Homeಮುಖಪುಟಸಾವರ್ಕರ್, ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ: ಭಾಗವತ್ ಹೇಳಿಕೆಗೆ ಚಂದ್ರ ಕುಮಾರ್ ಬೋಸ್ ತಿರುಗೇಟು

ಸಾವರ್ಕರ್, ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ: ಭಾಗವತ್ ಹೇಳಿಕೆಗೆ ಚಂದ್ರ ಕುಮಾರ್ ಬೋಸ್ ತಿರುಗೇಟು

- Advertisement -
- Advertisement -

ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜಯಂತಿಯಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು, “ಆರ್‌ಎಸ್‌ಎಸ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗುರಿಗಳು ಒಂದೇ ಆಗಿವೆ- ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡುವುದು” ಎಂದು ಹೇಳಿದ್ದರು. ಈ ಹೇಳಿಕೆಗೆ ಸ್ವತಃ ಸುಭಾಸ್ ಚಂದ್ರ ಬೋಸ್ ಅವರ ಮೊಮ್ಮಗ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಬಲಪಂಥೀಯ ಸಿದ್ದಾಂತಕ್ಕೂ ಸುಭಾಷ್ ಚಂದ್ರ ಬೋಸ್ ಅವರ ವಿಚಾರಗಳಿಗೆ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ” ಎಂದು ಮೋಹನ್ ಭಾಗವತ್ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ. “ಆರ್‌ಎಸ್‌ಎಸ್ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ. ಇಂದಿನವರೆಗೆ ಎಲ್ಲರನ್ನೂ ಒಳಗೊಳ್ಳುವ ಮತ್ತು ಜಾತ್ಯತೀತರಾಗಿದ್ದ ಏಕೈಕ ನಾಯಕ” ಎಂದು 2020 ರಲ್ಲಿ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲ್ಪಟ್ಟ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಏನು ಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿರಬೇಕು, ನೀವು ಸಾವರ್ಕರ್ ಮತ್ತು ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ, ಅವರು ಒಂದೇ ಪುಟದಲ್ಲಿ ಇರಲು ಸಾಧ್ಯವಿಲ್ಲ” ಎಂದು ಬೋಸ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ನೇತಾಜಿ ಸುಭಾಷ್‌ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್‌ ಬಚ್ಚಿಡುವ ಸತ್ಯಗಳಿವು

ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಮೋಹನ್ ಭಾಗವತ್, “ಆರ್‌ಎಸ್‌ಎಸ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗುರಿಗಳು ಒಂದೇ ಆಗಿವೆ – ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡುವುದು” ಎಂದು ಹೇಳಿದ್ದಾರೆ.

“ನಾವು ನೇತಾಜಿಯನ್ನು ಸ್ವಾತಂತ್ರ್ಯ ಹೋರಾಟಕ್ಕೆ ಅವರ ಅಮೂಲ್ಯ ಕೊಡುಗೆಗಳಿವೆ ಎನ್ನುವ ವಿಚಾರಕ್ಕೆ ಮಾತ್ರ ಸ್ಮರಿಸುವುದಲ್ಲ, ಅವರ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಅವರು ಬಯಸಿದ ಭಾರತದ ಕನಸು ಇನ್ನೂ ಈಡೇರಿಲ್ಲ. ಅದನ್ನು ಸಾಧಿಸಲು ಕೆಲಸ ಮಾಡಬೇಕು” ಎಂದು ಭಾಗವತ್ ಹೇಳಿದರು.

“ಸುಭಾಸ್‌ಬಾಬು ಅವರ ಆದರ್ಶಗಳು ನಮ್ಮ ಮುಂದೆ ಇದೆ. ಅವರು ಹೊಂದಿದ್ದ ಗುರಿಗಳು ನಮ್ಮ ಗುರಿಗಳೂ ಒಂದೇ ಆಗಿವೆ. ಭಾರತವು ಪ್ರಪಂಚದ ಒಂದು ಸಣ್ಣ ಭಾಗವಾಗಿದೆ. ಆದರೆ ನಾವು ಜಗತ್ತಿಗೆ ಪರಿಹಾರವನ್ನು ನೀಡುವಂತಾಗಬೇಕು ಎಂದು ಹೇಳಿದ್ದರು. ನಾವೆಲ್ಲರೂ ಈಗ ಅದರ ಕಡೆಗೆ ಕೆಲಸ ಮಾಡಬೇಕು” ಎಂದರು.

ಆ ಗುರಿಯನ್ನು ಸಾಧಿಸುವುದು ಅತ್ಯಗತ್ಯ ಎಂದು ಒತ್ತಿಹೇಳುತ್ತಾ, “ಗುರಿ ಸಾಧಿಸಲು ವಿಭಿನ್ನ ಮಾರ್ಗಗಳಿರಬಹುದು, ಮತ್ತು ಇವುಗಳನ್ನು ‘isms’ (ಸಿದ್ಧಾಂತಗಳು) ಎಂದು ವಿವರಿಸಲಾಗಿದೆ, ಅವುಗಳು ಭಿನ್ನವಾಗಿರಬಹುದು ಆದರೆ ಮುಖ್ಯವಾದುದು ಗುರಿಯಾಗಿದೆ” ಎಂದು ಹೇಳುವ ಮೂಲಕ ಮೋಹನ್ ಭಾಗವತ್ ಅವರು ತಮ್ಮ ಸಿದ್ದಾಂತಕ್ಕೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಿದ್ದಾಂತಗಳು ಭಿನ್ನವಾಗಿವೆ ಎನ್ನುವ ವಿಚಾರವನ್ನು ಒಪ್ಪಿಕೊಂಡಂತೆ ತೋರುತ್ತದೆ.

ನೇತಾಜಿ ಸುಭಾ‍ಷ್ ಚಂದ್ರ ಬೋಸ್ ಅವರು ಸ್ಪಷ್ಟವಾಗಿ ಜಾತ್ಯಾತೀತ ಸಿದ್ದಾಂತವನ್ನು ಹೊಂದಿದ್ದರು. ಆದರೆ ಮೋಹನ್ ಭಾಗವತ್ ಅವರು ಹೇಳುವ ಬಲಪಂಥೀಯ ಸಿದ್ದಾಂತ ಅದಕ್ಕೆ ತದ್ವಿರುದ್ಧವಾಗಿದೆ. ಬೋಸ್ ಅವರೊಟ್ಟಿಗೆ ತಮ್ಮ ಸಿದ್ದಾಂತವನ್ನು ಸಾಮ್ಯತೆ ಮಾಡಿಕೊಳ್ಳಲು ಮೋಹನ್ ಭಾಗವತ್ ಹಾಗೂ ಸಂಘಪರಿವಾರದ ನಾಯಕರು ಮೇಲಿಂದ ಮೇಲೆ ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಇದಕ್ಕೆ ಈಗ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಸರಿಯಾಗಿ ಉತ್ತರ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...