Homeಚಳವಳಿಜ.29 ರಂದು ಶ್ರೀರಂಗಪಟ್ಟಣದಲ್ಲಿ ಸಾಮರಸ್ಯ ಸಹಬಾಳ್ವೆ ಸಂಗಮ ಸಮಾವೇಶ: ತೀಸ್ತಾ ಸೆಟಲ್ವಾಡ್ ಭಾಗಿ

ಜ.29 ರಂದು ಶ್ರೀರಂಗಪಟ್ಟಣದಲ್ಲಿ ಸಾಮರಸ್ಯ ಸಹಬಾಳ್ವೆ ಸಂಗಮ ಸಮಾವೇಶ: ತೀಸ್ತಾ ಸೆಟಲ್ವಾಡ್ ಭಾಗಿ

ಸಹಬಾಳ್ವೆ ಕರ್ನಾಟಕ ಸಂಘಟನೆಯ ವತಿಯಿಂದ ರಾಜ್ಯದ ಹಲವೆಡೆ ಮನೆ-ಮನಕ್ಕೂ ಸಹಬಾಳ್ವೆ ಸಂದೇಶ ಮತ್ತು ಸ್ನೇಹ ಕೂಟಗಳನ್ನು ಹಮ್ಮಿಕೊಳ್ಳಲಾಗಿದೆ.

- Advertisement -
- Advertisement -

ಮಂಡ್ಯ ಜಿಲ್ಲಾ ಸಮಾನ ಮನಸ್ಕರ ವೇದಿಕೆ ವತಿಯಿಂದ ಗಣರಾಜ್ಯೋತ್ಸವ ಮತ್ತು ಗಾಂಧಿ ನೆನಪಿನಲ್ಲಿ ಜ.29ರಂದು ಶ್ರೀರಂಗಪಟ್ಟದಲ್ಲಿ ಸಾಮರಸ್ಯ ಸಹಬಾಳ್ವೆ ಸಂಗಮ ಸಮಾವೇಶ ನಡೆಯಲಿದ್ದು, ಖ್ಯಾತ ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಭಾಗವಹಿಸಲಿದ್ದಾರೆ. ಅಲ್ಲದೆ ಸಹಬಾಳ್ವೆ ಕರ್ನಾಟಕ ಸಂಘಟನೆಯ ವತಿಯಿಂದ ರಾಜ್ಯದ ಹಲವೆಡೆ ಮನೆ-ಮನಕ್ಕೂ ಸಹಬಾಳ್ವೆ ಸಂದೇಶ ಮತ್ತು ಸ್ನೇಹ ಕೂಟಗಳನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯದಲ್ಲಿ ಮತ್ತು ದೇಶದಲ್ಲಿ ದ್ವೇಷ ಬಿತ್ತಲಾಗುತ್ತಿದೆ. ರಾಜಕೀಯ ಲಾಭಕ್ಕಾಗಿ ಮಹನೀಯರ ಚಾರಿತ್ರ್ಯವಧೆ ಮಾಡಲಾಗುತ್ತಿದೆ. ಸುಳ್ಳುಗಳನ್ನು ಬಿತ್ತಿ ಸಮುದಾಯಗಳನ್ನು ಎತ್ತಿ ಕಟ್ಟಲಾಗುತ್ತಿದೆ. ಇಂತಹ ದುಷ್ಕೃತ್ಯಗಳಿಗೆ ಜಿಲ್ಲೆಯನ್ನು ಬಲಿಕೊಡುತ್ತಿರುವುದು ದುರಂತ. ಇಂತಹ ವಿಷಮ ಸ್ಥಿತಿಯಲ್ಲಿ ಜಿಲ್ಲೆಯ ನೈಜ ಇತಿಹಾಸವನ್ನು, ಕೋಮು ಸೌಹಾರ್ದತೆಯನ್ನು ಜನರಿಗೆ ತಿಳಿಸಲು ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮತಾಂಧರು ಇತ್ತೀಚಿಗೆ ಶ್ರೀರಂಗಪಟ್ಟಣದಲ್ಲಿ ಸಾಮರಸ್ಯ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಟಿಪ್ಪುವನ್ನು ಕೊಂದವರು ಉರಿಗೌಡ, ನಂಜೇಗೌಡ ಎಂಬ ಸುಳ್ಳನ್ನು ಪಸರಿಸಲಾಗುತ್ತಿದೆ. ಅಸಲಿಗೆ ಅಂತಹ ವ್ಯಕ್ತಿಗಳು ಬದುಕಿದ್ದ ಯಾವುದೇ ದಾಖಲೆಗಳಿಲ್ಲ. (ಮರುದು ಪಾಂಡ್ಯರು (ಪೆರಿಯ ಮರುದು ಮತ್ತು ಚಿನ್ನ ಮರುದು) 18ನೇ ಶತಮಾನದ ಅಂತ್ಯದಲ್ಲಿ ತಮಿಳುನಾಡಿನ ಶಿವಗಂಗೈ ಪ್ರಾಂತ್ಯದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಸೆರೆಹಿಡಿದು ಗಲ್ಲಿಗೇರಿಸಲಾಯಿತು ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಅವರ ಫೋಟೊಗಳನ್ನು ಬಳಿಸಿ ಅವರಿಗೆ ಉರಿಗೌಡ, ನಂಜೇಗೌಡ ಎಂಬ ಹೆಸರು ಕೊಟ್ಟು ಸುಳ್ಳು ಸೃಷ್ಟಿಸಲಾಗುತ್ತಿದೆ.) ಈ ಕುರಿತು ಜನರಿಗೆ ಸತ್ಯದರ್ಶನ ಮಾಡುವುದಕ್ಕಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀರಂಗಪಟ್ಟದ ಶ್ರೀರಂಗನಾಥ ದೇವಸ್ಥಾನದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾಮಾಜಿಕ ಕಾರ್ಯಕರ್ತ ಶಶಿಕಾಂತ್ ಸೆಂಥಿಲ್, ಗಾಂಧಿವಾದಿ ಡಾ.ಸುಜಯ್ ಕುಮಾರ್, ವಿಶ್ರಾಂತ ಕುಲಪತಿ ಸಬಿಹಾ ಭೂಮಿಗೌಡ, ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಬಡಗಲಪುರ ನಾಗೇಂದ್ರ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್.ಅಶೋಕ್, ಶಾಂತಿ ಪ್ರಕಾಶನದ ಮುಖ್ಯಸ್ಥರಾದ ಮಹಮದ್‌ ಕುಂಞ, ಸಮಾನ ಮನಸ್ಕರ ವೇದಿಕೆಯ ಪ್ರೊ.ಹುಲ್ಕೆರೆ ಮಹದೇವು ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದುರವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಗೌರಿ ದಿನ: ‘ಹೊಸ ಭಾರತ’ದಲ್ಲಿ ಪತ್ರಿಕೋದ್ಯಮಕ್ಕಿರುವ ಬೆದರಿಕೆಗಳು ಕುರಿತು ಉಪನ್ಯಾಸ, ‘ಗೌರಿ’ ಸಿನಿಮಾ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...