Homeಮುಖಪುಟಸಾವರ್ಕರ್, ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ: ಭಾಗವತ್ ಹೇಳಿಕೆಗೆ ಚಂದ್ರ ಕುಮಾರ್ ಬೋಸ್ ತಿರುಗೇಟು

ಸಾವರ್ಕರ್, ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ: ಭಾಗವತ್ ಹೇಳಿಕೆಗೆ ಚಂದ್ರ ಕುಮಾರ್ ಬೋಸ್ ತಿರುಗೇಟು

- Advertisement -
- Advertisement -

ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜಯಂತಿಯಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು, “ಆರ್‌ಎಸ್‌ಎಸ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗುರಿಗಳು ಒಂದೇ ಆಗಿವೆ- ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡುವುದು” ಎಂದು ಹೇಳಿದ್ದರು. ಈ ಹೇಳಿಕೆಗೆ ಸ್ವತಃ ಸುಭಾಸ್ ಚಂದ್ರ ಬೋಸ್ ಅವರ ಮೊಮ್ಮಗ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಬಲಪಂಥೀಯ ಸಿದ್ದಾಂತಕ್ಕೂ ಸುಭಾಷ್ ಚಂದ್ರ ಬೋಸ್ ಅವರ ವಿಚಾರಗಳಿಗೆ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ” ಎಂದು ಮೋಹನ್ ಭಾಗವತ್ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ. “ಆರ್‌ಎಸ್‌ಎಸ್ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಮತ್ತು ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ. ಇಂದಿನವರೆಗೆ ಎಲ್ಲರನ್ನೂ ಒಳಗೊಳ್ಳುವ ಮತ್ತು ಜಾತ್ಯತೀತರಾಗಿದ್ದ ಏಕೈಕ ನಾಯಕ” ಎಂದು 2020 ರಲ್ಲಿ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲ್ಪಟ್ಟ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಏನು ಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿರಬೇಕು, ನೀವು ಸಾವರ್ಕರ್ ಮತ್ತು ನೇತಾಜಿಯನ್ನು ಒಟ್ಟಿಗೆ ಅನುಸರಿಸಲು ಸಾಧ್ಯವಿಲ್ಲ, ಅವರು ಒಂದೇ ಪುಟದಲ್ಲಿ ಇರಲು ಸಾಧ್ಯವಿಲ್ಲ” ಎಂದು ಬೋಸ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ನೇತಾಜಿ ಸುಭಾಷ್‌ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್‌ ಬಚ್ಚಿಡುವ ಸತ್ಯಗಳಿವು

ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಮೋಹನ್ ಭಾಗವತ್, “ಆರ್‌ಎಸ್‌ಎಸ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಗುರಿಗಳು ಒಂದೇ ಆಗಿವೆ – ಭಾರತವನ್ನು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡುವುದು” ಎಂದು ಹೇಳಿದ್ದಾರೆ.

“ನಾವು ನೇತಾಜಿಯನ್ನು ಸ್ವಾತಂತ್ರ್ಯ ಹೋರಾಟಕ್ಕೆ ಅವರ ಅಮೂಲ್ಯ ಕೊಡುಗೆಗಳಿವೆ ಎನ್ನುವ ವಿಚಾರಕ್ಕೆ ಮಾತ್ರ ಸ್ಮರಿಸುವುದಲ್ಲ, ಅವರ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಅವರು ಬಯಸಿದ ಭಾರತದ ಕನಸು ಇನ್ನೂ ಈಡೇರಿಲ್ಲ. ಅದನ್ನು ಸಾಧಿಸಲು ಕೆಲಸ ಮಾಡಬೇಕು” ಎಂದು ಭಾಗವತ್ ಹೇಳಿದರು.

“ಸುಭಾಸ್‌ಬಾಬು ಅವರ ಆದರ್ಶಗಳು ನಮ್ಮ ಮುಂದೆ ಇದೆ. ಅವರು ಹೊಂದಿದ್ದ ಗುರಿಗಳು ನಮ್ಮ ಗುರಿಗಳೂ ಒಂದೇ ಆಗಿವೆ. ಭಾರತವು ಪ್ರಪಂಚದ ಒಂದು ಸಣ್ಣ ಭಾಗವಾಗಿದೆ. ಆದರೆ ನಾವು ಜಗತ್ತಿಗೆ ಪರಿಹಾರವನ್ನು ನೀಡುವಂತಾಗಬೇಕು ಎಂದು ಹೇಳಿದ್ದರು. ನಾವೆಲ್ಲರೂ ಈಗ ಅದರ ಕಡೆಗೆ ಕೆಲಸ ಮಾಡಬೇಕು” ಎಂದರು.

ಆ ಗುರಿಯನ್ನು ಸಾಧಿಸುವುದು ಅತ್ಯಗತ್ಯ ಎಂದು ಒತ್ತಿಹೇಳುತ್ತಾ, “ಗುರಿ ಸಾಧಿಸಲು ವಿಭಿನ್ನ ಮಾರ್ಗಗಳಿರಬಹುದು, ಮತ್ತು ಇವುಗಳನ್ನು ‘isms’ (ಸಿದ್ಧಾಂತಗಳು) ಎಂದು ವಿವರಿಸಲಾಗಿದೆ, ಅವುಗಳು ಭಿನ್ನವಾಗಿರಬಹುದು ಆದರೆ ಮುಖ್ಯವಾದುದು ಗುರಿಯಾಗಿದೆ” ಎಂದು ಹೇಳುವ ಮೂಲಕ ಮೋಹನ್ ಭಾಗವತ್ ಅವರು ತಮ್ಮ ಸಿದ್ದಾಂತಕ್ಕೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಿದ್ದಾಂತಗಳು ಭಿನ್ನವಾಗಿವೆ ಎನ್ನುವ ವಿಚಾರವನ್ನು ಒಪ್ಪಿಕೊಂಡಂತೆ ತೋರುತ್ತದೆ.

ನೇತಾಜಿ ಸುಭಾ‍ಷ್ ಚಂದ್ರ ಬೋಸ್ ಅವರು ಸ್ಪಷ್ಟವಾಗಿ ಜಾತ್ಯಾತೀತ ಸಿದ್ದಾಂತವನ್ನು ಹೊಂದಿದ್ದರು. ಆದರೆ ಮೋಹನ್ ಭಾಗವತ್ ಅವರು ಹೇಳುವ ಬಲಪಂಥೀಯ ಸಿದ್ದಾಂತ ಅದಕ್ಕೆ ತದ್ವಿರುದ್ಧವಾಗಿದೆ. ಬೋಸ್ ಅವರೊಟ್ಟಿಗೆ ತಮ್ಮ ಸಿದ್ದಾಂತವನ್ನು ಸಾಮ್ಯತೆ ಮಾಡಿಕೊಳ್ಳಲು ಮೋಹನ್ ಭಾಗವತ್ ಹಾಗೂ ಸಂಘಪರಿವಾರದ ನಾಯಕರು ಮೇಲಿಂದ ಮೇಲೆ ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಇದಕ್ಕೆ ಈಗ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಸರಿಯಾಗಿ ಉತ್ತರ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...