Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

ಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

- Advertisement -
- Advertisement -

ಕ್ಯಾಂಪಸ್‌ನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವಿಚಾರಕ್ಕೆ ಗಲಾಟೆ ನಡೆದಿರುವ ವರದಿಗಳನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಗುರುವಾರ ಮಧ್ಯಾಹ್ನ ತಿರಸ್ಕರಿಸಿದೆ.

ಈ ಬಗ್ಗೆ ವಿಶ್ವವಿದ್ಯಾನಿಲಯದ ಉಪಕುಲಪತಿ ನಜ್ಮಾ ಅಖ್ತರ್ ಅವರು ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ್ದು, “ನಮ್ಮ ವಿಶ್ವವಿದ್ಯಾನಿಲಯದಲ್ಲಿ ಯಾವ ಗಲಾಟೆಯೂ ಆಗಲಿಲ್ಲ, ಗಲಾಟೆ ಮಾಡುವ ಪ್ರಯತ್ನ ಮಾಡಲಾಯಿತು ಆದರೆ ಅದನ್ನು ಸಂಪೂರ್ಣವಾಗಿ ವಿಫಲಗೊಳಿಸಲಾಯಿತು.” “ಏನೇ ಆಗಲಿ, ಬೀದಿಗಳಲ್ಲಿ ನಡೆದ ಸಣ್ಣ ಘಟನೆಯನ್ನು ಗಾಳಿಗೆ ತೂರಲಾಗಿದೆ. ನಮ್ಮ ಕ್ಯಾಂಪಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಚೆನ್ನಾಗಿವೆ” ಎಂದು ಹೇಳಿದ್ದಾರೆ.

ಬುಧವಾರ ದೆಹಲಿಯ ಓಖ್ಲಾ ಪ್ರದೇಶದಲ್ಲಿ ಬಿಬಿಸಿ ಆಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ವಿಶ್ವವಿದ್ಯಾನಿಲಯದ ಹೊರಗೆ ಗಲಾಟೆ ನಡೆಯಿತು. ಆಗ ಮೊದಲು ನಾಲ್ವರು ಎಸ್‌ಎಫ್‌ಐ ಸದಸ್ಯರನ್ನು ಬಂಧಿಸಲಾಯಿತು. ಆಗೆ ಅಲ್ಲಿ ಹಲವಾರು ವಿದ್ಯಾರ್ಥಿಗಳು ಜಮಾಯಿಸಿದರು. ನಂತರದ ಗೊಂದಲದಲ್ಲಿ ಹತ್ತಾರು ಮಂದಿಯನ್ನು ಪೊಲೀಸರು ಬಂಧಿಸಿದರು. ಹೆಚ್ಚಿನವರನ್ನು ನಂತರ ಬಿಡುಗಡೆ ಮಾಡಲಾಯಿತು ಆದರೆ ಕನಿಷ್ಠ 13 ಜನರು ಇಂದು ಬೆಳಿಗ್ಗೆ ಬಂಧನದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ಬಂಧಿತ 13 ಜನರಲ್ಲಿ ಕನಿಷ್ಠ ನಾಲ್ವರು ಜಾಮಿಯಾದ ವಿದ್ಯಾರ್ಥಿಗಳಾಗಿದ್ದು, ಎಸ್‌ಎಫ್‌ಐ ಜಾಮಿಯಾ ಕಾರ್ಯದರ್ಶಿ ಅಜೀಜ್, ಎಸ್‌ಎಫ್‌ಐ ದಕ್ಷಿಣ ದೆಹಲಿ ಉಪಾಧ್ಯಕ್ಷ ನಿವೇದ್ಯ ಮತ್ತು ಎಸ್‌ಎಫ್‌ಐ ಸದಸ್ಯರಾದ ಅಭಿರಾಮ್ ಮತ್ತು ತೇಜಸ್ ಎಂದು ತಿಳಿದುಬಂದಿದೆ.

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ರದ್ದುಗೊಂಡ ನಂತರ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್‌ನ ಹೊರಗೆ ಗಲಾಟೆ ಮಾಡುತ್ತಿದ್ದಾರೆ ಎಂದು ಜಾಮಿಯಾ ಅಧಿಕಾರಿಗಳು ಹೇಳಿದರು. ಆ ನಂತರ ಕ್ರಮ ಕೈಗೊಂಡಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆ 6 ಗಂಟೆಗೆ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಆದರೆ ಅನುಮತಿಯಿಲ್ಲದೆ ಯಾವುದೇ ಪ್ರದರ್ಶನಕ್ಕೆ ಅನುಮತಿಸುವುದಿಲ್ಲ ಎಂದು ಜಾಮಿಯಾ ಆಡಳಿತವು ಹೇಳಿದೆ.

“ವಿದ್ಯಾರ್ಥಿಗಳ ಯಾವುದೇ ಸಭೆ ಅಥವಾ ಯಾವುದೇ ಚಲನಚಿತ್ರದ ಪ್ರದರ್ಶನವನ್ನು ಅನುಮತಿಯಿಲ್ಲದೆ ಕ್ಯಾಂಪಸ್‌ನಲ್ಲಿ ನಡೆಸುವಂತಿಲ್ಲ ಎಂದು ವಿಶ್ವವಿದ್ಯಾಲಯವು ಪುನರುಚ್ಚರಿಸುತ್ತದೆ” ಎನ್ನುವ ಅಧಿಸೂಚನೆಯನ್ನು ಓದಲಾಗಿದೆ.

“ಇಲ್ಲಿನ ಶಾಂತಿಯುತ ಶೈಕ್ಷಣಿಕ ವಾತಾವರಣವನ್ನು ನಾಶಮಾಡಲು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಜನರು/ಸಂಸ್ಥೆಗಳನ್ನು ತಡೆಗಟ್ಟಲು ವಿಶ್ವವಿದ್ಯಾನಿಲಯವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.”

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿನ ಘಟನೆ ನಂತರ ಜಾಮಿಯಾದಲ್ಲಿ ಕೋಲಾಹಲವು ಸಂಭವಿಸಿದೆ, ಅಲ್ಲಿ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸುತ್ತಿದ್ದಾಗ ಕಲ್ಲಿನಿಂದ ದಾಳಿ ನಡೆಸಲಾಗಿತ್ತು.ಜೆಎನ್‌ಯು ಆಡಳಿತ ಕೂಡ ಪ್ರದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ – ತಮ್ಮ ಮೇಲೆ ಕಲ್ಲಿನಿಂದ ದಾಳಿ ನಡೆಸಿದೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಐಶೆ ಘೋಷ್ ಆರೋಪಿಸಿದ್ದಾರೆ.

ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಎಸ್‌ಎಫ್‌ಐ ಘಟಕವು ಶುಕ್ರವಾರ ಸಂಜೆ 4 ಗಂಟೆಗೆ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಅಧಿಕಾರಿಗಳಿಂದ ಅನುಮತಿ ಕೋರಿದೆ.

ಬಿಬಿಸಿಯ ವಿವಾದಾತ್ಮಕ ಎರಡು ಭಾಗಗಳ ಸಾಕ್ಷ್ಯಚಿತ್ರವು ಹಿಂದೂ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ರೈಲಿಗೆ ಬೆಂಕಿ ಹಚ್ಚಿದ ನಂತರದ ಹಿಂಸಾಚಾರದಲ್ಲಿ 1,000 ಕ್ಕೂ ಹೆಚ್ಚು ಜನರ – ಹೆಚ್ಚಾಗಿ ಮುಸ್ಲಿಮರನ್ನು ಬಲಿತೆಗೆದುಕೊಂಡಾಗ ಭಾರತೀಯ ಮುಸ್ಲಿಮರೊಂದಿಗಿನ ಮೋದಿಯವರ ಸಂಬಂಧ ಮತ್ತು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಸಮಯವನ್ನು ಇವುಗಳಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...