Homeಮುಖಪುಟಹೈದರಾಬಾದ್ ಕೇಂದ್ರೀಯ ವಿ.ವಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಯಶಸ್ವಿ: JNU, ಕೇರಳದಲ್ಲಿ ಇಂದು

ಹೈದರಾಬಾದ್ ಕೇಂದ್ರೀಯ ವಿ.ವಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಯಶಸ್ವಿ: JNU, ಕೇರಳದಲ್ಲಿ ಇಂದು

ಒಳ್ಳೆಯದ್ದು, ಕೆಟ್ಟದ್ದು, ಕೊಳಕಾದುದ್ದು ಏನೇ ಇರಲಿ. ಏನು ನೋಡಬೇಕೆಂದು ನಾವು ನಿರ್ಧರಿಸುತ್ತೇವೆಯೇ ಹೊರತು ಸರ್ಕಾರ ಹೇಳುವುದಲ್ಲ ಎಂದು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಹೇಳಿದ್ದಾರೆ.

- Advertisement -
- Advertisement -

2002ರ ಗುಜರಾತ್‌ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತಾಗಿ ಬಿಬಿಸಿ ನಿರ್ಮಿಸಿರುವ  ‘‘ಇಂಡಿಯಾ: ಮೋದಿ ಪ್ರಶ್ನೆ” ಸಾಕ್ಷ್ಯಚಿತ್ರವನ್ನು ಹೈದರಾಬಾದ್‌ನ ಕೇಂದ್ರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರ ರಾತ್ರಿ ಪ್ರದರ್ಶಿಸಲಾಗಿದೆ.

ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಮತ್ತು ಫ್ರೆಟರ್ನಿಟಿ ಗ್ರೂಪ್ ಎಂದು ಕರೆಯಲ್ಪಡುವ ಮುಸ್ಲಿಂ ಸ್ಟೂಡೆಂಟ್ ಫೆಡರೇಶನ್ ಸಂಘಟನೆಗಳು ಸಾಕ್ಷ್ಯಚಿತ್ರ ಪ್ರದರ್ಶನವನ್ನು ಆಯೋಜಿಸಿದ್ದವು. ಸುಮಾರು 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ವೀಕ್ಷಿಸಿದ್ದಾರೆ ಎನ್ನಲಾಗಿದೆ.

ಅಧಿಕೃತವಾಗಿ ಜನವರಿ 17ರಂದು ಬಿಡುಗಡೆಯಾಗಿದ್ದ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರದ ಮೊದಲ ಎಪಿಸೋಡ್ ಅನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿತ್ತು. ಬಿಬಿಸಿ ವೆಬ್‌ಸೈಟ್ ನಲ್ಲಿ ಅಪ್ಲೋಡ್ ಆಗಿದ್ದ ವಿಡಿಯೋವನ್ನು ಸಹ ತದನಂತರ ಭಾರತದಲ್ಲಿ ಕಾಣದಂತೆ ತಡೆಹಿಡಿಯಲಾಗಿತ್ತು. ಅಲ್ಲದೆ ವಿಮೋ ಪ್ಲೇಯರ್, ಟೆಲಿಗ್ರಾಂಗಳಲ್ಲಿ ಆ ಡಾಕ್ಯುಮೆಂಟರಿ ವೈರಲ್ ಆಗುತ್ತಿದ್ದಂತೆ ಅಲ್ಲಿಂದಲೂ ಡಿಲೀಟ್ ಮಾಡಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದೆ ಮೊಹುವಾ ಮೊಯಿತ್ರ, “ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನವಾಗುವ ಹೊಸ ಲಿಂಕ್ ಇಲ್ಲಿದೆ. ಒಳ್ಳೆಯದ್ದು, ಕೆಟ್ಟದ್ದು, ಕೊಳಕಾದುದ್ದು ಏನೇ ಇರಲಿ. ಏನು ನೋಡಬೇಕೆಂದು ನಾವು ನಿರ್ಧರಿಸುತ್ತೇವೆಯೇ ಹೊರತು ಸರ್ಕಾರ ಹೇಳುವುದಲ್ಲ” ಎಂದು ಕಿಡಿಕಾರಿಕಾರಿದ್ದಾರೆ.

‘‘ಇಂಡಿಯಾ: ಮೋದಿ ಪ್ರಶ್ನೆ” ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಜವಾಹರ್‌‌‌ಲಾಲ್‌ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿ ಸಂಘ ಇಂದು ಪ್ರದರ್ಶಿಸಲು ಯೋಜಿಸಿದೆ. ಆದರೆ ಈ ಪ್ರದರ್ಶನವನ್ನು ರದ್ದುಗೊಳಿಸುವಂತೆ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳನ್ನು ಕೇಳಿದೆ.

ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಜನವರಿ 24 ರಂದು ರಾತ್ರಿ 9 ಗಂಟೆಗೆ ನಿಗದಿ ಪಡಿಸಲಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಜೆಎನ್‌ಯು ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಸಲಹೆಯಲ್ಲಿ ತಿಳಿಸಿದ್ದಾರೆ.

ಅದೇ ರೀತಿ ಕೇರಳದಲ್ಲಿ ಹಲವಾರು ಕಡೆ ಸಾಕ್ಷ್ಯಚಿತ್ರ ಪ್ರದರ್ಶನ ಏರ್ಪಡಿಸುವುದಾಗಿ ಆಡಳಿತರೂಢ ಸಿಪಿಎಂ ಪಕ್ಷದ ಯುವಜನ ಸಂಘಟನೆಯಾದ ಡಿವೈಎಫ್‌ಐ ತಿಳಿಸಿದೆ.

2019 ರಲ್ಲಿ ಪ್ರಧಾನಿಯಾಗಿ ಮರು ಆಯ್ಕೆಯಾದ ನಂತರ ಮೋದಿ ಸರ್ಕಾರದ ಟ್ರ್ಯಾಕ್ ರೆಕಾರ್ಡ್‌ ಅನ್ನು ಪರಿಶೀಲಿಸುವ ಸಾಕ್ಷ್ಯಚಿತ್ರದ ಎರಡನೇ ಭಾಗವು ಜನವರಿ 24ರ ಮಂಗಳವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಬಿಬಿಸಿ ಹೇಳಿದೆ.

ಇದನ್ನೂ ಓದಿ: ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...