಟರೆ ಯಾವುದೆ ಸಮಸ್ಯೆ ವಿಶ್ವವಿದ್ಯಾಲಯದಲ್ಲಿ ಇಲ್ಲ. ಪ್ರತಿಭಟನೆಗಳು ಹೊರಗಿನ ವ್ಯಕ್ತಿಗಳ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಶ್ರೀಧರ್‌ ಅವರು,“ಸುಮಾರು 160 ವರ್ಷಗಳಷ್ಟು ಹಳೆಯ ಕಟ್ಟಡಗಳು ಆಗಿರುವುದರಿಂದ ವಿಶ್ವವಿದ್ಯಾಲಯದ ನವೀಕರಣ ಕೆಲಸ ನಡೆಯುತ್ತಿದೆ. ಗಣಿತ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಎಲ್ಲವೂ ಸರಿಯಾಗಿದ್ದು, ಈಗ ಕನ್ನಡ, ಇತಿಹಾಸ ಮತ್ತು ಭೌತಶಾಸ್ತ್ರ ವಿಭಾಗಗಳನ್ನು ನವೀಕರಣಕ್ಕೆ ತೆಗೆದುಕೊಂಡಿದ್ದಾರೆ. ಇದೀಗ ಒಟ್ಟು ಆರು ತರಗತಿಗಳು ಮತ್ತು ಎರಡು ಶೌಚಾಲಯದಗಳಲ್ಲಿ ಕೆಲಸ ನಡೆಯುತ್ತಿದೆ. ಹೀಗಾಗಿ ಎರಡು ಮೂರು ಕ್ಲಾಸ್ ಮತ್ತು ಎರಡು ಶೌಚಾಲಯಗಳಷ್ಟೆ ಕೊರತೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಒಟ್ಟು 34 ಶೌಚಾಲಯ ಕೋಣೆಗಳಿವೆ. ಎಲ್ಲವೂ ಹೊಸದಾಗಿ ನಿರ್ಮಾಣ ಮಾಡಿರುವಂತದ್ದು” ಎಂದು ಹೇಳಿದ್ದಾರೆ.

“ಸಾಂಸ್ಕೃತಿಕ ಚಟುವಟಿಕೆಗಳು ಪರೀಕ್ಷೆಗಳು ಮುಗಿದ ನಂತರ ಪ್ರಾರಂಭವಾಗುತ್ತದೆ. ಅವರು ಹೇಳಿದ ಹಾಗೆ ಪರೀಕ್ಷೆಗಳು ಇರಬೇಕಾದ್ರೆ ಚಟುವಟಿಕೆಗಳನ್ನು ನಡೆಸಲು ಆಗುವುದಿಲ್ಲ. ಪ್ರಯೋಗಾಲಯಗಳ ಸಾಮಾಗ್ರಿಗಳು ಮೊದಲನೇ ವರ್ಷದ ವಿದ್ಯಾರ್ಥಿಗಳಿಗೆ ಈಗಾಗಲೆ ಬಂದಿದೆ. ಕ್ರಿಕೆಟ್‌ ಸ್ಟೇಡಿಯಂ ಇರುವ ಜಾಗದಲ್ಲಿ ಕಾಂಪ್ಲೆಕ್ಸ್‌ ನಿರ್ಮಾಣವಾಗುತ್ತಿದೆ ಹೀಗಾಗಿ ಕ್ರೀಡಾ ಸಾಮಾಗ್ರಿಗಳನ್ನು ಖರೀದಿಸಿಲ್ಲ. ಅಲ್ಲದೆ ವಿದ್ಯಾರ್ಥಿಗಳಿಗೆ ಬೇಕಾಗಿರುವ ಗ್ರಂಥಾಲಯದಲ್ಲಿ ಸುಮಾರು 40 ಸಾವಿರ ಪುಸ್ತಕಗಳಿವೆ” ಎಂದು ಅವರು ಹೇಳಿದ್ದಾರೆ.

“ಪತ್ರಿಕೆಗಳ ಮರು ಮೌಲ್ಯ ಮಾಪನದ ವಿಚಾರವಾಗಿ ಸಮಿತಿ ಮಾಡಿ 3 ಸಾವಿರದಿಂದ 1,500 ರೂ.ಗಳಿಗೆ ಇಳಿಸಿದ್ದೇವೆ. ಅದರ ಬಗ್ಗೆ ಇನ್ನಷ್ಟೆ ಅಧಿಸೂಚನೆ ಹೊರಡಿಸಬೇಕಿದೆ. ಉಳಿದಂತೆ ಪತ್ರಿಕೆಗಳ ಫೋಟೊ ಕಾಪಿ ನೀಡುವ ಬಗ್ಗೆ ನಮ್ಮ ವಿಶ್ವವಿದ್ಯಾಲಯದ ನಿಯಮಗಳಲ್ಲಿ ಅದಕ್ಕೆ ಅವಕಾಶವಿಲ್ಲ. ಜೊತೆಗೆ ಒಂದು ಪತ್ರಿಕೆ ಕೊಡಬೇಕು ಅಂದರೆ, ಒಂದು ಶೀಟ್‌ನಲ್ಲಿ 12 ಜನರ ಅಂಕಗಳು ಇರುತ್ತವೆ, ಹಾಗಾಗಿ ಅದನ್ನು ನೀಡಲು ಸಾಧ್ಯವಿಲ್ಲ” ಎಂದು ಶ್ರೀಧರ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾರವಾರ ಮೆಡಿಕಲ್ ಕಾಲೇಜು; ಆತಂಕದಲ್ಲಿ ದಲಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...