Homeಮುಖಪುಟ'ಜನರ ಮೇಲಿನ ಹಿಂದಿ ಹೇರಿಕೆಯನ್ನು ವಿರೋಧಿಸುತ್ತೇವೆ': ಕೇಂದ್ರದ ವಿರುದ್ಧ ಗುಡುಗಿದ ಸ್ಟಾಲಿನ್

‘ಜನರ ಮೇಲಿನ ಹಿಂದಿ ಹೇರಿಕೆಯನ್ನು ವಿರೋಧಿಸುತ್ತೇವೆ’: ಕೇಂದ್ರದ ವಿರುದ್ಧ ಗುಡುಗಿದ ಸ್ಟಾಲಿನ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು, ಬಿಜೆಪಿ ನೇತೃತ್ವದ ಕೇಂದ್ರವು ಹಿಂದಿ ಹೇರಿಕೆ ಮೂಲಕ ‘ಬೆದರಿಕೆ’ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ತಮ್ಮ ಆಡಳಿತಾರೂಢ ಡಿಎಂಕೆ ಪಕ್ಷ, ಜನರು ಅಥವಾ ಜನರ ಮೇಲೆ ಭಾಷೆಯನ್ನು ಹೇರುವ ಯಾವುದೇ ಪ್ರಯತ್ನಗಳನ್ನು ವಿರೋಧಿಸುವುದನ್ನು ಮುಂದುವರಿಸುತ್ತದೆ ಎಂದು ಪ್ರತಿಪಾದಿಸಿದರು.

ಈ ಹಿಂದೆ ರಾಜ್ಯದಲ್ಲಿ ನಡೆದ ಹಿಂದಿ ವಿರೋಧಿ ಆಂದೋಲನದ ಅಂಗವಾಗಿ ಮಡಿದವರ ಗೌರವಾರ್ಥವಗಿ ನಡೆದ ಭಾಷಾ ಹುತಾತ್ಮರ ದಿನಾಚರಣೆಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಂ.ಕೆ.ಸ್ಟಾಲಿನ್, ಕೇಂದ್ರದ ಆಡಳಿತಾರೂಢ ಬಿಜೆಪಿ ಹಿಂದಿ ಹೇರುವುದನ್ನು ಅಭ್ಯಾಸ ಮಾಡಿಕೊಂಡಿದೆ ಎಂದರು.

“ಭಾರತೀಯ ಒಕ್ಕೂಟದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಹಿಂದಿ ಹೇರುವುದನ್ನು ಪರಿಪಾಠ ಮಾಡಿಕೊಂಡಿದೆ. ಆಡಳಿತದಿಂದ ಶಿಕ್ಷಣದವರೆಗೆ ಅವರು ಹಿಂದಿಯನ್ನು ಹೇರಲು ಅಧಿಕಾರಕ್ಕೆ ಬಂದಿದ್ದಾರೆಂದು ಅವರು ಭಾವಿಸಿದ್ದಾರೆ” ಎಂದರು.

ಒಂದು ರಾಷ್ಟ್ರ, ಒಂದು ಧರ್ಮ, ಒಂದು ಚುನಾವಣೆ, ಒಂದು (ಪ್ರವೇಶ) ಪರೀಕ್ಷೆ, ಒಂದು ಆಹಾರ, ಒಂದು ಸಂಸ್ಕೃತಿಯಂತೆ ಇದರಿಂದ ಅವರು ಒಂದೇ ಭಾಷೆಯಿಂದ ಇತರ ರಾಷ್ಟ್ರೀಯ ಜನಾಂಗಗಳ ಸಂಸ್ಕೃತಿಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿಎಂಕೆ ಅಧ್ಯಕ್ಷ ಸಿಎಂ ಸ್ಟಾಲಿನ್ ಆರೋಪಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ “ಬೇಷರತ್ ಬೆಂಬಲ” ನೀಡಿದ ಕಮಲ್ ಹಾಸನ್

ಹಿಂದಿ ಹೇರಿಕೆಯ ವಿರುದ್ಧ ಅಕ್ಟೋಬರ್ 2022 ರ ರಾಜ್ಯ ಅಸೆಂಬ್ಲಿ ನಿರ್ಣಯವನ್ನು ನೆನಪಿಸಿಕೊಂಡ ಎಂಕೆ ಸ್ಟಾಲಿನ್, “ಹಿಂದಿ ಹೇರಿಕೆಯ ವಿರುದ್ಧ ನಮ್ಮ ಹೋರಾಟಗಳು ಮುಂದುವರಿಯುತ್ತದೆ. ತಮಿಳನ್ನು ರಕ್ಷಿಸುವ ನಮ್ಮ ಪ್ರಯತ್ನಗಳು ಶಾಶ್ವತವಾಗಿ ಮುಂದುವರಿಯುತ್ತದೆ” ಎಂದು ಗುಡುಗಿದರು.

ಹಿಂದಿ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಇತರ ಭಾಷೆಗಳನ್ನು ನಿರ್ಲಕ್ಷಿಸುವುದಲ್ಲದೆ ಅವುಗಳನ್ನು ನಾಶಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

2017-20ರ ನಡುವೆ ಸಂಸ್ಕೃತ ಭಾಷೆಯನ್ನು ಉತ್ತೇಜಿಸಲು ಕೇಂದ್ರವು ₹ 643 ಕೋಟಿ ಅನುದಾನ ನೀಡಿದೆ ಎಂದು ಅವರು ಹೇಳಿದರು. ತಮಿಳಿಗೆ ಮೀಸಲಿಟ್ಟಿದ್ದು ₹ 23 ಕೋಟಿಗಿಂತ ಕಡಿಮೆಯಾಗಿದೆ.

“ನಾವು ಯಾವುದೇ ಭಾಷೆಗೆ ಶತ್ರುಗಳಲ್ಲ, ಸ್ವಂತ ಆಸಕ್ತಿಯಿಂದ ಯಾರು ಎಷ್ಟು ಭಾಷೆಗಳನ್ನಾದರು ಕಲಿಯಬಹುದು. ಆದರೆ, ಒಂದು ಭಾಷೆಯನ್ನು ಹೇರುವ ಯಾವುದೇ ಕ್ರಮವನ್ನು ನಾವು ವಿರೋಧಿಸುತ್ತೇವೆ” ಎಂದು ಸಿಎಂ ಹೇಳಿದರು.

ಹಲವಾರು ಹಿಂದಿ ವಿರೋಧಿ ಆಂದೋಲನಗಳ ನಂತರ, ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಅವರು ತಮಿಳು ಮತ್ತು ಇಂಗ್ಲಿಷ್‌ನ ದ್ವಿಭಾಷಾ ಸೂತ್ರದ ಶಾಸನವನ್ನು ತಂದರು. ಇದರಿಂದಾಗಿ ರಾಜ್ಯದ ಯುವಕರು ವಿಶ್ವದ ಅನೇಕ ಭಾಗಗಳಲ್ಲಿ ಉದ್ಯೋಗ ಪಡೆಯಲು ಯಶಸ್ವಿಯಾಗಿದ್ದಾರೆ ಎಂದು ಸಿಎಂ ಸ್ಟಾಲಿನ್ ಹೇಳಿದರು.

‘ಭಾಷಾ ಹುತಾತ್ಮರ ಬಲಿದಾನ ವ್ಯರ್ಥವಾಗದಂತೆ ನೋಡಿಕೊಳ್ಳಲು ಅಣ್ಣಾ ಹೀಗೆ ಮಾಡಿದ್ದಾರೆ’ ಎಂದು ದ್ವಿಭಾಷಾ ಸೂತ್ರದ ಕುರಿತು ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...