HomeಮುಖಪುಟPIB ಫ್ಯಾಕ್ಟ್‌ಚೆಕ್‌ ನಿಯಮಗಳು ಟಿವಿ ಮಾಧ್ಯಮಗಳಿಗೆ ಅನ್ವಯಿಸುವುದಿಲ್ಲ: ಸಚಿವ ರಾಜೀವ್ ಚಂದ್ರಶೇಖರ್

PIB ಫ್ಯಾಕ್ಟ್‌ಚೆಕ್‌ ನಿಯಮಗಳು ಟಿವಿ ಮಾಧ್ಯಮಗಳಿಗೆ ಅನ್ವಯಿಸುವುದಿಲ್ಲ: ಸಚಿವ ರಾಜೀವ್ ಚಂದ್ರಶೇಖರ್

- Advertisement -
- Advertisement -

ಡಿಜಿಟಲ್ ಮೀಡಿಯಗಳ ಮೇಲೆ ನಿಯಂತ್ರಣ ಹೇರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಐಟಿ ನಿಯಮಗಳನ್ನು ಬಿಗಿಗೊಳಿಸಲು ಹೊರಟಿದೆ. ಈ ಐಟಿ ನಿಯಮಗಳ ಅಡಿಯಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಅಥವಾ ಸರ್ಕಾರಿ ಅಧಿಕೃತ ಸಂಸ್ಥೆಯು ಫ್ಯಾಕ್ಟ್ ಚೆಕ್ ಮೂಲಕ ನಕಲಿ ಸುದ್ದಿಗಳನ್ನು ತಡೆಯುವ ಕೆಲಸ ಮಾಡುತ್ತವೆ. ಆದರೆ ಇದೀಗ ಈ ಬಗ್ಗೆ ಮಾತನಾಡಿದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್, ‘ಈ ನಿಯಮಗಳು ಕೇವಲ ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗೆ ಮಾತ್ರ ಸೀಮೀತವಾಗಿದ್ದು, ಟಿವಿ ಸುದ್ದಿ ವಾಹಿನಿಗಳಿಗೆ ಅನ್ವಯಿಸುವುದಿಲ್ಲ’ ಎಂದು ಹೇಳಿದ್ದಾರೆ.

ಈ ಬಗ್ಗೆ ಪಿಟಿಐ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಂದ್ರಶೇಖರ್, “ಐಟಿ ನಿಯಮಗಳು ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸೀಮಿತ” ಎಂದು ಹೇಳಿದ್ದಾರೆ.

“ಯಾವುದೇ ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ವಿಷಯವನ್ನು ಪೋಸ್ಟ್ ಮಾಡದ ಹೊರತು ಇದು ಟಿವಿಯಲ್ಲಿ ಅನ್ವಯಿಸುವುದಿಲ್ಲ. ಐಟಿ ನಿಯಮಗಳು ಆನ್‌ಲೈನ್ ಮಧ್ಯವರ್ತಿಗಳಿಗೆ ಮಾತ್ರ ಸೀಮಿತವಾಗಿದೆ” ಎಂದು ಸಚಿವರು ಹೇಳಿದರು.

ಸರ್ಕಾರವು ಯಾವುದೇ ಡಿಜಿಟಲ್ ಮೀಡಿಯಾ ವಿಷಯವನ್ನು ತೆಗೆದುಹಾಕುವ ಪ್ರಸ್ತಾಪದ ಕುರಿತು ಕಾಮೆಂಟ್‌ಗಳನ್ನು ಆಹ್ವಾನಿಸಿದೆ. ಅವುಗಳ ಮೇಲೆ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ವಿಷಯವನ್ನು ನಕಲಿ, ಸುಳ್ಳು ಅಥವಾ ತಪ್ಪುದಾರಿಗೆಳೆಯುವ ವಿಷಯ ಎಂದು PIB ಫ್ಯಾಕ್ಟ್ ಚೆಕ್ ಏಜೆನ್ಸಿ ಅಥವಾ ಸರ್ಕಾರದಿಂದ ಯಾವುದೇ ಅಧಿಕೃತ ಏಜೆನ್ಸಿಯು ನಿರ್ಧರಿಸುತ್ತವೆ.

ಈ ಪ್ರಸ್ತಾವನೆಯನ್ನು ಕಾರ್ಯಗತಗೊಳಿಸುವ ಮೊದಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮುಂದಿನ ತಿಂಗಳು ಮಧ್ಯಸ್ಥಗಾರರೊಂದಿಗೆ ಚರ್ಚೆ ನಡೆಸಲಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಂಪಾದಕರ ಸಂಘ ಮತ್ತು ಇತರ ಮಧ್ಯಸ್ಥಗಾರರನ್ನು ಆಹ್ವಾನಿಸಿ ಸಮಾಲೋಚನೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.

2021ರಲ್ಲಿ ನಿಯಮಗಳು ಹೇಗಿರಲಿವೆ ಎಂಬ ಬಗ್ಗೆ ಮಾರ್ಪಾಡುಗಳನ್ನು ಬಿಡುಗಡೆ ಮಾಡಿತ್ತು, ಇದನ್ನು ಸಾರ್ವಜನಿಕ ಸಮಾಲೋಚನೆಗಾಗಿ ಬಿಡಲಾಗಿತ್ತು. ಸಚಿವಾಲಯವು ಕಳೆದ ವಾರ ಕರಡು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, ಈ ನಿಯಮಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಭಾಗಶಃ ಕಾರ್ಯಗತಗೊಳಿಸುತ್ತದೆ.

ಪ್ರಸ್ತಾವಿತ ತಿದ್ದುಪಡಿಯ ಅಡಿಯಲ್ಲಿ, ಪತ್ರಿಕಾ ಮಾಹಿತಿ ಬ್ಯೂರೋದ ಸತ್ಯ ಪರಿಶೀಲನಾ ಘಟಕವು ನಕಲಿ ಅಥವಾ ಸುಳ್ಳು ಎಂದು ಗುರುತಿಸಿದ ಮಾಹಿತಿಯನ್ನು ಅಪ್‌ಲೋಡ್ ಮಾಡುವುದು, ಪ್ರಕಟಿಸುವುದು, ರವಾನೆ ಮಾಡುವುದು ಅಥವಾ ಹಂಚಿಕೊಳ್ಳದಿರುವಂತೆ ತಡೆಯುವುದು ಮಧ್ಯವರ್ತಿಗಳ ಕರ್ತವ್ಯವಾಗಿರುತ್ತದೆ. ಇದು ನಾಗರಿಕರಿಗೆ ಪೋರ್ಟಲ್‌ನಲ್ಲಿ ಅಥವಾ ಇ-ಮೇಲ್ ಮತ್ತು ವಾಟ್ಸಾಪ್ ಮೂಲಕ ಬರುವ ನಕಲಿ ಮಾಹಿತಿಯನ್ನು  ತಡೆಯುತ್ತದೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದು, “ಪಿಐಬಿಯ ಫ್ಯಾಕ್ಟ್ ಚೆಕಿಂಗ್ ಮೂಲಕ “ನಕಲಿ” ಎಂದು ಗುರುತಿಸಲಾದ ಸುದ್ದಿ ಅಥವಾ ಮಾಹಿತಿಯನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ನಿರ್ದೇಶಿಸಲು ಪ್ರಯತ್ನಿಸುವ ಐಟಿ ನಿಯಮಗಳಿಗೆ ತಿದ್ದುಪಡಿಗಳನ್ನು “ಮುಕ್ತಗೊಳಿಸುವಂತೆ” ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಡಿಜಿಟಲ್ ಮಾಧ್ಯಮದ ನಿಯಂತ್ರಕ ಚೌಕಟ್ಟಿನ ಕುರಿತು ಪತ್ರಿಕಾ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆಯನ್ನು ಪ್ರಾರಂಭಿಸುವಂತೆ ಮಂಗಳವಾರ ವೈಷ್ಣವ್ ಅವರಿಗೆ ಕಳುಹಿಸಲಾದ ಪತ್ರದಲ್ಲಿ ಗಿಲ್ಡ್ ಸಚಿವಾಲಯವನ್ನು ಕೇಳಿದೆ. ಪ್ರಸ್ತಾವಿತ ತಿದ್ದುಪಡಿಯಿಂದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಗೆ ವ್ಯಾಪಕ ಅಧಿಕಾರವನ್ನು ನೀಡಿದಂತಾಗುತ್ತದೆ” ಎಂದು ಗಿಲ್ಡ್ ಹೇಳಿದೆ.

ನಕಲಿ ಸುದ್ದಿಗಳನ್ನು ತಗೆದುಹಾಕುವ ನಿರ್ಣಯವು ಸರ್ಕಾರದ ಏಕೈಕ ಸಂಸ್ಥೆಯ ಕೈಯಲ್ಲಿ ಇರಬಾರದು ಮತ್ತು ಪತ್ರಿಕಾ ಸೆನ್ಸಾರ್‍‌ಶಿಪ್‌ಗೆ ಕಾರಣವಾಗುತ್ತದೆ ಎಂದು ಗಿಲ್ಡ್ ಇಲ್ಲಿ ಹೇಳಿಕೆಯಲ್ಲಿ ತಿಳಿಸಿದೆ. ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳಿಗೆ ಕರಡು ತಿದ್ದುಪಡಿಯ ಬಗ್ಗೆ “ಆಳವಾದ ಕಳವಳ” ವ್ಯಕ್ತಪಡಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರಾದ ರಾಘವೇಂದ್ರ ಅವರು, “ಡಿಜಿಟಲ್ ಮೀಡಿಯಾಗಳಲ್ಲಿ ಸುಳ್ಳುಸುದ್ದಿಗಳು ಬರುತ್ತಿರುವುದು ನಿಜವೇ ಇದ್ದರೂ ಕೂಡ, ಇತ್ತೀಚೆಗೆ ಅತಿಹೆಚ್ಚು ಸುಳ್ಳುಗಳನ್ನು ಟಿವಿ ಮಾಧ್ಯಮಗಳೇ ಹರಡುತ್ತವೆ ಎಂದು ಹೇಳಿದರು. ಕೇಂದ್ರ ಸರ್ಕಾರ ಪ್ರಸ್ತಾವಿತ ತಿದ್ದುಪಡಿಯಿಂದ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಗೆ ವ್ಯಾಪಕ ಅಧಿಕಾರವನ್ನು ನೀಡಲು ಮುಂದಾಗಿದೆ. ಇದು ಸರ್ಕಾರದ ಅಡಿಯಲ್ಲಿ ಬರುವುದುರಿಂದ ನಕಲಿ ಸುದ್ದಿಯ ನಿಯಂತ್ರಣದ ಹೆಸರಲ್ಲಿ ಪತ್ರಿಕಾ ಸ್ವಾತಂತ್ರಹರಣವಾಗುವಂತೆ ಮಾಡಿದರೆ ಏನು ಮಾಡುವುದು” ಎಂದು ಆತಂಕ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...