Homeಮುಖಪುಟತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

ತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

- Advertisement -
- Advertisement -

ಏಳು ವರ್ಷಕ್ಕೂ ಹೆಚ್ಚು ಕಾಲ ಜಾಮೀನಿನ ಮೇಲೆ ಹೊರಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಅವರ ಪತಿ ಜಾವೇದ್ ಆನಂದ್ ಅವರನ್ನು ಮತ್ತೆ ಜೈಲಿಗೆ ಏಕೆ ಕಳುಹಿಸಲು ಬಯಸುತ್ತೀರಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಗುಜರಾತ್ ಪೊಲೀಸರು ಮತ್ತು ಕೇಂದ್ರ ತನಿಖಾ ದಳವನ್ನು ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

ಜಸ್ಟಿಸ್‌ಗಳಾದ ಎಸ್‌ಕೆ ಕೌಲ್, ಎಎಸ್ ಓಕಾ ಮತ್ತು ಬಿವಿ ನಾಗರತ್ನ ಅವರ ಪೀಠವು ಗುಜರಾತ್ ಪೊಲೀಸರು ಮತ್ತು ಕೇಂದ್ರೀಯ ತನಿಖಾ ದಳ ಸಲ್ಲಿಸಿದ ಮೂರು ಎಫ್‌ಐಆರ್‍‌ಗಳಿಗೆ ಸಂಬಂಧಿಸಿದಂತೆ ಸೆಟಲ್‌ವಾಡ್, ಆನಂದ್ ದಂಪತಿಗಳ ವಿರುದ್ಧ ವಿಚಾರಣೆ ನಡೆಸುತ್ತಿದೆ. 2002ರಲ್ಲಿ ಗುಜರಾತ್ ದಂಗೆಯ ಸಂತ್ರಸ್ತರಿಗಾಗಿ ಸಮಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ದಂಪತಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

ಸೆಟಲ್ವಾಡ್ ಮತ್ತು ಆನಂದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲೆ ಅಪರ್ಣಾ ಭಟ್ ಅವರು, ತಮ್ಮ ವಿರುದ್ಧದ ಪ್ರಕರಣಗಳು ಎಂಟು ವರ್ಷಗಳಿಂದ ಬಾಕಿ ಉಳಿದಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯವು ಸೆಟಲ್ವಾಡ್ ಮತ್ತು ಆನಂದ್‌ಗೆ ನಿರೀಕ್ಷಣಾ ಜಾಮೀನು ಮತ್ತು ಸಾಮಾನ್ಯ ಜಾಮೀನು ಮಂಜೂರು ಮಾಡಿದೆ. ಆದರೆ ತನಿಖಾ ಸಂಸ್ಥೆಗಳು ಇನ್ನೂ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ ಎಂದು ಸಿಬಲ್ ಹೇಳಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.

“ನೀವು ಯಾರನ್ನಾದರೂ ಎಷ್ಟು ಸಮಯದವರೆಗೆ ಕಸ್ಟಡಿಯಲ್ಲಿ ಇರಿಸಬಹುದು ಎಂಬುದು ಪ್ರಶ್ನೆಯಾಗಿದೆ ಎಂದು ಕೋರ್ಟ್ ಹೇಳಿದೆ. ಏಕೆಂದರೆ ನಿರೀಕ್ಷಣಾ ಜಾಮೀನು ನೀಡಿ ಏಳು ವರ್ಷಗಳು ಕಳೆದಿವೆ ಆದರೂ ಈಗ ನೀವು ಅವಳನ್ನು ಮತ್ತೆ ಜೈಲಿಗೆ ಕಳುಹಿಸಲು ಬಯಸುತ್ತೀರಿ” ಎಂದಿದೆ.

ಕೇಂದ್ರೀಯ ತನಿಖಾ ದಳ ಮತ್ತು ಗುಜರಾತ್ ಪೊಲೀಸರು ಬಾಕಿ ಉಳಿದಿರುವ ವಿಷಯಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶವನ್ನು ಕೋರಿದರು.

ಇದನ್ನೂ ಓದಿ: ಖ್ಯಾತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಜಾಮೀನು; ಪಾಸ್‌ಪೋರ್ಟ್‌ ಒಪ್ಪಿಸುವಂತೆ ಷರತ್ತು

ಸೆಟಲ್ವಾಡ್ ಮತ್ತು ಆನಂದ್ ವಿರುದ್ಧ ಎಫ್ಐಆರ್

2014 ರಲ್ಲಿ, ಅಹಮದಾಬಾದ್ ಕ್ರೈಂ ಬ್ರಾಂಚ್ ನಗರದ ಗುಲ್ಬರ್ಗ್ ಹೌಸಿಂಗ್ ಸೊಸೈಟಿಯಲ್ಲಿ ಮ್ಯೂಸಿಯಂ ಆಫ್ ರೆಸಿಸ್ಟೆನ್ಸ್ ನಿರ್ಮಾಣಕ್ಕೆ ಸಂಬಂಧಿಸಿದ ವಿಷಯದಲ್ಲಿ ವಂಚನೆ, ನಂಬಿಕೆ ಉಲ್ಲಂಘನೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ ಎಂದು ಪಿಟಿಐ ವರದಿ ಮಾಡಿದೆ.

2002 ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಫೆಬ್ರವರಿ 28, 2002 ರಂದು ಗುಲ್ಬರ್ಗ್ ಸೊಸೈಟಿಯಲ್ಲಿ 69 ಜನರನ್ನು ಕೊಲ್ಲಲಾಯಿತು. ಕಲ್ಲು ಎಸೆದು ಮತ್ತು ಮನೆಗಳಿಗೆ ಬೆಂಕಿ ಹಚ್ಚಿ ದಾಳಿ ನಡೆಸಲಾಯಿತು. ಇ ದಾಳಿಯಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಕೂಡ ಸಾವನ್ನಪ್ಪಿದ್ದರು.

‘ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಮತ್ತು ಸಬ್ರಂಗ್ ಟ್ರಸ್ಟ್’ ಎಂಬ ಎರಡು ಲಾಭರಹಿತ ಸಂಸ್ಥೆಗಳ ಟ್ರಸ್ಟಿಗಳಾದ ಸೆಟಲ್ವಾಡ್ ಮತ್ತು ಆನಂದ್ ಅವರು ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಸಂಗ್ರಹಿಸಿದ್ದಾರೆ. ಆದರೆ ಆ ಹಣವನ್ನು ಇವರು ಮ್ಯೂಸಿಯಂ ನಿರ್ಮಿಸಲು ಅಥವಾ ಗುಲ್ಬರ್ಗ್ ಸೊಸೈಟಿಯ ನಿವಾಸಿಗಳಿಗೆ ಸಹಾಯವನ್ನು ನೀಡಲು ಬಳಸಲಿಲ್ಲ ಎಂದು ಆರೋಪಿಸಲಾಗಿದೆ.

ದಂಪತಿಗಳ ವಿರುದ್ಧದ ಎರಡನೇ ಎಫ್‌ಐಆರ್ ವಿದೇಶಿ ನಿಧಿಯ ದುರುಪಯೋಗಕ್ಕೆ ಸಂಬಂಧಿಸಿದ್ದಾಗಿದೆ. ಇದನ್ನು ಕೇಂದ್ರೀಯ ತನಿಖಾ ದಳವು ತನಿಖೆ ನಡೆಸುತ್ತಿದೆ. ‘ದಂಪತಿಗಳು ಸ್ಥಾಪಿಸಿದ ಸಬ್ರಾಂಗ್ ಕಮ್ಯುನಿಕೇಷನ್ ಮತ್ತು ಪಬ್ಲಿಷಿಂಗ್ ಕಂಪನಿಯು ಯುಎಸ್ ಮೂಲದ ಫೋರ್ಡ್ ಫೌಂಡೇಶನ್‌ನಿಂದ ಕೇಂದ್ರ ಸರ್ಕಾರದ ಕಡ್ಡಾಯ ಅನುಮೋದನೆಯಿಲ್ಲದೆ 1.8 ಕೋಟಿ ರೂಪಾಯಿಗಳನ್ನು ಪಡೆದಿದೆ’ ಎಂದು ಕೇಂದ್ರೀಯ ಸಂಸ್ಥೆ ಆರೋಪಿಸಿದೆ.

2010 ಮತ್ತು 2013 ರ ನಡುವೆ ಸಬ್ರಂಗ್ ಟ್ರಸ್ಟ್‌ಗೆ ಕೇಂದ್ರ ಸರ್ಕಾರದ ನಿಧಿಯಾಗಿ 1.4 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಪಡೆದುಕೊಂಡಿದ್ದಕ್ಕಾಗಿ ಸೆಟಲ್ವಾಡ್ ಮತ್ತು ಆನಂದ್ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...