Homeಮುಖಪುಟತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

ತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

- Advertisement -
- Advertisement -

ಏಳು ವರ್ಷಕ್ಕೂ ಹೆಚ್ಚು ಕಾಲ ಜಾಮೀನಿನ ಮೇಲೆ ಹೊರಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಅವರ ಪತಿ ಜಾವೇದ್ ಆನಂದ್ ಅವರನ್ನು ಮತ್ತೆ ಜೈಲಿಗೆ ಏಕೆ ಕಳುಹಿಸಲು ಬಯಸುತ್ತೀರಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಗುಜರಾತ್ ಪೊಲೀಸರು ಮತ್ತು ಕೇಂದ್ರ ತನಿಖಾ ದಳವನ್ನು ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

ಜಸ್ಟಿಸ್‌ಗಳಾದ ಎಸ್‌ಕೆ ಕೌಲ್, ಎಎಸ್ ಓಕಾ ಮತ್ತು ಬಿವಿ ನಾಗರತ್ನ ಅವರ ಪೀಠವು ಗುಜರಾತ್ ಪೊಲೀಸರು ಮತ್ತು ಕೇಂದ್ರೀಯ ತನಿಖಾ ದಳ ಸಲ್ಲಿಸಿದ ಮೂರು ಎಫ್‌ಐಆರ್‍‌ಗಳಿಗೆ ಸಂಬಂಧಿಸಿದಂತೆ ಸೆಟಲ್‌ವಾಡ್, ಆನಂದ್ ದಂಪತಿಗಳ ವಿರುದ್ಧ ವಿಚಾರಣೆ ನಡೆಸುತ್ತಿದೆ. 2002ರಲ್ಲಿ ಗುಜರಾತ್ ದಂಗೆಯ ಸಂತ್ರಸ್ತರಿಗಾಗಿ ಸಮಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ದಂಪತಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

ಸೆಟಲ್ವಾಡ್ ಮತ್ತು ಆನಂದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲೆ ಅಪರ್ಣಾ ಭಟ್ ಅವರು, ತಮ್ಮ ವಿರುದ್ಧದ ಪ್ರಕರಣಗಳು ಎಂಟು ವರ್ಷಗಳಿಂದ ಬಾಕಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯವು ಸೆಟಲ್ವಾಡ್ ಮತ್ತು ಆನಂದ್‌ಗೆ ನಿರೀಕ್ಷಣಾ ಜಾಮೀನು ಮತ್ತು ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಆದರೆ ತನಿಖಾ ಸಂಸ್ಥೆಗಳು ಇನ್ನೂ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ ಎಂದು ಸಿಬಲ್ ಹೇಳಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

“ನೀವು ಯಾರನ್ನಾದರೂ ಎಷ್ಟು ಸಮಯದವರೆಗೆ ಕಸ್ಟಡಿಯಲ್ಲಿ ಇರಿಸಬಹುದು ಎಂಬುದು ಪ್ರಶ್ನೆಯಾಗಿದೆ ಎಂದು ಕೋರ್ಟ್ ಹೇಳಿದೆ. ಏಕೆಂದರೆ ನಿರೀಕ್ಷಣಾ ಜಾಮೀನು ನೀಡಿ ಏಳು ವರ್ಷಗಳು ಕಳೆದಿವೆ ಆದರೂ ಈಗ ನೀವು ಅವಳನ್ನು ಮತ್ತೆ ಜೈಲಿಗೆ ಕಳುಹಿಸಲು ಬಯಸುತ್ತೀರಿ” ಎಂದಿದೆ.

ಕೇಂದ್ರೀಯ ತನಿಖಾ ದಳ ಮತ್ತು ಗುಜರಾತ್ ಪೊಲೀಸರು ಬಾಕಿ ಉಳಿದಿರುವ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ಕೋರಿದರು.

ಇದನ್ನೂ ಓದಿ: ಖ್ಯಾತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು; ಪಾಸ್‌ಪೋರ್ಟ್‌ ಒಪ್ಪಿಸುವಂತೆ ಷರತ್ತು

ಸೆಟಲ್ವಾಡ್ ಮತ್ತು ಆನಂದ್ ವಿರುದ್ಧ ಎಫ್ಐಆರ್

2014 ರಲ್ಲಿ, ಅಹಮದಾಬಾದ್ ಕ್ರೈಂ ಬ್ರಾಂಚ್ ನಗರದ ಗುಲ್ಬರ್ಗ್ ಹೌಸಿಂಗ್ ಸೊಸೈಟಿಯಲ್ಲಿ ಮ್ಯೂಸಿಯಂ ಆಫ್ ರೆಸಿಸ್ಟೆನ್ಸ್ ನಿರ್ಮಾಣಕ್ಕೆ ಸಂಬಂಧಿಸಿದ ವಿಷಯದಲ್ಲಿ ವಂಚನೆ, ನಂಬಿಕೆ ಉಲ್ಲಂಘನೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ ಎಂದು ಪಿಟಿಐ ವರದಿ ಮಾಡಿದೆ.

2002 ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಫೆಬ್ರವರಿ 28, 2002 ರಂದು ಗುಲ್ಬರ್ಗ್ ಸೊಸೈಟಿಯಲ್ಲಿ 69 ಜನರನ್ನು ಕೊಲ್ಲಲಾಯಿತು. ಕಲ್ಲು ಎಸೆದು ಮತ್ತು ಮನೆಗಳಿಗೆ ಬೆಂಕಿ ಹಚ್ಚಿ ದಾಳಿ ನಡೆಸಲಾಯಿತು. ಇ ದಾಳಿಯಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಕೂಡ ಸಾವನ್ನಪ್ಪಿದ್ದರು.

‘ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಮತ್ತು ಸಬ್ರಂಗ್ ಟ್ರಸ್ಟ್’ ಎಂಬ ಎರಡು ಲಾಭರಹಿತ ಸಂಸ್ಥೆಗಳ ಟ್ರಸ್ಟಿಗಳಾದ ಸೆಟಲ್ವಾಡ್ ಮತ್ತು ಆನಂದ್ ಅವರು ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಸಂಗ್ರಹಿಸಿದ್ದಾರೆ. ಆದರೆ ಆ ಹಣವನ್ನು ಇವರು ಮ್ಯೂಸಿಯಂ ನಿರ್ಮಿಸಲು ಅಥವಾ ಗುಲ್ಬರ್ಗ್ ಸೊಸೈಟಿಯ ನಿವಾಸಿಗಳಿಗೆ ಸಹಾಯವನ್ನು ನೀಡಲು ಬಳಸಲಿಲ್ಲ ಎಂದು ಆರೋಪಿಸಲಾಗಿದೆ.

ದಂಪತಿಗಳ ವಿರುದ್ಧದ ಎರಡನೇ ಎಫ್‌ಐಆರ್ ವಿದೇಶಿ ನಿಧಿಯ ದುರುಪಯೋಗಕ್ಕೆ ಸಂಬಂಧಿಸಿದ್ದಾಗಿದೆ. ಇದನ್ನು ಕೇಂದ್ರೀಯ ತನಿಖಾ ದಳವು ತನಿಖೆ ನಡೆಸುತ್ತಿದೆ. ‘ದಂಪತಿಗಳು ಸ್ಥಾಪಿಸಿದ ಸಬ್ರಾಂಗ್ ಕಮ್ಯುನಿಕೇಷನ್ ಮತ್ತು ಪಬ್ಲಿಷಿಂಗ್ ಕಂಪನಿಯು ಯುಎಸ್ ಮೂಲದ ಫೋರ್ಡ್ ಫೌಂಡೇಶನ್‌ನಿಂದ ಕೇಂದ್ರ ಸರ್ಕಾರದ ಕಡ್ಡಾಯ ಅನುಮೋದನೆಯಿಲ್ಲದೆ 1.8 ಕೋಟಿ ರೂಪಾಯಿಗಳನ್ನು ಪಡೆದಿದೆ’ ಎಂದು ಕೇಂದ್ರೀಯ ಸಂಸ್ಥೆ ಆರೋಪಿಸಿದೆ.

2010 ಮತ್ತು 2013 ರ ನಡುವೆ ಸಬ್ರಂಗ್ ಟ್ರಸ್ಟ್‌ಗೆ ಕೇಂದ್ರ ಸರ್ಕಾರದ ನಿಧಿಯಾಗಿ 1.4 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಪಡೆದುಕೊಂಡಿದ್ದಕ್ಕಾಗಿ ಸೆಟಲ್ವಾಡ್ ಮತ್ತು ಆನಂದ್ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...