Homeಮುಖಪುಟ'ಜನರ ಮೇಲಿನ ಹಿಂದಿ ಹೇರಿಕೆಯನ್ನು ವಿರೋಧಿಸುತ್ತೇವೆ': ಕೇಂದ್ರದ ವಿರುದ್ಧ ಗುಡುಗಿದ ಸ್ಟಾಲಿನ್

‘ಜನರ ಮೇಲಿನ ಹಿಂದಿ ಹೇರಿಕೆಯನ್ನು ವಿರೋಧಿಸುತ್ತೇವೆ’: ಕೇಂದ್ರದ ವಿರುದ್ಧ ಗುಡುಗಿದ ಸ್ಟಾಲಿನ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು, ಬಿಜೆಪಿ ನೇತೃತ್ವದ ಕೇಂದ್ರವು ಹಿಂದಿ ಹೇರಿಕೆ ಮೂಲಕ ‘ಬೆದರಿಕೆ’ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ತಮ್ಮ ಆಡಳಿತಾರೂಢ ಡಿಎಂಕೆ ಪಕ್ಷ, ಜನರು ಅಥವಾ ಜನರ ಮೇಲೆ ಭಾಷೆಯನ್ನು ಹೇರುವ ಯಾವುದೇ ಪ್ರಯತ್ನಗಳನ್ನು ವಿರೋಧಿಸುವುದನ್ನು ಮುಂದುವರಿಸುತ್ತದೆ ಎಂದು ಪ್ರತಿಪಾದಿಸಿದರು.

ಈ ಹಿಂದೆ ರಾಜ್ಯದಲ್ಲಿ ನಡೆದ ಹಿಂದಿ ವಿರೋಧಿ ಆಂದೋಲನದ ಅಂಗವಾಗಿ ಮಡಿದವರ ಗೌರವಾರ್ಥವಗಿ ನಡೆದ ಭಾಷಾ ಹುತಾತ್ಮರ ದಿನಾಚರಣೆಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಂ.ಕೆ.ಸ್ಟಾಲಿನ್, ಕೇಂದ್ರದ ಆಡಳಿತಾರೂಢ ಬಿಜೆಪಿ ಹಿಂದಿ ಹೇರುವುದನ್ನು ಅಭ್ಯಾಸ ಮಾಡಿಕೊಂಡಿದೆ ಎಂದರು.

“ಭಾರತೀಯ ಒಕ್ಕೂಟದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಹಿಂದಿ ಹೇರುವುದನ್ನು ಪರಿಪಾಠ ಮಾಡಿಕೊಂಡಿದೆ. ಆಡಳಿತದಿಂದ ಶಿಕ್ಷಣದವರೆಗೆ ಅವರು ಹಿಂದಿಯನ್ನು ಹೇರಲು ಅಧಿಕಾರಕ್ಕೆ ಬಂದಿದ್ದಾರೆಂದು ಅವರು ಭಾವಿಸಿದ್ದಾರೆ” ಎಂದರು.

ಒಂದು ರಾಷ್ಟ್ರ, ಒಂದು ಧರ್ಮ, ಒಂದು ಚುನಾವಣೆ, ಒಂದು (ಪ್ರವೇಶ) ಪರೀಕ್ಷೆ, ಒಂದು ಆಹಾರ, ಒಂದು ಸಂಸ್ಕೃತಿಯಂತೆ ಇದರಿಂದ ಅವರು ಒಂದೇ ಭಾಷೆಯಿಂದ ಇತರ ರಾಷ್ಟ್ರೀಯ ಜನಾಂಗಗಳ ಸಂಸ್ಕೃತಿಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಡಿಎಂಕೆ ಅಧ್ಯಕ್ಷ ಸಿಎಂ ಸ್ಟಾಲಿನ್ ಆರೋಪಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ “ಬೇಷರತ್ ಬೆಂಬಲ” ನೀಡಿದ ಕಮಲ್ ಹಾಸನ್

ಹಿಂದಿ ಹೇರಿಕೆಯ ವಿರುದ್ಧ ಅಕ್ಟೋಬರ್ 2022 ರ ರಾಜ್ಯ ಅಸೆಂಬ್ಲಿ ನಿರ್ಣಯವನ್ನು ನೆನಪಿಸಿಕೊಂಡ ಎಂಕೆ ಸ್ಟಾಲಿನ್, “ಹಿಂದಿ ಹೇರಿಕೆಯ ವಿರುದ್ಧ ನಮ್ಮ ಹೋರಾಟಗಳು ಮುಂದುವರಿಯುತ್ತದೆ. ತಮಿಳನ್ನು ರಕ್ಷಿಸುವ ನಮ್ಮ ಪ್ರಯತ್ನಗಳು ಶಾಶ್ವತವಾಗಿ ಮುಂದುವರಿಯುತ್ತದೆ” ಎಂದು ಗುಡುಗಿದರು.

ಹಿಂದಿ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದರಿಂದ ಇತರ ಭಾಷೆಗಳನ್ನು ನಿರ್ಲಕ್ಷಿಸುವುದಲ್ಲದೆ ಅವುಗಳನ್ನು ನಾಶಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

2017-20ರ ನಡುವೆ ಸಂಸ್ಕೃತ ಭಾಷೆಯನ್ನು ಉತ್ತೇಜಿಸಲು ಕೇಂದ್ರವು ₹ 643 ಕೋಟಿ ಅನುದಾನ ನೀಡಿದೆ ಎಂದು ಅವರು ಹೇಳಿದರು. ತಮಿಳಿಗೆ ಮೀಸಲಿಟ್ಟಿದ್ದು ₹ 23 ಕೋಟಿಗಿಂತ ಕಡಿಮೆಯಾಗಿದೆ.

“ನಾವು ಯಾವುದೇ ಭಾಷೆಗೆ ಶತ್ರುಗಳಲ್ಲ, ಸ್ವಂತ ಆಸಕ್ತಿಯಿಂದ ಯಾರು ಎಷ್ಟು ಭಾಷೆಗಳನ್ನಾದರು ಕಲಿಯಬಹುದು. ಆದರೆ, ಒಂದು ಭಾಷೆಯನ್ನು ಹೇರುವ ಯಾವುದೇ ಕ್ರಮವನ್ನು ನಾವು ವಿರೋಧಿಸುತ್ತೇವೆ” ಎಂದು ಸಿಎಂ ಹೇಳಿದರು.

ಹಲವಾರು ಹಿಂದಿ ವಿರೋಧಿ ಆಂದೋಲನಗಳ ನಂತರ, ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಅವರು ತಮಿಳು ಮತ್ತು ಇಂಗ್ಲಿಷ್‌ನ ದ್ವಿಭಾಷಾ ಸೂತ್ರದ ಶಾಸನವನ್ನು ತಂದರು. ಇದರಿಂದಾಗಿ ರಾಜ್ಯದ ಯುವಕರು ವಿಶ್ವದ ಅನೇಕ ಭಾಗಗಳಲ್ಲಿ ಉದ್ಯೋಗ ಪಡೆಯಲು ಯಶಸ್ವಿಯಾಗಿದ್ದಾರೆ ಎಂದು ಸಿಎಂ ಸ್ಟಾಲಿನ್ ಹೇಳಿದರು.

‘ಭಾಷಾ ಹುತಾತ್ಮರ ಬಲಿದಾನ ವ್ಯರ್ಥವಾಗದಂತೆ ನೋಡಿಕೊಳ್ಳಲು ಅಣ್ಣಾ ಹೀಗೆ ಮಾಡಿದ್ದಾರೆ’ ಎಂದು ದ್ವಿಭಾಷಾ ಸೂತ್ರದ ಕುರಿತು ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...