Homeಮುಖಪುಟಕಾಂಗ್ರೆಸ್ ಟಿಕೆಟ್ ಬಯಸುವುದರಲ್ಲಿ ತಪ್ಪೇನಿದೆ?: 2024ರ ಲೋಕಸಭೆ ಸ್ಪರ್ಧೆಯ ಸುಳಿವು ಕೊಟ್ಟ ಕಮಲ್ ಹಾಸನ್

ಕಾಂಗ್ರೆಸ್ ಟಿಕೆಟ್ ಬಯಸುವುದರಲ್ಲಿ ತಪ್ಪೇನಿದೆ?: 2024ರ ಲೋಕಸಭೆ ಸ್ಪರ್ಧೆಯ ಸುಳಿವು ಕೊಟ್ಟ ಕಮಲ್ ಹಾಸನ್

- Advertisement -
- Advertisement -

ಮಕ್ಕಳ್ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್‌ ಹಾಸನ್‌ರವರು ಕಾಂಗ್ರೆಸ್ ಟಿಕೆಟ್ ಬಯಸುವುದರಲ್ಲಿ ತಪ್ಪೇನಿದೆ ಎಂಬ ಅಚ್ಚರಿಯ ಹೇಳಿಕೆ ನೀಡುವ ಮೂಲಕ 2024ರ ಲೋಕಸಭೆ ಸ್ಪರ್ಧೆಯ ಸುಳಿವು ಕೊಟ್ಟಿದ್ದಾರೆ.

ತಮ್ಮ ಮಕ್ಕಳ್ ನೀದಿ ಮಯ್ಯಂ ಪಕ್ಷವು ಈರೋಡ್ ಪೂರ್ವ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಅಭ್ಯರ್ಥಿ ಇವಿಕೆಎಸ್ ಇಳಂಗೋವನ್ ಅವರನ್ನು ಬೆಂಬಲಿಸಿದೆ ಎಂದು ಕಮಲ್ ಹಾಸನ್ ಘೋಷಿಸಿದರು.

ಈ ಸಂದರ್ಭದಲ್ಲಿ ಇದಕ್ಕೆ ಪ್ರತಿಯಾಗಿ ನೀವು ಕಾಂಗ್ರೆಸ್‌ನಿಂದ ಲೋಕಸಭಾ ಸ್ಥಾನ ಕೇಳುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ಏಕೆ ಕೇಳಬಾರದು? ರಾಷ್ಟ್ರೀಯ ಹಿತಾಸಕ್ತಿಗಾಗಿ, ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ” ಎಂದಿದ್ದಾರೆ.

ಇತ್ತೀಚಿಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಮಲ್ ಹಾಸನ್ ಭಾಗವಹಿಸಿದ್ದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಅಲ್ಲದೆ ಕಾಂಗ್ರೆಸ್ ಟಿಕೆಟ್ ಬಯಸುವುದರಲ್ಲಿ ತಪ್ಪಿಲ್ಲ ಎಂದು ಹೇಳುವ ಮೂಲಕ ಅವರು 2024ರ ಚುನಾವಣಾ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಇಳಂಗೋವನ್ ಅವರು ಜನವರಿ 23 ರಂದು ಅಲ್ವಾರ್‌ಪೇಟ್ ಕಚೇರಿಯಲ್ಲಿ ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಉಪಚುನಾವಣೆಗೆ ಬೆಂಬಲ ಕೋರಿದ್ದರು. ಆಗ ಕಮಲ್ ಹಾಸನ್‌ರವರು “ಈರೋಡ್ ಪೂರ್ವ ಉಪಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸಲು ಪಕ್ಷದ ಕಾರ್ಯಕಾರಿ ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

2024ರ ಲೋಕಸಭೆಯಲ್ಲಿಯೂ ಮೈತ್ರಿ ಮಾಡಿಕೊಳ್ಳುವಿರ ಎಂಬ ಪ್ರಶ್ನೆಗೆ ಈಗಲೇ ಉತ್ತರಿಸಲು ಸಾಧ್ಯವಿಲ್ಲ, ಇನ್ನೂ ಒಂದು ವರ್ಷ ಬಾಕಿ ಇದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

“ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಕೆಲವೊಮ್ಮೆ ಪಕ್ಷದ ಸಿದ್ಧಾಂತಕ್ಕಿಂತ ಜನರ ನಿರ್ಧಾರಕ್ಕೆ ಬೆಲೆ ಕೊಡಬೇಕಾಗುತ್ತದೆ. ದೇಶದಲ್ಲಿ ಏರುತ್ತಿರುವ ಏಕ ಸಂಸ್ಕೃತಿಗೆ ವಿರುದ್ಧವಾಗಿ ನಾನು ಭಾರತದ ಬಹುತ್ವದಲ್ಲಿ ನಂಬಿಕೆಯಿಡುತ್ತೇನೆ. ಹಾಗಾಗಿ ಡಿಎಂಕೆ-ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದ್ದೇವೆ. ಆದರೆ ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

2021ರ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಕಮಲ್  ಹಾಸನ್ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದರು. ಮಕ್ಕಳ್ ನೀದಿ ಮಯ್ಯಂ ಪಕ್ಷ ರಚಿಸಿ ಚುನಾವಣೆಗೆ ಧುಮುಕಿದ್ದರು. ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕಮಲ್ ಹಾಸನ್ ಕೇವಲ 1500 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವನತಿ ಶ್ರೀನಿವಾಸನ್ ಎದುರು ಸೋಲು ಕಂಡಿದ್ದರು.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...