Homeಕರ್ನಾಟಕಆತ್ಮಹತ್ಯೆಗೆ ಯತ್ನಿಸಿದ ಸ್ಯಾಂಟ್ರೋ ರವಿ; ಆಸ್ಪತ್ರೆಗೆ ದಾಖಲು

ಆತ್ಮಹತ್ಯೆಗೆ ಯತ್ನಿಸಿದ ಸ್ಯಾಂಟ್ರೋ ರವಿ; ಆಸ್ಪತ್ರೆಗೆ ದಾಖಲು

- Advertisement -
- Advertisement -

ರಾಜಕೀಯವಾಗಿ ಭಾರಿ ವಿವಾದವೆಬ್ಬಿಸಿದ್ದ, ಪ್ರಸ್ತುತ ಸಿಐಡಿ ವಶದಲ್ಲಿ ಇರುವ ‘ಸ್ಯಾಂಟ್ರೋ ರವಿ’ ಅಲಿಯಾಸ್ ಕೆ.ಎಸ್.ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸ್ಯಾಂಟ್ರೋ ರವಿ ಆಡಳಿತಾರೂಢ ಬಿಜೆಪಿಯ ಪ್ರಮುಖ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಆತ್ಮಹತ್ಯೆ ಯತ್ನಿಸಿದ ನಂತರ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಸ್ತುತ ರವಿಯ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾನವ ಕಳ್ಳಸಾಗಣೆ ಆರೋಪದ ಮೇಲೆ ಈ ಹಿಂದೆ ಹಲವು ಬಾರಿ ಬಂಧನಕ್ಕೊಳಗಾಗಿದ್ದ, ರವಿ ಇತ್ತೀಚೆಗೆ ಮತ್ತೆ ವಿಚಾರಣೆಗೆ ಒಳಗಾದ್ದರು. ವರದಕ್ಷಿಣೆ ಕಿರುಕುಳ, ಅತ್ಯಾಚಾರ ಮತ್ತು ದೈಹಿಕ ಹಲ್ಲೆ ಆರೋಪದ ಮೇಲೆ ದಲಿತ ಮಹಿಳೆಯೊಬ್ಬರು ಮೈಸೂರು ಪೊಲೀಸರಿಗೆ ದೂರು ನೀಡಿದ್ದರು.

ಇದರ ನಂತರ ತಲೆಮರೆಸಿಕೊಂಡಿದ್ದ ರವಿ ಪತ್ತೆಗೆ ಪೊಲೀಸರು ಆರು ತಂಡಗಳನ್ನು ರಚಿಸಿಲಾಗಿತ್ತು. ತನಿಖಾ ತಂಡಗಳನ್ನು ತೆಲಂಗಾಣ, ಕೇರಳ ಸೇರಿದಂತೆ ನೆರೆಯ ರಾಜ್ಯಗಳಿಗೆ ಕಳುಹಿಸಲಾಗಿತ್ತು. ಅಂತಿಮವಾಗಿ ಜನವರಿ 13 ರಂದು ಗುಜರಾತಿನ ಅಹಮದಾಬಾದ್‌ನಲ್ಲಿ ಅವರನ್ನು ಬಂಧಿಸಲಾಗಿತ್ತು.

ಸ್ಯಾಂಟ್ರೋ ರವಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಬಿಜೆಪಿ ಸಹಾಯ ಮಾಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಅಲ್ಲದೆ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುಜರಾತಿನಲ್ಲಿ ಇದ್ದ ದಿನವೇ ರವಿಯನ್ನು ಪೊಲೀಸರು ಅದೇ ರಾಜ್ಯದಲ್ಲಿ ಬಂಧಿಸಿದ್ದರು. ಅಷ್ಟೆ ಅಲ್ಲದೆ, ಆರೋಪಿ ರವಿ ರಾಜ್ಯದ ವಿವಿಧ ಸಚಿವರೊಂದಿಗೆ ಇರುವ ಚಿತ್ರಗಳು ಕೂಡಾ ಹೊರಬಿದ್ದಿವೆ. ಮುಖ್ಯವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಕೆ. ಸುಧಾಕರ್ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸೇರಿದಂತೆ ಹಲವರೊಂದಿಗೆ ಇರುವ ಇರುವ ಚಿತ್ರಗಳು ಹೊರಹೊಮ್ಮಿವೆ.

ಇಷ್ಟೆ ಅಲ್ಲದೆ, ಬಿಜೆಪಿ ಮತ್ತು ರಾಜ್ಯ ಪೊಲೀಸರೊಂದಿಗೆ ತನಗೆ ಸಂಪರ್ಕ ಇದೆ ಎಂದು ಆರೋಪಿ ರವಿ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಆಡಿಯೋ ಕ್ಲಿಪ್‌ಗಳು ಕೂಡ ಹೊರಬಿದ್ದಿವೆ. ಜನವರಿ 16 ರಂದು ಕರ್ನಾಟಕ ಸರ್ಕಾರವು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಪ್ರತಿಪಕ್ಷ ನಾಯಕರನ್ನು ಹೀಗಳೆದಾಗ ದೇಶದ ಗೌರವಕ್ಕೆ ಧಕ್ಕೆ ಆಗಲಿಲ್ಲವೇ?: ಬಿಬಿಸಿ ಸಾಕ್ಷ್ಯಚಿತ್ರ ಹಿನ್ನೆಲೆ ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...