Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

ಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

- Advertisement -
- Advertisement -

ಕ್ಯಾಂಪಸ್‌ನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ವಿಚಾರಕ್ಕೆ ಗಲಾಟೆ ನಡೆದಿರುವ ವರದಿಗಳನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಗುರುವಾರ ಮಧ್ಯಾಹ್ನ ತಿರಸ್ಕರಿಸಿದೆ.

ಈ ಬಗ್ಗೆ ವಿಶ್ವವಿದ್ಯಾನಿಲಯದ ಉಪಕುಲಪತಿ ನಜ್ಮಾ ಅಖ್ತರ್ ಅವರು ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ್ದು, “ನಮ್ಮ ವಿಶ್ವವಿದ್ಯಾನಿಲಯದಲ್ಲಿ ಯಾವ ಗಲಾಟೆಯೂ ಆಗಲಿಲ್ಲ, ಗಲಾಟೆ ಮಾಡುವ ಪ್ರಯತ್ನ ಮಾಡಲಾಯಿತು ಆದರೆ ಅದನ್ನು ಸಂಪೂರ್ಣವಾಗಿ ವಿಫಲಗೊಳಿಸಲಾಯಿತು.” “ಏನೇ ಆಗಲಿ, ಬೀದಿಗಳಲ್ಲಿ ನಡೆದ ಸಣ್ಣ ಘಟನೆಯನ್ನು ಗಾಳಿಗೆ ತೂರಲಾಗಿದೆ. ನಮ್ಮ ಕ್ಯಾಂಪಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಚೆನ್ನಾಗಿವೆ” ಎಂದು ಹೇಳಿದ್ದಾರೆ.

ಬುಧವಾರ ದೆಹಲಿಯ ಓಖ್ಲಾ ಪ್ರದೇಶದಲ್ಲಿ ಬಿಬಿಸಿ ಆಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ವಿಶ್ವವಿದ್ಯಾನಿಲಯದ ಹೊರಗೆ ಗಲಾಟೆ ನಡೆಯಿತು. ಆಗ ಮೊದಲು ನಾಲ್ವರು ಎಸ್‌ಎಫ್‌ಐ ಸದಸ್ಯರನ್ನು ಬಂಧಿಸಲಾಯಿತು. ಆಗೆ ಅಲ್ಲಿ ಹಲವಾರು ವಿದ್ಯಾರ್ಥಿಗಳು ಜಮಾಯಿಸಿದರು. ನಂತರದ ಗೊಂದಲದಲ್ಲಿ ಹತ್ತಾರು ಮಂದಿಯನ್ನು ಪೊಲೀಸರು ಬಂಧಿಸಿದರು. ಹೆಚ್ಚಿನವರನ್ನು ನಂತರ ಬಿಡುಗಡೆ ಮಾಡಲಾಯಿತು ಆದರೆ ಕನಿಷ್ಠ 13 ಜನರು ಇಂದು ಬೆಳಿಗ್ಗೆ ಬಂಧನದಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ವಿಚಾರಕ್ಕೆ ಜಾಮಿಯಾ ವಿವಿಯಲ್ಲಿ ಗಲಾಟೆ; 12ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬಂಧನ

ಬಂಧಿತ 13 ಜನರಲ್ಲಿ ಕನಿಷ್ಠ ನಾಲ್ವರು ಜಾಮಿಯಾದ ವಿದ್ಯಾರ್ಥಿಗಳಾಗಿದ್ದು, ಎಸ್‌ಎಫ್‌ಐ ಜಾಮಿಯಾ ಕಾರ್ಯದರ್ಶಿ ಅಜೀಜ್, ಎಸ್‌ಎಫ್‌ಐ ದಕ್ಷಿಣ ದೆಹಲಿ ಉಪಾಧ್ಯಕ್ಷ ನಿವೇದ್ಯ ಮತ್ತು ಎಸ್‌ಎಫ್‌ಐ ಸದಸ್ಯರಾದ ಅಭಿರಾಮ್ ಮತ್ತು ತೇಜಸ್ ಎಂದು ತಿಳಿದುಬಂದಿದೆ.

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ರದ್ದುಗೊಂಡ ನಂತರ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್‌ನ ಹೊರಗೆ ಗಲಾಟೆ ಮಾಡುತ್ತಿದ್ದಾರೆ ಎಂದು ಜಾಮಿಯಾ ಅಧಿಕಾರಿಗಳು ಹೇಳಿದರು. ಆ ನಂತರ ಕ್ರಮ ಕೈಗೊಂಡಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬುಧವಾರ ಸಂಜೆ 6 ಗಂಟೆಗೆ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಆದರೆ ಅನುಮತಿಯಿಲ್ಲದೆ ಯಾವುದೇ ಪ್ರದರ್ಶನಕ್ಕೆ ಅನುಮತಿಸುವುದಿಲ್ಲ ಎಂದು ಜಾಮಿಯಾ ಆಡಳಿತವು ಹೇಳಿದೆ.

“ವಿದ್ಯಾರ್ಥಿಗಳ ಯಾವುದೇ ಸಭೆ ಅಥವಾ ಯಾವುದೇ ಚಲನಚಿತ್ರದ ಪ್ರದರ್ಶನವನ್ನು ಅನುಮತಿಯಿಲ್ಲದೆ ಕ್ಯಾಂಪಸ್‌ನಲ್ಲಿ ನಡೆಸುವಂತಿಲ್ಲ ಎಂದು ವಿಶ್ವವಿದ್ಯಾಲಯವು ಪುನರುಚ್ಚರಿಸುತ್ತದೆ” ಎನ್ನುವ ಅಧಿಸೂಚನೆಯನ್ನು ಓದಲಾಗಿದೆ.

“ಇಲ್ಲಿನ ಶಾಂತಿಯುತ ಶೈಕ್ಷಣಿಕ ವಾತಾವರಣವನ್ನು ನಾಶಮಾಡಲು ಪಟ್ಟಭದ್ರ ಹಿತಾಸಕ್ತಿ ಹೊಂದಿರುವ ಜನರು/ಸಂಸ್ಥೆಗಳನ್ನು ತಡೆಗಟ್ಟಲು ವಿಶ್ವವಿದ್ಯಾನಿಲಯವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.”

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿನ ಘಟನೆ ನಂತರ ಜಾಮಿಯಾದಲ್ಲಿ ಕೋಲಾಹಲವು ಸಂಭವಿಸಿದೆ, ಅಲ್ಲಿ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸುತ್ತಿದ್ದಾಗ ಕಲ್ಲಿನಿಂದ ದಾಳಿ ನಡೆಸಲಾಗಿತ್ತು.ಜೆಎನ್‌ಯು ಆಡಳಿತ ಕೂಡ ಪ್ರದರ್ಶನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಬಲಿತ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ – ತಮ್ಮ ಮೇಲೆ ಕಲ್ಲಿನಿಂದ ದಾಳಿ ನಡೆಸಿದೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಐಶೆ ಘೋಷ್ ಆರೋಪಿಸಿದ್ದಾರೆ.

ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಎಸ್‌ಎಫ್‌ಐ ಘಟಕವು ಶುಕ್ರವಾರ ಸಂಜೆ 4 ಗಂಟೆಗೆ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಅಧಿಕಾರಿಗಳಿಂದ ಅನುಮತಿ ಕೋರಿದೆ.

ಬಿಬಿಸಿಯ ವಿವಾದಾತ್ಮಕ ಎರಡು ಭಾಗಗಳ ಸಾಕ್ಷ್ಯಚಿತ್ರವು ಹಿಂದೂ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ರೈಲಿಗೆ ಬೆಂಕಿ ಹಚ್ಚಿದ ನಂತರದ ಹಿಂಸಾಚಾರದಲ್ಲಿ 1,000 ಕ್ಕೂ ಹೆಚ್ಚು ಜನರ – ಹೆಚ್ಚಾಗಿ ಮುಸ್ಲಿಮರನ್ನು ಬಲಿತೆಗೆದುಕೊಂಡಾಗ ಭಾರತೀಯ ಮುಸ್ಲಿಮರೊಂದಿಗಿನ ಮೋದಿಯವರ ಸಂಬಂಧ ಮತ್ತು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಸಮಯವನ್ನು ಇವುಗಳಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...