Homeಮುಖಪುಟಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

ಬರ್ತ್‌ ಡೇ ಪಾರ್ಟಿಗೆ ನುಗ್ಗಿ ಮುಸ್ಲಿಂ ಯುವಕರಿಗೆ ಥಳಿತ: ಬಜರಂಗದಳದ ದುಷ್ಕರ್ಮಿಗಳಿಗೆ ರಕ್ಷಣೆ; ಸಂತ್ರಸ್ತರೇ ಅರೆಸ್ಟ್!

- Advertisement -
- Advertisement -

ಜನವರಿ 21, ಶನಿವಾರದಂದು 100ಕ್ಕೂ ಹೆಚ್ಚು ಬಜರಂಗದಳದ ದುಷ್ಕರ್ಮಿಗಳ ಗುಂಪು ಮಧ್ಯಪ್ರದೇಶದ ಇಂದೋರ್‌ನಲ್ಲಿ ಬರ್ತ್ ಡೇ ಪಾರ್ಟಿಗೆ ನುಗ್ಗಿ ದಾಂಧಲೆ ಎಬ್ಬಿಸಿದೆ. ಕನಿಷ್ಠ ಐದು ಮುಸ್ಲಿಂ ಯುವಕರಿಗೆ ಥಳಿಸಲಾಗಿದೆ.

24 ವರ್ಷದ ಹಿಂದೂ ಯುವತಿಯು ತನ್ನ ಸ್ನೇಹಿತರೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಆ ಯುವತಿಯ ಫ್ಲ್ಯಾಟ್‌ಗೆ ನುಗ್ಗಿ ಆಕೆಯ ಮುಸ್ಲಿಂ ಸ್ನೇಹಿತರಿಗೆ ಹೊಡೆಯಲಾಗಿದೆ. ಮುಸ್ಲಿಂ ಯುವಕರ ಮೇಲೆ ‘ಲವ್ ಜಿಹಾದ್’ ಆರೋಪ ಮಾಡಿರುವ ದುಷ್ಕರ್ಮಿಗಳು, ನಂತರ ಇಂದೋರ್‌ನ ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸಂತ್ರಸ್ತರನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋಗಳು ಜನವರಿ 22ರ ಭಾನುವಾರದಂದು ವೈರಲ್ ಆಗಿವೆ.

ವೀಡಿಯೋ ಒಂದರಲ್ಲಿ- ಬಹುಮಹಡಿ ಕಟ್ಟಡದ ಮೆಟ್ಟಿಲುಗಳ ಮೇಲೆ ದೊಡ್ಡ ಜನಸಮೂಹವೇ ಹತ್ತುತ್ತಿರುವುದನ್ನು ಕಾಣಬಹುದು. ಮತ್ತೊಂದು ವೀಡಿಯೊದಲ್ಲಿ- ಖಾಸಗಿ ನಿವಾಸದೊಳಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಯುವಕನೊಬ್ಬನಿಗೆ ಥಳಿಸುತ್ತಿರುವುದನ್ನು ಕಾಣಬಹುದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರು ಏನು ಹೇಳುತ್ತಿದ್ದಾರೆ?

“ಕೆಲವು ಹುಡುಗರನ್ನು ಬಜರಂಗದಳದ ಸದಸ್ಯರು ಎಂಐಜಿ ಕಾಲೋನಿ ಪೊಲೀಸ್ ಠಾಣೆಗೆ ಕರೆತಂದರು, ನಂತರ ಅವರಲ್ಲಿ ಐವರನ್ನು ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ (ಅಂದರೆ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳು ನಡೆಸುವ ಯಾವುದೇ ಸಭೆ ಸಾರ್ವಜನಿಕ ಶಾಂತಿ ಕದಡುವ ಸಾಧ್ಯತೆ ಆರೋಪದಲ್ಲಿ) ಜೈಲಿಗೆ ಕಳುಹಿಸಲಾಗಿದೆ.

ಆದರೆ, ಖಾಸಗಿ ನಿವಾಸಕ್ಕೆ ನುಗ್ಗಿ ಯುವಕರನ್ನು ಥಳಿಸಿದ ಬಜರಂಗದಳದ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

ಘಟನೆಯ ಕುರಿತು ‘ದಿ ಕ್ವಿಂಟ್’ ಜಾಲತಾಣಕ್ಕೆ ಪ್ರತಿಕ್ರಿಯಿಸಿರುವ ಎಂಐಜಿ ಸ್ಟೇಷನ್ ಇನ್‌ಚಾರ್ಜ್ ಅಜಯ್ ವರ್ಮಾ, “ಜಗಳ ಮತ್ತು ಹೆಚ್ಚಿನ ವಿವಾದವನ್ನು ತಪ್ಪಿಸಲು, ಐಪಿಸಿ ಸೆಕ್ಷನ್ 151 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಅವರೆಲ್ಲರನ್ನೂ ನಾಳೆಯೊಳಗೆ (ಅಂದರೆ ಭಾನುವಾರದೊಳಗೆ) ಬಿಡುಗಡೆ ಮಾಡಲಾಗುತ್ತದೆ” ಎಂದು ತಿಳಿಸಿದ್ದರು. ಆದರೆ ಜ.23ರಂದು ಈ ವರದಿಯನ್ನು ಪ್ರಕಟಿಸುವ ಸಮಯದವರೆಗೂ ಯುವಕರನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ ಎಂದು ‘ದಿ ಕ್ವಿಂಟ್‌’ ತಿಳಿಸಿದೆ.

ಇದಕ್ಕೂ ಮೊದಲು, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೀಮಾ ಶರ್ಮಾ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದು, “ಯುವಕ ಮತ್ತು ಯುವತಿಯರ ಗುಂಪು ಸ್ನೇಹಿತರ ಹುಟ್ಟುಹಬ್ಬವನ್ನು ಆಚರಿಸುತ್ತಿತ್ತು. ಈ ವಿಷಯದಲ್ಲಿ ಭಾಗಿಯಾಗಿರುವ ಹುಡುಗಿಯರು ಲವ್ ಜಿಹಾದ್‌ ಕುರಿತು ಯಾವುದೇ ದೂರು ದಾಖಲಿಸಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಬಜರಂಗದಳದ ಸದಸ್ಯರು ಏನು ಹೇಳುತ್ತಿದ್ದಾರೆ?

ಭಜರಂಗದಳದ ಜಿಲ್ಲಾ ಸಂಯೋಜಕ (ಜಿಲ್ಲಾ ಸಂಯೋಜಕ) ಎಂದು ಹೇಳಿಕೊಳ್ಳುವ ಮನೋಜ್ ಯಾದವ್, ಜನವರಿ 21ರಂದು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, “ಅಪಾರ್ಟ್‌ಮೆಂಟ್‌ನಲ್ಲಿ ಶೋಧ ಕಾರ್ಯ ನಡೆಸಿದ್ದೇವೆ” ಎಂದು  ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿರಿ: ಹಿಂದೂಗಳು ಮತ್ತು ಮುಸ್ಲಿಮರು ಏಕೆ ’ಹಸು ಬಲಿ’ ಕೊಡುತ್ತಾರೆ?

“ಇಂದೋರ್‌ನ ಶ್ರೀನಗರ ಪ್ರದೇಶದಲ್ಲಿ ಐವರು ಮುಸ್ಲಿಂ ಯುವಕರು ಮತ್ತು ಇಬ್ಬರು ಹಿಂದೂ ಯುವತಿಯರು ಒಟ್ಟಿಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಪಡೆದ ನಂತರ ನಾವು ಅಲ್ಲಿಗೆ ಹೋಗಿ ಅವರ ಕೊಠಡಿಗಳಲ್ಲಿ ಹುಡುಕಾಟ ನಡೆಸಿದ್ದೇವೆ. ಮದ್ಯದ ಬಾಟಲಿ ಸೇರಿದಂತೆ ಅಮಲು ಪದಾರ್ಥಗಳು ಪತ್ತೆಯಾಗಿವೆ. ನಾವು ಅವರನ್ನು ಎಂಐಜಿ ಕಾಲೋನಿ ಠಾಣೆಗೆ ಕರೆತಂದಿದ್ದು, ಮೇಲಧಿಕಾರಿಗಳಿಗೂ ದೂರು ನೀಡಿದ್ದೇವೆ” ಎಂದು ಮನೋಜ್ ಯಾದವ್ ಪ್ರತಿಕ್ರಿಯಿಸಿದ್ದಾನೆ.

ಹಲ್ಲೆ ಮಾಡಿದವರ ವಿರುದ್ಧ ವಿರುದ್ಧ ಕ್ರಮವೇನು?

ಸುಪ್ರೀಂ ಕೋರ್ಟ್‌ ವಕೀಲರಾದ ಎಹ್ತೇಶಾಮ್ ಹಶ್ಮಿಯವರು ಪೊಲೀಸರ ವರ್ತನೆಯನ್ನು ಖಂಡಿಸಿದ್ದು, “ಅತಿಕ್ರಮಣ, ಹಲ್ಲೆ, ಕ್ರಿಮಿನಲ್ ಬೆದರಿಕೆ ಮತ್ತು ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸುವ ಭಜರಂಗದಳದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಬೇರೆ ಧರ್ಮಕ್ಕೆ ಸೇರಿದ ತಮ್ಮ ಸ್ನೇಹಿತನ ಜನ್ಮದಿನವನ್ನು ಆಚರಿಸಿದ ಏಕೈಕ ತಪ್ಪಿಗೆ ಪೊಲೀಸರು ಐದು ಜನರನ್ನು ಜೈಲಿಗೆ ಹಾಕಿದ್ದಾರೆ. ಇದೊಂದು ಘೋರ ಕಾನೂನು ದುರ್ವರ್ತನೆಯಾಗಿದೆ” ಎಂದು ವಿಷಾದಿಸಿದ್ದಾರೆ.

ವರದಿ ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...