Homeಅಂಕಣಗಳುಬಿಬಿಸಿ ಸಾಕ್ಷ್ಯಚಿತ್ರ; ಪ್ರಶ್ನಿಸುವುದನ್ನೇ ದಮನಿಸುತ್ತಿರುವ ಪ್ರಭುತ್ವ

ಬಿಬಿಸಿ ಸಾಕ್ಷ್ಯಚಿತ್ರ; ಪ್ರಶ್ನಿಸುವುದನ್ನೇ ದಮನಿಸುತ್ತಿರುವ ಪ್ರಭುತ್ವ

- Advertisement -
- Advertisement -

ಕೊಲಿಜಿಯಂ ಮುಂತಾದ ವಿಷಯಗಳನ್ನು ಮುಂದುಮಾಡಿ ಒಂದು ಕಡೆಗೆ ಸುಪ್ರೀಂ ಕೋರ್ಟ್ ಮೇಲೆ ಪರೋಕ್ಷ ದಾಳಿ; ಮತ್ತೊಂದು ಕಡೆಗೆ ಸುಪ್ರೀಂ ಕೋರ್ಟ್ ತೀರ್ಪಿತ್ತಿರುವುದರಿಂದ ಗುಜರಾತಿನ 2002ರ ನರಮೇಧದ ಬಗ್ಗೆ ಯಾವ ಪ್ರಶ್ನೆಯನ್ನೂ ಕೇಳುವಂತಿಲ್ಲ ಎಂಬ ಸೆನ್ಸಾರ್. ’ವಿಶ್ವ ಮಾಧ್ಯಮ  ಸ್ವಾತಂತ್ರ್ಯ’ ದಿನದಂದು ’ಪ್ರಜಾಪ್ರಭುತ್ವಕ್ಕೆ ಅತ್ಯಗತ್ಯವಾದ ಮುಕ್ತ ಮತ್ತು ಕ್ರಿಯಾಶೀಲ ಮಾಧ್ಯಮಕ್ಕೆ ನಮ್ಮ ಅಚಲ ಬೆಂಬಲವನ್ನು ಒತ್ತಿಹೇಳುವ ದಿನವಿದು’ ಎಂದು ಪ್ರಧಾನಿ ಟ್ವೀಟ್ ಮಾಡುವುದು; ಅದೇ ಟ್ವಿಟರ್ ವೇದಿಕೆಯಲ್ಲಿ ತಮ್ಮನ್ನು ಪ್ರಶ್ನಿಸುವ ಯಾವುದೇ ಕಂಟೆಂಟ್‌ಅನ್ನು ಮುಲಾಜಿಲ್ಲದೆ ತೆಗಿಸಲು ಕಾರ್ಯಪ್ರವೃತ್ತರಾಗುವುದು. ವಿರೋಧ ಪಕ್ಷಗಳ ಬಗ್ಗೆ ಸುಳ್ಳೋಪಳ್ಳೋ ಏನು ಬೇಕಾದರೂ ಆಪಾದನೆ ಮಾಡುವುದು; ಆಡಳಿತ ರೂಢ ಬಿಜೆಪಿ ವಿರುದ್ಧವಿರುವ ಯಾವುದೇ ಸುದ್ದಿ ಅಥವಾ ವಿಡಿಯೋಗಳನ್ನು ’ಪಿಐಬಿ ಫ್ಯಾಕ್ಟ್‌ಚೆಕ್’ ಹೆಸರಿನಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಆನ್‌ಲೈನ್ ಸುದ್ದಿ ಮಾಧ್ಯಮಗಳಿಂದ ತೆಗೆಸುವುದು. ಅಂತಹ ಸುದ್ದಿಗಳನ್ನು ಹಂಚಿಕೊಳ್ಳುವ ವಿರೋಧ ಪಕ್ಷಗಳ ರಾಜಕೀಯ ಮುಖಂಡರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ವಿಚ್‌ಹಂಟ್‌ಗೆ ಇಳಿಯುವುದು. ಇದು ಪ್ರಸಕ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕುಟಿಲ ನೀತಿ. ಯುಕೆ ಮೂಲದ ಬಿಬಿಸಿ ಸುದ್ದಿ ಮಾಧ್ಯಮದವರು ಇತ್ತೀಚೆಗೆ ಬಿಡುಗಡೆ ಮಾಡಿದ ’ಇಂಡಿಯಾ: ದ ಮೋದಿ ಕೊಶ್ಚನ್’ ಸಾಕ್ಷ್ಯಚಿತ್ರವನ್ನು ದಮನ ಮಾಡಲು ಬಳಸುತ್ತಿರುವ ಅಧಿಕಾರ ದುರುಪಯೋಗವನ್ನು ನೋಡಿದರೆ ಇದು ಇನ್ನಷ್ಟು ನಿಚ್ಚಳವಾಗುತ್ತದೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಐಟಿ ನಿಯಮಗಳು 2021ರ ತುರ್ತು ಅಧಿಕಾರವನ್ನು ಬಳಸಿ ಪ್ರಶ್ನೆಯಲ್ಲಿರುವ ಸಾಕ್ಷ್ಯಚಿತ್ರವನ್ನು ಯಾರೂ ಪ್ರಸಾರ ಮಾಡದಂತೆ ತಡೆ ಒಡ್ಡುತ್ತಿದೆ. ಅದಕ್ಕೆ ನಿಖರ ಕಾರಣಗಳನ್ನು ನೀಡಲು ಮಾತ್ರ ಇಲ್ಲಿಯವರೆಗೂ ಮುಂದಾಗಿಲ್ಲ!

ಮಾಹಿತಿ ಮತ್ತು ಪ್ರಸಾರ ಖಾತೆಯ ಹಿರಿಯ ಸಲಹೆಗಾರರಾಗಿರುವ ಕಾಂಚನ್ ಗುಪ್ತಾ ಅವರು ಜನವರಿ 21ರಂದು ನೀಡಿರುವ ಹೇಳಿಕೆಯ ಪ್ರಕಾರ, ’ಭಾರತದ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಅಲ್ಲಗೆಳೆಯುವುದರಿಂದ’ ಮತ್ತು ’ಸಮರ್ಥನೆಯಿಲ್ಲದ ಆರೋಪಗಳನ್ನು ಮಾಡಿರುವುದರಿಂದ’ ಸರ್ಕಾರ ಈ ಸಾಕ್ಷ್ಯಚಿತ್ರವನ್ನು ಹಂಚಿಕೊಳ್ಳುವ ಎಲ್ಲಾ ಲಿಂಕ್‌ಗಳನ್ನು ತೆಗೆಯುವಂತೆ ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಿದೆ ಎಂದಿದ್ದಾರೆ.

2002ರ ಗುಜರಾತ್ ನರಮೇಧದದ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ವಿಮರ್ಶಿಸುವ ಈ ಸಾಕ್ಷ್ಯಚಿತ್ರ, ನರಮೇಧದ ಸಮಯದ ಹಲವು ದೃಶ್ಯಾವಳಿಗಳನ್ನು ಪೋಣಿಸಿ, ಹಲವರನ್ನು ಸಂದರ್ಶಿಸಿ (ನರೇಂದ್ರ ಮೋದಿಯವರನ್ನು ಸಮರ್ಥಿಸಿಕೊಳ್ಳುವವರನ್ನೂ ಸಂದರ್ಶಿಸಲಾಗಿದೆ), ಇಷ್ಟೆಲ್ಲಾ ಸಮಯ ಕಳೆದಮೇಲೂ ಉಳಿದಿರುವ ಪ್ರಶ್ನೆಗಳನ್ನು ವೀಕ್ಷಕರ ಮುಂದಿಡುತ್ತದೆ. ಇದು ಯಾವುದೇ ಪಕ್ಷದ ಪ್ರಾಯೋಜಿತ ಕಾರ್ಯಕ್ರಮವಾಗಿರದೆ, ಮಾಧ್ಯಮವೊಂದು ಸ್ವತಂತ್ರವಾಗಿ ನಡೆಸಿದ ವರದಿಗಾರಿಕೆ, ತನಿಖೆ ಮತ್ತು ಸಂದರ್ಶನಗಳ ಮೇಲೆ ಚಿತ್ರಿತವಾಗಿರುವ ಸಾಕ್ಷ್ಯಚಿತ್ರ. ಈ ಸಾಕ್ಷ್ಯಚಿತ್ರ ಮಾಡಿರುವ ಆರೋಪಗಳಿಗೆ ತಮ್ಮ ಪ್ರತಿಕ್ರಿಯೆಗಾಗಿ ಸರ್ಕಾರವನ್ನು ಕೇಳಿದಾಗ, ಸರ್ಕಾರ ಪ್ರತಿಕ್ರಿಯಿಸಲು ನಿರಾಕರಿಸಿದೆ ಎಂದು ಕೂಡ ಬಿಬಿಸಿ ಹೇಳಿದೆ. ಹೀಗಿರುವಾಗ, ಸುಪ್ರೀಂ ಕೋರ್ಟ್ ತೀರ್ಪನ್ನು ಮುಂದೆ ಮಾಡಿ ಈ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವುದು ಯಾವ ಪಂಚಾಯಿತಿ ನ್ಯಾಯ? ಪತ್ರಿಕೋದ್ಯಮದ ಮಾನದಂಡಗಳನ್ನು ಅನುಸರಿಸದೆ ಏಕಪಕ್ಷೀಯವಾದ ಸಾಕ್ಷ್ಯಚಿತ್ರವನ್ನು ಬಿಬಿಸಿ ನಿರ್ಮಿಸಿದ್ದರೆ ಆಗ ಸರ್ಕಾರ ತನ್ನ ಪ್ರಶ್ನೆಗಳನ್ನು ಬಿಬಿಸಿಗೆ ಎಸೆಯಬಹುದಿತ್ತು! ಆದರೆ ತಾನೇ ಪ್ರಶ್ನೆಗಳಿಂದ ನುಣುಚಿಕೊಂಡು ಸೆನ್ಸಾರ್ ಮೊರೆ ಹೋದರೆ ಏನನ್ನೋ ಮುಚ್ಚಿಡುವ ಪ್ರಯತ್ನದಂತೆ ಕಾಣುವುದಿಲ್ಲವೇ?

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ವಿಚಾರ: ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಉಳಿಸಲು ಇದು ಸಕಾಲ ಎಂದ ಅಮೆರಿಕ

ಗುಜರಾತಿನ 2002ರ ನರಮೇಧಕ್ಕೆ ಅಂದಿನ ಮುಖ್ಯಮಂತ್ರಿ ಮೋದಿಯವರ ವೈಫಲ್ಯತೆ ಕಾರಣವಲ್ಲ ಅಥವಾ ಅದರಲ್ಲಿ ಅವರ ಪಾತ್ರವಿರಲಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ನೀಡಿರಬಹುದು. ಆದರೆ ಪತ್ರಿಕೋದ್ಯಮದ ಕೆಲಸ ಹೊಸ ಸಾಕ್ಷ್ಯಗಳನ್ನು ಹುಡುಕುವುದು ಮತ್ತು ತನ್ನ ಪ್ರಶ್ನಿಸುವ ಮನೋಭಾವವನ್ನು ಸದಾ ಉಳಿಸಿಕೊಳ್ಳುವುದು. ಈ ನಿಟ್ಟಿನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಸುಪ್ರೀಂ ಕೋರ್ಟ್ ತೀರ್ಪನ್ನೇನೂ ಮರೆಮಾಚದೆ, ತನ್ನ ವರದಿಗಾರಿಕೆಯ ಹಿನ್ನೆಲೆಯಲ್ಲಿ ಉಳಿದುಕೊಂಡಿರುವ ಪ್ರಶ್ನೆಗಳನ್ನು ಮತ್ತೆ ಕೇಳುವ ದಿಟ್ಟತನ ತೋರಿದೆ. ಇದಕ್ಕೆ ಮೋದಿಯವರೋ ಅಥವಾ ಸರ್ಕಾರದ ಪ್ರತಿನಿಧಿಗಳೋ ಉತ್ತರಿಸಬಹುದಿತ್ತು. ಆರೋಪ ಮತ್ತು ಅದಕ್ಕೆ ಸರ್ಕಾರ ನೀಡುವ ಉತ್ತರಗಳನ್ನು ತಾಳೆ ಹಾಕಿ ಡಾಕ್ಯುಮೆಂಟರಿಯನ್ನು ವೀಕ್ಷಿಸಿದ ಜನರು ತಮ್ಮ ತೀರ್ಮಾನಕ್ಕೆ ಬರಲು ಸಾಧ್ಯವಾಗುತ್ತಿತ್ತು. ಇದನ್ನು ಬಲವಂತದಿಂದ ನಿಯಂತ್ರಿಸುವ ಹುನ್ನಾರ ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ನಡೆಸುವ ದಾಳಿಯಲ್ಲದೆ ಮತ್ತೇನು? ಕೋಮುವಾದಿಗಳು ಸುಟ್ಟುಹಾಕಿದ ಮಾಜಿ ಸಂಸದ ಎಶಾನ್ ಜಾಫ್ರಿಯವರ ಕೊಲೆಗೆ ನ್ಯಾಯ ಸಿಕ್ಕಿಲ್ಲ ಎಂದು ಕೇಳುವುದು ಅಪರಾಧವಾಗಿಹೋಗಿದೆಯೇ?

ಒಂದು ಕಡೆ ಸಲ್ಲದ ಕಾರಣಗಳಿಗೆ ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ನಟಿಸಿರುವ ’ಪಠಾನ್’ ಚಿತ್ರವನ್ನು ಬಹಿಷ್ಕಾರ ಮಾಡುವಂತೆ ಕೊಡುತ್ತಿರುವ ಕರೆಗಳನ್ನು ವಿರೋಧಿಸುವ ಪ್ರಾಥಮಿಕ ಕರ್ತವ್ಯವನ್ನೂ ಪಾಲಿಸುತ್ತಿಲ್ಲ; ಸಿನಿಮಾ ಪ್ರದರ್ಶನಕ್ಕೆ ಅಗತ್ಯ ರಕ್ಷಣೆ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸುವ ಮಾತುಗಳನ್ನೂ ಆಡದ ಕೇಂದ್ರ ಸರ್ಕಾರ ಈಗ ತನಗೆ ಅಪಥ್ಯವಾದ ಒಂದು ಸಾಕ್ಷ್ಯಚಿತ್ರವನ್ನು ಭಾರತದ ಜನತೆಯಿಂದ ಮರೆಮಾಚಲು ಸಕ್ರಿಯವಾಗಿದೆ. ಒಂದೊಂದು ಲಿಂಕಿನಿಂದಲೂ ಆ ಸಾಕ್ಷ್ಯಚಿತ್ರವನ್ನು ತೆಗೆದುಹಾಕುವ ಸೂಚನೆ ಬರುತ್ತಿದ್ದಂತೆ ಅದು ಬೇರೇಬೇರೆ ಲಿಂಕುಗಳಲ್ಲಿ ಪ್ರತ್ಯಕ್ಷವಾಗುತ್ತಿರುವುದಂತೂ ಸತ್ಯ. ಅಂತರ್ಜಾಲದಲ್ಲಿ ನಿರ್ಬಂಧಿಸುವುದು ಎಂದರೆ ಪ್ರವಾಹದ ಸಮಯದಲ್ಲಿ ಅಣೆಕಟ್ಟು ಕಟ್ಟಲು ಶ್ರಮಪಟ್ಟಂತೆ. ಹೊಸಹೊಸ ಲಿಂಕುಗಳನ್ನು ಸಂಸದರಾದ ಟಿಎಂಸಿ ನಾಯಕಿ ಮೊಹುವಾ ಮೊಯಿತ್ರಾ ಸೇರಿದಂತೆ ಹಲವು ಪ್ರಾಜ್ಞರು ಮತ್ತೆಮತ್ತೆ ಟ್ವೀಟ್ ಮಾಡಿದ್ದಾರೆ. ಹೈದರಾಬಾದ್ ಸೆಂಟ್ರಲ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಮೂಹ ಈ ಸಾಕ್ಷ್ಯಚಿತ್ರದ ಸಾರ್ವಜನಿಕ ಪ್ರದರ್ಶನವನ್ನು ಏರ್ಪಡಿಸಿತ್ತು. ಜೆಎನ್‌ಯು ಇದರ ಪ್ರದರ್ಶನ ಏರ್ಪಡಿಸಿದಾಗ ವಿದ್ಯುತ್‌ಚ್ಛಕ್ತಿ ನಿಲ್ಲಿಸಿದ ವರದಿಗಳಿವೆ. ಕೇರಳದಲ್ಲಿ ಕೆಲವು ಸಾರ್ವಜನಿಕ ಪ್ರದರ್ಶನಗಳು ನಡೆದಿವೆ. ಹೀಗೆ ಕೇಂದ್ರ ಸರ್ಕಾರದ ನಡೆಗೆ ಪ್ರತಿರೋಧವನ್ನು ಹಲವರು ತೋರಿಸುತ್ತಿದ್ದಾರೆ. ’ತಮ್ಮ ಸುರಕ್ಷತೆಯ ಬಗೆಗಿನ ಭಯದಿಂದ ಸುಮಾರು 30ಕ್ಕೂ ಹೆಚ್ಚು ಜನ ಈ ಸಾಕ್ಷ್ಯಚಿತ್ರದ ಸಂದರ್ಶನದಲ್ಲಿ ಭಾಗವಹಿಸಲು ನಿರಾಕರಿಸಿದರು’ ಎಂದು ಸಾಕ್ಷ್ಯಚಿತ್ರದಲ್ಲಿ ಒಂದು ಕಡೆ ಬರುತ್ತದೆ. ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಜನ ಆತಂಕ ಪಡುವ ಸ್ಥಿತಿ ಭಾರತದಲ್ಲಿದೆ ಎಂಬುದು ಜಗತ್ತಿಗೆ ಈ ದೇಶದ ಬಗ್ಗೆ ಎಂತಹ ಚಿತ್ರಣವನ್ನು ಕಟ್ಟಿಕೊಡುತ್ತದೆ ಎಂಬುದರ ಬಗ್ಗೆ ಒಕ್ಕೂಟ ಸರ್ಕಾರಕ್ಕೆ ಅರಿವಿದೆಯೇ? ಈ ಭಯವನ್ನು ಮೀರಿದ ಯುವಜನರು ಎಚ್‌ಸಿಯು ಅಂತಹ ಜಾಗದಲ್ಲಿ ಸಾರ್ವಜನಿಕ ಪ್ರದರ್ಶನ ಏರ್ಪಡಿಸುತ್ತಾರೆ ಎಂಬ ಸಂಗತಿಯಾದರೂ ಈ ಸರ್ಕಾರದ ಮಂದಿಗೆ ವಿವೇಕ ನೀಡಲಿ. ದಮನಕಾರಿ ದುರುಳತನ ಕೊನೆಯಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...