Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

ಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

- Advertisement -
- Advertisement -

ಕ್ಯಾಂಪಸ್‌ನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವಿಚಾರಕ್ಕೆ ಗಲಾಟೆ ನಡೆದಿರುವ ವರದಿಗಳನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಗುರುವಾರ ಮಧ್ಯಾಹ್ನ ತಿರಸ್ಕರಿಸಿದೆ.

ಈ ಬಗ್ಗೆ ವಿಶ್ವವಿದ್ಯಾನಿಲಯದ ಉಪಕುಲಪತಿ ನಜ್ಮಾ ಅಖ್ತರ್ ಅವರು ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ್ದು, “ನಮ್ಮ ವಿಶ್ವವಿದ್ಯಾನಿಲಯದಲ್ಲಿ ಯಾವ ಗಲಾಟೆಯೂ ಆಗಲಿಲ್ಲ, ಗಲಾಟೆ ಮಾಡುವ ಪ್ರಯತ್ನ ಮಾಡಲಾಯಿತು ಆದರೆ ಅದನ್ನು ಸಂಪೂರ್ಣವಾಗಿ ವಿಫಲಗೊಳಿಸಲಾಯಿತು.” “ಏನೇ ಆಗಲಿ, ಬೀದಿಗಳಲ್ಲಿ ನಡೆದ ಸಣ್ಣ ಘಟನೆಯನ್ನು ಗಾಳಿಗೆ ತೂರಲಾಗಿದೆ. ನಮ್ಮ ಕ್ಯಾಂಪಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಚೆನ್ನಾಗಿವೆ” ಎಂದು ಹೇಳಿದ್ದಾರೆ.

ಬುಧವಾರ ದೆಹಲಿಯ ಓಖ್ಲಾ ಪ್ರದೇಶದಲ್ಲಿ ಬಿಬಿಸಿ ಆಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ವಿಶ್ವವಿದ್ಯಾನಿಲಯದ ಹೊರಗೆ ಗಲಾಟೆ ನಡೆಯಿತು. ಆಗ ಮೊದಲು ನಾಲ್ವರು ಎಸ್‌ಎಫ್‌ಐ ಸದಸ್ಯರನ್ನು ಬಂಧಿಸಲಾಯಿತು. ಆಗೆ ಅಲ್ಲಿ ಹಲವಾರು ವಿದ್ಯಾರ್ಥಿಗಳು ಜಮಾಯಿಸಿದರು. ನಂತರದ ಗೊಂದಲದಲ್ಲಿ ಹತ್ತಾರು ಮಂದಿಯನ್ನು ಪೊಲೀಸರು ಬಂಧಿಸಿದರು. ಹೆಚ್ಚಿನವರನ್ನು ನಂತರ ಬಿಡುಗಡೆ ಮಾಡಲಾಯಿತು ಆದರೆ ಕನಿಷ್ಠ 13 ಜನರು ಇಂದು ಬೆಳಿಗ್ಗೆ ಬಂಧನದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ಬಂಧಿತ 13 ಜನರಲ್ಲಿ ಕನಿಷ್ಠ ನಾಲ್ವರು ಜಾಮಿಯಾದ ವಿದ್ಯಾರ್ಥಿಗಳಾಗಿದ್ದು, ಎಸ್‌ಎಫ್‌ಐ ಜಾಮಿಯಾ ಕಾರ್ಯದರ್ಶಿ ಅಜೀಜ್, ಎಸ್‌ಎಫ್‌ಐ ದಕ್ಷಿಣ ದೆಹಲಿ ಉಪಾಧ್ಯಕ್ಷ ನಿವೇದ್ಯ ಮತ್ತು ಎಸ್‌ಎಫ್‌ಐ ಸದಸ್ಯರಾದ ಅಭಿರಾಮ್ ಮತ್ತು ತೇಜಸ್ ಎಂದು ತಿಳಿದುಬಂದಿದೆ.

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ರದ್ದುಗೊಂಡ ನಂತರ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್‌ನ ಹೊರಗೆ ಗಲಾಟೆ ಮಾಡುತ್ತಿದ್ದಾರೆ ಎಂದು ಜಾಮಿಯಾ ಅಧಿಕಾರಿಗಳು ಹೇಳಿದರು. ಆ ನಂತರ ಕ್ರಮ ಕೈಗೊಂಡಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆ 6 ಗಂಟೆಗೆ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಆದರೆ ಅನುಮತಿಯಿಲ್ಲದೆ ಯಾವುದೇ ಪ್ರದರ್ಶನಕ್ಕೆ ಅನುಮತಿಸುವುದಿಲ್ಲ ಎಂದು ಜಾಮಿಯಾ ಆಡಳಿತವು ಹೇಳಿದೆ.

“ವಿದ್ಯಾರ್ಥಿಗಳ ಯಾವುದೇ ಸಭೆ ಅಥವಾ ಯಾವುದೇ ಚಲನಚಿತ್ರದ ಪ್ರದರ್ಶನವನ್ನು ಅನುಮತಿಯಿಲ್ಲದೆ ಕ್ಯಾಂಪಸ್‌ನಲ್ಲಿ ನಡೆಸುವಂತಿಲ್ಲ ಎಂದು ವಿಶ್ವವಿದ್ಯಾಲಯವು ಪುನರುಚ್ಚರಿಸುತ್ತದೆ” ಎನ್ನುವ ಅಧಿಸೂಚನೆಯನ್ನು ಓದಲಾಗಿದೆ.

“ಇಲ್ಲಿನ ಶಾಂತಿಯುತ ಶೈಕ್ಷಣಿಕ ವಾತಾವರಣವನ್ನು ನಾಶಮಾಡಲು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಜನರು/ಸಂಸ್ಥೆಗಳನ್ನು ತಡೆಗಟ್ಟಲು ವಿಶ್ವವಿದ್ಯಾನಿಲಯವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.”

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿನ ಘಟನೆ ನಂತರ ಜಾಮಿಯಾದಲ್ಲಿ ಕೋಲಾಹಲವು ಸಂಭವಿಸಿದೆ, ಅಲ್ಲಿ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸುತ್ತಿದ್ದಾಗ ಕಲ್ಲಿನಿಂದ ದಾಳಿ ನಡೆಸಲಾಗಿತ್ತು.ಜೆಎನ್‌ಯು ಆಡಳಿತ ಕೂಡ ಪ್ರದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ – ತಮ್ಮ ಮೇಲೆ ಕಲ್ಲಿನಿಂದ ದಾಳಿ ನಡೆಸಿದೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಐಶೆ ಘೋಷ್ ಆರೋಪಿಸಿದ್ದಾರೆ.

ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಎಸ್‌ಎಫ್‌ಐ ಘಟಕವು ಶುಕ್ರವಾರ ಸಂಜೆ 4 ಗಂಟೆಗೆ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಅಧಿಕಾರಿಗಳಿಂದ ಅನುಮತಿ ಕೋರಿದೆ.

ಬಿಬಿಸಿಯ ವಿವಾದಾತ್ಮಕ ಎರಡು ಭಾಗಗಳ ಸಾಕ್ಷ್ಯಚಿತ್ರವು ಹಿಂದೂ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ರೈಲಿಗೆ ಬೆಂಕಿ ಹಚ್ಚಿದ ನಂತರದ ಹಿಂಸಾಚಾರದಲ್ಲಿ 1,000 ಕ್ಕೂ ಹೆಚ್ಚು ಜನರ – ಹೆಚ್ಚಾಗಿ ಮುಸ್ಲಿಮರನ್ನು ಬಲಿತೆಗೆದುಕೊಂಡಾಗ ಭಾರತೀಯ ಮುಸ್ಲಿಮರೊಂದಿಗಿನ ಮೋದಿಯವರ ಸಂಬಂಧ ಮತ್ತು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಸಮಯವನ್ನು ಇವುಗಳಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...