HomeUncategorizedಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ದೇವೇಗೌಡರಿಂದ ಪತ್ರ

ಭದ್ರಾವತಿಯ ವಿಶ್ವೇಶ್ವರಯ್ಯ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ದೇವೇಗೌಡರಿಂದ ಪತ್ರ

- Advertisement -
- Advertisement -

ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರ್ಕಾರ ಇದೀಗ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು (ವಿಐಎಸ್ಎಲ್) ಮುಚ್ಚಲು ಆದೇಶ ನೀಡಿದೆ. ಈ ಆದೇಶವನ್ನು ಹಿಂಪಡೆಯುವಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯೊಂದಿಗೆ ಟ್ವೀಟ್ ಮಾಡಿರುವ ಅವರು, “ಭದ್ರಾವತಿಯಲ್ಲಿರುವ ವಿಐಎಸ್ಎಲ್ ಮುಚ್ಚುವ ಆದೇಶವನ್ನು ಹಿಂಪಡೆಯಬೇಕು. ಇದು ಕರ್ನಾಟಕದ ಹೆಮ್ಮೆ. 1996 ರಲ್ಲಿ ನಾನು ಪ್ರಧಾನ ಮಂತ್ರಿಯಾಗಿದ್ದಾಗ VISL ಅನ್ನು SAIL ನೊಂದಿಗೆ ವಿಲೀನಗೊಳಿಸಿದ್ದೇನೆ. ಸಾರ್ವಜನಿಕ ವಲಯದ ನವರತ್ನಗಳ ಕಲ್ಪನೆಯನ್ನೂ ನಾನು ಪರಿಚಯಿಸಿದ್ದೇನೆ. ಹೊಸ ಆಲೋಚನೆಗಳೊಂದಿಗೆ ಸಾರ್ವಜನಿಕ ವಲಯದ ಘಟಕಗಳನ್ನು ಉಳಿಸಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಜ.22ರಂದು ದೇವೆಗೌಡರು, ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ “ಸಾವಿರಾರು ಕುಟುಂಬಗಳ ಬದುಕಿಗೆ ಆಧಾರವಾಗಿರುವ, ತನ್ನದೇಯಾದ ಇತಿಹಾಸ ಹೊಂದಿರುವ ಭದ್ರಾವತಿಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಮುಚ್ಚುವ ಬದಲು ಪುನಶ್ಚೇತನಗೊಳಿಸಲು ಉಕ್ಕು ಸಚಿವಾಲಯ ಹಾಗೂ ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾ ಅಧಿಕಾರಿಗಳಿಗೆ ನಿರ್ದೇಶನ ನೀಡಿ” ಎಂದು ಒತ್ತಾಯಿಸಿದ್ದಾರೆ.

“ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಸಾರ್ವಜನಿಕ ವಲಯದ ಸಂಸ್ಥೆಯಾಗಿದ್ದು, ಅದನ್ನು ದೂರದೃಷ್ಟಿಯುಳ್ಳ ಇಂಜಿನಿಯರ್ ಮತ್ತು ಭಾರತರತ್ನ ಎಂ ವಿಶ್ವೇಶ್ವರಯ್ಯ ಅವರು 1918ರಲ್ಲಿ ಸ್ಥಾಪಿಸಿದ್ದರು. ನಾನು ಪ್ರಧಾನಿಯಾಗಿದ್ದ ಅವಧಿಯಲ್ಲಿ ಇದನ್ನು ಭಾರತೀಯ ಉಕ್ಕು ಪ್ರಾಧಿಕಾರದ ವ್ಯಾಪ್ತಿಗೆ ತಂದು ₹650 ಕೋಟಿ ವೆಚ್ಚದಲ್ಲಿ ಕಾರ್ಖಾನೆಯನ್ನು ಆಧುನೀಕರಣಗೊಳಿಸಲು ಯೋಜಿಸಲಾಗಿತ್ತು. ಆದರೆ, ಅದು ಸಾಕಾರಗೊಳ್ಳಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

“2016ರಲ್ಲಿ ನೀತಿ ಆಯೋಗವು ಹೂಡಿಕೆ ಹಿಂತೆಗೆತಕ್ಕೆ ಶಿಫಾರಸು ಮಾಡಿದರೂ ಫಲಕಾರಿಯಾಗಲಿಲ್ಲ. ನಂತರ ಖಾಸಗೀಕರಣಕ್ಕೆ ಶಿಫಾರಸು ಮಾಡಿತ್ತಾದರೂ ಯಾವುದೇ ಖಾಸಗಿ ಹೂಡಿಕೆದಾರರು ಕಾರ್ಖಾನೆ ಕೊಳ್ಳಲು ಒಲವು ತೋರಲಿಲ್ಲ. ಹಾಗಾಗಿ ಕಾರ್ಖಾನೆ ಸಂಕಷ್ಟಕ್ಕೆ ಸಿಲುಕಿದೆ. ಸುಮಾರು 20,000 ಕುಟುಂಬಗಳ ಬದುಕು ಕಾರ್ಖಾನೆಯನ್ನೇ ಅವಲಂಬಿಸಿರುವುದರಿಂದ ಅದನ್ನು ಮುಚ್ಚುವ ನಿರ್ಧಾರ ಸರಿಯಲ್ಲ. ಕಾರ್ಮಿಕರ ಜೀವನ ಅತಂತ್ರವಾಗುವುದರಿಂದ ಈ ನಿರ್ಧಾರವನ್ನು ಕೈಬಿಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಅತ್ಯುತ್ತಮ ಗುಣಮಟ್ಟದ ಉಕ್ಕು ತಯಾರಿಸುವ ಸಾಮರ್ಥ್ಯವನ್ನು ವಿಐಎಸ್‌ಎಲ್‌ ಹೊಂದಿದ್ದು, ಹಿಂದೆ ಅಣುಶಕ್ತಿ ಕೇಂದ್ರಗಳು, ರೈಲ್ವೆ ಇಲಾಖೆ, ಆಟೋಮೊಬೈಲ್‌ ಕ್ಷೇತ್ರಕ್ಕೆ ಗುಣಮಟ್ಟದ ಉಕ್ಕಿನ ಉತ್ಪನ್ನಗಳನ್ನು ಒದಗಿಸಿದೆ. ಈಗ ಆತ್ಮನಿರ್ಭರ ಭಾರತ ಯೋಜನೆ ಭಾಗವಾಗಿ ರಕ್ಷಣಾ ಕ್ಷೇತ್ರ, ಪರಮಾಣು ವಲಯ, ಆಟೋಮೊಬೈಲ್‌ ಹಾಗೂ ರೈಲ್ವೆ ಉಪಕರಣಗಳಿಗೆ ಪೂರಕ ಉತ್ಪನ್ನಗಳನ್ನು ಪೂರೈಕೆ ಮಾಡಲು ಸಹಾಕಾರಿಯಾಗಲಿದೆ. ಹೀಗಾಗಿ ಭದ್ರಾವತಿಯ ಉಕ್ಕಿನ ಕಾರ್ಖಾನೆಯನ್ನು ಮುಚ್ಚುವ ಪ್ರಸ್ತಾವ ಕೈ ಬಿಡಬೇಕು, ಬದಲಿಗೆ ಅದನ್ನು ಪುನಶ್ಚೇತನಗೊಳಿಸಲು ಮುಂದಾಗಬೇಕು” ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಮಾಜಿ ಪ್ರಧಾನಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...