Homeಕರ್ನಾಟಕತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

ತುಮಕೂರು: ಗಣರಾಜ್ಯೋತ್ಸವದಂದು ಸ್ವಾತಂತ್ರ್ಯ ವೃತ್ತದಲ್ಲಿ ಹಾರಾಡಿದ ಭಗವಧ್ವಜ!

- Advertisement -
- Advertisement -

ಇಂದು ದೇಶದೆಲ್ಲೆಡೆ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಸಂವಿಧಾನ ಜಾರಿಗೆ ಬಂದ ನೆನಪಿಗಾಗಿ ಅಂಬೇಡ್ಕರ್, ಗಾಂಧಿ ಫೋಟೊ ಇಟ್ಟು ಸ್ಮರಿಸಲಾಗಿದೆ. ತ್ರಿವರ್ಣ ಧ್ವಜ ಹಾರಿಸಿ ಭಾರತದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲಾಗಿದೆ. ಆದರೆ ತುಮಕೂರಿನ ಐತಿಹಾಸಿಕ ಹಿನ್ನಲೆಯ ಸ್ವಾತಂತ್ರ್ಯ ಚೌಕದಲ್ಲಿ ಮಾತ್ರ ಇಂದೂ ಕೂಡ ಭಗವಧ್ವಜ ಹಾರಿಸಲಾಗಿದೆ. ಸುತ್ತಲೂ ಕೇಸರಿ ಬಂಟಿಗ್ಸ್‌ಗಳನ್ನು ಕಟ್ಟಲಾಗಿದೆ. ಈ ಸ್ಥಿತಿಗೆ ಹಲವು ಪ್ರಜ್ಞಾವಂತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮೈಸೂರು ಚಲೋ ಚಳವಳಿ ಉತ್ತುಂಗದಲ್ಲಿತ್ತು. ಜವಾಬ್ದಾರಿ ಸರ್ಕಾರದ ರಚನೆಗೆ ಆಗ್ರಹಿಸಿ ಮೈಸೂರು ಅರಸರ ವಿರುದ್ಧ ಹೋರಾಟ ನಡೆಯುತ್ತಿತ್ತು. ಎಲ್ಲೆಡೆ ತ್ರಿವರ್ಣ ಧ್ವಜ ಹಾರಿಸಲು ನಿಷೇಧ ಹೇರಲಾಗಿತ್ತು. ಅಂತಹ ಸಂದರ್ಭದಲ್ಲಿ 147ರ ಸೆಪ್ಟಂಬರ್ 14ರಂದು ತುಮಕೂರಿನಲ್ಲಿ ಬೃಹತ್ ಚಳವಳಿ ನಡೆದಿತ್ತು. ಪೊಲೀಸರು ಹೋರಾಟ ಹತ್ತಿಕ್ಕಲು ಲಾಠೀಚಾರ್ಜ್ ಮಾಡಿದರು. ಆನಂತರ ಗೋಲಿಬಾರ್ ಮಾಡಿದರು. ಆಗ ಖ್ಯಾತ ಸಾಹಿತಿ ಗೋರುರು ರಾಮಸ್ವಾಮಿ ಅಯ್ಯಂಗಾರ್‌ರವರ ಪುತ್ರ ರಾಮಚಂದ್ರ ಸೇರಿದಂತೆ ನಂಜುಂಡಪ್ಪ, ಗಂಗಪ್ಪ ಎಂಬ ಸತ್ಯಾಗ್ರಹಿಗಳು ಹುತಾತ್ಮರಾದರು. ಅವರ ನೆನಪಿನಲ್ಲಿ ಅಲ್ಲಿ ಸ್ಮಾರಕವೊಂದನ್ನು ನಿರ್ಮಿಸಿ ಅವರ ಹೆಸರುಗಳನ್ನು ಕೆತ್ತಲಾಗಿದೆ. ಆ ಚೌಕಕ್ಕೆ ಸ್ವಾತಂತ್ರ್ಯ ವೃತ್ತ ಎಂದು ಹೆಸರಿಡಲಾಗಿದೆ. ಇಂದಿನ ಗಣರಾಜ್ಯೋತ್ಸವದ ಸಂದರ್ಭದಲ್ಲಿಯೂ ಜಿಲ್ಲಾಡಳಿತ ಆ ವೃತ್ತದ ಬಗ್ಗೆ ಕಾಳಜಿ ವಹಿಸದಿರುವುದು ದುರಂತವಾಗಿದೆ.

ತುಮಕೂರು ನಗರದ ಈ ವೃತ್ತದ ಹೆಸರು ಸ್ವತಂತ್ರ ಚೌಕ, ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ಗುಂಡಿಗೆ ಗುಂಡಿಗೆಯೊಡ್ಡಿ ಹುತಾತ್ಮರಾದ ಸ್ಥಳ, ಅವರ ಸ್ಮಾರಕವೂ ಈ ವೃತ್ತದಲ್ಲಿದೆ, ಗಣರಾಜ್ಯೋತ್ಸವದ ದಿನವಾದರೂ ಈ ವೃತ್ತದಲ್ಲಿ ಭಾರತದ ಅಧಿಕೃತ ತ್ರಿವರ್ಣ ಧ್ವಜ ಹಾರಬೇಕಿತ್ತು, ಈ ಚೆಡ್ಡಿಗಳ ಉದ್ಧಟತನ ನೋಡಿ, ಅತ್ಯಂತ ಎತ್ತರದಲ್ಲಿ ಕೇಸರಿ ಪತಾಕೆಯನ್ನು ಹಾರಿಬಿಟ್ಟಿದ್ದಾರೆ. ತುಮಕೂರಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲ ಎಂಬುದಕ್ಕೆ ಈ ವೃತ್ತವೇ ಸಾಕ್ಷಿ ಎಂದು ಕುಚ್ಚಂಗಿ ಪ್ರಸನ್ನರವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ನೆನಪಿಸುವ ಸ್ಥಳಗಳಲ್ಲಿ ಒಂದಾದ ಸ್ವಾತಂತ್ರ್ಯ ಚೌಕವು ಕಸ ಕಡ್ಡಿಗಳಿಂದ ತುಂಬಿಕೊಂದಿಡೆ. ಸರ್ಕಾರಿ ಜಾಹೀರಾತು ಸೇರಿದಂತೆ ಹಲವು ಜಾಹೀರಾತುಗಳನ್ನು ಹಾಕುವ ಸ್ಥಳವಾಗಿ ಬದಲಾಗಿದೆ. ಅದರ ಹೆಸರನ್ನು ಚರ್ಚ್ ಸರ್ಕಲ್ ಎಂದು ಕರೆಯುವ ಪರಿಪಾಠ ಆರಂಭವಾಗಿದೆ. ಅದರ ಮುಂದುವರಿದ ಭಾಗವಾಗಿ ಅಲ್ಲಿ ಇಂದು ಕೇಸರಿ ಬಾವುಟ ಬಂಟಿಂಗ್‌ಗಳು ರಾರಾಜಿಸಿವೆ. ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಅ ಸ್ಥಳದ ಗೌರವವನ್ನು ಕಾಪಾಡಬೇಕಿದೆ.

ಇದನ್ನೂ ಓದಿ; ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...