Homeಕರ್ನಾಟಕಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

- Advertisement -
- Advertisement -

ನಕಲಿ ಅಂಕಪಟ್ಟಿ ತಯಾರಿಸುವ ದಂಧೆ ನಡೆಸುತ್ತಿದ್ದ ‘ಸಿಸ್ಟಮ್ಸ್ ಕ್ವೆಸ್ಟ್ ಪ್ರೈವೇಟ್ ಲಿಮಿಟೆಡ್‌’ ಎಂಬ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಶನಿವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ವಿಕಾಸ್ ಭಗತ್ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ ನಕಲಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡಿದ ಆರೋಪವನ್ನು ಪೊಲೀಸರು ಹೊರಿಸಿದ್ದಾರೆ.

26 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ವಿದ್ಯಾಭ್ಯಾಸವನ್ನು ಕರೆಸ್ಪಾಂಡೆನ್ಸ್ ಕೋರ್ಸ್ ಮೂಲಕ ಮುಂದುವರಿಸುವ ಉದ್ದೇಶದಿಂದ ಶಂಕಿತನ ಕಚೇರಿಯನ್ನು ಸಂಪರ್ಕಿಸಿದಾಗ ನಕಲಿ ಅಂಕ ಪಟ್ಟಿ ತಯಾರಿಸುವ ವಂಚನೆಯ ಯೋಜನೆ ಬಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಚೇರಿ ಸಿಬ್ಬಂದಿಯು ವಿದ್ಯಾರ್ಥಿಗೆ 25,000 ರೂಪಾಯಿ ನೀಡಿದರೆ ಪರೀಕ್ಷೆಗೆ ಹಾಜರಾಗದೆ ನಕಲಿ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ವಿದ್ಯಾರ್ಥಿಯು ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಜನವರಿ 3 ರಂದು ಅಧಿಕೃತವಾಗಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ರಾಜಾಜಿನಗರದ ನ್ಯೂ ಕ್ವೆಸ್ಟ್ ಟೆಕ್ನಾಲಜೀಸ್, ಜೆ.ಪಿ.ನಗರದ ಸಿಸ್ಟಂ ಕ್ವೆಸ್ಟ್, ಚಂದ್ರಪ್ಪ ಲೇಔಟ್‌ನ ಆರೋಹಿ ಇನ್ಸ್‌ಟಿಟ್ಯೂಟ್, ದಾಸರಹಳ್ಳಿಯ ವಿಶ್ವ ಜ್ಯೋತಿ ಕಾಲೇಜು ಮತ್ತು ವಿಜಯನಗರದ ಬೆನಕ ಕರೆಸ್ಪಾಂಡೆನ್ಸ್ ಕಾಲೇಜಿನಲ್ಲಿ ಪೊಲೀಸರು ಹಲವು ಬಾರಿ ಸಂಘಟಿತ ದಾಳಿ ನಡೆಸಿದ್ದು, ಈ ವೇಳೆ 6,800 ನಕಲಿ ಅಂಕಪಟ್ಟಿ ಕಾರ್ಡ್‌ಗಳು, 22 ಕಂಪ್ಯೂಟರ್‌/ಲ್ಯಾಪ್‌ಟಾಪ್‌ಗಳನ್ನು ಮತ್ತು 13 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ವೇಳೆ ಕಂಪನಿ ಮತ್ತು ಅದರ ಸಹವರ್ತಿಗಳ ಕಚೇರಿಗಳ ಬಗ್ಗೆ ಹುಡುಕಾಡಿದಾಗ, ಸಂಸ್ಥೆಯನ್ನು ಕಂಪ್ಯೂಟರ್ ಮತ್ತು ಸಾಫ್ಟ್‌ವೇರ್ ಅಭಿವೃದ್ಧಿಯ ವ್ಯವಹಾರವಾಗಿ ನೋಂದಾಯಿಸಲ್ಪಟ್ಟಿತ್ತು. ಆದರೆ ಈ ಸಂಸ್ಥೆಗಳಲ್ಲಿ ಯಾವುದೇ ಶಿಕ್ಷಣ-ಸಂಬಂಧಿತ ಸೇವೆಗಳನ್ನು ನೀಡುವುದಿಲ್ಲ ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಪ್ರಮುಖ ಆರೋಪಿ ವಿಕಾಸ್ ಭಗತ್ ತನಗೆ ಹೆಸರಾಂತ ವಿಶ್ವವಿದ್ಯಾನಿಲಯಗಳೊಂದಿಗೆ ಸಂಪರ್ಕವಿದೆ ಮತ್ತು ವಂಚನೆಯ ಪ್ರಮಾಣಪತ್ರಗಳನ್ನು ನೀಡುವುದಾಗಿ ವಿದ್ಯಾರ್ಥಿಗಳನ್ನು ನಂಬಿಸಿ ವಂಚಿಸುತ್ತಿದ್ದ ಎಂದು ವರದಿಯಾಗಿದೆ.

ಪ್ರತಿ ನಕಲಿ ದಾಖಲೆಗೆ ಭಗತ್ ವಿದ್ಯಾರ್ಥಿಗಳಿಂದ 25 ಸಾವಿರರಿಂದ 30 ಸಾವಿರ ರೂಗಳ ವರೆಗೆ ವಸೂಲಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಸಿಕ್ಕಿಂ ವಿಶ್ವವಿದ್ಯಾಲಯ, ಅಣ್ಣಾಮಲೈ ವಿಶ್ವವಿದ್ಯಾಲಯ, ಗೀತಂ ವಿಶ್ವವಿದ್ಯಾಲಯ, ಬಿಎಸ್‌ಐಟಿ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿಗಳಿದ್ದವು ಎಂದು ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...