Homeಮುಖಪುಟಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

ಟ್ವೀಟ್‌ಗಳ ನಿರ್ಬಂಧಕ್ಕೆ 2022ರಲ್ಲಿ ಕೇಂದ್ರದಿಂದ 3,417 ಆದೇಶ: ಆರ್‌ಟಿಐ ವರದಿ

- Advertisement -
- Advertisement -

ಕೇಂದ್ರ ಸರ್ಕಾರವು 2022ರಲ್ಲಿ ಟ್ವಿಟರ್‌ ಲಿಂಕ್‌ಗಳನ್ನು ನಿರ್ಬಂಧಿಸಲು 3,417 ಆದೇಶಗಳನ್ನು ಹೊರಡಿಸಿದೆ. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ಕೇವಲ ಕೇವಲ ಎಂಟು ಬಾರಿ ಆದೇಶಿಸಲಾಗಿತ್ತು ಎಂದು ಆರ್‌ಟಿಐ (ಮಾಹಿತಿ ಹಕ್ಕು ಕಾಯ್ದೆ) ಮಾಹಿತಿ ಬಹಿರಂಗಪಡಿಸಿದೆ.

ಮಾಹಿತಿ ಪಡೆದ ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ನಾಯಕ್, “ಈ ಪ್ರವೃತ್ತಿಯು ಅಂತಹ ವೇದಿಕೆಗಳ ದುರುಪಯೋಗದ ಹೆಚ್ಚಳವನ್ನು ಸೂಚಿಸುತ್ತದೆ ಅಥವಾ ಕೇಂದ್ರ ಸರ್ಕಾರದ ಚಿಂತನೆಗೆ ಹೊಂದಿಕೆಯಾಗದ ಅಭಿಪ್ರಾಯಗಳ ಸಂಬಂಧ ಸರ್ಕಾರದ ಕ್ರಮವನ್ನು ಸೂಚಿಸುತ್ತದೆ ಅಥವಾ ಎರಡನ್ನೂ ಸೂಚಿಸುತ್ತದೆ” ಎಂದಿದ್ದಾರೆ.

‘ಐಟಿ ನಿಯಮಗಳು 2021’ರ ಅಡಿಯಲ್ಲಿ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವಿಷಯಗಳನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡುವ ‘ಅಂತರ ಇಲಾಖಾ ಸಮಿತಿಯ ನಡಾವಳಿ’ಗಳನ್ನು ಪ್ರಕಟಿಸಬೇಕೆಂಬ ವಿನಂತಿಯನ್ನು ಐಟಿ ಸಚಿವಾಲಯದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ) ಈ ಹಿಂದೆ ತಿರಸ್ಕರಿಸಿದ್ದರು.

ಪರಿಶೀಲನಾ ಸಮಿತಿಯ ನಡಾವಳಿಗಳು ‘ಗೌಪ್ಯತೆ’ಯನ್ನು ಹೊಂದಿವೆ ಎಂದಿದ್ದ ಸಿಪಿಐಒ, ಆರ್‌ಟಿಐ ಕಾಯಿದೆ ಅಡಿಯಲ್ಲಿ ಮಾಹಿತಿ ಬಹಿರಂಗಪಡಿಸಲು ಹಿಂದೇಟು ಹಾಕಿದ್ದರು. ಆದಾಗ್ಯೂ, 40 ದಿನಗಳ ವಿಳಂಬದ ನಂತರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಿಪಿಐಒ ಕೆಲವು ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಿರ್ಬಂಧಿಸುವ ವಿನಂತಿ/ದೂರುಗಳನ್ನು ಪರಿಶೀಲಿಸಲು ಸಮಿತಿಯನ್ನು ನಿಯಮ 7ರ ಅಡಿಯಲ್ಲಿ ರಚಿಸಲಾಗಿದೆ ಎಂದಿದ್ದಾರೆ.

ನಿರ್ಬಂಧಿಸುವ ಆದೇಶಗಳಲ್ಲಿ ಹೆಚ್ಚಳ

ನಿರ್ಬಂಧಕ್ಕೆ ಸಂಬಂಧಪಟ್ಟ 1,385 ಆದೇಶಗಳನ್ನು 2017ರಲ್ಲಿ ಟ್ವಿಟರ್, ಇತರ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಸಚಿವಾಲಯ ನೀಡಿದೆ. ಈ ಆದೇಶಗಳು ಕೋವಿಡ್ ಬಿಕ್ಕಟ್ಟು ಆರಂಭವಾದ 2020ರಲ್ಲಿ 9,849ಕ್ಕೆ ಏರಿಕೆಯಾಗಿದೆ ಎಂದು ಆರ್‌ಟಿಐ ಮಾಹಿತಿ ಹೇಳಿದೆ.

ನಾಯಕ್ ಅವರು ಈ ವಿಷಯದ ಕುರಿತು ತಿಳಿಯಲು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ, ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿಗಳಿಗೆ ಅನೇಕ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದರು.

“2021ರಲ್ಲಿ ಟ್ವಿಟರ್ ಲಿಂಕ್‌‌ಗಳನ್ನು ನಿರ್ಬಂಧಿಸಲು 2,851 ಪ್ರಕರಣಗಳಲ್ಲಿ ಆದೇಶಗಳನ್ನು ಮತ್ತು 1,122 ಪ್ರಕರಣಗಳಲ್ಲಿ ಜೂನ್ 2022 ರವರೆಗೆ ಆದೇಶಗಳನ್ನು ನೀಡಲಾಗಿದೆ. ರಾಜ್ಯಸಭೆಯಲ್ಲಿ 2022ರ ಜುಲೈನಲ್ಲಿ ಅಂಕಿ ಅಂಶಗಳನ್ನೂ ನೀಡಲಾಗಿತ್ತು” ಎಂದು ನಾಯಕ್ ಹೇಳಿದ್ದಾರೆ.

ಮಾರ್ಚ್ 25, 2022 ರಂದು ರಾಜ್ಯಸಭೆಯಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2021ರಲ್ಲಿ ಒಟ್ಟು 6,096 ಯುಆರ್‌ಎಲ್‌ಗಳನ್ನು (ಟ್ವಿಟರ್ ಮತ್ತು ಇತರ) ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿರಿ: ಬಿಬಿಸಿ ಸಾಕ್ಷ್ಯಾಚಿತ್ರ: ಭಾಗ ಎರಡರಲ್ಲಿ ಪ್ರಧಾನಿ ಮೋದಿ ಕುರಿತು ಹೇಳಿರುವುದೇನು?

ನಿಯಮ 7ರ ಅಡಿಯಲ್ಲಿ ರಚಿಸಲಾದ ಸಮಿತಿಯು ಜನವರಿ 1, 2021 ಮತ್ತು ಡಿಸೆಂಬರ್ 31, 2022ರ ನಡುವೆ,  ಒಟ್ಟು 6,268 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸುವ ಆದೇಶಗಳನ್ನು ನೀಡಿದೆ ಎಂದು ಆರ್‌ಟಿಐ ವರದಿ ತಿಳಿಸಿದೆ.

2021ರಲ್ಲಿ ಸಂಸತ್ತಿನಲ್ಲಿ ಮಂಡಿಸಲಾದ ಮಾಹಿತಿಯ ಪ್ರಕಾರ, 2,851 ಟ್ವಿಟರ್ ಲಿಂಕ್‌ಗಳನ್ನು ನಿರ್ಬಂಧಿಸಲು ನಿರ್ದೇಶಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ. ಆದ್ದರಿಂದ 2022 ರಲ್ಲಿ, ನಿರ್ಬಂಧಿಸಲಾದ ಟ್ವಿಟರ್‌ ಲಿಂಕ್‌ಗಳ ಸಂಖ್ಯೆ 3,417 ಆಗಿರುತ್ತದೆ (ಅಂದರೆ, 6,268 ಮೈನಸ್ 2,851). ಇದು 2021ರ ಅಂಕಿಅಂಶಗಳಿಗಿಂತ 19.85% ಹೆಚ್ಚಳವಾಗಿದೆ.

2021ರಲ್ಲಿ ಒಟ್ಟು 6,096 ಲಿಂಕ್‌ಗಳನ್ನು ಮತ್ತು 2022ರಲ್ಲಿ 6,775 ಲಿಂಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ವರದಿ ಹೇಳಿದೆ. ನಾಯಕ್ ಅವರ ವಿಶ್ಲೇಷಣೆಯ ಪ್ರಕಾರ 2021ರಲ್ಲಿ, ಟ್ವಿಟರ್ ಹೊರತುಪಡಿಸಿ ಇತರ ವೇದಿಕೆಗಳಲ್ಲಿ 3,245 ಪ್ರಕರಣಗಳಲ್ಲಿ ನಿರ್ಬಂಧಿಸಲಾಗಿದೆ (ಅಂದರೆ, 6,096 ಮೈನಸ್ 2,851). 2022ರಲ್ಲಿ, ಈ ಅಂಕಿ ಅಂಶವು 3,358 ಆಗಿತ್ತು (ಅಂದರೆ, 6,775 ಮೈನಸ್ 3,417). 2021ರಿಂದ ನಿರ್ಬಂಧಿಸುವ ಆದೇಶಗಳ ಸಂಖ್ಯೆಯಲ್ಲಿ 3.48% ಹೆಚ್ಚಳವಾಗಿದೆ.

(ವರದಿ ಕೃಪೆ: ದಿ ವೈರ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...