Homeಮುಖಪುಟತಮಿಳುನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ "ಬೇಷರತ್ ಬೆಂಬಲ" ನೀಡಿದ ಕಮಲ್ ಹಾಸನ್

ತಮಿಳುನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ “ಬೇಷರತ್ ಬೆಂಬಲ” ನೀಡಿದ ಕಮಲ್ ಹಾಸನ್

- Advertisement -
- Advertisement -

ಮಕ್ಕಳ್ ನೀಧಿ ಮೈಯಂ ಪಕ್ಷದ ಸಂಸ್ಥಾಪಕ, ನಟ-ರಾಜಕಾರಣಿ ಕಮಲ್ ಹಾಸನ್ ತಮಿಳುನಾಡಿನ ಈರೋಡ್ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೇಷರತ್ ಬೆಂಬಲ ನೀಡಿದ್ದಾರೆ. ಅವರ ಈ ನಡೆಯು  2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರಲು ಕಾರಣವಾಗಬಹುದು ಎಂದು ಸುಳಿವು ನೀಡಿದಂತಿದೆ.

ಆಡಳಿತಾರೂಢ ಡಿಎಂಕೆ ಮತ್ತು ಕಾಂಗ್ರೆಸ್ ಅನ್ನು ಕಮಲ್ ಹಾಸನ್ ಟೀಕಿಸಿರುವುದನ್ನು ಪರಿಗಣಿಸಿ, ಈ ನಿಮ್ಮ ನಡೆಯು ಕಾರ್ಯತಂತ್ರದ ಬದಲಾವಣೆಯೇ ಎಂದು ಎನ್‌ಡಿಟಿವಿ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಉತ್ತರಿಸಿದ ಅವರು, “ಜನರ ವಿಷಯಕ್ಕೆ ಬಂದಾಗ ರಾಜಿ ಎಂದು ಕರೆಯುವುದು ಏನೂ ಇಲ್ಲ, ನಾನು ಮಧ್ಯಪಂಥೀಯ, ಸಿದ್ಧಾಂತ ಮಾಡಬಾರದು. ಇದು ಜನರ ಸೇವೆಗೆ ಅಡ್ಡಿಯಾಗುತ್ತದೆ” ಎಂದು ಹೇಳಿದರು.

ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯೊಂದಿಗೆ ಎಂಎನ್‌ಎಂ ನಾಯಕ ಪಥಸಂಚಲನ ನಡೆಸುತ್ತಿರುವುದನ್ನು ನೋಡಿದ ನಂತರ ಕಮಲ್ ಹಾಸನ್ ಅವರು ಕಾಂಗ್ರೆಸ್ ಜೊತೆಗೆ ಹೊಂದಾಣಿಯ ಬಗ್ಗೆ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ: ‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ – ಕಮಲ್ ಹಾಸನ್

“ಕಳೆದುಹೋದ ನಮ್ಮ ಭಾರತದ ನೀತಿಗಳನ್ನು ಮರಳಿ ಪಡೆಯುವುದು ನಮ್ಮ ಜವಾಬ್ದಾರಿಯಾಗಿದೆ. ಇದು (ಭಾರತ್ ಜೋಡೋ ಅಭಿಯಾನ) ರಾಜಕೀಯವನ್ನು ಮೀರಿದ ಯಾತ್ರೆಯಾಗಿದೆ” ಎಂದು ನಟ-ರಾಜಕಾರಣಿ ಕಮಲ್ ಹಾಸನ್ ಸುದ್ದಿಗಾರರಿಗೆ ತಿಳಿಸಿದ್ದರು.

ಬಿಜೆಪಿಯನ್ನು ಪರೋಕ್ಷವಾಗಿ ಉಲ್ಲೇಖಿಸಿ, ಎಂಎನ್‌ಎಂ ಸಂಸ್ಥಾಪಕರು ಈರೋಡ್ ಚುನಾವಣೆಯು “ಕೋಮುವಾದಿ ಶಕ್ತಿಗಳ” ವಿರುದ್ಧ ಕೈಜೋಡಿಸುವ ಕಾರಣಕ್ಕಾಗಿ ಈ ಹೋರಾಟವಾಗಿದೆ. “ನಾನು ಏಕಸಂಸ್ಕೃತಿಯನ್ನು ದ್ವೇಷಿಸುತ್ತೇನೆ. ನನ್ನ ಯುದ್ಧವು ಇಲ್ಲಿ ಸಣ್ಣ ಮೈದಾನದಲ್ಲಿ ಪ್ರಾರಂಭವಾಗುತ್ತದೆ ಮತ್ತು ರಾಷ್ಟ್ರವ್ಯಾಪಿ ವಿಸ್ತರಿಸುತ್ತದೆ” ಎಂದು ಹೇಳಿದರು.

2019 ರ ಲೋಕಸಭೆ ಚುನಾವಣೆ ಮತ್ತು 2021 ರ ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಎಂಎನ್‌ಎಂ ಪಕ್ಷ ಸ್ವತಂತ್ರವಾಗಿ ಎದುರಿಸಿತ್ತು. ಇದೇ ಮೊದಲ ಬಾರಿಗೆ ನಟ-ರಾಜಕಾರಣಿಯು ಚುನಾವಣೆಯಲ್ಲಿ ಮತ್ತೊಂದು ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದಾರೆ.

ಕಮಲ್ ಹಾಸನ್ ಅವರು, ಭ್ರಷ್ಟಾಚಾರ, ರಾಜವಂಶದ ರಾಜಕೀಯದ ವಿರುದ್ಧ ಹೋರಾಡುವ ಭರವಸೆ, ಗ್ರಾಮೀಣ ಸಬಲೀಕರಣದ ಜೊತೆಗೆ ಹಲವು ದ್ದೇಶಗಳೊಂದಿಗೆ 2018 ರಲ್ಲಿ MNM ಅನ್ನು ಪ್ರಾರಂಭಿಸಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ತಿರುಮಹನ್ ಎವೆರಾ ನಿಧನದ ನಂತರ ಈರೋಡ್ ಪೂರ್ವ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಕೆಲ ದಿನಗಳ ಹಿಂದೆ ಕಮಲ್ ಹಾಸನ್ ಅವರ ಬೆಂಬಲ ಕೋರಿದ್ದ ತಿರುಮಹಾನ್ ಅವರ ತಂದೆ, ಹಿರಿಯ ನಾಯಕ ಇವಿಕೆಎಸ್ ಇಳಂಗೋವನ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇಳಂಗೋವನ್ ಅವರು ಒಬ್ಬ ವಿಚಾರವಾದಿ ನಾಯಕ ಹಾಗೂ ದಿವಂಗತ ಪೆರಿಯಾರ್ ಅವರ ಮೊಮ್ಮಗ ಕೂಡ ಹೌದು.

ಕಮಲ್ ಹಾಸನ್ ಅವರ ಬೆಂಬಲವು ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಶೀಲ ಮೈತ್ರಿಕೂಟಕ್ಕೆ ಈ ಸ್ಥಾನವನ್ನು ಗೆಲ್ಲಲು ದೊಡ್ಡ ಉತ್ತೇಜನ ನೀಡಿದೆ. ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಪಳನಿಸಾಮಿ ಮತ್ತು ಉಚ್ಛಾಟಿತ ನಾಯಕ ಓ ಪನ್ನೀರಸೆಲ್ವಂ ನಡುವಿನ ಆಂತರಿಕ ಹೋರಾಟದಿಂದ ಪ್ರಮುಖ ವಿರೋಧ ಪಕ್ಷವಾದ ಎಐಎಡಿಎಂಕೆ ತತ್ತರಿಸಿ ಹೋಗಿದ್ದು, ಇಬ್ಬರೂ ಚುನಾವಣೆಗೆ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಹೇಳಿದ್ದಾರೆ. ಬಿಜೆಪಿ ತನ್ನನ್ನು ತಾನು ಪ್ರಬಲ ಪ್ರತಿಪಕ್ಷ ಎಂದು ಬಿಂಬಿಸಿಕೊಂಡಿತ್ತು ಆದರೆ ಇಪಿಎಸ್ ಬಣ ಈ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿದ ನಂತರ ಹಿನ್ನಡೆ ಅನುಭವಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...