Homeಮುಖಪುಟಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

ಪ್ಲಾಟ್ ಆಕ್ರಮಿಸಿಕೊಳ್ಳಲಾಗಿದೆ: ನೊಬೆಲ್‌ ವಿಜೇತ ಅಮರ್ತ್ಯ ಸೇನ್‌ ವಿರುದ್ಧ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವವಿದ್ಯಾನಿಲಯವು ಶುಕ್ರವಾರ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರಿಗೆ ಪತ್ರ ಬರೆದಿದ್ದು, ಬಿರ್ಭುಮ್ ಜಿಲ್ಲೆಯ ಶಾಂತಿನಿಕೇತನದಲ್ಲಿ ಆಕ್ರಮಿಸಿಕೊಂಡಿದ್ದಾರೆ ಎನ್ನಲಾದ ಪ್ಲಾಟ್‌ನ ಭಾಗಗಳನ್ನು ತಕ್ಷಣವೇ ಹಸ್ತಾಂತರಿಸಬೇಕು ಎಂದು ಸೂಚಿಸಿದೆ.

“ನೀವು 1.38 ಎಕರೆ ಭೂಮಿಯನ್ನು ಹೊಂದಿದ್ದೀರಿ. ಆದರೆ ಕಾನೂನಾತ್ಮಕವಾಗಿ 1.25 ಎಕರೆಗಿಂತ ಭೂಮಿ ಹೆಚ್ಚಿದೆ” ಎಂದು ವಿಶ್ವವಿದ್ಯಾಲಯದ ಆಡಳಿತವು ಸೇನ್‌ಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಕಳೆದ ಮೂರು ದಿನಗಳಲ್ಲಿ ಭೂಮಿಗೆ ಸಂಬಂಧಿಸಿದಂತೆ ಸೇನ್ ಅವರಿಗೆ ವಿಶ್ವವಿದ್ಯಾಲಯ ಬರೆಯುತ್ತಿರುವ ಎರಡನೇ ಪತ್ರ ಇದಾಗಿದೆ. ಮಂಗಳವಾರ, ವಿಶ್ವ ಭಾರತಿ ವಿಶ್ವವಿದ್ಯಾಲಯವು ಸೇನ್ ಅವರಿಗೆ ನೋಟಿಸ್ ನೀಡಿದ್ದು, ಈ ಜಾಗವು ಅವರ ಕುಟುಂಬ ಒಡೆತನದ ಎಸ್ಟೇಟ್ ಭಾಗವಲ್ಲ ಎಂದು ಹೇಳಿ ಭೂಮಿಯನ್ನು ಹಿಂದಿರುಗಿಸುವಂತೆ ಸೂಚಿಸಿತ್ತು.

ಸಾರ್ವಜನಿಕ ಕೇಂದ್ರೀಯ ವಿಶ್ವವಿದ್ಯಾನಿಲಯವಾದ ವಿಶ್ವ ಭಾರತಿ ತನ್ನ ಆವರಣದೊಳಗೆ ಅಕ್ರಮ ಪ್ಲಾಟ್ ಹೊಂದಿರುವವರ ಪಟ್ಟಿ ಮಾಡಿತ್ತು. ಅದರಲ್ಲಿ ಸೇನ್ ಹೆಸರಿಸಿತ್ತು.

ನೊಬೆಲ್ ಪ್ರಶಸ್ತಿ ವಿಜೇತ ಸೇನ್‌ ಶಾಂತಿನಿಕೇತನದಲ್ಲಿ ತಮ್ಮ ಕುಟುಂಬದ ಮನೆಯನ್ನು ಹೊಂದಿದ್ದಾರೆ, ಇದನ್ನು ಅವರ ಅಜ್ಜ ಮತ್ತು ಸಂಸ್ಕೃತ ವಿದ್ವಾಂಸರಾದ ಕ್ಷಿತಿಮೋಹನ್ ಸೇನ್ ಅವರು ಕಟ್ಟಿದ್ದಾಗಿದೆ. ಈ ಪಟ್ಟಿಯು ಸೇನ್ ಅವರ ಮನೆಯಾದ ‘ಪ್ರತಿಚಿ’ ಹೆಸರನ್ನು ಒಳಗೊಂಡಿದೆ.

“ನಮ್ಮ ಕುಟುಂಬಕ್ಕೆ 100 ವರ್ಷಗಳ ಕಾಲ ಭೂಮಿಯನ್ನು ಗುತ್ತಿಗೆ ನೀಡಲಾಗಿದೆ. ಅದರಲ್ಲಿ ಕೆಲವನ್ನು ನನ್ನ ತಂದೆ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಿ ಮಾರುಕಟ್ಟೆಯಿಂದ ಖರೀದಿಸಿದ್ದಾರೆ” ಎಂದು ಸೇನ್ ಹೇಳಿಕೊಂಡಿದ್ದರು.

“ಕ್ಯಾಂಪಸ್‌ನಲ್ಲಿರುವ ನಮ್ಮ ಆಸ್ತಿಯನ್ನು ಹಿಂದಿರುಗಿಸುವಂತೆ ಕೇಳುತ್ತಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಉದ್ದೇಶ ಅರ್ಥವಾಗುತ್ತಿಲ್ಲ” ಎಂದು ಸೇನ್‌ ದೂರಿದ್ದಾರೆ.

“ಅವರ [ವಿಶ್ವವಿದ್ಯಾಲಯದ ಅಧಿಕಾರಿಗಳ] ಚಿಂತನೆಯಲ್ಲಿ ನನಗೆ ಯಾವುದೇ ಸೂಕ್ಷ್ಮತೆ ಕಾಣುತ್ತಿಲ್ಲ” ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ. ವಿಶ್ವಭಾರತಿ ವಿಶ್ವವಿದ್ಯಾಲಯದ ಈ ಧೋರಣೆಯ ಹಿಂದಿನ ರಾಜಕೀಯ ನನಗೂ ಅರ್ಥವಾಗುತ್ತಿಲ್ಲ. ಇದು 1940 ರ ದಶಕದಲ್ಲಿ ವಿಶ್ವಭಾರತಿಯಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ನಿರ್ಮಿಸಲಾದ ನಮ್ಮ ನಿವಾಸ ಇದಾಗಿದೆ” ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಲವಾರು ನೀತಿಗಳ ಬಗ್ಗೆ ಸೇನ್ ಅವರು ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಜನವರಿ 15ರಂದು ಪ್ರತಿಕ್ರಿಯಿಸಿದ್ದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದರಿಂದ ದೇಶದಲ್ಲಿ ಅಲ್ಪಸಂಖ್ಯಾತರ ಪಾತ್ರವನ್ನು ಕಡಿಮೆ ಮಾಡಲಾಗುತ್ತದೆ ಮತ್ತು ಬಹುಸಂಖ್ಯಾತ ಶಕ್ತಿಗಳನ್ನು ಪ್ರೋತ್ಸಾಹಿಸಲಾಗುತ್ತದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...