Homeಮುಖಪುಟಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಎನ್‌ಡಿಟಿವಿ ಚಾನೆಲ್‌ಗೆ ರಾಜೀನಾಮೆ

ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಎನ್‌ಡಿಟಿವಿ ಚಾನೆಲ್‌ಗೆ ರಾಜೀನಾಮೆ

- Advertisement -
- Advertisement -

ಅದಾನಿ ಗ್ರೂಪ್‌ ದೇಶದ ಖ್ಯಾತ ಮಾಧ್ಯಮ ಸಂಸ್ಥೆಯಾದ ಎನ್‌ಡಿಟಿವಿಯನ್ನು ತನ್ನ ಸ್ವಾಧೀನ ಮಾಡಿದ ನಂತರ ಅಲ್ಲಿನ ಹಿರಿಯ ಪತ್ರಕರ್ತರು ಮತ್ತು ಅಧಿಕಾರಿಗಳು ಸಂಸ್ಥೆಗೆ ರಾಜೀನಾಮೆ ನೀಡಿದ್ದರು. ಇದಾಗಿ ಕೆಲವೇ ಸಮಯದಲ್ಲಿ ಸಂಸ್ಥೆಯು ಮತ್ತೊಬ್ಬ ಹಿರಿಯ ಪತ್ರಕರ್ತನನ್ನು ಕಳೆದುಕೊಂಡಿದೆ. ಎನ್‌ಡಿಟಿವಿಯಲ್ಲಿ ಸುಮಾರು ಮೂರು ದಶಕಗಳ ಕಾಲ ಕೆಲಸ ಮಾಡಿದ್ದ ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರು ಚಾನೆಲ್‌ಗೆ ರಾಜೀನಾಮೆ ನೀಡಿದ್ದಾಗಿ ಶನಿವಾರ ಘೋಷಿಸಿದ್ದಾರೆ.

ಎನ್‌ಡಿಟಿವಿ ಚಾನೆಲ್‌ನ ಗ್ರೂಪ್ ಎಡಿಟರ್ ಆಗಿದ್ದ ಅವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. “ಎಲ್ಲರಿಗೂ ನಮಸ್ಕಾರ. ಎನ್‌ಡಿಟಿವಿಯಲ್ಲಿನ ಅದ್ಭುತ ಮತ್ತು ಸುಮಾರು ಮೂರು ದಶಕಗಳ ಸುದೀರ್ಘ ಓಟ ಇಂದು ಕೊನೆಗೊಳ್ಳುತ್ತದೆ. ರಾಜೀನಾಮೆ ನಿರ್ಧಾರ ಸುಲಭವಲ್ಲ, ಆದರೆ……it is what it is. ಮತ್ತಷ್ಟು ನಂತರ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀನಿವಾಸನ್‌ ಜೈನ್ ಅವರು 1995 ರಿಂದ ಎನ್‌ಡಿಟಿವಿ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಅವರು ಎನ್‌ಡಿಟಿವಿ24×7 ನಲ್ಲಿ ಪ್ರತಿವಾರ ಪ್ರಸಾರವಾಗುವ ‘ಟ್ರೂತ್ ವರ್ಸಸ್ ಹೈಪ್’ ಎಂಬ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು.

2003 ರಿಂದ 2008ರ ವರೆಗೆ ಎನ್‌ಡಿಟಿವಿ ನೆಟ್‌ವರ್ಕ್‌ನ ಮುಂಬೈ ಬ್ಯೂರೋ ಮುಖ್ಯಸ್ಥರಾಗಿದ್ದರು. ಇದರ ನಂತರ ಅವರು NDTV ಯ ವ್ಯವಹಾರ ಚಾನೆಲ್ ಆದ ಪ್ರಾಫಿಟ್‌ನ ವ್ಯವಸ್ಥಾಪಕ ಸಂಪಾದಕರಾಗಿ ಕೂಡಾ ಕೆಲಸ ಮಾಡಿದ್ದರು. ಇಷ್ಟೆ ಅಲ್ಲದೆ ‘ಬಿಸಿನೆಸ್ ಸ್ಟ್ಯಾಂಡರ್ಡ್‌’ ಪತ್ರಿಕೆಗೆ ಅವರು ಅಂಕಣಗಳನ್ನು ಸಹ ಬರೆದಿದ್ದಾರೆ. ತಮ್ಮ ಮುಂದಿನ ವೃತ್ತಿಜೀವನದ ನಡೆಯ ಬಗ್ಗೆ ಅವರು ಪ್ರಕಟಿಸಿಲ್ಲ.

2022 ರ ನವೆಂಬರ್‌ನಲ್ಲಿ NDTV ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ರವೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದರು. ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರು ಎನ್‌ಡಿಟಿವಿಯಲ್ಲಿನ ತಮ್ಮ ಹೆಚ್ಚಿನ ಷೇರುಗಳನ್ನು ಗೌತಮ್ ಅದಾನಿ ಅವರ ಎಎಂಜಿ ಮೀಡಿಯಾ ನೆಟ್‌ವರ್ಕ್‌ಗೆ ಬಿಟ್ಟುಕೊಟ್ಟಿದ್ದಾರೆ.

ಇದನ್ನೂ ಓದಿ: ಎನ್‌ಡಿಟಿವಿ ಗ್ರೂಪ್‌‌ ಅಧ್ಯಕ್ಷೆ ಸುಪರ್ಣಾ ಸಿಂಗ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಕೂಡಾ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...