Homeಅಂಕಣಗಳುಬಿಬಿಸಿ ಸಾಕ್ಷ್ಯಚಿತ್ರ; ಪ್ರಶ್ನಿಸುವುದನ್ನೇ ದಮನಿಸುತ್ತಿರುವ ಪ್ರಭುತ್ವ

ಬಿಬಿಸಿ ಸಾಕ್ಷ್ಯಚಿತ್ರ; ಪ್ರಶ್ನಿಸುವುದನ್ನೇ ದಮನಿಸುತ್ತಿರುವ ಪ್ರಭುತ್ವ

- Advertisement -
- Advertisement -

ಕೊಲಿಜಿಯಂ ಮುಂತಾದ ವಿಷಯಗಳನ್ನು ಮುಂದುಮಾಡಿ ಒಂದು ಕಡೆಗೆ ಸುಪ್ರೀಂ ಕೋರ್ಟ್ ಮೇಲೆ ಪರೋಕ್ಷ ದಾಳಿ; ಮತ್ತೊಂದು ಕಡೆಗೆ ಸುಪ್ರೀಂ ಕೋರ್ಟ್ ತೀರ್ಪಿತ್ತಿರುವುದರಿಂದ ಗುಜರಾತಿನ 2002ರ ನರಮೇಧದ ಬಗ್ಗೆ ಯಾವ ಪ್ರಶ್ನೆಯನ್ನೂ ಕೇಳುವಂತಿಲ್ಲ ಎಂಬ ಸೆನ್ಸಾರ್. ’ವಿಶ್ವ ಮಾಧ್ಯಮ  ಸ್ವಾತಂತ್ರ್ಯ’ ದಿನದಂದು ’ಪ್ರಜಾಪ್ರಭುತ್ವಕ್ಕೆ ಅತ್ಯಗತ್ಯವಾದ ಮುಕ್ತ ಮತ್ತು ಕ್ರಿಯಾಶೀಲ ಮಾಧ್ಯಮಕ್ಕೆ ನಮ್ಮ ಅಚಲ ಬೆಂಬಲವನ್ನು ಒತ್ತಿಹೇಳುವ ದಿನವಿದು’ ಎಂದು ಪ್ರಧಾನಿ ಟ್ವೀಟ್ ಮಾಡುವುದು; ಅದೇ ಟ್ವಿಟರ್ ವೇದಿಕೆಯಲ್ಲಿ ತಮ್ಮನ್ನು ಪ್ರಶ್ನಿಸುವ ಯಾವುದೇ ಕಂಟೆಂಟ್‌ಅನ್ನು ಮುಲಾಜಿಲ್ಲದೆ ತೆಗಿಸಲು ಕಾರ್ಯಪ್ರವೃತ್ತರಾಗುವುದು. ವಿರೋಧ ಪಕ್ಷಗಳ ಬಗ್ಗೆ ಸುಳ್ಳೋಪಳ್ಳೋ ಏನು ಬೇಕಾದರೂ ಆಪಾದನೆ ಮಾಡುವುದು; ಆಡಳಿತ ರೂಢ ಬಿಜೆಪಿ ವಿರುದ್ಧವಿರುವ ಯಾವುದೇ ಸುದ್ದಿ ಅಥವಾ ವಿಡಿಯೋಗಳನ್ನು ’ಪಿಐಬಿ ಫ್ಯಾಕ್ಟ್‌ಚೆಕ್’ ಹೆಸರಿನಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಆನ್‌ಲೈನ್ ಸುದ್ದಿ ಮಾಧ್ಯಮಗಳಿಂದ ತೆಗೆಸುವುದು. ಅಂತಹ ಸುದ್ದಿಗಳನ್ನು ಹಂಚಿಕೊಳ್ಳುವ ವಿರೋಧ ಪಕ್ಷಗಳ ರಾಜಕೀಯ ಮುಖಂಡರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ವಿಚ್‌ಹಂಟ್‌ಗೆ ಇಳಿಯುವುದು. ಇದು ಪ್ರಸಕ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕುಟಿಲ ನೀತಿ. ಯುಕೆ ಮೂಲದ ಬಿಬಿಸಿ ಸುದ್ದಿ ಮಾಧ್ಯಮದವರು ಇತ್ತೀಚೆಗೆ ಬಿಡುಗಡೆ ಮಾಡಿದ ’ಇಂಡಿಯಾ: ದ ಮೋದಿ ಕೊಶ್ಚನ್’ ಸಾಕ್ಷ್ಯಚಿತ್ರವನ್ನು ದಮನ ಮಾಡಲು ಬಳಸುತ್ತಿರುವ ಅಧಿಕಾರ ದುರುಪಯೋಗವನ್ನು ನೋಡಿದರೆ ಇದು ಇನ್ನಷ್ಟು ನಿಚ್ಚಳವಾಗುತ್ತದೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಐಟಿ ನಿಯಮಗಳು 2021ರ ತುರ್ತು ಅಧಿಕಾರವನ್ನು ಬಳಸಿ ಪ್ರಶ್ನೆಯಲ್ಲಿರುವ ಸಾಕ್ಷ್ಯಚಿತ್ರವನ್ನು ಯಾರೂ ಪ್ರಸಾರ ಮಾಡದಂತೆ ತಡೆ ಒಡ್ಡುತ್ತಿದೆ. ಅದಕ್ಕೆ ನಿಖರ ಕಾರಣಗಳನ್ನು ನೀಡಲು ಮಾತ್ರ ಇಲ್ಲಿಯವರೆಗೂ ಮುಂದಾಗಿಲ್ಲ!

ಮಾಹಿತಿ ಮತ್ತು ಪ್ರಸಾರ ಖಾತೆಯ ಹಿರಿಯ ಸಲಹೆಗಾರರಾಗಿರುವ ಕಾಂಚನ್ ಗುಪ್ತಾ ಅವರು ಜನವರಿ 21ರಂದು ನೀಡಿರುವ ಹೇಳಿಕೆಯ ಪ್ರಕಾರ, ’ಭಾರತದ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಅಲ್ಲಗೆಳೆಯುವುದರಿಂದ’ ಮತ್ತು ’ಸಮರ್ಥನೆಯಿಲ್ಲದ ಆರೋಪಗಳನ್ನು ಮಾಡಿರುವುದರಿಂದ’ ಸರ್ಕಾರ ಈ ಸಾಕ್ಷ್ಯಚಿತ್ರವನ್ನು ಹಂಚಿಕೊಳ್ಳುವ ಎಲ್ಲಾ ಲಿಂಕ್‌ಗಳನ್ನು ತೆಗೆಯುವಂತೆ ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಿದೆ ಎಂದಿದ್ದಾರೆ.

2002ರ ಗುಜರಾತ್ ನರಮೇಧದದ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ವಿಮರ್ಶಿಸುವ ಈ ಸಾಕ್ಷ್ಯಚಿತ್ರ, ನರಮೇಧದ ಸಮಯದ ಹಲವು ದೃಶ್ಯಾವಳಿಗಳನ್ನು ಪೋಣಿಸಿ, ಹಲವರನ್ನು ಸಂದರ್ಶಿಸಿ (ನರೇಂದ್ರ ಮೋದಿಯವರನ್ನು ಸಮರ್ಥಿಸಿಕೊಳ್ಳುವವರನ್ನೂ ಸಂದರ್ಶಿಸಲಾಗಿದೆ), ಇಷ್ಟೆಲ್ಲಾ ಸಮಯ ಕಳೆದಮೇಲೂ ಉಳಿದಿರುವ ಪ್ರಶ್ನೆಗಳನ್ನು ವೀಕ್ಷಕರ ಮುಂದಿಡುತ್ತದೆ. ಇದು ಯಾವುದೇ ಪಕ್ಷದ ಪ್ರಾಯೋಜಿತ ಕಾರ್ಯಕ್ರಮವಾಗಿರದೆ, ಮಾಧ್ಯಮವೊಂದು ಸ್ವತಂತ್ರವಾಗಿ ನಡೆಸಿದ ವರದಿಗಾರಿಕೆ, ತನಿಖೆ ಮತ್ತು ಸಂದರ್ಶನಗಳ ಮೇಲೆ ಚಿತ್ರಿತವಾಗಿರುವ ಸಾಕ್ಷ್ಯಚಿತ್ರ. ಈ ಸಾಕ್ಷ್ಯಚಿತ್ರ ಮಾಡಿರುವ ಆರೋಪಗಳಿಗೆ ತಮ್ಮ ಪ್ರತಿಕ್ರಿಯೆಗಾಗಿ ಸರ್ಕಾರವನ್ನು ಕೇಳಿದಾಗ, ಸರ್ಕಾರ ಪ್ರತಿಕ್ರಿಯಿಸಲು ನಿರಾಕರಿಸಿದೆ ಎಂದು ಕೂಡ ಬಿಬಿಸಿ ಹೇಳಿದೆ. ಹೀಗಿರುವಾಗ, ಸುಪ್ರೀಂ ಕೋರ್ಟ್ ತೀರ್ಪನ್ನು ಮುಂದೆ ಮಾಡಿ ಈ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವುದು ಯಾವ ಪಂಚಾಯಿತಿ ನ್ಯಾಯ? ಪತ್ರಿಕೋದ್ಯಮದ ಮಾನದಂಡಗಳನ್ನು ಅನುಸರಿಸದೆ ಏಕಪಕ್ಷೀಯವಾದ ಸಾಕ್ಷ್ಯಚಿತ್ರವನ್ನು ಬಿಬಿಸಿ ನಿರ್ಮಿಸಿದ್ದರೆ ಆಗ ಸರ್ಕಾರ ತನ್ನ ಪ್ರಶ್ನೆಗಳನ್ನು ಬಿಬಿಸಿಗೆ ಎಸೆಯಬಹುದಿತ್ತು! ಆದರೆ ತಾನೇ ಪ್ರಶ್ನೆಗಳಿಂದ ನುಣುಚಿಕೊಂಡು ಸೆನ್ಸಾರ್ ಮೊರೆ ಹೋದರೆ ಏನನ್ನೋ ಮುಚ್ಚಿಡುವ ಪ್ರಯತ್ನದಂತೆ ಕಾಣುವುದಿಲ್ಲವೇ?

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ವಿಚಾರ: ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಉಳಿಸಲು ಇದು ಸಕಾಲ ಎಂದ ಅಮೆರಿಕ

ಗುಜರಾತಿನ 2002ರ ನರಮೇಧಕ್ಕೆ ಅಂದಿನ ಮುಖ್ಯಮಂತ್ರಿ ಮೋದಿಯವರ ವೈಫಲ್ಯತೆ ಕಾರಣವಲ್ಲ ಅಥವಾ ಅದರಲ್ಲಿ ಅವರ ಪಾತ್ರವಿರಲಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ನೀಡಿರಬಹುದು. ಆದರೆ ಪತ್ರಿಕೋದ್ಯಮದ ಕೆಲಸ ಹೊಸ ಸಾಕ್ಷ್ಯಗಳನ್ನು ಹುಡುಕುವುದು ಮತ್ತು ತನ್ನ ಪ್ರಶ್ನಿಸುವ ಮನೋಭಾವವನ್ನು ಸದಾ ಉಳಿಸಿಕೊಳ್ಳುವುದು. ಈ ನಿಟ್ಟಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಸುಪ್ರೀಂ ಕೋರ್ಟ್ ತೀರ್ಪನ್ನೇನೂ ಮರೆಮಾಚದೆ, ತನ್ನ ವರದಿಗಾರಿಕೆಯ ಹಿನ್ನೆಲೆಯಲ್ಲಿ ಉಳಿದುಕೊಂಡಿರುವ ಪ್ರಶ್ನೆಗಳನ್ನು ಮತ್ತೆ ಕೇಳುವ ದಿಟ್ಟತನ ತೋರಿದೆ. ಇದಕ್ಕೆ ಮೋದಿಯವರೋ ಅಥವಾ ಸರ್ಕಾರದ ಪ್ರತಿನಿಧಿಗಳೋ ಉತ್ತರಿಸಬಹುದಿತ್ತು. ಆರೋಪ ಮತ್ತು ಅದಕ್ಕೆ ಸರ್ಕಾರ ನೀಡುವ ಉತ್ತರಗಳನ್ನು ತಾಳೆ ಹಾಕಿ ಡಾಕ್ಯುಮೆಂಟರಿಯನ್ನು ವೀಕ್ಷಿಸಿದ ಜನರು ತಮ್ಮ ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತಿತ್ತು. ಇದನ್ನು ಬಲವಂತದಿಂದ ನಿಯಂತ್ರಿಸುವ ಹುನ್ನಾರ ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ನಡೆಸುವ ದಾಳಿಯಲ್ಲದೆ ಮತ್ತೇನು? ಕೋಮುವಾದಿಗಳು ಸುಟ್ಟುಹಾಕಿದ ಮಾಜಿ ಸಂಸದ ಎಶಾನ್ ಜಾಫ್ರಿಯವರ ಕೊಲೆಗೆ ನ್ಯಾಯ ಸಿಕ್ಕಿಲ್ಲ ಎಂದು ಕೇಳುವುದು ಅಪರಾಧವಾಗಿಹೋಗಿದೆಯೇ?

ಒಂದು ಕಡೆ ಸಲ್ಲದ ಕಾರಣಗಳಿಗೆ ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ನಟಿಸಿರುವ ’ಪಠಾನ್’ ಚಿತ್ರವನ್ನು ಬಹಿಷ್ಕಾರ ಮಾಡುವಂತೆ ಕೊಡುತ್ತಿರುವ ಕರೆಗಳನ್ನು ವಿರೋಧಿಸುವ ಪ್ರಾಥಮಿಕ ಕರ್ತವ್ಯವನ್ನೂ ಪಾಲಿಸುತ್ತಿಲ್ಲ; ಸಿನಿಮಾ ಪ್ರದರ್ಶನಕ್ಕೆ ಅಗತ್ಯ ರಕ್ಷಣೆ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸುವ ಮಾತುಗಳನ್ನೂ ಆಡದ ಕೇಂದ್ರ ಸರ್ಕಾರ ಈಗ ತನಗೆ ಅಪಥ್ಯವಾದ ಒಂದು ಸಾಕ್ಷ್ಯಚಿತ್ರವನ್ನು ಭಾರತದ ಜನತೆಯಿಂದ ಮರೆಮಾಚಲು ಸಕ್ರಿಯವಾಗಿದೆ. ಒಂದೊಂದು ಲಿಂಕಿನಿಂದಲೂ ಆ ಸಾಕ್ಷ್ಯಚಿತ್ರವನ್ನು ತೆಗೆದುಹಾಕುವ ಸೂಚನೆ ಬರುತ್ತಿದ್ದಂತೆ ಅದು ಬೇರೇಬೇರೆ ಲಿಂಕುಗಳಲ್ಲಿ ಪ್ರತ್ಯಕ್ಷವಾಗುತ್ತಿರುವುದಂತೂ ಸತ್ಯ. ಅಂತರ್ಜಾಲದಲ್ಲಿ ನಿರ್ಬಂಧಿಸುವುದು ಎಂದರೆ ಪ್ರವಾಹದ ಸಮಯದಲ್ಲಿ ಅಣೆಕಟ್ಟು ಕಟ್ಟಲು ಶ್ರಮಪಟ್ಟಂತೆ. ಹೊಸಹೊಸ ಲಿಂಕುಗಳನ್ನು ಸಂಸದರಾದ ಟಿಎಂಸಿ ನಾಯಕಿ ಮೊಹುವಾ ಮೊಯಿತ್ರಾ ಸೇರಿದಂತೆ ಹಲವು ಪ್ರಾಜ್ಞರು ಮತ್ತೆಮತ್ತೆ ಟ್ವೀಟ್ ಮಾಡಿದ್ದಾರೆ. ಹೈದರಾಬಾದ್ ಸೆಂಟ್ರಲ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಮೂಹ ಈ ಸಾಕ್ಷ್ಯಚಿತ್ರದ ಸಾರ್ವಜನಿಕ ಪ್ರದರ್ಶನವನ್ನು ಏರ್ಪಡಿಸಿತ್ತು. ಜೆಎನ್‌ಯು ಇದರ ಪ್ರದರ್ಶನ ಏರ್ಪಡಿಸಿದಾಗ ವಿದ್ಯುತ್‌ಚ್ಛಕ್ತಿ ನಿಲ್ಲಿಸಿದ ವರದಿಗಳಿವೆ. ಕೇರಳದಲ್ಲಿ ಕೆಲವು ಸಾರ್ವಜನಿಕ ಪ್ರದರ್ಶನಗಳು ನಡೆದಿವೆ. ಹೀಗೆ ಕೇಂದ್ರ ಸರ್ಕಾರದ ನಡೆಗೆ ಪ್ರತಿರೋಧವನ್ನು ಹಲವರು ತೋರಿಸುತ್ತಿದ್ದಾರೆ. ’ತಮ್ಮ ಸುರಕ್ಷತೆಯ ಬಗೆಗಿನ ಭಯದಿಂದ ಸುಮಾರು 30ಕ್ಕೂ ಹೆಚ್ಚು ಜನ ಈ ಸಾಕ್ಷ್ಯಚಿತ್ರದ ಸಂದರ್ಶನದಲ್ಲಿ ಭಾಗವಹಿಸಲು ನಿರಾಕರಿಸಿದರು’ ಎಂದು ಸಾಕ್ಷ್ಯಚಿತ್ರದಲ್ಲಿ ಒಂದು ಕಡೆ ಬರುತ್ತದೆ. ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಜನ ಆತಂಕ ಪಡುವ ಸ್ಥಿತಿ ಭಾರತದಲ್ಲಿದೆ ಎಂಬುದು ಜಗತ್ತಿಗೆ ಈ ದೇಶದ ಬಗ್ಗೆ ಎಂತಹ ಚಿತ್ರಣವನ್ನು ಕಟ್ಟಿಕೊಡುತ್ತದೆ ಎಂಬುದರ ಬಗ್ಗೆ ಒಕ್ಕೂಟ ಸರ್ಕಾರಕ್ಕೆ ಅರಿವಿದೆಯೇ? ಈ ಭಯವನ್ನು ಮೀರಿದ ಯುವಜನರು ಎಚ್‌ಸಿಯು ಅಂತಹ ಜಾಗದಲ್ಲಿ ಸಾರ್ವಜನಿಕ ಪ್ರದರ್ಶನ ಏರ್ಪಡಿಸುತ್ತಾರೆ ಎಂಬ ಸಂಗತಿಯಾದರೂ ಈ ಸರ್ಕಾರದ ಮಂದಿಗೆ ವಿವೇಕ ನೀಡಲಿ. ದಮನಕಾರಿ ದುರುಳತನ ಕೊನೆಯಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...