Homeಮುಖಪುಟಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ಮೊದಲ ಭಾಗದಲ್ಲಿ ಗುಜರಾತ್ ಗಲಭೆಯ ಕುರಿತು ಚಿತ್ರಿಸಿದ್ದರೆ, ಮೋದಿ ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಆಗಿರುವ ಬೆಳವಣಿಗೆಗಳ ಕುರಿತು ಎರಡನೇ ಭಾಗ ಚರ್ಚಿಸಿದೆ.

- Advertisement -
- Advertisement -

ಲಂಡನ್: ಪ್ರಧಾನಿ ಮೋದಿಯರವರ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರವಾದ ‘ಇಂಡಿಯಾ: ದಿ ಮೋದಿ ಕ್ವಶ್ಚನ್‌’ ಎರಡನೇ ಭಾಗ ಬಿಡುಗಡೆಯಾಗಿದೆ. ಮೊದಲ ಭಾಗದಲ್ಲಿ 2002ರ ಗುಜರಾತ್‌ ಗಲಭೆಯ ಕುರಿತು ಬೆಳಕು ಚೆಲ್ಲಿದ್ದು ಸಾಕ್ಷ್ಯಾಚಿತ್ರ ವಿವಾದಕ್ಕೆ ಕಾರಣವಾಗಿತ್ತು. ಮೋದಿಯವರು ಪ್ರಧಾನಿಯಾದ ಬಳಿಕ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಆಗಿರುವ ಬೆಳವಣಿಗೆಗಳನ್ನು ಸಾಕ್ಷ್ಯಾಚಿತ್ರದ ಎರಡನೇ (ಹಾಗೂ ಕೊನೆಯ) ಭಾಗದಲ್ಲಿ ಚರ್ಚಿಸಲಾಗಿದೆ.

ಮುಸ್ಲಿಮರ ಮೇಲೆ ಮಾಬ್‌ ಲಿಂಚಿಂಗ್‌, ಆರ್ಟಿಕಲ್ 370 ಮತ್ತು ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯಿದೆ, 2020ರಲ್ಲಿ ಈಶಾನ್ಯ ದೆಹಲಿಯಲ್ಲಿದ್ದಾಗ ಕೋಮು ಹಿಂಸಾಚಾರದ ಕುರಿತು ಈ ಸಾಕ್ಷ್ಯಾಚಿತ್ರ ಚರ್ಚಿಸಿದೆ. ಈ ಅಂತಿಮ ಸರಣಿಯಲ್ಲಿ ಬಿಬಿಸಿ ಮಾಧ್ಯಮವು ಸ್ವತಂತ್ರ ವರದಿಗಳು, ಸಾಕ್ಷ್ಯಗಳು, ಬಾಧಿತರು, ಶಿಕ್ಷಣ ತಜ್ಞರು, ಪತ್ರಿಕರ್ತರು ಮತ್ತು ನಾಗರಿಕ ಸಮಾಜದ ಅಭಿಪ್ರಾಯಗಳನ್ನು ದಾಖಲಿಸಿದೆ. ಬಿಜೆಪಿಯ ದೃಷ್ಟಿಕೋನವನ್ನು ಪ್ರತಿನಿಧಿಸುವ ಮೂರು ವ್ಯಕ್ತಿಗಳ ಅಭಿಪ್ರಾಯಗಳನ್ನೂ ಇದು ಒಳಗೊಂಡಿದೆ. ಪ್ರಮುಖವಾಗಿ ಪತ್ರಕರ್ತ ಮತ್ತು ಬಿಜೆಪಿಯ ಮಾಜಿ ಸಂಸದ ಸ್ವಪನ್ ದಾಸ್‌ಗುಪ್ತಾ ಅವರ ಹೇಳಿಕೆಗಳು ಇಲ್ಲಿವೆ.

‘ಅಭ್ಯುದಯದ ಹೊಸ ಯುಗ’ ಮತ್ತು ‘ನವ ಭಾರತ’ದ ಭರವಸೆಯನ್ನು ಮೋದಿಯವರು ನೀಡಿದರೂ, ಅವರ ಅಧಿಕಾರವಧಿಯಲ್ಲಿ ದೇಶವು ‘ಧಾರ್ಮಿಕ ಪ್ರಕ್ಷುಬ್ಧತೆಯಿಂದ ಹಾಳಾಗಿದೆ’ ಎಂದು ಸಾಕ್ಷ್ಯಚಿತ್ರ ಪ್ರತಿಪಾದಿಸುತ್ತದೆ. ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ಭಾರತದ ಅತ್ಯುನ್ನತ ನ್ಯಾಯಾಲಯವು ತೆರವುಗೊಳಿಸಿದ್ದರೂ, ‘ಆತಂಕಗಳು ದೂರವಾಗುವುದಿಲ್ಲ’ ಎಂದು ಹೊಸ ಸಂಚಿಕೆ ಪ್ರತಿಪಾದಿಸಿದೆ.

ಮಾಬ್ ಲಿಂಚಿಂಗ್‌ (ಗೋರಕ್ಷಣೆ ನೆಪದಲ್ಲಿ ಹಿಂಸೆಗಳು)

2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೂರು ವರ್ಷಗಳ ನಂತರ, ಮುಸ್ಲಿಮರ ವಿರುದ್ಧ ವ್ಯಾಪಕವಾಗಿ ಹಲ್ಲೆ ಪ್ರಕರಣಗಳು ನಡೆದಿವೆ. ಗೋಮಾಂಸ ಸಾಗಣೆ ವಿಚಾರ ಹೆಚ್ಚಾಗಿ ವಿವಾದಾಸ್ಪದವಾಗಿದೆ.  ನಂತರ ಅನೇಕ ಭಾರತೀಯ ರಾಜ್ಯಗಳಲ್ಲಿ ಗೋಮಾಂಸವನ್ನು ಕಾನೂನುಬಾಹಿರ ಮಾಡಲಾಯಿತು. ಏಕೆಂದರೆ ಗೋವುಗಳನ್ನು ಹಿಂದೂಗಳು ಪವಿತ್ರವೆಂದು ಪರಿಗಣಿಸುತ್ತಾರೆ. ಗೋವಿನ ರಕ್ಷಣೆ ವಿಷಯವನ್ನು ಕೇಂದ್ರೀಕರಿಸುವ ಈ ಭಾಗವು 2017ರಲ್ಲಿ ಗೋರಕ್ಷಕರಿಂದ ಕೊಲ್ಲಲ್ಪಟ್ಟ ಅಲಿಮುದ್ದೀನ್ ಅನ್ಸಾರಿ ಅವರ ಕಥೆಯನ್ನು ಹೇಳುತ್ತದೆ. ಸುದೀರ್ಘ ಮೌನದ ನಂತರ ಪ್ರಧಾನಿ ಮೋದಿಯವರು ಈ ಕುರಿತು ಮಾತನಾಡಿದ್ದರು.

ಅಲಿಮುದ್ದೀನ್‌ನ ಹತ್ಯೆಯಲ್ಲಿ ಬಿಜೆಪಿ ವಕ್ತಾರ ನಿತ್ಯಾನಂದ ಮಹತೋ ಹೇಗೆ ತಪ್ಪಿತಸ್ಥರೆಂದು ಸಾಬೀತಾಯಿತು ಮತ್ತು ಜೀವಾವಧಿ ಶಿಕ್ಷೆಗೆ ಗುರಿಯಾದರು ಎಂಬುದನ್ನು ಸಾಕ್ಷ್ಯಚಿತ್ರವು ವರದಿ ಮಾಡಿದೆ. ಆದರೆ ಮೋದಿಯವರ ಮಂತ್ರಿಗಳಲ್ಲಿ ಒಬ್ಬರು ಅವರಿಗೆ ಸಹಾಯ ಮಾಡಿದ್ದನ್ನು, ತಪ್ಪಿತಸ್ತರಿಗೆ ಹೂವಿನ ಹಾರ ಹಾಕಿ ಸ್ವಾಗತಿಸಿದ ಬೆಳವಣಿಗೆಗಳ ಕುರಿತು ಇಲ್ಲಿ ದಾಖಲಿಸಲಾಗಿದೆ.

“ಅವರು ಇಡೀ ದೇಶದ ಆಡಳಿತಗಾರರು. ಅಂಥವರು ಈ ಜನರನ್ನು ಬೆಂಬಲಿಸಿದಾಗ, ನಾವು ಬಡವರು ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಚಿತ್ರದಲ್ಲಿ ಅನ್ಸಾರಿ ಅವರ ಪತ್ನಿ ಅಳಲು ತೋಡಿಕೊಂಡಿದ್ದಾರೆ. ಹಲ್ಲೆ ನಡೆಸಿದವರು ನಾಲ್ಕು ವರ್ಷಗಳ ನಂತರವೂ ಸ್ವತಂತ್ರರಾಗಿದ್ದಾರೆ ಎಂದು ವಿಷಾದಿಸಿದ್ದಾರೆ.

ಹ್ಯೂಮನ್‌ ರೈಟ್ಸ್‌ ವಾಚ್ ಪ್ರಕಾರ, “ಮೇ 2015 ಮತ್ತು ಡಿಸೆಂಬರ್ 2018ರ ನಡುವೆ ಮೂರೂವರೆ ವರ್ಷಗಳಲ್ಲಿ, ಗೋರಕ್ಷಕರು, ಗೋಸಂಬಂಧಿ ಹಿಂಸಾಚಾರದಲ್ಲಿ 44 ಜನರನ್ನು ಕೊಂದು ಸುಮಾರು 280 ಮಂದಿಯನ್ನು ಗಾಯಗೊಳಿಸಿದ್ದಾರೆ, ಅದರಲ್ಲಿ ಹೆಚ್ಚಿನ ಬಲಿಪಶುಗಳು ಮುಸ್ಲಿಮರು” ಎನ್ನುತ್ತದೆ. ಈ ವಿಷಯಗಳನ್ನು ಸಾಕ್ಷ್ಯಾಚಿತ್ರ ದಾಖಲಿಸಿದೆ.

ವಿಧಿ 370 ರದ್ಧತಿ

ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿಯನ್ನು ಆಗಸ್ಟ್ 2019ರಲ್ಲಿ ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶಗಳನ್ನು ರೂಪಿಸಿದ್ದರ ಕುರಿತು ಸಾಕ್ಷಾಚಿತ್ರ ಮಾತನಾಡುತ್ತದೆ.  “ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂಬತ್ತು ವಾರಗಳ ನಂತರ” ಸೇನಾ ಬಲ ಹೆಚ್ಚಿಸಲಾಯಿತು. ಕೇಂದ್ರದ ಹಿಡಿತಕ್ಕೆ ಕಾಶ್ಮೀರವನ್ನು ತೆಗೆದುಕೊಳ್ಳಲಾಯಿತು. ಆದಾಗ್ಯೂ, ಸರ್ಕಾರವು ತನ್ನ ನೀತಿಗಳಿಂದ ಈ ಪ್ರದೇಶದಲ್ಲಿ “ಶಾಂತಿ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತಿದೆ” ಎಂದು ಹೇಳಿಕೊಂಡಿದೆ.

ವಿದ್ವಾಂಸ, ಲೇಖಕ ಕ್ರಿಸ್ಟೋಫ್ ಜಾಫ್ರೆಲಾಟ್ ಪ್ರಕಾರ, “ಭಾರತೀಕರಣ”ದ ಹೊಸ ನೀತಿಯು ನಡೆಯುತ್ತಿದೆ. ಆರ್ಟಿಕಲ್ 370 ರದ್ದುಗೊಳಿಸಲಾದ ಬಳಿಕ “ಮೊದಲ ತಿಂಗಳಲ್ಲೇ ಸುಮಾರು 4,000 ಜನರನ್ನು ಬಂಧಿಸಲಾಗಿದೆ” ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಈ ಸಾಕ್ಷ್ಯಾಚಿತ್ರ ಎರಡನೇ ಭಾಗ ಮಾತನಾಡಿದೆ.

ಸಿಎಎ ಮತ್ತು ಈಶಾನ್ಯ ದೆಹಲಿ ಹಿಂಸಾಚಾರ

ಭಾರತದ ಪೌರತ್ವದೊಂದಿಗೆ ಧರ್ಮವನ್ನು ಥಳುಕು ಹಾಕಿದ್ದರಿಂದ ‘ಪೌರತ್ವ ತಿದ್ದುಪಡಿ ಕಾಯ್ದೆ’ (ಸಿಸಿಎ) ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆಗಳು ಭುಗಿಲೆದ್ದವು. ಇದು ಮಹತ್ವದ ವಿಭಾಗಗಳಲ್ಲಿ ಎಚ್ಚರಿಕೆಯ ಗಂಟೆಗಳನ್ನು ಬಾರಿಸಿತು. ಫೆಬ್ರವರಿ 2020ರಲ್ಲಿ ದೆಹಲಿಯಲ್ಲಿ ಕನಿಷ್ಠ 53 ಜೀವಗಳನ್ನು ಬಲಿ ತೆಗೆದುಕೊಂಡ ಕೋಮು ಹಿಂಸಾಚಾರದ ಕುರಿತು ಸಾಕ್ಷ್ಯಾಚಿತ್ರವು ಆತಂಕ ವ್ಯಕ್ತಪಡಿಸಿದೆ. “ಕಟ್ಟರ್‌ ಹಿಂದುತ್ವ ಧರ್ಮಗುರುಗಳು ಮುಸ್ಲಿಂ ಪ್ರತಿಭಟನಾಕಾರರ ವಿರುದ್ಧ ಬೆದರಿಕೆ ಹಾಕಿದರು” ಎನ್ನುತ್ತದೆ.

ಫೈಜಾನ್ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು “ಪೊಲೀಸರು ಹೊಡೆದು ಸಾಯಿಸಿದ್ದಾರೆ” ಎಂದು ಸಾಕ್ಷ್ಯಚಿತ್ರವು ವೈರಲ್ ವೀಡಿಯೊವೊಂದನ್ನು ಉಲ್ಲೇಖಿಸುತ್ತದೆ. ಫೈಜಾನ್‌ನ ತಾಯಿ ಮಾತನಾಡಿದ್ದು, “ನನಗೆ ಮತ್ತು ನನ್ನ ಮಗನಿಗೆ ನ್ಯಾಯ ಬೇಕು. ಆತ ನಿರಪರಾಧಿ ಮತ್ತು ಯಾವುದೇ ಕಾರಣವಿಲ್ಲದೆ ಕೊಲೆಯಾಗಿದ್ದಾನೆ” ಎಂದಿದ್ದಾರೆ.

ಇದನ್ನೂ ಓದಿರಿ: ಜನರು ದೂರದರ್ಶನ ನಂಬದಿದ್ದರೂ BBC ನಂಬುತ್ತಾರೆ: ಮೋದಿಯ ಹಳೆಯ ವಿಡಿಯೊ ವೈರಲ್‌

“2020ರ ದೆಹಲಿ ಹಿಂಸಾಚಾರದಲ್ಲಿ ಸತ್ತವರಲ್ಲಿ ಮೂರನೇ ಎರಡರಷ್ಟು ಜನರು ಮುಸ್ಲಿಮರಾಗಿದ್ದಾರೆ ಎಂದು ವರದಿಯಾಗಿದೆ” ಎಂದು ಸಾಕ್ಷ್ಯಾಚಿತ್ರ ಹೇಳುತ್ತದೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ ಸಂಸ್ಥೆಯ ತನಿಖೆಯನ್ನು ಉಲ್ಲೇಖಿಸುತ್ತದೆ. “ಪೊಲೀಸರು ಚಿತ್ರಹಿಂಸೆ ನೀಡಿದರು, ಪ್ರತಿಭಟನಾಕಾರರ ಮೇಲೆ ಅತಿಯಾದ ಮತ್ತು ಅನಿಯಂತ್ರಿತ ಬಲ ಪ್ರಯೋಗ ಮಾಡಿದರು, ಹಿಂಸಾಚಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಸೇರಿದಂತೆ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯಾಯಿತು” ಎಂದು ಅಮ್ನೆಸ್ಟಿ ಹೇಳಿದೆ.

ಆಮ್ನೆಸ್ಟಿ ಇಂಟರ್‌ನ್ಯಾಶನಲ್ ಇಂಡಿಯಾದ ಅಧ್ಯಕ್ಷ ಆಕರ್ ಪಟೇಲ್, “ದೆಹಲಿಯಲ್ಲಿ ನಡೆದ ಹಿಂಸಾಚಾರದ ಕುರಿತು ಆಮ್ನೆಸ್ಟಿ ವರದಿಯು ಪೊಲೀಸರು ನಡೆದುಕೊಳ್ಳಬೇಕಾದಂತೆ ನಡೆದುಕೊಂಡಿಲ್ಲ ಎಂದು ತೋರಿಸಿದೆ” ಎಂದಿದ್ದಾರೆ.

ಕೊನೆಯಲ್ಲಿ…

“ಪತ್ರಕರ್ತರು ತಮ್ಮ ವೃತ್ತಿ ಕಾರಣಗಳಿಂದಾಗಿ ಹಿಂಸೆ, ಬೆದರಿಕೆ ಮತ್ತು ಬಂಧನವನ್ನು ಎದುರಿಸುತ್ತಿದ್ದಾರೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಪತ್ರಿಕಾ ಸ್ವಾತಂತ್ರ್ಯ ಕ್ಷೀಣಿಸಿದೆ ಮತ್ತು ಈಗ ಬಿಕ್ಕಟ್ಟಿನಲ್ಲಿದೆ ಎಂದು ಹೋರಾಟಗಾರರು ಹೇಳುತ್ತಾರೆ. ಮಾನವ ಹಕ್ಕುಗಳ ಹೋರಾಟಗಾರರು ತಮ್ಮ ಮೇಲೆ ದಾಳಿ ನಡೆಯುತ್ತಿವೆ” ಎನ್ನುವುದನ್ನು ಡಾಕ್ಯುಮೆಂಟರಿ ಒಳಗೊಂಡಿದೆ.

(ಈ ವರದಿಯು ‘ದಿ ವೈರ್‌’ನಲ್ಲಿ ಪ್ರಕಟಿಸಲಾದ ಬರಹದಿಂದ ಆಯ್ದ ಅಂಶಗಳನ್ನು ಒಳಗೊಂಡಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...