Homeಕರ್ನಾಟಕಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ಮಹಾತ್ಮ ಗಾಂಧಿಯ ಪ್ರತಿಮೆ ನೋಡಿ ಗಾಬರಿಯಾದ ಕಲಾವಿದರು

- Advertisement -
- Advertisement -

ಹಾಸನವು ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳದ ಅದ್ಭುತ ಶಿಲ್ಪ ಕಲೆಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾದ ಜಿಲ್ಲೆಯಾಗಿದೆ. ಆದರೆ ನಗರದ ಗಾಂಧಿ ಭವನದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಕಳಪೆ ವಿನ್ಯಾಸ ಮತ್ತು ಗುಣಮಟ್ಟವಿಲ್ಲದೆ ರಚಿಸಲಾಗಿದ್ದು, ಕಲಾವಿರು ಸೇರಿದಂತೆ ಸಾಮಾಜಿಕ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಂಧಿ ಭವನವನ್ನು ಗುರುವಾರ ನಡೆಯಲಿರುವ ಗಣರಾಜ್ಯೋತ್ಸವದಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಈ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಹಾಸನ ಜಿಲ್ಲಾ ವಾರ್ತಾ ಇಲಾಖೆಯ ಉಪ ನಿರ್ದೇಶಕರು ನಾನುಗೌರಿ.ಕಾಂಗೆ ಹೇಳಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಾಸನ ಸೇರಿದಂತೆ ಹಲವು ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಮುಂದಾಗಿದೆ. ಗಾಂಧಿ ಭವನದ ನಿರ್ಮಾಣ ಮತ್ತು ಕಲಾಕೃತಿಗಳಿಗೆ ಇಲಾಖೆಯು 3 ಕೋಟಿ ರೂಗಳನ್ನು ವೆಚ್ಚ ಮಾಡಿದೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹಾಸನದ ಖ್ಯಾತ ಕಲಾವಿದ ಕೆ.ಟಿ. ಶಿವಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ನೋಡಿ ನಾನು ಗಾಬರಿಯಾದೆ ಎಂದು ಆಘಾತ ವ್ಯಕ್ತಪಡಿಸಿದರು.

“ಗಾಂಧಿಯಂತಹ ಮಹಾತ್ಮರ ಪ್ರತಿಮೆಯನ್ನು ಮಾಡಬೇಕೆಂದರೆ ಅದಕ್ಕೆ ಅಗಾಧ ಪ್ರತಿಭೆ ಬೇಕಾಗುತ್ತದೆ. ಆದರೆ ಇಲ್ಲಿ ಯಾರನ್ನೊ ಕರೆಸಿ ಅದನ್ನು ನಿರ್ಮಿಸಿದ್ದು, ಪ್ರತಿಮೆ ಭಯಾನಕವಾಗಿದೆ. ಮಹಾತ್ಮ ಗಾಂಧಿ ಹಾಸ್ಯದ ವಸ್ತುವಲ್ಲ. ಈ ಬಗ್ಗೆ ಸಂಬಂಧಪಟ್ಟ ವ್ಯಕ್ತಿಗಳ ಜೊತೆಗೆ ಮಾತುಕತೆ ನಡೆಸುತ್ತೇವೆ. ಪ್ರತಿಮೆಯನ್ನು ಅನಾವರಣ ಮಾಡಲು ಬಿಡುವುದಿಲ್ಲ. ಒಂದು ವೇಳೆ ಅದನ್ನೇ ಅನಾವರಣ ಮಾಡುವುದಾದರೆ ಪ್ರತಿಭಟಿಸಿ ಜೈಲಿಗೆ ಹೋಗಲೂ ಸಿದ್ದ” ಎಂದು ಕಲಾವಿದ ಕೆ.ಟಿ. ಶಿವಪ್ರಸಾದ್ ಹೇಳಿದರು.

ಹಾಸನದ ಚಿತ್ರ ಕಲಾವಿದರಾದ ಬಿ.ಎಸ್‌. ದೇಸಾಯಿ ಮಾತನಾಡಿ, ಅದೊಂದು ಆಕಾರವಲ್ಲ, ವಿಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಗಾಂಧಿ ಪ್ರತಿಮೆಯನ್ನು ನೋಡಿದರೆ ಮಹಾತ್ಮರ ವ್ಯಕ್ತಿತ್ವ, ಅವರ ಚಳವಳಿ ನಮಗೆ ನೆನಪಾಗಬೇಕು. ಆದರೆ ಈ ಪ್ರತಿಮೆಯನ್ನು ನೋಡಿದರೆ ಅದು ಸಾಧ್ಯವಿಲ್ಲ. ಪ್ರತಿಮೆ ಬಹಳ ಕೆಟ್ಟದ್ದಾಗಿದ್ದು, ಒಬ್ಬ ಕಲಾವಿದನಾಗಿ ಹೇಳಬೇಕೆಂದರೆ ಹಾಗೆ ಮಾಡಿದ್ದು ಖಂಡಿತಾ ತಪ್ಪು. ಶಿಲ್ಪಕಲೆಗೆ ಹೆಸರಾದ ಹಾಸನ ಜಿಲ್ಲೆಗೆ ಈ ಪ್ರತಿಮೆ ಒಂದು ಕಪ್ಪುಚುಕ್ಕೆಯಾಗುತ್ತದೆ. ಪ್ರತಿಮೆ ಮರು ಬದಲಾವಣೆಯಾಗಬೇಕು, ಅದು ಇರುವುದು ಶೋಭೆಯಲ್ಲ” ಎಂದು ನಾನುಗೌರಿ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದರು.

“ಹಾಸನದಲ್ಲಿ ಉದ್ಘಾಟನೆಗೆ ತಯಾರಾಗಿ ನಿಂತಿರುವ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿಯವರ ಮೂರ್ತಿಗಳನ್ನು ಗಾಂಧಿಗೆ ಅವಮಾನ ಮಾಡುವ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಸಿಮೆಂಟ್ ನಿಂದ ನಿರ್ಮಿಸಿರುವ ಈ ಕಲಾಕೃತಿಗಳಲ್ಲಿ ಯಾವುದರಲ್ಲಿಯೂ ಗಾಂಧಿಯ ಹೋಲಿಕೆ ಇಲ್ಲ. ಇದು ಬೇಲೂರು, ಹಳೇಬೀಡು, ಶ್ರವಣಬೆಳಗುಳದಂತಹ ಜಗದ್ವಿಖ್ಯಾತ ಶಿಲ್ಪಕಲೆಗಳ ತವರಿನಲ್ಲಿ ಈರೀತಿ ಕಲಾಕೃತಿಗಳ ಅಂದ ಕೆಡಿಸುವುದು ಗಾಂಧಿಜಿಗೂ ಅವಮಾನ, ಹಾಸನ ಜಿಲ್ಲೆಗೂ ಅವಮಾನ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಹಾಸನ ಜಿಲ್ಲಾಧ್ಯಕ್ಷ ಎಚ್.ಆರ್.ನವೀನ್ ಕುಮಾರ್ ಹೇಳಿದ್ದಾರೆ.

ಕೂಡಲೇ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಮತ್ತು ಕೂಡಲೆ ಈ ಎಲ್ಲಾ ಕಲಾಕೃತಿಗಳನ್ನು ತೆರವುಗೊಳಿಸಿ ಅಂದವಾಗಿ ಗಾಂಧಿಜಿಯ ಕಲಾಕೃತಿಗಳನ್ನು ನಿರ್ಮಾಣಮಾಡಬೇಕೆಂದು ಅವರು ಜಿಲ್ಲಾಡಳಿತಕ್ಕೆ ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಾರ್ತಾ ಇಲಾಖೆಯ ಆಯುಕ್ತರಾದ ಹರ್ಷ ಕುಮಾರ್‌, ಪ್ರತಿಮೆ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಏನೇ ತಪ್ಪುಗಳಿದ್ದರೂ ಅವುಗಳನ್ನು ಸರಿ ಪಡಿಸಿ ಮಹಾತ್ಮರ ಗೌರವಕ್ಕೆ ಯಾವುದೆ ಧಕ್ಕೆ ಬರದಂತೆ ನಿರ್ಮಾಣ ಮಾಡಿ ಉದ್ಘಾಟನೆ ಬಗ್ಗೆ ಯೋಜಿಸುತ್ತೇವೆ ಎಂದು ಹೇಳಿದರು.

“ನಾವು ಜನರ ಭಾವನೆಗಳಿಗೆ ಸ್ಪಂಧಿಸಿ, ಕೂಡಲೇ ಕಲೆಯ ಬಗ್ಗೆ ಸಮರ್ಪಕವಾದ ಮಾಹಿತಿ ಕಲಾವಿದರನ್ನು ಕರೆಸಿ ಅವರೊಂದಿಗೆ ಮಾತನಾಡುವಂತೆ ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅದು ಇನ್ನೂ ಪ್ರಗತಿಯಲ್ಲಿ ಇರುವ ಕಾಮಗಾರಿಯಾಗಿದ್ದು, ಯಾವುದೆ ಕಾರಣಕ್ಕೂ ನಾಳೆ ಉದ್ಘಾಟನೆ ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ನಿರ್ಮಾಣದ ಜವಾಬ್ದಾರಿ ವಹಿಸಿದ್ದು, ಅವರು ಸಮರ್ಪಕವಾಗಿ ಸಮೀಕ್ಷೆ ಮಾಡಿ ಅದರ ಬಗ್ಗೆ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಿರ್ಮಿತಿ ಕೇಂದ್ರಕ್ಕೆ ನಾವು ಟೆಂಡರ್‌ ಕೊಟ್ಟಿದ್ದು, ಸಾರ್ವಜನಿಕರ ಎಳ್ಳಷ್ಟು ಹಣ ಪೋಲಾಗುವುದಿಲ್ಲ” ಎಂದು ನಾನುಗೌರಿ.ಕಾಂಗೆ ಹೇಳಿದರು.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವಾರ್ತಾ ಇಲಾಖೆಯ ಹಾಸನ ಜಿಲ್ಲಾ ಉಪ ನಿರ್ದೇಶಕರಾದ ವಿನೋದ್ ಚಂದ್ರ ಅವರು,“ಗಾಂಧಿ ಪ್ರತಿಕೃತಿಯನ್ನು ತಿದ್ದುಪಡಿ ಮಾಡಲು ಸೂಚನೆ ಕೊಟ್ಟಿದ್ದೇವೆ. ನಾಳೆ ನಡೆಸಲು ಉದ್ದೇಶಿಸಿದ್ದ ಉದ್ಘಾಟನಾ ಕಾರ್ಯಕ್ರಮ ರದ್ದು ಮಾಡಲಾಗಿದೆ. ತಪ್ಪುಗಳನ್ನು ಸರಿ ಪಡಿಸಿದ ನಂತರ ಉದ್ಘಾಟನೆ ಮಾಡಲಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...