ಕ್ಯಾಂಪಸ್ನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವಿಚಾರಕ್ಕೆ ಗಲಾಟೆ ನಡೆದಿರುವ ವರದಿಗಳನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಗುರುವಾರ ಮಧ್ಯಾಹ್ನ ತಿರಸ್ಕರಿಸಿದೆ.
ಈ ಬಗ್ಗೆ ವಿಶ್ವವಿದ್ಯಾನಿಲಯದ ಉಪಕುಲಪತಿ ನಜ್ಮಾ ಅಖ್ತರ್ ಅವರು ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ್ದು, “ನಮ್ಮ ವಿಶ್ವವಿದ್ಯಾನಿಲಯದಲ್ಲಿ ಯಾವ ಗಲಾಟೆಯೂ ಆಗಲಿಲ್ಲ, ಗಲಾಟೆ ಮಾಡುವ ಪ್ರಯತ್ನ ಮಾಡಲಾಯಿತು ಆದರೆ ಅದನ್ನು ಸಂಪೂರ್ಣವಾಗಿ ವಿಫಲಗೊಳಿಸಲಾಯಿತು.” “ಏನೇ ಆಗಲಿ, ಬೀದಿಗಳಲ್ಲಿ ನಡೆದ ಸಣ್ಣ ಘಟನೆಯನ್ನು ಗಾಳಿಗೆ ತೂರಲಾಗಿದೆ. ನಮ್ಮ ಕ್ಯಾಂಪಸ್ನಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಚೆನ್ನಾಗಿವೆ” ಎಂದು ಹೇಳಿದ್ದಾರೆ.
ಬುಧವಾರ ದೆಹಲಿಯ ಓಖ್ಲಾ ಪ್ರದೇಶದಲ್ಲಿ ಬಿಬಿಸಿ ಆಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ವಿಶ್ವವಿದ್ಯಾನಿಲಯದ ಹೊರಗೆ ಗಲಾಟೆ ನಡೆಯಿತು. ಆಗ ಮೊದಲು ನಾಲ್ವರು ಎಸ್ಎಫ್ಐ ಸದಸ್ಯರನ್ನು ಬಂಧಿಸಲಾಯಿತು. ಆಗೆ ಅಲ್ಲಿ ಹಲವಾರು ವಿದ್ಯಾರ್ಥಿಗಳು ಜಮಾಯಿಸಿದರು. ನಂತರದ ಗೊಂದಲದಲ್ಲಿ ಹತ್ತಾರು ಮಂದಿಯನ್ನು ಪೊಲೀಸರು ಬಂಧಿಸಿದರು. ಹೆಚ್ಚಿನವರನ್ನು ನಂತರ ಬಿಡುಗಡೆ ಮಾಡಲಾಯಿತು ಆದರೆ ಕನಿಷ್ಠ 13 ಜನರು ಇಂದು ಬೆಳಿಗ್ಗೆ ಬಂಧನದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.
ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ
ಬಂಧಿತ 13 ಜನರಲ್ಲಿ ಕನಿಷ್ಠ ನಾಲ್ವರು ಜಾಮಿಯಾದ ವಿದ್ಯಾರ್ಥಿಗಳಾಗಿದ್ದು, ಎಸ್ಎಫ್ಐ ಜಾಮಿಯಾ ಕಾರ್ಯದರ್ಶಿ ಅಜೀಜ್, ಎಸ್ಎಫ್ಐ ದಕ್ಷಿಣ ದೆಹಲಿ ಉಪಾಧ್ಯಕ್ಷ ನಿವೇದ್ಯ ಮತ್ತು ಎಸ್ಎಫ್ಐ ಸದಸ್ಯರಾದ ಅಭಿರಾಮ್ ಮತ್ತು ತೇಜಸ್ ಎಂದು ತಿಳಿದುಬಂದಿದೆ.
ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ರದ್ದುಗೊಂಡ ನಂತರ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್ನ ಹೊರಗೆ ಗಲಾಟೆ ಮಾಡುತ್ತಿದ್ದಾರೆ ಎಂದು ಜಾಮಿಯಾ ಅಧಿಕಾರಿಗಳು ಹೇಳಿದರು. ಆ ನಂತರ ಕ್ರಮ ಕೈಗೊಂಡಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಬುಧವಾರ ಸಂಜೆ 6 ಗಂಟೆಗೆ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಆದರೆ ಅನುಮತಿಯಿಲ್ಲದೆ ಯಾವುದೇ ಪ್ರದರ್ಶನಕ್ಕೆ ಅನುಮತಿಸುವುದಿಲ್ಲ ಎಂದು ಜಾಮಿಯಾ ಆಡಳಿತವು ಹೇಳಿದೆ.
“ವಿದ್ಯಾರ್ಥಿಗಳ ಯಾವುದೇ ಸಭೆ ಅಥವಾ ಯಾವುದೇ ಚಲನಚಿತ್ರದ ಪ್ರದರ್ಶನವನ್ನು ಅನುಮತಿಯಿಲ್ಲದೆ ಕ್ಯಾಂಪಸ್ನಲ್ಲಿ ನಡೆಸುವಂತಿಲ್ಲ ಎಂದು ವಿಶ್ವವಿದ್ಯಾಲಯವು ಪುನರುಚ್ಚರಿಸುತ್ತದೆ” ಎನ್ನುವ ಅಧಿಸೂಚನೆಯನ್ನು ಓದಲಾಗಿದೆ.
“ಇಲ್ಲಿನ ಶಾಂತಿಯುತ ಶೈಕ್ಷಣಿಕ ವಾತಾವರಣವನ್ನು ನಾಶಮಾಡಲು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಜನರು/ಸಂಸ್ಥೆಗಳನ್ನು ತಡೆಗಟ್ಟಲು ವಿಶ್ವವಿದ್ಯಾನಿಲಯವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.”
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿನ ಘಟನೆ ನಂತರ ಜಾಮಿಯಾದಲ್ಲಿ ಕೋಲಾಹಲವು ಸಂಭವಿಸಿದೆ, ಅಲ್ಲಿ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸುತ್ತಿದ್ದಾಗ ಕಲ್ಲಿನಿಂದ ದಾಳಿ ನಡೆಸಲಾಗಿತ್ತು.ಜೆಎನ್ಯು ಆಡಳಿತ ಕೂಡ ಪ್ರದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ – ತಮ್ಮ ಮೇಲೆ ಕಲ್ಲಿನಿಂದ ದಾಳಿ ನಡೆಸಿದೆ ಎಂದು ಜೆಎನ್ಯು ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಐಶೆ ಘೋಷ್ ಆರೋಪಿಸಿದ್ದಾರೆ.
ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಎಸ್ಎಫ್ಐ ಘಟಕವು ಶುಕ್ರವಾರ ಸಂಜೆ 4 ಗಂಟೆಗೆ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಅಧಿಕಾರಿಗಳಿಂದ ಅನುಮತಿ ಕೋರಿದೆ.
ಬಿಬಿಸಿಯ ವಿವಾದಾತ್ಮಕ ಎರಡು ಭಾಗಗಳ ಸಾಕ್ಷ್ಯಚಿತ್ರವು ಹಿಂದೂ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ರೈಲಿಗೆ ಬೆಂಕಿ ಹಚ್ಚಿದ ನಂತರದ ಹಿಂಸಾಚಾರದಲ್ಲಿ 1,000 ಕ್ಕೂ ಹೆಚ್ಚು ಜನರ – ಹೆಚ್ಚಾಗಿ ಮುಸ್ಲಿಮರನ್ನು ಬಲಿತೆಗೆದುಕೊಂಡಾಗ ಭಾರತೀಯ ಮುಸ್ಲಿಮರೊಂದಿಗಿನ ಮೋದಿಯವರ ಸಂಬಂಧ ಮತ್ತು ಗುಜರಾತ್ನ ಮುಖ್ಯಮಂತ್ರಿಯಾಗಿದ್ದ ಸಮಯವನ್ನು ಇವುಗಳಲ್ಲಿ ಟೀಕಿಸಲಾಗಿದೆ.


