Homeರಾಜಕೀಯಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

- Advertisement -
- Advertisement -

ತಮಿಳುನಾಡಿನ ಚೆನ್ನೈನಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ‘ತಮಿಳುನಾಡು ವಾಲ್‌ಗ’ (ತಮಿಳುನಾಡು ಚಿರಾಯುವಾಗಲಿ) ಎಂದು ಬರೆದಿರುವ ಬೃಹತ್ ಬ್ಯಾನರ್‌‌ನ ಟ್ಯಾಬ್ಲೋ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ತಮಿಳುನಾಡನ್ನು ‘ತಮಿಳಗಂ’ ಎಂದು ಕರೆಯಬೇಕು ಎಂದು ಆಗ್ರಹಿಸಿ ರಾಜ್ಯಪಾಲ ಆರ್‌.ಎನ್‌. ರವಿ ಸೃಷ್ಟಿಸಿದ್ದ ವಿವಾದದ ನಡುವೆ ಟ್ಯಾಬ್ಲೋ ಭಾರಿ ರಾಜಕೀಯ ಮಹತ್ವ ಪಡೆದುಕೊಂಡಿದೆ.

ಜನವರಿ ಮೊದಲ ವಾರದಲ್ಲಿ, ರಾಜ್ಯಪಾಲ ರವಿ ಅವರು ತಮಿಳುಬನಾಡು ರಾಜಭವನದಲ್ಲಿ ಮಾಡಿದ ಭಾಷಣದಲ್ಲಿ ರಾಜ್ಯಕ್ಕೆ ‘ತಮಿಳಗಂ’ ಎಂಬ ಹಸರು ಹೆಚ್ಚು ಸೂಕ್ತವಾಗಿದೆ ಎಂದು ಸೂಚಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಇಷ್ಟೆ ಅಲ್ಲದೆ ರಾಜಭವನದ ‘ಪೊಂಗಲ್’ ಆಚರಣೆಯ ಆಹ್ವಾನ ಪತ್ರದಲ್ಲಿ ಕೂಡಾ ರಾಜ್ಯವನ್ನು ‘ತಮಿಳಗಂ’ ಎಂದು ಉಲ್ಲೇಖಿಸಲಾಗಿತ್ತು. ಈ ಘಟನೆಯು ತಮಿಳುನಾಡಿನಲ್ಲಿ ಭಾರಿ ಪ್ರತಿಭಟನೆ ಹುಟ್ಟು ಹಾಕಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಣರಾಜ್ಯೋತ್ಸವದ ಹಿಂದಿನ ದಿನವಾದ ಬುಧವಾರ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ರಾಜ್ಯಪಾಲ ರವಿ ಅವರು, ತಮ್ಮ ಭಾಷಣದ ಕೊನೆಯಲ್ಲಿ ‘ವಾಲ್‌ಗ ತಮಿಳುನಾಡು’ (ತಮಿಳುನಾಡುಗೆ ಚಿರಾಯುವಾಗಲಿ) ಮತ್ತು ‘ವಾಲ್‌ಗ ಭಾರತಂ’ (ಭಾರತ ಚಿರಾಯುವಾಗಲಿ) ಎಂಬ ಘೋಷಣೆಗಳೊಂದಿಗೆ ತಮ್ಮ ಭಾಷಣವನ್ನು ಕೊನೆಗೊಳಿಸಿದ್ದರು.

ಜನವರಿ 18ರಂದು ಮಾತನಾಡಿದ್ದ ಅವರು, “ತಮಿಳುನಾಡಿನ ಹೆಸರನ್ನು ಬದಲಾಯಿಸಬೇಕು ಎಂದು ನನ್ನ ಸಲಹೆಯನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ. ನನ್ನ ಭಾಷಣದ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳದೆ, ರಾಜ್ಯಪಾಲರು ತಮಿಳುನಾಡು ಪದಕ್ಕೆ ವಿರುದ್ಧವಾಗಿದ್ದಾರೆ ಎಂಬ ವಾದಗಳು ಚರ್ಚೆಯ ವಿಷಯವಾಗಿದೆ. ಹಾಗಾಗಿ ಇದಕ್ಕೆ ಅಂತ್ಯ ಹಾಡಲು ಈ ಸ್ಪಷ್ಟನೆ ನೀಡುತ್ತಿದ್ದೇನೆ” ಎಂದು  ಹೇಳಿದ್ದರು.

ಆದಾಗ್ಯೂ, ಎರಡು ಎಡ ಪಕ್ಷಗಳು ಸೇರಿದಂತೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನ ನಾಲ್ಕು ಮಿತ್ರಪಕ್ಷಗಳು ಬುಧವಾರ ರಾಜ್ಯಪಾಲ ರವಿ ಆಯೋಜಿಸಿದ್ದ ಗಣರಾಜ್ಯೋತ್ಸವದ ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದವು. ಈ ಹಿಂದೆ ಕೂಡಾ ಆಡಳಿತರೂಢ ಮಿತ್ರಪಕ್ಷಗಳು ಪೊಂಗಲ್‌ ಆಚರಣೆಯ ಸಭೆಯನ್ನು ಬಹಿಷ್ಕರಿಸಿದ್ದರು.

ಆಡಳಿತರೂಢ ಮಿತ್ರಪಕ್ಷಗಳಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ -ಮಾರ್ಕ್ಸ್‌ವಾದಿ (ಸಿಪಿಐ-ಎಂ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ತೋಲ್ ತಿರುಮವಳವನ್ ನೇತೃತ್ವದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮತ್ತು ತಮಿಳಗ ವಾಳ್ವುರಿಮೈ ಕಚ್ಚಿ (ಟಿವಿಕೆ) ಗುರುವಾರ ನಡೆಯಲಿರುವ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ.

ಸಿಪಿಐ ರಾಜ್ಯ ಕಾರ್ಯದರ್ಶಿ ಆರ್. ಮುತರಸನ್ ನೀಡಿರುವ ಹೇಳಿಕೆಯಲ್ಲಿ, “ಕಾರ್ಯಕ್ರಮದ ಆಹ್ವಾನ ಪತ್ರದಲ್ಲಿ ರವಿಯನ್ನು ‘ತಮಿಳುನಾಡು ರಾಜ್ಯಪಾಲ’ ಎಂದು ಉಲ್ಲೇಖಿಸಿದ್ದರೂ, ಅವರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ಮಾಡಿಲ್ಲ. ತಮಿಳುನಾಡು ವಿಧಾನಸಭೆಯಿಂದ 20 ಕ್ಕೂ ಹೆಚ್ಚು ಮಸೂದೆಗಳನ್ನು ಅಂಗೀಕರಿಸಲಾಗಿದ್ದು, ಆದರೆ ರಾಜ್ಯಪಾಲರು ಅವುಗಳನ್ನು ಹಾಗೆ ಇಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದಷ್ಟೆ ಅಲ್ಲದೆ, ಅವರು ಆರ್‌ಎಸ್‌ಎಸ್‌ ಪರ ಹೇಳಿಕೆಗಳನ್ನು ನೀಡುವುದನ್ನು ಮುಂದುವರೆಸಿದ್ದಾರೆ. ಆದ್ದರಿಂದ, ಗುರುವಾರ ರಾಜಭವನದಲ್ಲಿ ಆಯೋಜಿಸಲಾದ ‘ಅಟ್ ಹೋಮ್’ ಕಾರ್ಯಕ್ರಮವನ್ನು ಬಹಿಷ್ಕರಿಸಲು ಪಕ್ಷ ನಿರ್ಧರಿಸಿದೆ” ಎಂದು ಎಂದು ಮುತರಸನ್ ಹೇಳಿದ್ದಾರೆ.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೆ. ಬಾಲಕೃಷ್ಣನ್ ಅವರ ಹೇಳಿಕೆಯಲ್ಲಿ, ರಾಜ್ಯಪಾಲರು ಬಾಕಿ ಉಳಿಸಿರುವ ಮಸೂದೆಗಳು ಸೇರಿದಂತೆ ಸದನದಿಂದ ಹೊರನಡೆದ ಬಗ್ಗೆ ರಾಜ್ಯದ ಜನರಲ್ಲಿ ಕ್ಷಮೆಯಾಚಿಸಿಲ್ಲ ಜೊತೆಗೆ ಅದರ ಬಗ್ಗೆ ವಿಷಾದ ಕೂಡಾ ವ್ಯಕ್ತಪಡಿಸಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸಿಪಿಐ(ಎಂ) ರಾಜಭವನದ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಲೋಕಸಭಾ ಸದಸ್ಯರಾದ ವಿಸಿಕೆ ಸಂಸ್ಥಾಪಕ ತಿರುಮಾವಲವನ್ ಅವರು ಕೂಡಾ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜಭವನದ ಕಾರ್ಯಕ್ರಮವನ್ನು ಬಹಿಷ್ಕರಿಸುವ ತಮ್ಮ ಪಕ್ಷದ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಟಿವಿಕೆ ಕೂಡ ‘ಅಟ್ ಹೋಮ್’ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಅದರ ಸಂಸ್ಥಾಪಕ ಮತ್ತು ಪಂರುತಿ ಶಾಸಕ ಟಿ ವೇಲು ಮುರುಗನ್‌ ಘೋಷಿಸಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...