Homeಚಳವಳಿವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ಪ್ರದರ್ಶನಕ್ಕೆ ತೊಂದರೆಯಾಗುವಂತೆ ವಿದ್ಯುತ್ ಕಟ್‌ ಮಾಡಿದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ

- Advertisement -
- Advertisement -

ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯೂ ಜೆಎನ್‌ಯು ವಿದ್ಯಾರ್ಥಿಗಳು ಪ್ರಧಾನಿ ಮೋದಿ ಕುರಿತು ಬಿಬಿಸಿ ತಯಾರಿಸಿರುವ ‘ಇಂಡಿಯಾ – ದ ಮೋದಿ ಕ್ವಸ್ಚನ್’ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ಪ್ರದರ್ಶನ ಮಾಡಿದ್ದಾರೆ. ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನದಿಂದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಉಂಟಾಗಬಹುದು, ಆದ್ದರಿಂದ ಪ್ರದರ್ಶನವನ್ನು ರದ್ದುಗೊಳಿಸಬೇಕು ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅವರು ಸೂಚನೆ ನೀಡಿದ್ದರು.

ವಿದ್ಯಾರ್ಥಿ ಸಂಘವು ರಾತ್ರಿ ಒಂಬತ್ತು ಗಂಟೆಗೆ ಸಾಕ್ಷ್ಯಚಿತ್ರದ ಪ್ರದರ್ಶನ ಎಂದು ಹೇಳಿಕೊಂಡಿತ್ತು.‌ ಅದಕ್ಕಾಗಿ ವಿದ್ಯಾರ್ಥಿಗಳು ತಯಾರಿ ಕೂಡಾ ನಡೆಸಿದ್ದರು. ಆದರೆ, ಸುಮಾರು 8:30 ಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಶ್ವವಿದ್ಯಾಲಯದ ವಿದ್ಯುತ್ ಕಡಿತ ಮಾಡಿತ್ತು.‌ ಹೀಗಾಗಿ ನೆರೆದಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಲ್ಯಾಪ್‌ಟಾಪ್ ಮೂಲಕ ಸ್ಥಳದಲ್ಲೇ ತಮ್ಮ ಸ್ನೇಹಿತರ ಗುಂಪಿನೊಂದಿಗೆ ಬಿಬಿಸಿ ಸಾಕ್ಷ್ಯಚಿತ್ರವನ್ನು ನೋಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಕ್ಷ್ಯಚಿತ್ರ ಪ್ರದರ್ಶನಕ್ಕೂ ಮೊದಲು ಮಾತನಾಡಿದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌, “ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರ ಭಾರತದ ಯಾವ ಪ್ರದೇಶದಲ್ಲೂ ನಿಷೇಧವಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ನೋಡಬಾರದು ಎಂದು ತಡೆಹಿಡಿದಿದ್ದು ಮಾತ್ರವಾಗಿದೆ. ಇದರರ್ಥ ಅದನ್ನು ನಿಷೇಧ ಎಂದಲ್ಲ. ಹೀಗಿರುವಾಗ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲು ಅನುಮತಿ ಯಾಕೆ ಪಡೆಯಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

“ಪ್ರಜಾಪ್ರಭುತ್ವ ದೇಶದಲ್ಲಿ ಇರುವ ನಮಗೆ ಸಾಕ್ಷ್ಯಚಿತ್ರವೊಂದನ್ನು ನೋಡುವ ಹಕ್ಕಿಲ್ಲವೆ? ಪ್ರಜಾಪ್ರಭುತ್ವದ ಮೂಲವೇ ಜೆಎನ್‌ಯು ವಿಶ್ವವಿದ್ಯಾಲಯದಂತಹ ಸ್ಥಳವಾಗಿದೆ. ಇಲ್ಲೇ ಪ್ರಜಾಪ್ರಭುತ್ವವನ್ನು ಯಾಕೆ ತುಳಿಯುತ್ತಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ನೋಡುತ್ತಿದ್ದ ವೇಳೆ ಬಿಜೆಪಿಯ ವಿದ್ಯಾರ್ಥಿಯ ಸಂಘಟನೆಯಾದ ಎಬಿವಿಪಿ ಗೂಂಡಗಳು ಕಲ್ಲೆಸತ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ವಿದ್ಯಾರ್ಥಿಗಳ ಮೇಲೆ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ.

ವಿದ್ಯಾರ್ಥಿ ಸಂಘವು ಸಾಕ್ಷ್ಯಚಿತ್ರದ ಪ್ರದರ್ಶನ ನಡೆಸುತ್ತಿದೆ ಎಂದು ಘೋಷಿಸುತ್ತಿದ್ದಂತೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಜೆಎನ್‌ಯು ಆಡಳಿತ, “ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ. ಈ ಕಾರ್ಯಕ್ರಮಕ್ಕೆ ಆಡಳಿತದಿಂದ ಯಾವುದೇ ಪೂರ್ವಾನುಮತಿ ಪಡೆದಿಲ್ಲ. ಇಂತಹ ಅನಧಿಕೃತ ಚಟುವಟಿಕೆಯು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯವನ್ನು ಕದಡಬಹುದು. ಹೀಗಾಗಿ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸಬೇಕು. ಅದು ವಿಫಲವಾದರೆ ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ಕಟ್ಟುನಿಟ್ಟಾದ ಶಿಸ್ತು ಕ್ರಮವನ್ನು ಪ್ರಾರಂಭಿಸಬಹುದು” ಎಂದು ಎಚ್ಚರಿಸಿತ್ತು.

ಆದರೆ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯು ಅದನ್ನು ಪರಿಗಣಿಸದೆ ಅಧ್ಯಕ್ಷೆ ಐಷೆ ಘೋಷ್‌ ಅವರು,“ಅತಿದೊಡ್ಡ ‘ಪ್ರಜಾಪ್ರಭುತ್ವ’ದ ‘ಚುನಾಯಿತ ಸರ್ಕಾರ’ವು ‘ನಿಷೇಧಿಸಿದ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕಾಗಿ ನಮ್ಮೊಂದಿಗೆ ಸೇರಿ.” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರೆ.

2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಡಿಯಲ್ಲಿ ಕೇಂದ್ರದ CAA ನಂತಹ ಕೆಲವು ನೀತಿಗಳನ್ನು ಒಳಗೊಂಡಿರುವ ಬಗ್ಗೆ “ಭಾರತ: ಮೋದಿ ಪ್ರಶ್ನೆ” ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವು ಚರ್ಚಿಸಿದೆ. ಸಾಕ್ಷ್ಯಚಿತ್ರದ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, “ಸಾಕ್ಷ್ಯಚಿತ್ರವು ಪಕ್ಷಪಾತದಿಂದ ಕೂಡಿದ್ದು, ವಸ್ತುನಿಷ್ಠತೆಯ ಕೊರತೆ ಮತ್ತು ಇನ್ನೂ ಮುಂದುವರಿದ ವಸಾಹತುಶಾಹಿ ಮನಸ್ಥಿತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳಿತ್ತು.

ಇದನ್ನೂ ಓದಿ: ಜೆಎನ್‌ಯು ವಿದ್ಯಾರ್ಥಿ ಸಂಘದಿಂದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ರದ್ದು ಮಾಡಿ ಎಂದ ವಿಶ್ವವಿದ್ಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...