Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಇಂದು ಸಂಜೆ ಪ್ರದರ್ಶನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಎಡಪಂಥೀಯ ಗುಂಪಿನ ಸದಸ್ಯರು ಸೇರಿದಂತೆ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ವಿದ್ಯಾರ್ಥಿಗಳನ್ನು ದೆಹಲಿಯ ಪ್ರತಿಷ್ಠಿತ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಅಮಾನತುಗೊಳಿಸಲಾಗಿದೆ. ಈ ಅನ್ಯಾಯದ ವಿರುದ್ಧ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು, ಬ್ಯಾನರ್‌ಗಳನ್ನು ಬೀಸುತ್ತಾ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ಎಳೆದೊಯ್ದರು.

ಪೊಲೀಸರು ಅಶ್ರುವಾಯು ಫಿರಂಗಿಗಳೊಂದಿಗೆ ವ್ಯಾನ್‌ಗಳಲ್ಲಿ ದೆಹಲಿಯ ಕಾಲೇಜಿನ ಗೇಟ್‌ ಒಳಗೆ ಬಂದರು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿನ ಒಳಗೆ ಪ್ರವೇಶ ನೀಡಲಾಯಿತು ಆಗ ಇತರರು ತಿರುಗಿಬಿದ್ದರು ಆಗ ಗಲಾಟೆ ಸಂಭವಿಸಿದೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಯ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐನವರು ಪ್ರಧಾನಿ ನರೇಂದ್ರ ಮೋದಿ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಇಂದು ಸಂಜೆ ಪ್ರದರ್ಶನ ಮಾಡುವ ವಿಚಾರವನ್ನು ಫೇಸ್‌ಬುಕ್‌ನಲ್ಲಿ ಘೋಷಿಸಿದ್ದಾರೆ. ನಂತರ ಮಂಗಳವಾರ ಜಾಮಿಯಾ ಅಧಿಕಾರಿಗಳು, ಕ್ಯಾಂಪಸ್‌ನಲ್ಲಿ ಯಾವುದೇ ಅನಧಿಕೃತ ಕೂಟಗಳಿಗೆ ಅವಕಾಶ ನೀಡುವುದಿಲ್ಲ ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ಈ ಬಗ್ಗೆ ಎಸ್‌ಎಫ್‌ಐ ನಾಯಕ ವರ್ಕಿ ಪರಕ್ಕಲ್ ಎನ್‌ಡಿಟಿವಿಗೆ ಮಾತನಾಡಿದ್ದು, “ವಿದ್ಯಾರ್ಥಿಗಳು ಕಾನೂನುಬಾಹಿರವಾಗಿ ಏನನ್ನೂ ಮಾಡಿಲ್ಲ, ಸಾಕ್ಷ್ಯಚಿತ್ರವನ್ನು ಔಪಚಾರಿಕವಾಗಿ ನಿಷೇಧಿಸಲಾಗಿಲ್ಲ, ಸರ್ಕಾರದ ವಿರುದ್ಧ ಭಿನ್ನಾಭಿಪ್ರಾಯವು ಸಂವಿಧಾನದಲ್ಲಿ ಪ್ರತಿಪಾದಿಸಲ್ಪಟ್ಟ ಹಕ್ಕು, ನಮಗೆ ಕಲಿಸಬೇಕಾದ ಉನ್ನತ ಶಿಕ್ಷಣದ ಸ್ಥಳಗಳಲ್ಲಿ ಪ್ರಜಾಪ್ರಭುತ್ವದ ಈ ಮೂಲಭೂತ ಗುಣಗಳನ್ನು ನಿರಾಕರಿಸುತ್ತಿದ್ದಾರೆ. ಇದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಹೇಳಲಾಗುತ್ತದೆ. ಆದರೆ ವಿದ್ಯಾರ್ಥಿಗಳು ಪ್ರಶ್ನಿಸಲು, ಟೀಕಿಸಲು, ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ನಿರ್ಭಂಧ ಹೇರಲಾಗುತ್ತಿದೆ. ಇದು ಅತ್ಯಂತ ಅಪಾಯಕಾರಿ ಪ್ರವೃತ್ತಿಯನ್ನು ತೋರಿಸುತ್ತಿದೆ” ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಗೋಧ್ರಾ ಹತ್ಯಾಕಾಂಡವನ್ನು ಆಧರಿಸಿದ ಸಾಕ್ಷ್ಯಚಿತ್ರವು ದೇಶ ಮಾತ್ರವಲ್ಲದೇ ವಿಶ್ವದಾದ್ಯಂತ ಬಿರುಗಾಳಿಯನ್ನು ಎಬ್ಬಿಸಿದೆ. ಸರ್ಕಾರವು ಚಲನಚಿತ್ರದ ಮೇಲೆ ಹಿಡಿತ ಸಾಧಿಸಿದೆ ಮತ್ತು ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಅದರ ಲಿಂಕ್‌ಗಳನ್ನು ತೆಗೆದುಹಾಕುವಂತೆ ಕೇಳಿದೆ. ಪ್ರತಿಪಕ್ಷಗಳು ಈ ಕ್ರಮವನ್ನು ‘ಘೋರ ಸೆನ್ಸಾರ್‌ಶಿಪ್’ ಎಂದು ಟೀಕಿಸಿವೆ.

ನಿನ್ನೆ ಸಂಜೆ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಕೆಲವು ವಿದ್ಯಾರ್ಥಿಗಳು ಈ ಸಾಕ್ಷ್ಯಚಿತ್ರದ ಪ್ರದರ್ಶನ ಕಾರ್ಯಕ್ರಮ ಆಯೋಜಿಸಿದ್ದರು. ಆದರೆ ಆಡಳಿತ ಮಂಡಳಿಯು, ಇಂಟರ್ನೆಟ್ ಮತ್ತು ವಿದ್ಯುತ್ ಎರಡನ್ನೂ ಸ್ಥಗಿತಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿತು. ಆದರೆ ನೂರಾರು ಜನಸಮೂಹವು ಫೋನ್ ಪರದೆಗಳಲ್ಲಿ ಅಥವಾ ಅವರ ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಕತ್ತಲೆಯಲ್ಲಿ ಹೊರಗೆ ಒಟ್ಟಿಗೆ ಸೇರಿತು ಮತ್ತು ಸಂಜೆ ಪ್ರತಿಭಟನಾ ಮೆರವಣಿಗೆಯೊಂದಿಗೆ ಕೊನೆಗೊಳಿಸಿದರು.

2002ರ ಗೋಧ್ರಾ ಹತ್ಯಾಕಾಂಡವು ಮೂರು ದಿನಗಳ ನಡೆಯಿತು. ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ರೈಲಿನ ಬೋಗಿಗೆ ಬೆಂಕಿ ಹಚ್ಚಿ 59 ಜನರನ್ನು ಕೊಲ್ಲಲಾಯಿತು. ಆ ನಂತರ ಪ್ರಾರಂಭವಾದ ಗಲಭೆಯಲ್ಲಿ 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಆರೆ ಈ ಗಲಭೆಯನ್ನು ತಡೆಯಲು ರಾಜ್ಯ ಪೊಲೀಸರು ಸಾಕಷ್ಟು ಪ್ರಯತ್ನಗಳನ್ನು ಮಾಡಲಿಲ್ಲ ಎಂಬ ಗಂಭೀರ ಆರೋಪವನ್ನು ಮೋದಿ ಎದುರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...