Homeಚಳವಳಿಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ | CPI(M) ಕೌನ್ಸಿಲರ್‌‌ ಮತ್ತು DYFI ಕಾರ್ಯಕರ್ತರನ್ನು ಬಂಧಿಸಿದ ಚೆನ್ನೈ ಪೊಲೀಸರು

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ | CPI(M) ಕೌನ್ಸಿಲರ್‌‌ ಮತ್ತು DYFI ಕಾರ್ಯಕರ್ತರನ್ನು ಬಂಧಿಸಿದ ಚೆನ್ನೈ ಪೊಲೀಸರು

- Advertisement -
- Advertisement -

ಪ್ರಧಾನಮಂತ್ರಿ ಮೋದಿಯವರ ಕುರಿತಾಗಿ ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದಕ್ಕಾಗಿ ಗ್ರೇಟರ್ ಚೆನ್ನೈ ಕಾರ್ಪೊರೇಷನ್ (GCC)ನ ತೆನಾಂಪೇಟೆಯ ಕೌನ್ಸಿಲರ್ ಎ. ಪ್ರಿಯದರ್ಶಿನಿ ಅವರನ್ನು ಗುರುವಾರ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಾಕ್ಷ್ಯಚಿತ್ರಗಳ ಲಿಂಕನ್ನು ಒಕ್ಕೂಟ ಸರ್ಕಾರದ ತಡೆ ಹಿಡಿದಿದ್ದನ್ನು ವಿರೋಧಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ದೇಶದಾದ್ಯಂತ ಹೋರಾಟಗಾರರು ಮತ್ತು ವಿಪಕ್ಷಗಳು ನಡೆಸುತ್ತಿದ್ದಾರೆ.

ಚೆನ್ನೈನ ಟಿಪಿ ಛತ್ರಂನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ದ ಅಂಗ ಸಂಸ್ಥೆ ಡಿವೈಎಫ್‌ಐ ಸಂಘಟನೆ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಪ್ರತಿಭಟನಾಕಾರರು ತಮ್ಮ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರಗಳನ್ನು ಒಟ್ಟಿಗೆ ವೀಕ್ಷಿಸಲು ಉದ್ದೇಶಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಕೌನ್ಸಿಲರ್‌‌ ಪ್ರಿಯದರ್ಶಿನಿ ಸೇರಿದಂತೆ 14 ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ನಂತರ ಎಲ್ಲಾ 14 ಮಂದಿಯನ್ನು ಬಿಡುಗಡೆ ಮಾಡಲಾಯಿದೆ. ಆದಾಗ್ಯೂ, ಪೊಲೀಸರು ಬರುವ ಮೊದಲು ಪ್ರತಿಭಟನಾಕಾರರು ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ಸಾಧ್ಯವಾಯಿತು ಎಂದು ಕೌನ್ಸಿಲರ್ ಪ್ರಿಯದರ್ಶಿನಿ ಅವರ ಕುಟುಂಬವು ಹೇಳಿದೆ.

ಸಿಪಿಐ(ಎಂ)ನ ಪಕ್ಷದವಾಗಿರುವ ಪ್ರಿಯದರ್ಶಿನಿ ಅವರು ಕಳೆದ ವರ್ಷ ನಡೆದ ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ತೆನಾಂಪೇಟೆಯ ವಾರ್ಡ್ ಸಂಖ್ಯೆ 98 ರಿಂದ 5,253 ಮತಗಳ ಅಂತರದಿಂದ ಗೆದ್ದಿದ್ದರು. ಗೆಲ್ಲುವ ವೇಳೆ ಅವರು 21 ನೇ ವಯಸ್ಸಿನವರಾಗಿದ್ದು, ಅವರು ಚೆನ್ನೈನ ಅತ್ಯಂತ ಕಿರಿಯ ಕೌನ್ಸಿಲರ್ ಆಗಿದ್ದಾರೆ.

ಗುಜರಾತ್‌ ಗಲಭೆ ನಡೆದ ಸಂದರ್ಭದಲ್ಲಿ ಪೊಲೀಸರು ಕ್ರಮ ಕೈಗೊಳ್ಳದಂತೆ ತಡೆದಿದ್ದರು ಎಂದು ಬಿಬಿಸಿ ಸಾಕ್ಷ್ಯಚಿತ್ರ ಆರೋಪಿಸಿದೆ. ಯುಕೆ ಸರ್ಕಾರದ ಆಂತರಿಕ ವರದಿಯನ್ನು ಉಲ್ಲೇಖಿಸಿರುವ ಸಾಕ್ಷ್ಯಚಿತ್ರವು ‘ವಿಚಾರಣೆ ನಡೆಸಿದ ಬ್ರಿಟಿಷ್ ತಂಡವು, ಘಟನೆಗಳಿಗೆ ನರೇಂದ್ರ ಮೋದಿ ಅವರೇ ನೇರ ಹೊಣೆ’ ಎಂದು ಹೇಳುತ್ತದೆ.

ಅದಾಗ್ಯೂ ಗುಜರಾತ್‌ ಸರ್ಕಾರವು ಸಾಕ್ಷ್ಯಚಿತ್ರವನ್ನು “ಪ್ರೊಪಗಾಂಡ” ಎಂದು ಕರೆದಿದ್ದು, ಐಟಿ ನಿಯಮಗಳು-2021 ರ ಸೆಕ್ಷನ್ 16 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಅನ್ವಯಿಸುವ ಮೂಲಕ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕಲು ಟ್ವಿಟರ್‌ ಮತ್ತು ಯೂಟ್ಯೂಬ್‌ಗೆ ಕೇಳಿದೆ. ಚಿತ್ರದ ಲಿಂಕ್‌ಗಳನ್ನು ಜನವರಿ 20 ರಂದು ನಿರ್ಬಂಧಿಸಲಾಗಿದೆ.

ಕಾಂಗ್ರೆಸ್‌ ಮತ್ತು ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿವಿಧ ಎಡಪಂಥೀಯ ಸಂಘಟನೆಗಳ ನೇತೃತ್ವದಲ್ಲಿ ದೇಶದಾದ್ಯಂತ ಸಾಕ್ಷ್ಯಚಿತ್ರದ ನಿಷೇಧದ ವಿರುದ್ಧ ಪ್ರತಿಭಟನೆಗಳು ನಡೆದಿದ್ದು, ಅದರ ಪ್ರದರ್ಶನವೂ ನಡೆಯುತ್ತಿದೆ. ಜನವರಿ 24 ರಂದು, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ವೀಡಿಯೊವನ್ನು ನೋಡಬಹುದಾದ ಸೈಟ್‌ಗಳ ಹಲವಾರು ಲಿಂಕ್‌ಗಳನ್ನು ಹಂಚಿಕೊಂಡಿದ್ದಾರೆ.

ಜನವರಿ 24 ರಂದು, ಡಿವೈಎಫ್‌ಐ, ಎಸ್‌ಎಫ್‌ಐ ಮತ್ತು ಯುವ ಕಾಂಗ್ರೆಸ್ ಕೇರಳದಾದ್ಯಂತ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ನಡೆಸಿದ್ದವು. ಅದೇ ದಿನ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಆಡಳಿತವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟವನ್ನು ಸ್ಕ್ರೀನಿಂಗ್ ಮಾಡದಂತೆ ತಡೆಯಲು ಕ್ಯಾಂಪಸ್‌ನಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿತು.

ಜನವರಿ 25 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ಘೋಷಿಸಿದ ನಂತರ ದೆಹಲಿ ಪೊಲೀಸರು ಎಸ್‌ಎಫ್‌ಐನ ನಾಲ್ಕು ವಿದ್ಯಾರ್ಥಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ಸಂಬಂಧ ನಮ್ಮ ವಿವಿಯಲ್ಲಿ ಯಾವ ಗಲಾಟೆಯೂ ನಡೆದಿಲ್ಲ: ಜಾಮಿಯಾ ಕುಲಪತಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...