Homeಮುಖಪುಟಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಣೆ: ರಾಜಸ್ಥಾನ ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿಗಳ ಅಮಾನತು

ಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಣೆ: ರಾಜಸ್ಥಾನ ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿಗಳ ಅಮಾನತು

- Advertisement -
- Advertisement -

2002ರ ಗುಜರಾತ್ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರದ ಕುರಿತು ಬಿಬಿಸಿ ರೂಪಿಸಿರುವ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದಕ್ಕಾಗಿ ಅಜ್ಮೀರ್‌ನಲ್ಲಿರುವ ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯವು 10 ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಶುಕ್ರವಾರ ಇಬ್ಬರು ವಿದ್ಯಾರ್ಥಿಗಳನ್ನು ಮತ್ತು ಶನಿವಾರ ಇನ್ನೂ ಎಂಟು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. “ಈ ವಿದ್ಯಾರ್ಥಿಗಳು 14 ದಿನಗಳ ಕಾಲ ತರಗತಿಗಳಿಗೆ ಹಾಜರಾಗುವಂತಿಲ್ಲ ಮತ್ತು ಈ ಅವಧಿಯಲ್ಲಿ ಹಾಸ್ಟೆಲ್‌ನಲ್ಲಿಯೂ ಉಳಿಯುವಂತಿಲ್ಲ” ಎಂದು ಆದೇಶಿಸಲಾಗಿದೆ.

ಅಮಾನತುಗೊಂಡ ವಿದ್ಯಾರ್ಥಿಗಳಲ್ಲಿ ಒಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಪ್ರತಿಕ್ರಿಯಿಸಿದ್ದು, “ನಮ್ಮ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದೇವೆಯೇ ಹೊರತು, ಯಾವುದೇ ಸಾರ್ವಜನಿಕ ಪ್ರದರ್ಶನವನ್ನು ನಡೆಸಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಘೋಷಣೆಗಳನ್ನು ಕೂಗಿ ಸಾಕ್ಷ್ಯಚಿತ್ರ ವೀಕ್ಷಿಸದಂತೆ ತಡೆದಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

‘ಭಾರತ: ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಬಿಬಿಸಿಯ ಎರಡು ಭಾಗಗಳ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯು ಜನವರಿ 17ರಂದು ಬಿಡುಗಡೆಯಾಯಿತು. ಗುಜರಾತ್‌ ಗಲಭೆಯ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರು ನಿಷ್ಕ್ರಿಯರಾಗಿದ್ದನ್ನು ಬಿಬಿಸಿ ಪ್ರಸ್ತಾಪಿಸಿದೆ. ಎರಡನೇ ಭಾಗ ಮಂಗಳವಾರ ಬಿಡುಗಡೆಯಾಗಿದೆ. ಮೋದಿಯವರು ಪ್ರಧಾನಿಯಾದ ಬಳಿಕ ದೇಶದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಆಗಿರುವ ಬೆಳವಣಿಗೆಗಳನ್ನು ಎರಡನೇ ಭಾಗ ಚರ್ಚಿಸಿದೆ.

ಭಾರತದಲ್ಲಿ ಸಾಕ್ಷ್ಯಚಿತ್ರ ಲಭ್ಯವಾಗದಿದ್ದರೂ, ಇದರ ಲಿಂಕ್‌ಗಳನ್ನು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ದೆಹಲಿ ವಿಶ್ವವಿದ್ಯಾಲಯ, ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ, ಅಂಬೇಡ್ಕರ್ ವಿಶ್ವವಿದ್ಯಾಲಯ ಮತ್ತು ಜಾಮಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ, ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಮತ್ತು ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ ಆಯೋಜಿಸಿದ್ದು ವಿವಾದಕ್ಕೆ ಗುರಿಯಾಗಿದೆ.

ಸಾಕ್ಷ್ಯಚಿತ್ರದ ತುಣುಕುಗಳನ್ನು ಹಂಚಿಕೊಳ್ಳದಂತೆ ನಿರ್ಬಂಧಿಸಲು ಯೂಟ್ಯೂಬ್‌ ಮತ್ತು ಟ್ವಿಟರ್‌ಗೆ ನಿರ್ದೇಶನಗಳನ್ನು ನೀಡಲು ‘ಮಾಹಿತಿ ತಂತ್ರಜ್ಞಾನ ನಿಯಮಗಳು, 2021’ರ ಅಡಿಯಲ್ಲಿ ಲಭ್ಯವಿರುವ ತುರ್ತು ಅಧಿಕಾರವನ್ನು ಸರ್ಕಾರ ಬಳಸಿದೆ.

ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಏನಾಯಿತು?

ಜನವರಿ 26ರ ಸಂಜೆ, ಕೆಲವು ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಡಿವೈಸ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಲು ವಿಶ್ವವಿದ್ಯಾನಿಲಯದ ಅಂಚೆ ಕಚೇರಿಯ ಬಳಿ ಜಮಾಯಿಸಿದ್ದರು ಎಂದು ಅಮಾನತುಗೊಂಡ ವಿದ್ಯಾರ್ಥಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ. ಆದರೆ, ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ಸದಸ್ಯರು ಘೋಷಣೆಗಳನ್ನು ಕೂಗಲು ಆರಂಭಿಸಿದ್ದರಿಂದ ವಿದ್ಯಾರ್ಥಿಗಳು ಅಲ್ಲಿಂದ ತೆರಳಿದ್ದಾರೆ.

“ನಂತರ ಎಬಿವಿಪಿ ಸದಸ್ಯರು ಕಾಲೇಜಿನ ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಸಂದೇಶಗಳನ್ನು ಹರಿಬಿಟ್ಟು ಬ್ಯಾಸ್ಕೆಟ್‌ಬಾಲ್ ಅಂಕಣದಲ್ಲಿ ವಿದ್ಯಾರ್ಥಿಗಳನ್ನು ಸೇರುವಂತೆ ಹೇಳಿದ್ದಾರೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ನಂತರ ಎಬಿವಿಪಿ ಸದಸ್ಯರು ಘೋಷಣೆಗಳನ್ನು ಕೂಗಿದರು, ಸಾಕ್ಷ್ಯಚಿತ್ರವನ್ನು ವೀಕ್ಷಿಸಿದವರ ಹಾಸ್ಟೆಲ್‌ಗಳಿಗೆ ನುಗ್ಗಿದರು ಮತ್ತು ಅವರ ಬಾಗಿಲುಗಳನ್ನು ಝಾಡಿಸಿ ಒದ್ದರು ಎಂದು ಅಮಾನತುಗೊಂಡ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

“ಸಾಕ್ಷ್ಯಚಿತ್ರವನ್ನು ವೀಕ್ಷಿಸದಂತೆ ನಮ್ಮ ಸಂಘಟನೆಯ ಸದಸ್ಯರು, ಕಾಲೇಜು ಆಡಳಿತ ಮಂಡಳಿ ಮತ್ತು ಪೊಲೀಸರು ವಿದ್ಯಾರ್ಥಿಗಳನ್ನು ಕೇಳಿಕೊಂಡರೂ ಅವರು ಮಣಿಯಲಿಲ್ಲ” ಎಂದು ವಿಶ್ವವಿದ್ಯಾಲಯದ ಎಬಿವಿಪಿ ಮುಖ್ಯಸ್ಥ ವಿಕಾಶ್ ಪಾಠಕ್ ಹೇಳಿದ್ದಾರೆ.

ವಿದ್ಯಾರ್ಥಿಗಳ ಶಿಸ್ತಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯದ ಸುಗ್ರೀವಾಜ್ಞೆ 47 ರ ಕಲಂ 3.3 ಮತ್ತು 3.5 ರ ಅಡಿಯಲ್ಲಿ 10 ವಿದ್ಯಾರ್ಥಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಮಾನತು ಆದೇಶದ ಪ್ರತಿ ತಿಳಿಸಿದೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನ ರಾಜಸ್ಥಾನ ಘಟಕವು ವಿಶ್ವವಿದ್ಯಾನಿಲಯದ ಕುಲಪತಿಯವರಿಗೆ ಪತ್ರ ಬರೆದಿದ್ದು, ಕೋಮು ಕೇಂದ್ರಿತವಾಗಿ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಟೀಕಿಸಿದೆ. ಅಮಾನತುಗೊಂಡ 10 ವಿದ್ಯಾರ್ಥಿಗಳಲ್ಲಿ ಎಂಟು ಮಂದಿ ಮುಸ್ಲಿಮರು ಮತ್ತು ಒಬ್ಬರು ಕ್ರಿಶ್ಚಿಯನ್ ಎಂದು ಸಂಸ್ಥೆಯು ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.

ಅಮಾನತು ಆದೇಶಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಲಾಗಿದೆ. “…ವಿದ್ಯಾರ್ಥಿಗಳ ಪ್ರತಿಕ್ರಿಯೆ ಪಡೆದಿಲ್ಲ. ಯಾವುದೇ ವಿಚಾರಣೆ ಮಾಡದೆ, ಶೋಕಾಸ್ ನೋಟಿಸ್ ನೀಡದೆ, ಅವರನ್ನು ವಿಶ್ವವಿದ್ಯಾಲಯ ಮತ್ತು ಹಾಸ್ಟೆಲ್‌ನಿಂದ 15 ದಿನಗಳವರೆಗೆ ಹೊರಹಾಕಲಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...